Homeಮುಖಪುಟ"ವಿಶ್ವಾಸಾರ್ಹ" ಪತ್ರಿಕೆಯೊಳಗೆ ನಡೆಯುತ್ತಿರೋದು ಕಾಸ್ಟ್ ಕಟಿಂಗೊ? ಕ್ಯಾಸ್ಟ್ ಕಟಿಂಗೊ?

“ವಿಶ್ವಾಸಾರ್ಹ” ಪತ್ರಿಕೆಯೊಳಗೆ ನಡೆಯುತ್ತಿರೋದು ಕಾಸ್ಟ್ ಕಟಿಂಗೊ? ಕ್ಯಾಸ್ಟ್ ಕಟಿಂಗೊ?

- Advertisement -
- Advertisement -

`ವಿಶ್ವಾಸಾರ್ಹ’ ಬ್ರ್ಯಾಂಡಿನ ಪತ್ರಿಕೆಯ ವಿಶ್ವಾಸವೇ ಕುಸಿದುಬೀಳುತ್ತಿರುವ ಆಘಾತಕಾರಿ ಸುದ್ದಿಯೊಂದು `ನಂ.75, ಎಂ.ಜಿ.ರೋಡ್’ ಬಿಲ್ಡಿಂಗಿನಿಂದ ಹೊರಬರುತ್ತಿದೆ. ಹೌದು, ಪತ್ರಿಕಾರಂಗವೇ ಮೀಡಿಯೋದ್ಯಮವಾದ ಈ ಕಾಲಘಟ್ಟದಲ್ಲಿ ಕಿಂಚಿತ್ತು ವಿಶ್ವಾಸ ಉಳಿಸಿಕೊಂಡಿರುವ ಪತ್ರಿಕೆಯೆಂದರೆ ಪ್ರಜಾವಾಣಿ. ಆದರೆ ಕಾಸ್ಟ್ ಕಟ್ಟಿಂಗ್ ನೆಪದಲ್ಲಿ ಇದೀಗ ಅಲ್ಲಿ ನಡೆಯುತ್ತಿರುವ `ಟರ್ಮಿನೇಟಿಂಗ್’ ಧಾವಂತ ನೋಡಿದರೆ, ಹಲವು ಅನುಮಾನಗಳು ಮೂಡುತ್ತಿವೆ. ದೇಶದ ಆರ್ಥಿಕ ಪರಿಸ್ಥಿತಿ ಅದೆಷ್ಟು ಹದಗೆಟ್ಟು ಕೂತಿದೆಯೆಂದರೆ ಪತ್ರಿಕಾ ಕಚೇರಿಗಳಿರಲಿ, ಎಂಎನ್‍ಸಿ ಕಂಪನಿಗಳೇ ದೊಡ್ಡ ಸಂಖ್ಯೆಯ ಉದ್ಯೋಗಿಗಳನ್ನು ಮುಲಾಜಿಲ್ಲದೆ ಮನೆಗೆ ಕಳಿಸುತ್ತಿವೆ. ಕನ್ನಡದ ಅದೆಷ್ಟೊ ಪತ್ರಿಕೆ, ಟಿವಿ ಚಾನೆಲ್‍ಗಳು ತಮ್ಮ ಸಿಬ್ಬಂದಿಗಳ ಜೊತೆ ನಿರ್ದಯವಾಗಿ ನಡೆದುಕೊಂಡಿವೆ. ಅಂತದ್ದರಲ್ಲಿ ಪ್ರಜಾವಾಣಿ ಪತ್ರಿಕೆ ತನ್ನ ಆರ್ಥಿಕ ಹೊರೆ ಕಡಿಮೆ ಮಾಡಿಕೊಳ್ಳಲು ನೌಕರರನ್ನು ಕಿತ್ತುಹಾಕಿದರೆ ಏನು ತಪ್ಪು?

