Homeಕರ್ನಾಟಕಭ್ರಷ್ಟಾಚಾರದ ರೇಟ್ ಕಾರ್ಡ್ ಜಾಹೀರಾತು: ಕಾಂಗ್ರೆಸ್‌ಗೆ ಚುನಾವಣಾ ಆಯೋಗ ನೋಟಿಸ್

ಭ್ರಷ್ಟಾಚಾರದ ರೇಟ್ ಕಾರ್ಡ್ ಜಾಹೀರಾತು: ಕಾಂಗ್ರೆಸ್‌ಗೆ ಚುನಾವಣಾ ಆಯೋಗ ನೋಟಿಸ್

- Advertisement -
- Advertisement -

ರಾಜ್ಯ ಕಾಂಗ್ರೆಸ್ ಪಕ್ಷವು ಬಿಜೆಪಿ ಸರ್ಕಾರದ ವಿರುದ್ಧ ಪತ್ರಿಕೆಗಳಿಗೆ ನೀಡಿರುವ ‘ಭ್ರಷ್ಟಾಚಾರದ ರೇಟ್ ಕಾರ್ಡ್’ ಜಾಹೀರಾತಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಶನಿವಾರ ನೋಟಿಸ್ ಜಾರಿ ಮಾಡಿದೆ.

“ರಾಜ್ಯದಲ್ಲಿನ ಬಿಜೆಪಿ ನೇತೃತ್ವದ ಸರ್ಕಾರದ ಅಡಿಯಲ್ಲಿ, ಉದ್ಯೋಗ ನೇಮಕಾತಿ ಮತ್ತು ವರ್ಗಾವಣೆಗಳಿಗಾಗಿ ಜನರು ಲಂಚವನ್ನು ನೀಡಬೇಕಾಗಿದೆ” ಎಂದು ಆರೋಪಿಸಿರುವ ಕಾಂಗ್ರೆಸ್, “ಯಾವ ಯಾವ ಕೆಲಸಕ್ಕೆ ಎಷ್ಟು ಹಣ ಪಾವತಿಸಬೇಕಾಗಿದೆ” ಎಂಬ ವಿವರಗಳೊಂದಿಗೆ ಕಾಂಗ್ರೆಸ್ ಜಾಹೀರಾತು ನೀಡಿದೆ.

ಬಿಜೆಪಿ ದೂರಿನ ಮೇರೆಗೆ ಚುನಾವಣಾ ಆಯೋಗ ಕಾಂಗ್ರೆಸ್‌ಗೆ ನೋಟಿಸ್ ಜಾರಿ ಮಾಡಿದೆ. ಮೇಲ್ನೋಟಕ್ಕೆ ಕಾಂಗ್ರೆಸ್ ಮಾದರಿ ನೀತಿ ಸಂಹಿತೆಯ ನಿಬಂಧನೆಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದೆ ಎಂದು ಆಯೋಗ ಹೇಳಿದೆ.

“ಸಾಧನೆಯ ಕೊರತೆ, ದುಷ್ಕೃತ್ಯಗಳು, ರಾಜಕೀಯ ವಿರೋಧಿಗಳ ಭ್ರಷ್ಟಾಚಾರ, ಮುಕ್ತ ಆಡಳಿತವನ್ನು ಖಾತರಿಪಡಿಸದಿರುವ ಸಾಮಾನ್ಯ ಉಲ್ಲೇಖಗಳು ಮತ್ತು ಪ್ರಸ್ತಾಪಗಳು ರಾಜಕೀಯ ಪ್ರಚಾರಗಳಲ್ಲಿ ಇರುತ್ತವೆ. ನಿರ್ದಿಷ್ಟ ಆರೋಪಗಳನ್ನು ಪ್ರತ್ಯೇಕಿಸಬೇಕಾಗಿದೆ. ಏಕೆಂದರೆ ಅವುಗಳು ಪರಿಶೀಲಿಸಬೇಕಾದ ಸತ್ಯಗಳಿಂದ ಇರಬೇಕು” ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ನೀಡಿದ ನೋಟಿಸ್‌ನಲ್ಲಿ ತಿಳಿಸಲಾಗಿದೆ.

“ನೀವು ನೀಡಿದ ಜಾಹೀರಾತಿನಲ್ಲಿ ಉಲ್ಲೇಖಿಸಲಾದ ನೇಮಕಾತಿಗಳು, ವರ್ಗಾವಣೆಗಳು, ಉದ್ಯೋಗಗಳು ಮತ್ತು ಕಮಿಷನ್ ಪ್ರಕಾರಗಳ ದರಗಳಿಗೆ ಪುರಾವೆಗಳನ್ನು ಮೇ 7, 2023 ರಂದು ಸಂಜೆ 7 ಗಂಟೆಗಳ ಒಳಗೆ ಯಾವುದೇ ವಿವರಣೆಯೊಂದಿಗೆ ಮತ್ತು ಅದನ್ನು ಸಾರ್ವಜನಿಕ ವೇದಿಕೆಯಲ್ಲಿ ಪ್ರಕಟಿಸುವ ಮೂಲಕ ಪಕ್ಷ ಮಾಡಿದ ಆರೋಪಗಳನ್ನು ಸಾಬೀತುಪಡಿಸಲು ಪುರಾವೆಗಳನ್ನು ನೀಡಬೇಕು” ಎಂದು ಸೂಚಿಸಿದೆ.

“ಪುರಾವೆಗಳನ್ನು ಸಲ್ಲಿಸಲು ವಿಫಲವಾದರೆ ನೀತಿ ಸಂಹಿತೆಗೆ ಸಂಬಂಧಿತ ಕಾನೂನು ನಿಬಂಧನೆಗಳನ್ನು ನಿಮ್ಮ ವಿರುದ್ಧ ಜರುಗಿಸಲಾಗುವುದು. ಜನಪ್ರತಿನಿಧಿ ಕಾಯ್ದೆ ಮತ್ತು ಐಪಿಸಿಯ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದೆ.

