Homeಕರ್ನಾಟಕಭ್ರಷ್ಟಾಚಾರದ ರೇಟ್ ಕಾರ್ಡ್ ಜಾಹೀರಾತು: ಕಾಂಗ್ರೆಸ್‌ಗೆ ಚುನಾವಣಾ ಆಯೋಗ ನೋಟಿಸ್

ಭ್ರಷ್ಟಾಚಾರದ ರೇಟ್ ಕಾರ್ಡ್ ಜಾಹೀರಾತು: ಕಾಂಗ್ರೆಸ್‌ಗೆ ಚುನಾವಣಾ ಆಯೋಗ ನೋಟಿಸ್

- Advertisement -
- Advertisement -

ರಾಜ್ಯ ಕಾಂಗ್ರೆಸ್ ಪಕ್ಷವು ಬಿಜೆಪಿ ಸರ್ಕಾರದ ವಿರುದ್ಧ ಪತ್ರಿಕೆಗಳಿಗೆ ನೀಡಿರುವ ‘ಭ್ರಷ್ಟಾಚಾರದ ರೇಟ್ ಕಾರ್ಡ್’ ಜಾಹೀರಾತಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಶನಿವಾರ ನೋಟಿಸ್ ಜಾರಿ ಮಾಡಿದೆ.

“ರಾಜ್ಯದಲ್ಲಿನ ಬಿಜೆಪಿ ನೇತೃತ್ವದ ಸರ್ಕಾರದ ಅಡಿಯಲ್ಲಿ, ಉದ್ಯೋಗ ನೇಮಕಾತಿ ಮತ್ತು ವರ್ಗಾವಣೆಗಳಿಗಾಗಿ ಜನರು ಲಂಚವನ್ನು ನೀಡಬೇಕಾಗಿದೆ” ಎಂದು ಆರೋಪಿಸಿರುವ ಕಾಂಗ್ರೆಸ್, “ಯಾವ ಯಾವ ಕೆಲಸಕ್ಕೆ ಎಷ್ಟು ಹಣ ಪಾವತಿಸಬೇಕಾಗಿದೆ” ಎಂಬ ವಿವರಗಳೊಂದಿಗೆ ಕಾಂಗ್ರೆಸ್ ಜಾಹೀರಾತು ನೀಡಿದೆ.

ಬಿಜೆಪಿ ದೂರಿನ ಮೇರೆಗೆ ಚುನಾವಣಾ ಆಯೋಗ ಕಾಂಗ್ರೆಸ್‌ಗೆ ನೋಟಿಸ್ ಜಾರಿ ಮಾಡಿದೆ. ಮೇಲ್ನೋಟಕ್ಕೆ ಕಾಂಗ್ರೆಸ್ ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದೆ ಎಂದು ಆಯೋಗ ಹೇಳಿದೆ.

“ಸಾಧನೆಯ ಕೊರತೆ, ದುಷ್ಕೃತ್ಯಗಳು, ರಾಜಕೀಯ ವಿರೋಧಿಗಳ ಭ್ರಷ್ಟಾಚಾರ, ಮುಕ್ತ ಆಡಳಿತವನ್ನು ಖಾತರಿಪಡಿಸದಿರುವ ಸಾಮಾನ್ಯ ಉಲ್ಲೇಖಗಳು ಮತ್ತು ಪ್ರಸ್ತಾಪಗಳು ರಾಜಕೀಯ ಪ್ರಚಾರಗಳಲ್ಲಿ ಇರುತ್ತವೆ. ನಿರ್ದಿಷ್ಟ ಆರೋಪಗಳನ್ನು ಪ್ರತ್ಯೇಕಿಸಬೇಕಾಗಿದೆ. ಏಕೆಂದರೆ ಅವುಗಳು ಪರಿಶೀಲಿಸಬೇಕಾದ ಸತ್ಯಗಳಿಂದ ಇರಬೇಕು” ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ನೀಡಿದ ನೋಟಿಸ್‌ನಲ್ಲಿ ತಿಳಿಸಲಾಗಿದೆ.

“ನೀವು ನೀಡಿದ ಜಾಹೀರಾತಿನಲ್ಲಿ ಉಲ್ಲೇಖಿಸಲಾದ ನೇಮಕಾತಿಗಳು, ವರ್ಗಾವಣೆಗಳು, ಉದ್ಯೋಗಗಳು ಮತ್ತು ಕಮಿಷನ್ ಪ್ರಕಾರಗಳ ದರಗಳಿಗೆ ಪುರಾವೆಗಳನ್ನು ಮೇ 7, 2023 ರಂದು ಸಂಜೆ 7 ಗಂಟೆಗಳ ಒಳಗೆ ಯಾವುದೇ ವಿವರಣೆಯೊಂದಿಗೆ ಮತ್ತು ಅದನ್ನು ಸಾರ್ವಜನಿಕ ವೇದಿಕೆಯಲ್ಲಿ ಪ್ರಕಟಿಸುವ ಮೂಲಕ ಪಕ್ಷ ಮಾಡಿದ ಆರೋಪಗಳನ್ನು ಸಾಬೀತುಪಡಿಸಲು ಪುರಾವೆಗಳನ್ನು ನೀಡಬೇಕು” ಎಂದು ಸೂಚಿಸಿದೆ.

“ಪುರಾವೆಗಳನ್ನು ಸಲ್ಲಿಸಲು ವಿಫಲವಾದರೆ ನೀತಿ ಸಂಹಿತೆಗೆ ಸಂಬಂಧಿತ ಕಾನೂನು ನಿಬಂಧನೆಗಳನ್ನು ನಿಮ್ಮ ವಿರುದ್ಧ ಜರುಗಿಸಲಾಗುವುದು. ಜನಪ್ರತಿನಿಧಿ ಕಾಯ್ದೆ ಮತ್ತು ಐಪಿಸಿಯ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದೆ.

ಮೇ 10 ರಂದು ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ.

ಜಾಹೀರಾತಿನಲ್ಲಿ ಏನಿದೆ?

“ಈ ಟ್ರಬಲ್ ಇಂಜಿನ್ ಸರ್ಕಾರ- ಭ್ರಷ್ಟಾಚಾರದ ರೇಟ್ ಕಾರ್ಡ್ 2019-2023” ಎಂದ ಶೀರ್ಷಿಕೆಯೊಂದಿಗೆ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿದೆ.

“ಸಿಎಂ ಹುದ್ದೆಗೆ 2500 ಕೋಟಿ ರೂ., ಮಂತ್ರಿಗಳ ಹುದ್ದೆಗೆ 500 ಕೋಟಿ ರೂಗಳನ್ನು ಬಿಜೆಪಿ ಪಡೆಯುತ್ತದೆ” ಎಂದು ಆರೋಪಿಸಲಾಗಿದೆ.

ನೇಮಕಾತಿ ಮತ್ತು ವರ್ಗಾವಣೆ ದರ

ಕೆಎಸ್‌ಡಿಎಲ್: 5ರಿಂ 15 ಕೋಟಿ ರೂ.,

ಇಂಜಿನಿಯರ್‌: 1ರಿಂದ 5 ಕೋಟಿ ರೂ.

ಸಬ್‌ ರಿಜಿಸ್ಟ್ರಾರ್‌: 50 ಲಕ್ಷ ರೂ.ಗಳಿಂದ 5 ಕೋಟಿ ರೂ.

ಬೆಸ್ಕಾ: 1 ಕೋಟಿ ರೂ.

ಪಿಎಸ್‌ಐ: 80 ಲಕ್ಷ ರೂ.

ಸಹಾಯಕ ಪ್ರಾಧ್ಯಾಪಕ: 50 ಲಕ್ಷ – 70 ಲಕ್ಷ ರೂ.

ಉಪನ್ಯಾಸಕ: 30 ಲಕ್ಷ- 50 ಲಕ್ಷ ರೂ.

ಎಫ್‌ಡಿಎ:30 ಲಕ್ಷ ರೂ.

ಸಹಾಯಕ ಇಂಜಿನಿಯರ್‌: 30 ಲಕ್ಷ ರೂ.

ಬಮುಲ್- 25 ಲಕ್ಷ ರೂ.

ಪಿಡಬ್ಲ್ಯುಡಿ ಸಹಾಯಕ ಇಂಜಿನಿಯರ್‌ 10 ಲಕ್ಷ ರೂ.

