Homeಮುಖಪುಟ"ವಿಶ್ವಾಸಾರ್ಹ" ಪತ್ರಿಕೆಯೊಳಗೆ ನಡೆಯುತ್ತಿರೋದು ಕಾಸ್ಟ್ ಕಟಿಂಗೊ? ಕ್ಯಾಸ್ಟ್ ಕಟಿಂಗೊ?

“ವಿಶ್ವಾಸಾರ್ಹ” ಪತ್ರಿಕೆಯೊಳಗೆ ನಡೆಯುತ್ತಿರೋದು ಕಾಸ್ಟ್ ಕಟಿಂಗೊ? ಕ್ಯಾಸ್ಟ್ ಕಟಿಂಗೊ?

- Advertisement -
- Advertisement -

`ವಿಶ್ವಾಸಾರ್ಹ’ ಬ್ರ್ಯಾಂಡಿನ ಪತ್ರಿಕೆಯ ವಿಶ್ವಾಸವೇ ಕುಸಿದುಬೀಳುತ್ತಿರುವ ಆಘಾತಕಾರಿ ಸುದ್ದಿಯೊಂದು `ನಂ.75, ಎಂ.ಜಿ.ರೋಡ್’ ಬಿಲ್ಡಿಂಗಿನಿಂದ ಹೊರಬರುತ್ತಿದೆ. ಹೌದು, ಪತ್ರಿಕಾರಂಗವೇ ಮೀಡಿಯೋದ್ಯಮವಾದ ಈ ಕಾಲಘಟ್ಟದಲ್ಲಿ ಕಿಂಚಿತ್ತು ವಿಶ್ವಾಸ ಉಳಿಸಿಕೊಂಡಿರುವ ಪತ್ರಿಕೆಯೆಂದರೆ ಪ್ರಜಾವಾಣಿ. ಆದರೆ ಕಾಸ್ಟ್ ಕಟ್ಟಿಂಗ್ ನೆಪದಲ್ಲಿ ಇದೀಗ ಅಲ್ಲಿ ನಡೆಯುತ್ತಿರುವ `ಟರ್ಮಿನೇಟಿಂಗ್’ ಧಾವಂತ ನೋಡಿದರೆ, ಹಲವು ಅನುಮಾನಗಳು ಮೂಡುತ್ತಿವೆ. ದೇಶದ ಆರ್ಥಿಕ ಪರಿಸ್ಥಿತಿ ಅದೆಷ್ಟು ಹದಗೆಟ್ಟು ಕೂತಿದೆಯೆಂದರೆ ಪತ್ರಿಕಾ ಕಚೇರಿಗಳಿರಲಿ, ಎಂಎನ್‍ಸಿ ಕಂಪನಿಗಳೇ ದೊಡ್ಡ ಸಂಖ್ಯೆಯ ಉದ್ಯೋಗಿಗಳನ್ನು ಮುಲಾಜಿಲ್ಲದೆ ಮನೆಗೆ ಕಳಿಸುತ್ತಿವೆ. ಕನ್ನಡದ ಅದೆಷ್ಟೊ ಪತ್ರಿಕೆ, ಟಿವಿ ಚಾನೆಲ್‍ಗಳು ತಮ್ಮ ಸಿಬ್ಬಂದಿಗಳ ಜೊತೆ ನಿರ್ದಯವಾಗಿ ನಡೆದುಕೊಂಡಿವೆ. ಅಂತದ್ದರಲ್ಲಿ ಪ್ರಜಾವಾಣಿ ಪತ್ರಿಕೆ ತನ್ನ ಆರ್ಥಿಕ ಹೊರೆ ಕಡಿಮೆ ಮಾಡಿಕೊಳ್ಳಲು ನೌಕರರನ್ನು ಕಿತ್ತುಹಾಕಿದರೆ ಏನು ತಪ್ಪು?