ವಿಷಯ ಇಷ್ಟು ಸರಳವಾಗಿದ್ದಿದ್ದರೆ, ಇಂತದ್ದೊಂದು ಪ್ರಶ್ನೆಗೆ ಬೆಲೆ ಇರುತ್ತಿತ್ತು. ಆದರೆ, ಒಂದಾನೊಂದು ಕಾಲದಲ್ಲಿ ಪ್ರಜಾವಾಣಿ ಪತ್ರಿಕೆಯಲ್ಲಿ ಕೆಲಸ ಸಿಗುವುದೆಂದರೆ ಸರ್ಕಾರಿ ನೌಕರಿ ಸಿಕ್ಕಷ್ಟೇ `ಜಾಬ್ ಸೆಕ್ಯೂರಿಟಿ’ ಭಾವನೆ ಇರುತ್ತಿದ್ದ ಸಂಸ್ಥೆ ಅದು. ಈಗ ಅದೇ ಸಂಸ್ಥೆ ಕಾಸ್ಟ್ ಕಟ್ಟಿಂಗ್ ಹೆಸರಲ್ಲಿ ತನ್ನ ಸಿಬ್ಬಂದಿಗಳನ್ನು ನಿವಾರಿಸಿಕೊಳ್ಳಲು ಬಳಸುತ್ತಿರುವ ರೀತಿಯೇ ಆಶ್ಚರ್ಯಕರವಾಗಿದೆ. ಇದಕ್ಕೆ ಕಾರಣವಿಲ್ಲದಿಲ್ಲ. ಸಾಮಾನ್ಯವಾಗಿ ಪ್ರಜಾವಾಣಿ ಪತ್ರಿಕೆ ತನ್ನ ಸಿಬ್ಬಂದಿಗಳನ್ನು ಕೆಲಸದಿಂದ ಕೈಬಿಡಬೇಕಾದ ಸಂದರ್ಭ ಬಂದಾಗ ಗ್ರೆಡೇಶನ್ ನಿಯಮ ಪಾಲಿಸುತ್ತಿತ್ತು. ಅಂದರೆ ಸಿಬ್ಬಂದಿಯ ಕಾರ್ಯದಕ್ಷತೆ, ಸಂಸ್ಥೆಗೆ ಅವರಿಂದ ಆಗುತ್ತಿರುವ ಅನುಕೂಲದ ಆಧಾರದಲ್ಲಿ ಗ್ರೇಡ್-1, ಗ್ರೇಡ್-2, ಗ್ರೇಡ್-3, ಗ್ರೇಡ್-4 ಎಂದು ವರ್ಗೀಕರಿಸಲಾಗುತ್ತಿತ್ತು. ಗ್ರೇಡ್-4ರಲ್ಲಿರುತ್ತಿದ್ದ ಕಳಪೆ ಸಾಮಥ್ರ್ಯದ ಸಿಬ್ಬಂದಿಗಳನ್ನು ಅವರಿಗೆ ನ್ಯಾಯಯುತವಾಗಿ ಸಿಗಬೇಕಾದ ಸವಲತ್ತುಗಳನ್ನು ನೀಡಿಯೇ, ಅಂದರೆ ಒಂದೆರಡು ತಿಂಗಳ ನೋಟಿಸ್ ಕೊಟ್ಟು, ಮೂರ್ನಾಲ್ಕು ತಿಂಗಳ ಸಂಬಳವನ್ನು ಒಟ್ಟಿಗೇ ಕೊಟ್ಟು ಕೆಲಸದಿಂದ ತೆಗೆದುಹಾಕಲಾಗುತ್ತಿತ್ತು. ತೀರಾ ಅನಿವಾರ್ಯವೆನಿಸಿದರೆ ಗ್ರೇಡ್-3 ಸಿಬ್ಬಂದಿಗಳನ್ನು ತೆಗೆದುಹಾಕುವ ಸಂಪ್ರದಾಯವಿತ್ತು. ಆದರೆ ಗ್ರೇಡ್-1, ಗ್ರೇಡ್-2 ದಕ್ಷತೆಯ ಸಿಬ್ಬಂದಿಗಳನ್ನು ಸಂಸ್ಥೆ ಗೌರವಯುತವಾಗಿಯೇ ಮುಂದುವರೆಸುತ್ತಿತ್ತು. ಪ್ರಜಾವಾಣಿ ಪತ್ರಿಕೆಯ ನೌಕರಿಗೆ ಸರ್ಕಾರಿ ನೌಕರಿಯಷ್ಟೆ ಘನತೆ ಬಂದಿದ್ದೇ ಇಂತಹ ನಡೆಗಳಿಂದ.

