Homeಮುಖಪುಟ"ವಿಶ್ವಾಸಾರ್ಹ" ಪತ್ರಿಕೆಯೊಳಗೆ ನಡೆಯುತ್ತಿರೋದು ಕಾಸ್ಟ್ ಕಟಿಂಗೊ? ಕ್ಯಾಸ್ಟ್ ಕಟಿಂಗೊ?

“ವಿಶ್ವಾಸಾರ್ಹ” ಪತ್ರಿಕೆಯೊಳಗೆ ನಡೆಯುತ್ತಿರೋದು ಕಾಸ್ಟ್ ಕಟಿಂಗೊ? ಕ್ಯಾಸ್ಟ್ ಕಟಿಂಗೊ?

- Advertisement -
- Advertisement -

`ವಿಶ್ವಾಸಾರ್ಹ’ ಬ್ರ್ಯಾಂಡಿನ ಪತ್ರಿಕೆಯ ವಿಶ್ವಾಸವೇ ಕುಸಿದುಬೀಳುತ್ತಿರುವ ಆಘಾತಕಾರಿ ಸುದ್ದಿಯೊಂದು `ನಂ.75, ಎಂ.ಜಿ.ರೋಡ್’ ಬಿಲ್ಡಿಂಗಿನಿಂದ ಹೊರಬರುತ್ತಿದೆ. ಹೌದು, ಪತ್ರಿಕಾರಂಗವೇ ಮೀಡಿಯೋದ್ಯಮವಾದ ಈ ಕಾಲಘಟ್ಟದಲ್ಲಿ ಕಿಂಚಿತ್ತು ವಿಶ್ವಾಸ ಉಳಿಸಿಕೊಂಡಿರುವ ಪತ್ರಿಕೆಯೆಂದರೆ ಪ್ರಜಾವಾಣಿ. ಆದರೆ ಕಾಸ್ಟ್ ಕಟ್ಟಿಂಗ್ ನೆಪದಲ್ಲಿ ಇದೀಗ ಅಲ್ಲಿ ನಡೆಯುತ್ತಿರುವ `ಟರ್ಮಿನೇಟಿಂಗ್’ ಧಾವಂತ ನೋಡಿದರೆ, ಹಲವು ಅನುಮಾನಗಳು ಮೂಡುತ್ತಿವೆ. ದೇಶದ ಆರ್ಥಿಕ ಪರಿಸ್ಥಿತಿ ಅದೆಷ್ಟು ಹದಗೆಟ್ಟು ಕೂತಿದೆಯೆಂದರೆ ಪತ್ರಿಕಾ ಕಚೇರಿಗಳಿರಲಿ, ಎಂಎನ್‍ಸಿ ಕಂಪನಿಗಳೇ ದೊಡ್ಡ ಸಂಖ್ಯೆಯ ಉದ್ಯೋಗಿಗಳನ್ನು ಮುಲಾಜಿಲ್ಲದೆ ಮನೆಗೆ ಕಳಿಸುತ್ತಿವೆ. ಕನ್ನಡದ ಅದೆಷ್ಟೊ ಪತ್ರಿಕೆ, ಟಿವಿ ಚಾನೆಲ್‍ಗಳು ತಮ್ಮ ಸಿಬ್ಬಂದಿಗಳ ಜೊತೆ ನಿರ್ದಯವಾಗಿ ನಡೆದುಕೊಂಡಿವೆ. ಅಂತದ್ದರಲ್ಲಿ ಪ್ರಜಾವಾಣಿ ಪತ್ರಿಕೆ ತನ್ನ ಆರ್ಥಿಕ ಹೊರೆ ಕಡಿಮೆ ಮಾಡಿಕೊಳ್ಳಲು ನೌಕರರನ್ನು ಕಿತ್ತುಹಾಕಿದರೆ ಏನು ತಪ್ಪು?

ವಿಷಯ ಇಷ್ಟು ಸರಳವಾಗಿದ್ದಿದ್ದರೆ, ಇಂತದ್ದೊಂದು ಪ್ರಶ್ನೆಗೆ ಬೆಲೆ ಇರುತ್ತಿತ್ತು. ಆದರೆ, ಒಂದಾನೊಂದು ಕಾಲದಲ್ಲಿ ಪ್ರಜಾವಾಣಿ ಪತ್ರಿಕೆಯಲ್ಲಿ ಕೆಲಸ ಸಿಗುವುದೆಂದರೆ ಸರ್ಕಾರಿ ನೌಕರಿ ಸಿಕ್ಕಷ್ಟೇ `ಜಾಬ್ ಸೆಕ್ಯೂರಿಟಿ’ ಭಾವನೆ ಇರುತ್ತಿದ್ದ ಸಂಸ್ಥೆ ಅದು. ಈಗ ಅದೇ ಸಂಸ್ಥೆ ಕಾಸ್ಟ್ ಕಟ್ಟಿಂಗ್ ಹೆಸರಲ್ಲಿ ತನ್ನ ಸಿಬ್ಬಂದಿಗಳನ್ನು ನಿವಾರಿಸಿಕೊಳ್ಳಲು ಬಳಸುತ್ತಿರುವ ರೀತಿಯೇ ಆಶ್ಚರ್ಯಕರವಾಗಿದೆ. ಇದಕ್ಕೆ ಕಾರಣವಿಲ್ಲದಿಲ್ಲ. ಸಾಮಾನ್ಯವಾಗಿ ಪ್ರಜಾವಾಣಿ ಪತ್ರಿಕೆ ತನ್ನ ಸಿಬ್ಬಂದಿಗಳನ್ನು ಕೆಲಸದಿಂದ ಕೈಬಿಡಬೇಕಾದ ಸಂದರ್ಭ ಬಂದಾಗ ಗ್ರೆಡೇಶನ್ ನಿಯಮ ಪಾಲಿಸುತ್ತಿತ್ತು. ಅಂದರೆ ಸಿಬ್ಬಂದಿಯ ಕಾರ್ಯದಕ್ಷತೆ, ಸಂಸ್ಥೆಗೆ ಅವರಿಂದ ಆಗುತ್ತಿರುವ ಅನುಕೂಲದ ಆಧಾರದಲ್ಲಿ ಗ್ರೇಡ್-1, ಗ್ರೇಡ್-2, ಗ್ರೇಡ್-3, ಗ್ರೇಡ್-4 ಎಂದು ವರ್ಗೀಕರಿಸಲಾಗುತ್ತಿತ್ತು. ಗ್ರೇಡ್-4ರಲ್ಲಿರುತ್ತಿದ್ದ ಕಳಪೆ ಸಾಮಥ್ರ್ಯದ ಸಿಬ್ಬಂದಿಗಳನ್ನು ಅವರಿಗೆ ನ್ಯಾಯಯುತವಾಗಿ ಸಿಗಬೇಕಾದ ಸವಲತ್ತುಗಳನ್ನು ನೀಡಿಯೇ, ಅಂದರೆ ಒಂದೆರಡು ತಿಂಗಳ ನೋಟಿಸ್ ಕೊಟ್ಟು, ಮೂರ್ನಾಲ್ಕು ತಿಂಗಳ ಸಂಬಳವನ್ನು ಒಟ್ಟಿಗೇ ಕೊಟ್ಟು ಕೆಲಸದಿಂದ ತೆಗೆದುಹಾಕಲಾಗುತ್ತಿತ್ತು. ತೀರಾ ಅನಿವಾರ್ಯವೆನಿಸಿದರೆ ಗ್ರೇಡ್-3 ಸಿಬ್ಬಂದಿಗಳನ್ನು ತೆಗೆದುಹಾಕುವ ಸಂಪ್ರದಾಯವಿತ್ತು. ಆದರೆ ಗ್ರೇಡ್-1, ಗ್ರೇಡ್-2 ದಕ್ಷತೆಯ ಸಿಬ್ಬಂದಿಗಳನ್ನು ಸಂಸ್ಥೆ ಗೌರವಯುತವಾಗಿಯೇ ಮುಂದುವರೆಸುತ್ತಿತ್ತು. ಪ್ರಜಾವಾಣಿ ಪತ್ರಿಕೆಯ ನೌಕರಿಗೆ ಸರ್ಕಾರಿ ನೌಕರಿಯಷ್ಟೆ ಘನತೆ ಬಂದಿದ್ದೇ ಇಂತಹ ನಡೆಗಳಿಂದ.