ವಿಷಯ ಇಷ್ಟು ಸರಳವಾಗಿದ್ದಿದ್ದರೆ, ಇಂತದ್ದೊಂದು ಪ್ರಶ್ನೆಗೆ ಬೆಲೆ ಇರುತ್ತಿತ್ತು. ಆದರೆ, ಒಂದಾನೊಂದು ಕಾಲದಲ್ಲಿ ಪ್ರಜಾವಾಣಿ ಪತ್ರಿಕೆಯಲ್ಲಿ ಕೆಲಸ ಸಿಗುವುದೆಂದರೆ ಸರ್ಕಾರಿ ನೌಕರಿ ಸಿಕ್ಕಷ್ಟೇ `ಜಾಬ್ ಸೆಕ್ಯೂರಿಟಿ’ ಭಾವನೆ ಇರುತ್ತಿದ್ದ ಸಂಸ್ಥೆ ಅದು. ಈಗ ಅದೇ ಸಂಸ್ಥೆ ಕಾಸ್ಟ್ ಕಟ್ಟಿಂಗ್ ಹೆಸರಲ್ಲಿ ತನ್ನ ಸಿಬ್ಬಂದಿಗಳನ್ನು ನಿವಾರಿಸಿಕೊಳ್ಳಲು ಬಳಸುತ್ತಿರುವ ರೀತಿಯೇ ಆಶ್ಚರ್ಯಕರವಾಗಿದೆ. ಇದಕ್ಕೆ ಕಾರಣವಿಲ್ಲದಿಲ್ಲ. ಸಾಮಾನ್ಯವಾಗಿ ಪ್ರಜಾವಾಣಿ ಪತ್ರಿಕೆ ತನ್ನ ಸಿಬ್ಬಂದಿಗಳನ್ನು ಕೆಲಸದಿಂದ ಕೈಬಿಡಬೇಕಾದ ಸಂದರ್ಭ ಬಂದಾಗ ಗ್ರೆಡೇಶನ್ ನಿಯಮ ಪಾಲಿಸುತ್ತಿತ್ತು. ಅಂದರೆ ಸಿಬ್ಬಂದಿಯ ಕಾರ್ಯದಕ್ಷತೆ, ಸಂಸ್ಥೆಗೆ ಅವರಿಂದ ಆಗುತ್ತಿರುವ ಅನುಕೂಲದ ಆಧಾರದಲ್ಲಿ ಗ್ರೇಡ್-1, ಗ್ರೇಡ್-2, ಗ್ರೇಡ್-3, ಗ್ರೇಡ್-4 ಎಂದು ವರ್ಗೀಕರಿಸಲಾಗುತ್ತಿತ್ತು. ಗ್ರೇಡ್-4ರಲ್ಲಿರುತ್ತಿದ್ದ ಕಳಪೆ ಸಾಮಥ್ರ್ಯದ ಸಿಬ್ಬಂದಿಗಳನ್ನು ಅವರಿಗೆ ನ್ಯಾಯಯುತವಾಗಿ ಸಿಗಬೇಕಾದ ಸವಲತ್ತುಗಳನ್ನು ನೀಡಿಯೇ, ಅಂದರೆ ಒಂದೆರಡು ತಿಂಗಳ ನೋಟಿಸ್ ಕೊಟ್ಟು, ಮೂರ್ನಾಲ್ಕು ತಿಂಗಳ ಸಂಬಳವನ್ನು ಒಟ್ಟಿಗೇ ಕೊಟ್ಟು ಕೆಲಸದಿಂದ ತೆಗೆದುಹಾಕಲಾಗುತ್ತಿತ್ತು. ತೀರಾ ಅನಿವಾರ್ಯವೆನಿಸಿದರೆ ಗ್ರೇಡ್-3 ಸಿಬ್ಬಂದಿಗಳನ್ನು ತೆಗೆದುಹಾಕುವ ಸಂಪ್ರದಾಯವಿತ್ತು. ಆದರೆ ಗ್ರೇಡ್-1, ಗ್ರೇಡ್-2 ದಕ್ಷತೆಯ ಸಿಬ್ಬಂದಿಗಳನ್ನು ಸಂಸ್ಥೆ ಗೌರವಯುತವಾಗಿಯೇ ಮುಂದುವರೆಸುತ್ತಿತ್ತು. ಪ್ರಜಾವಾಣಿ ಪತ್ರಿಕೆಯ ನೌಕರಿಗೆ ಸರ್ಕಾರಿ ನೌಕರಿಯಷ್ಟೆ ಘನತೆ ಬಂದಿದ್ದೇ ಇಂತಹ ನಡೆಗಳಿಂದ.