ಮೇ 10 ರಂದು ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ.

ಜಾಹೀರಾತಿನಲ್ಲಿ ಏನಿದೆ?

“ಈ ಟ್ರಬಲ್ ಇಂಜಿನ್ ಸರ್ಕಾರ- ಭ್ರಷ್ಟಾಚಾರದ ರೇಟ್ ಕಾರ್ಡ್ 2019-2023” ಎಂದ ಶೀರ್ಷಿಕೆಯೊಂದಿಗೆ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿದೆ.

“ಸಿಎಂ ಹುದ್ದೆಗೆ 2500 ಕೋಟಿ ರೂ., ಮಂತ್ರಿಗಳ ಹುದ್ದೆಗೆ 500 ಕೋಟಿ ರೂಗಳನ್ನು ಬಿಜೆಪಿ ಪಡೆಯುತ್ತದೆ” ಎಂದು ಆರೋಪಿಸಲಾಗಿದೆ.

ನೇಮಕಾತಿ ಮತ್ತು ವರ್ಗಾವಣೆ ದರ

ಕೆಎಸ್‌ಡಿಎಲ್: 5ರಿಂ 15 ಕೋಟಿ ರೂ.,

ಇಂಜಿನಿಯರ್‌: 1ರಿಂದ 5 ಕೋಟಿ ರೂ.

ಸಬ್‌ ರಿಜಿಸ್ಟ್ರಾರ್‌: 50 ಲಕ್ಷ ರೂ.ಗಳಿಂದ 5 ಕೋಟಿ ರೂ.

ಬೆಸ್ಕಾ: 1 ಕೋಟಿ ರೂ.

ಪಿಎಸ್‌ಐ: 80 ಲಕ್ಷ ರೂ.

ಸಹಾಯಕ ಪ್ರಾಧ್ಯಾಪಕ: 50 ಲಕ್ಷ – 70 ಲಕ್ಷ ರೂ.

ಉಪನ್ಯಾಸಕ: 30 ಲಕ್ಷ- 50 ಲಕ್ಷ ರೂ.

ಎಫ್‌ಡಿಎ:30 ಲಕ್ಷ ರೂ.

ಸಹಾಯಕ ಇಂಜಿನಿಯರ್‌: 30 ಲಕ್ಷ ರೂ.

ಬಮುಲ್- 25 ಲಕ್ಷ ರೂ.

ಪಿಡಬ್ಲ್ಯುಡಿ ಸಹಾಯಕ ಇಂಜಿನಿಯರ್‌ 10 ಲಕ್ಷ ರೂ.

ಪೊಲೀಸ್ ಪೇದೆ 10 ಲಕ್ಷ ರೂ.

***

ಹುದ್ದೆಗಳ ದರ 

ಬಿಡಿಎ ಆಯುಕ್ತ : 10 ಕೋಟಿ – 15 ಕೋಟಿ ರೂ.

ಕೆಪಿಎಸ್‌ಸಿ ಅಧ್ಯಕ್ಷ: 5 ರಿಂದ 15 ಕೋಟಿ ರೂ.

ಡಿಸಿ ಮತ್ತು ಎಸ್‌ಪಿ:  5 ರಿಂದ 15 ಕೋಟಿ ರೂ.

ಉಪಕುಲಪತಿ: 5 ರಿಂದ 10 ಕೋಟಿ ರೂ.

ಎಸಿ ಮತ್ತು ತಹಸೀಲ್ದಾರ್‌ 50 ಲಕ್ಷ- 3 ಕೋಟಿ ರೂ.

***

ಸರ್ಕಾರದ ಡೀಲ್‌ಗಳು

ಕೋವಿಡ್ ಕಿಟ್ ಪೂರೈಕೆ: 75%

ಪಿಡಬ್ಲ್ಯುಡಿ ಗುತ್ತಿಗೆಗಳು: 40 %

ಮಠಕ್ಕೆ ಅನುದಾನ: 30%

ಉಪಕರಣಗಳ ಪೂರೈಕೆ: 40%

ಮೊಟ್ಟೆ ಪೂರೈಕೆ: 30%

ರಸ್ತೆ ಗುತ್ತಿಗೆಗಳು: 40%

-ಹೀಗೆ ಜಾಹೀರಾತಿನಲ್ಲಿ ಆರೋಪಗಳನ್ನು ಕಾಂಗ್ರೆಸ್ ಮಾಡಿದೆ. “ಕಳೆದ ನಾಲ್ಕೇ ವರ್ಷಗಳಲ್ಲಿ 40% ಸರ್ಕಾರ ಕನ್ನಡಿಗರಿಂದ  1,50,000 ಕೋಟಿ ರೂ.ಗೂ ಹೆಚ್ಚು ಹಣವನ್ನು ಲೂಟಿ ಮಾಡಿದೆ. ಇದೇ ಗತಿಯಲ್ಲಿ ಸಾಗಿದರೆ ನಮ್ಮ ರಾಜ್ಯವೇ ನಾಶವಾಗುತ್ತದೆ. ಈ ಲೂಟಿಯನ್ನು ನಿಲ್ಲಿಸಿ. ಬದಲಾವಣೆ ಹಾಗೂ ಪ್ರಗತಿಗೆ ನಿಮ್ಮ ಮತ ನೀಡಿ. ಕಾಂಗ್ರೆಸ್‌ಗೆ ಮತ ನೀಡಿ” ಎಂದು ಜಾಹೀರಾತಿನಲ್ಲಿ ಉಲ್ಲೇಖಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...