Homeಮುಖಪುಟ"ವಿಶ್ವಾಸಾರ್ಹ" ಪತ್ರಿಕೆಯೊಳಗೆ ನಡೆಯುತ್ತಿರೋದು ಕಾಸ್ಟ್ ಕಟಿಂಗೊ? ಕ್ಯಾಸ್ಟ್ ಕಟಿಂಗೊ?

“ವಿಶ್ವಾಸಾರ್ಹ” ಪತ್ರಿಕೆಯೊಳಗೆ ನಡೆಯುತ್ತಿರೋದು ಕಾಸ್ಟ್ ಕಟಿಂಗೊ? ಕ್ಯಾಸ್ಟ್ ಕಟಿಂಗೊ?

- Advertisement -
- Advertisement -

`ವಿಶ್ವಾಸಾರ್ಹ’ ಬ್ರ್ಯಾಂಡಿನ ಪತ್ರಿಕೆಯ ವಿಶ್ವಾಸವೇ ಕುಸಿದುಬೀಳುತ್ತಿರುವ ಆಘಾತಕಾರಿ ಸುದ್ದಿಯೊಂದು `ನಂ.75, ಎಂ.ಜಿ.ರೋಡ್’ ಬಿಲ್ಡಿಂಗಿನಿಂದ ಹೊರಬರುತ್ತಿದೆ. ಹೌದು, ಪತ್ರಿಕಾರಂಗವೇ ಮೀಡಿಯೋದ್ಯಮವಾದ ಈ ಕಾಲಘಟ್ಟದಲ್ಲಿ ಕಿಂಚಿತ್ತು ವಿಶ್ವಾಸ ಉಳಿಸಿಕೊಂಡಿರುವ ಪತ್ರಿಕೆಯೆಂದರೆ ಪ್ರಜಾವಾಣಿ. ಆದರೆ ಕಾಸ್ಟ್ ಕಟ್ಟಿಂಗ್ ನೆಪದಲ್ಲಿ ಇದೀಗ ಅಲ್ಲಿ ನಡೆಯುತ್ತಿರುವ `ಟರ್ಮಿನೇಟಿಂಗ್’ ಧಾವಂತ ನೋಡಿದರೆ, ಹಲವು ಅನುಮಾನಗಳು ಮೂಡುತ್ತಿವೆ. ದೇಶದ ಆರ್ಥಿಕ ಪರಿಸ್ಥಿತಿ ಅದೆಷ್ಟು ಹದಗೆಟ್ಟು ಕೂತಿದೆಯೆಂದರೆ ಪತ್ರಿಕಾ ಕಚೇರಿಗಳಿರಲಿ, ಎಂಎನ್‍ಸಿ ಕಂಪನಿಗಳೇ ದೊಡ್ಡ ಸಂಖ್ಯೆಯ ಉದ್ಯೋಗಿಗಳನ್ನು ಮುಲಾಜಿಲ್ಲದೆ ಮನೆಗೆ ಕಳಿಸುತ್ತಿವೆ. ಕನ್ನಡದ ಅದೆಷ್ಟೊ ಪತ್ರಿಕೆ, ಟಿವಿ ಚಾನೆಲ್‍ಗಳು ತಮ್ಮ ಸಿಬ್ಬಂದಿಗಳ ಜೊತೆ ನಿರ್ದಯವಾಗಿ ನಡೆದುಕೊಂಡಿವೆ. ಅಂತದ್ದರಲ್ಲಿ ಪ್ರಜಾವಾಣಿ ಪತ್ರಿಕೆ ತನ್ನ ಆರ್ಥಿಕ ಹೊರೆ ಕಡಿಮೆ ಮಾಡಿಕೊಳ್ಳಲು ನೌಕರರನ್ನು ಕಿತ್ತುಹಾಕಿದರೆ ಏನು ತಪ್ಪು?