ಪೊಲೀಸ್ ಪೇದೆ 10 ಲಕ್ಷ ರೂ.

***

ಹುದ್ದೆಗಳ ದರ 

ಬಿಡಿಎ ಆಯುಕ್ತ : 10 ಕೋಟಿ – 15 ಕೋಟಿ ರೂ.

ಕೆಪಿಎಸ್‌ಸಿ ಅಧ್ಯಕ್ಷ: 5 ರಿಂದ 15 ಕೋಟಿ ರೂ.

ಡಿಸಿ ಮತ್ತು ಎಸ್‌ಪಿ:  5 ರಿಂದ 15 ಕೋಟಿ ರೂ.

ಉಪಕುಲಪತಿ: 5 ರಿಂದ 10 ಕೋಟಿ ರೂ.

ಎಸಿ ಮತ್ತು ತಹಸೀಲ್ದಾರ್‌ 50 ಲಕ್ಷ- 3 ಕೋಟಿ ರೂ.

***

ಸರ್ಕಾರದ ಡೀಲ್‌ಗಳು

ಕೋವಿಡ್ ಕಿಟ್ ಪೂರೈಕೆ: 75%

ಪಿಡಬ್ಲ್ಯುಡಿ ಗುತ್ತಿಗೆಗಳು: 40 %

ಮಠಕ್ಕೆ ಅನುದಾನ: 30%

ಉಪಕರಣಗಳ ಪೂರೈಕೆ: 40%

ಮೊಟ್ಟೆ ಪೂರೈಕೆ: 30%

ರಸ್ತೆ ಗುತ್ತಿಗೆಗಳು: 40%

-ಹೀಗೆ ಜಾಹೀರಾತಿನಲ್ಲಿ ಆರೋಪಗಳನ್ನು ಕಾಂಗ್ರೆಸ್ ಮಾಡಿದೆ. “ಕಳೆದ ನಾಲ್ಕೇ ವರ್ಷಗಳಲ್ಲಿ 40% ಸರ್ಕಾರ ಕನ್ನಡಿಗರಿಂದ  1,50,000 ಕೋಟಿ ರೂ.ಗೂ ಹೆಚ್ಚು ಹಣವನ್ನು ಲೂಟಿ ಮಾಡಿದೆ. ಇದೇ ಗತಿಯಲ್ಲಿ ಸಾಗಿದರೆ ನಮ್ಮ ರಾಜ್ಯವೇ ನಾಶವಾಗುತ್ತದೆ. ಈ ಲೂಟಿಯನ್ನು ನಿಲ್ಲಿಸಿ. ಬದಲಾವಣೆ ಹಾಗೂ ಪ್ರಗತಿಗೆ ನಿಮ್ಮ ಮತ ನೀಡಿ. ಕಾಂಗ್ರೆಸ್‌ಗೆ ಮತ ನೀಡಿ” ಎಂದು ಜಾಹೀರಾತಿನಲ್ಲಿ ಉಲ್ಲೇಖಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ವಾಯುಮಾಲಿನ್ಯ : ಏರ್ ಪ್ಯೂರಿಫೈಯರ್‌ ಜಿಎಸ್‌ಟಿ ಕಡಿತಕ್ಕೆ ಕೇಂದ್ರ ಆಕ್ಷೇಪ

ಏರ್‌ಪ್ಯೂರಿಫೈಯರ್‌ ಸಾಧನಗಳ ಮೇಲಿನ ಜಿಎಸ್‌ಟಿ ಕಡಿತಗೊಳಿಸುವಂತೆ ಜಿಎಸ್‌ಟಿ ಮಂಡಳಿಗೆ ಆದೇಶಿಸಿದರೆ ಅದು ಅಂತಹ ಇನ್ನಷ್ಟು ಪ್ರಕರಣಗಳು ಹೆಚ್ಚಳವಾಗಲು ಕಾರಣವಾಗುತ್ತದೆ (Pandora Box)ಎಂದು ಕೇಂದ್ರ ಸರ್ಕಾರ ಶುಕ್ರವಾರ (ಡಿ.26) ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ದೆಹಲಿ ಎನ್‌ಸಿಆರ್‌...

ಬಳ್ಳಾರಿ | ಪ್ರಭಾವ, ಗೂಂಡಾಗಿರಿ ಮೂಲಕ ಬಡ ಜನರ ಭೂ ಕಬಳಿಕೆ : ಬುಡಾ ಮಾಜಿ ಅಧ್ಯಕ್ಷನ ವಿರುದ್ಧ ಗಂಭೀರ ಆರೋಪ

ಬಳ್ಳಾರಿ ನಗರಕ್ಕೆ ಹೊಂದಿಕೊಂಡಿರುವ ಕೌಲ್‌ ಬಜಾರಿನ ದಾನಪ್ಪಬೀದಿ ಮತ್ತು ಬಂಡಿಹಟ್ಟಿ ಏರಿಯಾಗಳ ಬಡ ಜನರಿಗೆ ಇನಾಂ ರದ್ದತಿಯ ಬಳಿಕ ನೀಡಲಾಗಿದ್ದ ಭೂಮಿಯನ್ನು ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರ (ಬುಡಾ) ದ ಮಾಜಿ ಅಧ್ಯಕ್ಷ ಎನ್‌....

ಕ್ರಿಸ್‌ಮಸ್‌ ದಿನ ದೇಶದ ಹಲವು ನಗರಗಳಲ್ಲಿ ಗಿಗ್‌ ಕಾರ್ಮಿಕರಿಂದ ಪ್ರತಿಭಟನೆ : ಹೊಸ ವರ್ಷದಂದು ಮತ್ತೊಂದು ಹೋರಾಟಕ್ಕೆ ಸಿದ್ದತೆ

ವರ್ಷಾಂತ್ಯದ ಎರಡು ಪ್ರಮುಖ ದಿನಗಳಾದ ಡಿಸೆಂಬರ್ 25ರ ಕ್ರಿಸ್‌ಮಸ್‌ ಮತ್ತು ಡಿಸೆಂಬರ್ 31ರ ಹೊಸ ವರ್ಷದ ಸಂಜೆ (ಮುನ್ನಾದಿನ) ದೇಶದಾದ್ಯಂತ ಪ್ರತಿಭಟನೆ ನಡೆಸಲು ಗಿಗ್ ಕಾರ್ಮಿಕರು ನಿರ್ಧರಿಸಿದ್ದಾರೆ. ಈಗಾಗಲೇ ಡಿಸೆಂಬರ್ 25ರ ಕ್ರಿಸ್‌ಮಸ್‌ ದಿನದಂದು...

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಗುಂಪು ಹತ್ಯೆ : ಘಟನೆಗೆ ಕೋಮು ಆಯಾಮವಿಲ್ಲ ಎಂದ ಮಧ್ಯಂತರ ಸರ್ಕಾರ

ಬಾಂಗ್ಲಾದೇಶದ ರಾಜ್‌ಬರಿ ಜಿಲ್ಲೆಯಲ್ಲಿ ಸುಲಿಗೆ ಯತ್ನದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಗುಂಪೊಂದು ಥಳಿಸಿ ಕೊಂದಿದೆ. ಇದು ಇತ್ತೀಚೆಗೆ ಹಿಂದೂ ವ್ಯಕ್ತಿಯನ್ನು ಗುಂಪು ಹತ್ಯೆ ನಡೆಸಿರುವ ಎರಡನೇ ಘಟನೆಯಾಗಿದೆ. ಆದರೆ, ಅಲ್ಲಿನ ಮಧ್ಯಂತರ ಸರ್ಕಾರ...

ದೆಹಲಿ ವಾಯು ಮಾಲಿನ್ಯದಿಂದ ಸಾಂತಾ ಕ್ಲಾಸ್ ಮೂರ್ಛೆ ಹೋದ ವಿಡಿಯೋ ಹಂಚಿಕೆ : ಎಎಪಿಯ ಸೌರಭ್ ಭಾರದ್ವಾಜ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಪರೀತ ವಾಯುಮಾಲಿನ್ಯದಿಂದ ಸಾಂತಾಕ್ಲಾಸ್ ವೇಷ ಧರಿಸಿದ ಪುರುಷರು ಮೂರ್ಛೆ ಹೋಗುತ್ತಿರುವುದನ್ನು ತೋರಿಸುವ ವಿಡಿಯೋ ಸ್ಕಿಟ್ (ಅಭಿನಯ) ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರಾದ...