ಇತ್ತೀಚಿನ ಕೆಲ ವರ್ಷಗಳಲ್ಲಿ ಪ್ರಜಾವಾಣಿ ಬಳಗ ಅಂತಹ ಗ್ರೆಡೇಷನ್ ವ್ಯವಸ್ಥೆಯಿಂದ ದೂರ ಸರಿದಿತ್ತಾದರೂ ಕೆಲಸಗಾರರನ್ನು ತೆಗೆಯುವಾಗ ದಕ್ಷತೆ, ಅನುಭವ, ಅವರ ಸೇವೆಗಳಿಗೆ ಬೆಲೆ ಕೊಡುವ ಪರಂಪರೆಯನ್ನು ಕಾಯ್ದುಕೊಂಡು ಬಂದಿತ್ತು. ಆದರೆ ಇದೀಗ ಕಾಸ್ಟ್ ಕಟಿಂಗ್ ನೆಪದಲ್ಲಿ ತೀರಾ ಗ್ರೇಡ್-1ಗೆ ಒಳಪಡಬಹುದಾದ ಹಿರಿಯ ಸಿಬ್ಬಂದಿಗಳನ್ನೇ ತೆಗೆದುಹಾಕಲು ಸಂಸ್ಥೆ ಮುಂದಾಗಿರೋದು ನಿಜಕ್ಕೂ ಆಘಾತಕಾರಿಯಾಗಿದೆ. ಅಷ್ಟಕ್ಕೂ ಪ್ರಜಾವಾಣಿ ಈಗ ಮನೆಗೆ ಕಳಿಸಲು ಹೊರಟಿರೋದು ಕೇಶವ ಜಿಂಗಾಡೆ, ಹೊನಕೆರೆ ನಂಜುಂಡೇಗೌಡ, ಸಿದ್ದೇಗೌಡ, ಷಣ್ಮುಖಪ್ಪ, ಶೈಲಜಾ ಹೂಗಾರ್ ಮೊದಲಾದ ಹಿರಿಯ ಉಪಸಂಪಾದಕರುಗಳನ್ನು!

ಈ ಒಬ್ಬೊಬ್ಬರು ಏನಿಲ್ಲವೆಂದರು ಹತ್ತಾರು ವರ್ಷ ಪತ್ರಿಕೆಗಾಗಿ ದುಡಿದಿದ್ದಾರೆ. ಪತ್ರಿಕೆಯೇ ಅವರನ್ನು ಬ್ರ್ಯಾಂಡ್ ಮಾಡಿ ಬೆಳೆಸುತ್ತಾ ಬಂದಿದೆ. ಈಗ ಏಕಾಏಕಿ ಕಾಸ್ಟ್ ಕಟಿಂಗ್ ಹೆಸರಲ್ಲಿ ಇಂತಹ ಹಿರಿಯರನ್ನೆಲ್ಲ ಮನೆಗೆ ಕಳಿಸಲು ಮುಂದಾಗಿರೋದು ಪತ್ರಿಕೆ ಇಷ್ಟುದಿನ ನಡೆದುಬಂದ ಹಾದಿಗೆ ತಕ್ಕುನಾದುದಲ್ಲವೆಂಬುದು ಒಟ್ಟು ಪತ್ರಕರ್ತ ವಲಯದ ಒಳಗಿನ ಮಾತು. ಪತ್ರಿಕಾ ಸಂಸ್ಥೆಗಳಲ್ಲೂ ಕಾರ್ಪೊರೇಟ್ ಶೈಲಿಯ ಸಿಇಒ ಹುದ್ದೆಗಳು ಸೃಷ್ಟಿಯಾಗಿ, ಅಲ್ಲಿಗೆ ಎಂಬಿಎ ಮ್ಯಾನೇಜ್‍ಮೆಂಟಿಗರು ಕಾಲಿರಿಸಿದಾಗಿನಿಂದ ಪತ್ರಿಕೋದ್ಯಮ ಇಂಥಾ ವಿಚಾರಗಳಲ್ಲಿ ತನ್ನ ಸ್ಪಂದನೆಯನ್ನು ಕಳೆದುಕೊಳ್ಳುತ್ತಾ ಬಂದಿದೆ. ಪ್ರಜಾವಾಣಿ ಸಂಸ್ಥೆಯ ಈ ನಡೆಗೂ ಇಂತಹ ಶುಷ್ಕ ಆಲೋಚನೆಗಳೇ ಕಾರಣ ಎನ್ನಲಾಗುತ್ತಿದೆ. ಅಲ್ಲದೇ, ಸಂಸ್ಥೆ ಮತ್ತು ಆಡಳಿತ ಮಂಡಳಿಗೆ ಈಗಿರುವ ಆರ್ಥಿಕ ಮುಗ್ಗಟ್ಟಿನ ಲಾಭ ಪಡೆಯುತ್ತಿರುವ ನಿರ್ದಿಷ್ಟ `ಜಾತಿ’ ಕೂಟವೊಂದು, ಅದನ್ನು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡು ತಮಗಾಗದವರನ್ನು ಟಾರ್ಗೆಟ್ ಮಾಡಿ ಸಂಸ್ಥೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ ಎಂಬ ಆರೋಪವೂ ಕೇಳಿಬರುತ್ತಿದೆ. ಹಾಗೆ ನೋಡಿದರೆ, ಕೆ.ಎನ್.ಗುರುಸ್ವಾಮಿಯವರು ಪ್ರಜಾವಾಣಿ ಪತ್ರಿಕೆಯನ್ನು ಹುಟ್ಟುಹಾಕಿದ್ದೇ, ಒಂದು `ಮೇಲ್ಜಾತಿ’ಯ ಕೈಯಲ್ಲೇ ಇದ್ದ ಪತ್ರಿಕೋದ್ಯಮದಲ್ಲಿ `ಇತರರ’ ಪಾಲ್ಗೊಳ್ಳುವಿಕೆಯನ್ನು ಪ್ರೋತ್ಸಾಹಿಸುವ ಸಲುವಾಗಿ. ಆದಾಗ್ಯೂ ಅದು `ಮೇಲ್ಜಾತಿ’ಯ ವೈರಸ್‍ನಿಂದ ಸಣ್ಣಗೆ ಬಳಲುತ್ತಲೇ ಬಂದಿತ್ತು. ಅದೀಗ ವಿರಾಟ್ ರೂಪದಲ್ಲಿ ಉಲ್ಬಣಿಸಿ ಕನ್ನಡಿಗರ ವಿಶ್ವಾಸಾರ್ಹ ಪತ್ರಿಕೆಯ ಘನತೆಯನ್ನೇ ಮಣ್ಣುಪಾಲು ಮಾಡಲಿದೆಯೇನೊ ಎಂಬ ಆತಂಕ ಶುರುವಾಗಿದೆ. ಪತ್ರಿಕೆ ತನ್ನ ಮೂಲ ಬದ್ಧತೆಯಿಂದ ಸಂಪೂರ್ಣ ವಿಮುಖವಾಗದಂತೆ ನೋಡಿಕೊಂಡು ಬಂದ, ಸಂಸ್ಥೆಯ ಮುಖ್ಯಸ್ಥರು ಇತ್ತ ತುರ್ತು ಗಮನಹರಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...