ವಿಷಯ ಇಷ್ಟು ಸರಳವಾಗಿದ್ದಿದ್ದರೆ, ಇಂತದ್ದೊಂದು ಪ್ರಶ್ನೆಗೆ ಬೆಲೆ ಇರುತ್ತಿತ್ತು. ಆದರೆ, ಒಂದಾನೊಂದು ಕಾಲದಲ್ಲಿ ಪ್ರಜಾವಾಣಿ ಪತ್ರಿಕೆಯಲ್ಲಿ ಕೆಲಸ ಸಿಗುವುದೆಂದರೆ ಸರ್ಕಾರಿ ನೌಕರಿ ಸಿಕ್ಕಷ್ಟೇ `ಜಾಬ್ ಸೆಕ್ಯೂರಿಟಿ’ ಭಾವನೆ ಇರುತ್ತಿದ್ದ ಸಂಸ್ಥೆ ಅದು. ಈಗ ಅದೇ ಸಂಸ್ಥೆ ಕಾಸ್ಟ್ ಕಟ್ಟಿಂಗ್ ಹೆಸರಲ್ಲಿ ತನ್ನ ಸಿಬ್ಬಂದಿಗಳನ್ನು ನಿವಾರಿಸಿಕೊಳ್ಳಲು ಬಳಸುತ್ತಿರುವ ರೀತಿಯೇ ಆಶ್ಚರ್ಯಕರವಾಗಿದೆ. ಇದಕ್ಕೆ ಕಾರಣವಿಲ್ಲದಿಲ್ಲ. ಸಾಮಾನ್ಯವಾಗಿ ಪ್ರಜಾವಾಣಿ ಪತ್ರಿಕೆ ತನ್ನ ಸಿಬ್ಬಂದಿಗಳನ್ನು ಕೆಲಸದಿಂದ ಕೈಬಿಡಬೇಕಾದ ಸಂದರ್ಭ ಬಂದಾಗ ಗ್ರೆಡೇಶನ್ ನಿಯಮ ಪಾಲಿಸುತ್ತಿತ್ತು. ಅಂದರೆ ಸಿಬ್ಬಂದಿಯ ಕಾರ್ಯದಕ್ಷತೆ, ಸಂಸ್ಥೆಗೆ ಅವರಿಂದ ಆಗುತ್ತಿರುವ ಅನುಕೂಲದ ಆಧಾರದಲ್ಲಿ ಗ್ರೇಡ್-1, ಗ್ರೇಡ್-2, ಗ್ರೇಡ್-3, ಗ್ರೇಡ್-4 ಎಂದು ವರ್ಗೀಕರಿಸಲಾಗುತ್ತಿತ್ತು. ಗ್ರೇಡ್-4ರಲ್ಲಿರುತ್ತಿದ್ದ ಕಳಪೆ ಸಾಮಥ್ರ್ಯದ ಸಿಬ್ಬಂದಿಗಳನ್ನು ಅವರಿಗೆ ನ್ಯಾಯಯುತವಾಗಿ ಸಿಗಬೇಕಾದ ಸವಲತ್ತುಗಳನ್ನು ನೀಡಿಯೇ, ಅಂದರೆ ಒಂದೆರಡು ತಿಂಗಳ ನೋಟಿಸ್ ಕೊಟ್ಟು, ಮೂರ್ನಾಲ್ಕು ತಿಂಗಳ ಸಂಬಳವನ್ನು ಒಟ್ಟಿಗೇ ಕೊಟ್ಟು ಕೆಲಸದಿಂದ ತೆಗೆದುಹಾಕಲಾಗುತ್ತಿತ್ತು. ತೀರಾ ಅನಿವಾರ್ಯವೆನಿಸಿದರೆ ಗ್ರೇಡ್-3 ಸಿಬ್ಬಂದಿಗಳನ್ನು ತೆಗೆದುಹಾಕುವ ಸಂಪ್ರದಾಯವಿತ್ತು. ಆದರೆ ಗ್ರೇಡ್-1, ಗ್ರೇಡ್-2 ದಕ್ಷತೆಯ ಸಿಬ್ಬಂದಿಗಳನ್ನು ಸಂಸ್ಥೆ ಗೌರವಯುತವಾಗಿಯೇ ಮುಂದುವರೆಸುತ್ತಿತ್ತು. ಪ್ರಜಾವಾಣಿ ಪತ್ರಿಕೆಯ ನೌಕರಿಗೆ ಸರ್ಕಾರಿ ನೌಕರಿಯಷ್ಟೆ ಘನತೆ ಬಂದಿದ್ದೇ ಇಂತಹ ನಡೆಗಳಿಂದ.