ಇತ್ತೀಚಿನ ಕೆಲ ವರ್ಷಗಳಲ್ಲಿ ಪ್ರಜಾವಾಣಿ ಬಳಗ ಅಂತಹ ಗ್ರೆಡೇಷನ್ ವ್ಯವಸ್ಥೆಯಿಂದ ದೂರ ಸರಿದಿತ್ತಾದರೂ ಕೆಲಸಗಾರರನ್ನು ತೆಗೆಯುವಾಗ ದಕ್ಷತೆ, ಅನುಭವ, ಅವರ ಸೇವೆಗಳಿಗೆ ಬೆಲೆ ಕೊಡುವ ಪರಂಪರೆಯನ್ನು ಕಾಯ್ದುಕೊಂಡು ಬಂದಿತ್ತು. ಆದರೆ ಇದೀಗ ಕಾಸ್ಟ್ ಕಟಿಂಗ್ ನೆಪದಲ್ಲಿ ತೀರಾ ಗ್ರೇಡ್-1ಗೆ ಒಳಪಡಬಹುದಾದ ಹಿರಿಯ ಸಿಬ್ಬಂದಿಗಳನ್ನೇ ತೆಗೆದುಹಾಕಲು ಸಂಸ್ಥೆ ಮುಂದಾಗಿರೋದು ನಿಜಕ್ಕೂ ಆಘಾತಕಾರಿಯಾಗಿದೆ. ಅಷ್ಟಕ್ಕೂ ಪ್ರಜಾವಾಣಿ ಈಗ ಮನೆಗೆ ಕಳಿಸಲು ಹೊರಟಿರೋದು ಕೇಶವ ಜಿಂಗಾಡೆ, ಹೊನಕೆರೆ ನಂಜುಂಡೇಗೌಡ, ಸಿದ್ದೇಗೌಡ, ಷಣ್ಮುಖಪ್ಪ, ಶೈಲಜಾ ಹೂಗಾರ್ ಮೊದಲಾದ ಹಿರಿಯ ಉಪಸಂಪಾದಕರುಗಳನ್ನು!

ಈ ಒಬ್ಬೊಬ್ಬರು ಏನಿಲ್ಲವೆಂದರು ಹತ್ತಾರು ವರ್ಷ ಪತ್ರಿಕೆಗಾಗಿ ದುಡಿದಿದ್ದಾರೆ. ಪತ್ರಿಕೆಯೇ ಅವರನ್ನು ಬ್ರ್ಯಾಂಡ್ ಮಾಡಿ ಬೆಳೆಸುತ್ತಾ ಬಂದಿದೆ. ಈಗ ಏಕಾಏಕಿ ಕಾಸ್ಟ್ ಕಟಿಂಗ್ ಹೆಸರಲ್ಲಿ ಇಂತಹ ಹಿರಿಯರನ್ನೆಲ್ಲ ಮನೆಗೆ ಕಳಿಸಲು ಮುಂದಾಗಿರೋದು ಪತ್ರಿಕೆ ಇಷ್ಟುದಿನ ನಡೆದುಬಂದ ಹಾದಿಗೆ ತಕ್ಕುನಾದುದಲ್ಲವೆಂಬುದು ಒಟ್ಟು ಪತ್ರಕರ್ತ ವಲಯದ ಒಳಗಿನ ಮಾತು. ಪತ್ರಿಕಾ ಸಂಸ್ಥೆಗಳಲ್ಲೂ ಕಾರ್ಪೊರೇಟ್ ಶೈಲಿಯ ಸಿಇಒ ಹುದ್ದೆಗಳು ಸೃಷ್ಟಿಯಾಗಿ, ಅಲ್ಲಿಗೆ ಎಂಬಿಎ ಮ್ಯಾನೇಜ್‍ಮೆಂಟಿಗರು ಕಾಲಿರಿಸಿದಾಗಿನಿಂದ ಪತ್ರಿಕೋದ್ಯಮ ಇಂಥಾ ವಿಚಾರಗಳಲ್ಲಿ ತನ್ನ ಸ್ಪಂದನೆಯನ್ನು ಕಳೆದುಕೊಳ್ಳುತ್ತಾ ಬಂದಿದೆ. ಪ್ರಜಾವಾಣಿ ಸಂಸ್ಥೆಯ ಈ ನಡೆಗೂ ಇಂತಹ ಶುಷ್ಕ ಆಲೋಚನೆಗಳೇ ಕಾರಣ ಎನ್ನಲಾಗುತ್ತಿದೆ. ಅಲ್ಲದೇ, ಸಂಸ್ಥೆ ಮತ್ತು ಆಡಳಿತ ಮಂಡಳಿಗೆ ಈಗಿರುವ ಆರ್ಥಿಕ ಮುಗ್ಗಟ್ಟಿನ ಲಾಭ ಪಡೆಯುತ್ತಿರುವ ನಿರ್ದಿಷ್ಟ `ಜಾತಿ’ ಕೂಟವೊಂದು, ಅದನ್ನು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡು ತಮಗಾಗದವರನ್ನು ಟಾರ್ಗೆಟ್ ಮಾಡಿ ಸಂಸ್ಥೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ ಎಂಬ ಆರೋಪವೂ ಕೇಳಿಬರುತ್ತಿದೆ. ಹಾಗೆ ನೋಡಿದರೆ, ಕೆ.ಎನ್.ಗುರುಸ್ವಾಮಿಯವರು ಪ್ರಜಾವಾಣಿ ಪತ್ರಿಕೆಯನ್ನು ಹುಟ್ಟುಹಾಕಿದ್ದೇ, ಒಂದು `ಮೇಲ್ಜಾತಿ’ಯ ಕೈಯಲ್ಲೇ ಇದ್ದ ಪತ್ರಿಕೋದ್ಯಮದಲ್ಲಿ `ಇತರರ’ ಪಾಲ್ಗೊಳ್ಳುವಿಕೆಯನ್ನು ಪ್ರೋತ್ಸಾಹಿಸುವ ಸಲುವಾಗಿ. ಆದಾಗ್ಯೂ ಅದು `ಮೇಲ್ಜಾತಿ’ಯ ವೈರಸ್‍ನಿಂದ ಸಣ್ಣಗೆ ಬಳಲುತ್ತಲೇ ಬಂದಿತ್ತು. ಅದೀಗ ವಿರಾಟ್ ರೂಪದಲ್ಲಿ ಉಲ್ಬಣಿಸಿ ಕನ್ನಡಿಗರ ವಿಶ್ವಾಸಾರ್ಹ ಪತ್ರಿಕೆಯ ಘನತೆಯನ್ನೇ ಮಣ್ಣುಪಾಲು ಮಾಡಲಿದೆಯೇನೊ ಎಂಬ ಆತಂಕ ಶುರುವಾಗಿದೆ. ಪತ್ರಿಕೆ ತನ್ನ ಮೂಲ ಬದ್ಧತೆಯಿಂದ ಸಂಪೂರ್ಣ ವಿಮುಖವಾಗದಂತೆ ನೋಡಿಕೊಂಡು ಬಂದ, ಸಂಸ್ಥೆಯ ಮುಖ್ಯಸ್ಥರು ಇತ್ತ ತುರ್ತು ಗಮನಹರಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...