ಕ್ರಿಸ್‌ಮಸ್‌ ವೇಳೆ ಶಾಲೆಗೆ ನುಗ್ಗಿ ದಾಂಧಲೆ : ವಿಹೆಚ್‌ಪಿ-ಬಜರಂಗದಳದ ನಾಲ್ವರ ಬಂಧನ

ನಲ್ಬರಿ ಜಿಲ್ಲೆಯ ಶಾಲೆಯೊಂದಕ್ಕೆ ನುಗ್ಗಿ ಕ್ರಿಸ್‌ಮಸ್ ಅಲಂಕಾರವನ್ನು ಧ್ವಂಸ ಮಾಡಿದ, ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಮತ್ತು ಬಜರಂಗದಳದ ನಾಲ್ವರನ್ನು ಅಸ್ಸಾಂ ಪೊಲೀಸರು ಗುರುವಾರ (ಡಿ.25) ಬಂಧಿಸಿದ್ದಾರೆ. ಬಂಧಿತರನ್ನು ವಿಹೆಚ್‌ಪಿ ಜಿಲ್ಲಾ ಕಾರ್ಯದರ್ಶಿ ಭಾಸ್ಕರ್...

ಅಲಿಗಢ ಮುಸ್ಲಿಂ ವಿವಿ ಆವರಣದಲ್ಲಿ ಗುಂಡಿಕ್ಕಿ ಶಿಕ್ಷಕನ ಹತ್ಯೆ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯ (ಎಎಂಯು)ದ ಶಿಕ್ಷಕರೊಬ್ಬರನ್ನು ವಿಶ್ವವಿದ್ಯಾಲಯದ ಆವರಣದಲ್ಲಿ ಬುಧವಾರ (ಡಿ.24) ರಾತ್ರಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಲ್ಲಿ ಭೀತಿ ಮೂಡಿಸಿದೆ. ಮೃತರನ್ನು ಎಎಂಯುನ ಎಬಿಕೆ ಯೂನಿಯನ್ ಹೈಸ್ಕೂಲ್‌ನ ಶಿಕ್ಷಕ...

ಮತ್ತೊಬ್ಬ ವಲಸೆ ಕಾರ್ಮಿಕನ ಗುಂಪು ಹತ್ಯೆ : ಆರು ಜನರ ಬಂಧನ

ಬುಧವಾರ (ಡಿ.24) ಒಡಿಶಾದ ಸಂಬಾಲ್‌ಪುರದಲ್ಲಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ 30 ವರ್ಷದ ವಲಸೆ ಕಾರ್ಮಿಕರೊಬ್ಬರನ್ನು ಗುಂಪು ಹತ್ಯೆ ಮಾಡಲಾಗಿದೆ. ಈ ಸಂಬಂಧ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...

ಉನ್ನಾವೋ ಅತ್ಯಾಚಾರ ಪ್ರಕರಣ : ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ನ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿರುವುದನ್ನು ಪ್ರಶ್ನಿಸಿ ಇಬ್ಬರು ಮಹಿಳಾ ವಕೀಲರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು...

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಪಹಾಸ್ಯ : ಮಾಧ್ಯಮಗಳ ಮುಂದೆ ವ್ಯಂಗ್ಯವಾಗಿ ನಕ್ಕ ಯುಪಿ ಸಚಿವ

ದೆಹಲಿಯ ಇಂಡಿಯಾ ಗೇಟ್ ಬಳಿ ಪ್ರತಿಭಟಿಸಿದ ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಸಚಿವ ಓಂ ಪ್ರಕಾಶ್ ರಾಜ್‌ಭರ್ ಅಪಹಾಸ್ಯ ಮಾಡಿದ್ದು, "ಆಕೆಯ ಮನೆ ಉನ್ನಾವೋದಲ್ಲಿರುವಾಗ ದೆಹಲಿಯಲ್ಲಿ ಏಕಿದ್ದಾಳೆ?"...