ಇತ್ತೀಚಿನ ಕೆಲ ವರ್ಷಗಳಲ್ಲಿ ಪ್ರಜಾವಾಣಿ ಬಳಗ ಅಂತಹ ಗ್ರೆಡೇಷನ್ ವ್ಯವಸ್ಥೆಯಿಂದ ದೂರ ಸರಿದಿತ್ತಾದರೂ ಕೆಲಸಗಾರರನ್ನು ತೆಗೆಯುವಾಗ ದಕ್ಷತೆ, ಅನುಭವ, ಅವರ ಸೇವೆಗಳಿಗೆ ಬೆಲೆ ಕೊಡುವ ಪರಂಪರೆಯನ್ನು ಕಾಯ್ದುಕೊಂಡು ಬಂದಿತ್ತು. ಆದರೆ ಇದೀಗ ಕಾಸ್ಟ್ ಕಟಿಂಗ್ ನೆಪದಲ್ಲಿ ತೀರಾ ಗ್ರೇಡ್-1ಗೆ ಒಳಪಡಬಹುದಾದ ಹಿರಿಯ ಸಿಬ್ಬಂದಿಗಳನ್ನೇ ತೆಗೆದುಹಾಕಲು ಸಂಸ್ಥೆ ಮುಂದಾಗಿರೋದು ನಿಜಕ್ಕೂ ಆಘಾತಕಾರಿಯಾಗಿದೆ. ಅಷ್ಟಕ್ಕೂ ಪ್ರಜಾವಾಣಿ ಈಗ ಮನೆಗೆ ಕಳಿಸಲು ಹೊರಟಿರೋದು ಕೇಶವ ಜಿಂಗಾಡೆ, ಹೊನಕೆರೆ ನಂಜುಂಡೇಗೌಡ, ಸಿದ್ದೇಗೌಡ, ಷಣ್ಮುಖಪ್ಪ, ಶೈಲಜಾ ಹೂಗಾರ್ ಮೊದಲಾದ ಹಿರಿಯ ಉಪಸಂಪಾದಕರುಗಳನ್ನು!

ಈ ಒಬ್ಬೊಬ್ಬರು ಏನಿಲ್ಲವೆಂದರು ಹತ್ತಾರು ವರ್ಷ ಪತ್ರಿಕೆಗಾಗಿ ದುಡಿದಿದ್ದಾರೆ. ಪತ್ರಿಕೆಯೇ ಅವರನ್ನು ಬ್ರ್ಯಾಂಡ್ ಮಾಡಿ ಬೆಳೆಸುತ್ತಾ ಬಂದಿದೆ. ಈಗ ಏಕಾಏಕಿ ಕಾಸ್ಟ್ ಕಟಿಂಗ್ ಹೆಸರಲ್ಲಿ ಇಂತಹ ಹಿರಿಯರನ್ನೆಲ್ಲ ಮನೆಗೆ ಕಳಿಸಲು ಮುಂದಾಗಿರೋದು ಪತ್ರಿಕೆ ಇಷ್ಟುದಿನ ನಡೆದುಬಂದ ಹಾದಿಗೆ ತಕ್ಕುನಾದುದಲ್ಲವೆಂಬುದು ಒಟ್ಟು ಪತ್ರಕರ್ತ ವಲಯದ ಒಳಗಿನ ಮಾತು. ಪತ್ರಿಕಾ ಸಂಸ್ಥೆಗಳಲ್ಲೂ ಕಾರ್ಪೊರೇಟ್ ಶೈಲಿಯ ಸಿಇಒ ಹುದ್ದೆಗಳು ಸೃಷ್ಟಿಯಾಗಿ, ಅಲ್ಲಿಗೆ ಎಂಬಿಎ ಮ್ಯಾನೇಜ್‍ಮೆಂಟಿಗರು ಕಾಲಿರಿಸಿದಾಗಿನಿಂದ ಪತ್ರಿಕೋದ್ಯಮ ಇಂಥಾ ವಿಚಾರಗಳಲ್ಲಿ ತನ್ನ ಸ್ಪಂದನೆಯನ್ನು ಕಳೆದುಕೊಳ್ಳುತ್ತಾ ಬಂದಿದೆ. ಪ್ರಜಾವಾಣಿ ಸಂಸ್ಥೆಯ ಈ ನಡೆಗೂ ಇಂತಹ ಶುಷ್ಕ ಆಲೋಚನೆಗಳೇ ಕಾರಣ ಎನ್ನಲಾಗುತ್ತಿದೆ. ಅಲ್ಲದೇ, ಸಂಸ್ಥೆ ಮತ್ತು ಆಡಳಿತ ಮಂಡಳಿಗೆ ಈಗಿರುವ ಆರ್ಥಿಕ ಮುಗ್ಗಟ್ಟಿನ ಲಾಭ ಪಡೆಯುತ್ತಿರುವ ನಿರ್ದಿಷ್ಟ `ಜಾತಿ’ ಕೂಟವೊಂದು, ಅದನ್ನು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡು ತಮಗಾಗದವರನ್ನು ಟಾರ್ಗೆಟ್ ಮಾಡಿ ಸಂಸ್ಥೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ ಎಂಬ ಆರೋಪವೂ ಕೇಳಿಬರುತ್ತಿದೆ. ಹಾಗೆ ನೋಡಿದರೆ, ಕೆ.ಎನ್.ಗುರುಸ್ವಾಮಿಯವರು ಪ್ರಜಾವಾಣಿ ಪತ್ರಿಕೆಯನ್ನು ಹುಟ್ಟುಹಾಕಿದ್ದೇ, ಒಂದು `ಮೇಲ್ಜಾತಿ’ಯ ಕೈಯಲ್ಲೇ ಇದ್ದ ಪತ್ರಿಕೋದ್ಯಮದಲ್ಲಿ `ಇತರರ’ ಪಾಲ್ಗೊಳ್ಳುವಿಕೆಯನ್ನು ಪ್ರೋತ್ಸಾಹಿಸುವ ಸಲುವಾಗಿ. ಆದಾಗ್ಯೂ ಅದು `ಮೇಲ್ಜಾತಿ’ಯ ವೈರಸ್‍ನಿಂದ ಸಣ್ಣಗೆ ಬಳಲುತ್ತಲೇ ಬಂದಿತ್ತು. ಅದೀಗ ವಿರಾಟ್ ರೂಪದಲ್ಲಿ ಉಲ್ಬಣಿಸಿ ಕನ್ನಡಿಗರ ವಿಶ್ವಾಸಾರ್ಹ ಪತ್ರಿಕೆಯ ಘನತೆಯನ್ನೇ ಮಣ್ಣುಪಾಲು ಮಾಡಲಿದೆಯೇನೊ ಎಂಬ ಆತಂಕ ಶುರುವಾಗಿದೆ. ಪತ್ರಿಕೆ ತನ್ನ ಮೂಲ ಬದ್ಧತೆಯಿಂದ ಸಂಪೂರ್ಣ ವಿಮುಖವಾಗದಂತೆ ನೋಡಿಕೊಂಡು ಬಂದ, ಸಂಸ್ಥೆಯ ಮುಖ್ಯಸ್ಥರು ಇತ್ತ ತುರ್ತು ಗಮನಹರಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...