ಇತ್ತೀಚಿನ ಕೆಲ ವರ್ಷಗಳಲ್ಲಿ ಪ್ರಜಾವಾಣಿ ಬಳಗ ಅಂತಹ ಗ್ರೆಡೇಷನ್ ವ್ಯವಸ್ಥೆಯಿಂದ ದೂರ ಸರಿದಿತ್ತಾದರೂ ಕೆಲಸಗಾರರನ್ನು ತೆಗೆಯುವಾಗ ದಕ್ಷತೆ, ಅನುಭವ, ಅವರ ಸೇವೆಗಳಿಗೆ ಬೆಲೆ ಕೊಡುವ ಪರಂಪರೆಯನ್ನು ಕಾಯ್ದುಕೊಂಡು ಬಂದಿತ್ತು. ಆದರೆ ಇದೀಗ ಕಾಸ್ಟ್ ಕಟಿಂಗ್ ನೆಪದಲ್ಲಿ ತೀರಾ ಗ್ರೇಡ್-1ಗೆ ಒಳಪಡಬಹುದಾದ ಹಿರಿಯ ಸಿಬ್ಬಂದಿಗಳನ್ನೇ ತೆಗೆದುಹಾಕಲು ಸಂಸ್ಥೆ ಮುಂದಾಗಿರೋದು ನಿಜಕ್ಕೂ ಆಘಾತಕಾರಿಯಾಗಿದೆ. ಅಷ್ಟಕ್ಕೂ ಪ್ರಜಾವಾಣಿ ಈಗ ಮನೆಗೆ ಕಳಿಸಲು ಹೊರಟಿರೋದು ಕೇಶವ ಜಿಂಗಾಡೆ, ಹೊನಕೆರೆ ನಂಜುಂಡೇಗೌಡ, ಸಿದ್ದೇಗೌಡ, ಷಣ್ಮುಖಪ್ಪ, ಶೈಲಜಾ ಹೂಗಾರ್ ಮೊದಲಾದ ಹಿರಿಯ ಉಪಸಂಪಾದಕರುಗಳನ್ನು!

ಈ ಒಬ್ಬೊಬ್ಬರು ಏನಿಲ್ಲವೆಂದರು ಹತ್ತಾರು ವರ್ಷ ಪತ್ರಿಕೆಗಾಗಿ ದುಡಿದಿದ್ದಾರೆ. ಪತ್ರಿಕೆಯೇ ಅವರನ್ನು ಬ್ರ್ಯಾಂಡ್ ಮಾಡಿ ಬೆಳೆಸುತ್ತಾ ಬಂದಿದೆ. ಈಗ ಏಕಾಏಕಿ ಕಾಸ್ಟ್ ಕಟಿಂಗ್ ಹೆಸರಲ್ಲಿ ಇಂತಹ ಹಿರಿಯರನ್ನೆಲ್ಲ ಮನೆಗೆ ಕಳಿಸಲು ಮುಂದಾಗಿರೋದು ಪತ್ರಿಕೆ ಇಷ್ಟುದಿನ ನಡೆದುಬಂದ ಹಾದಿಗೆ ತಕ್ಕುನಾದುದಲ್ಲವೆಂಬುದು ಒಟ್ಟು ಪತ್ರಕರ್ತ ವಲಯದ ಒಳಗಿನ ಮಾತು. ಪತ್ರಿಕಾ ಸಂಸ್ಥೆಗಳಲ್ಲೂ ಕಾರ್ಪೊರೇಟ್ ಶೈಲಿಯ ಸಿಇಒ ಹುದ್ದೆಗಳು ಸೃಷ್ಟಿಯಾಗಿ, ಅಲ್ಲಿಗೆ ಎಂಬಿಎ ಮ್ಯಾನೇಜ್‍ಮೆಂಟಿಗರು ಕಾಲಿರಿಸಿದಾಗಿನಿಂದ ಪತ್ರಿಕೋದ್ಯಮ ಇಂಥಾ ವಿಚಾರಗಳಲ್ಲಿ ತನ್ನ ಸ್ಪಂದನೆಯನ್ನು ಕಳೆದುಕೊಳ್ಳುತ್ತಾ ಬಂದಿದೆ. ಪ್ರಜಾವಾಣಿ ಸಂಸ್ಥೆಯ ಈ ನಡೆಗೂ ಇಂತಹ ಶುಷ್ಕ ಆಲೋಚನೆಗಳೇ ಕಾರಣ ಎನ್ನಲಾಗುತ್ತಿದೆ. ಅಲ್ಲದೇ, ಸಂಸ್ಥೆ ಮತ್ತು ಆಡಳಿತ ಮಂಡಳಿಗೆ ಈಗಿರುವ ಆರ್ಥಿಕ ಮುಗ್ಗಟ್ಟಿನ ಲಾಭ ಪಡೆಯುತ್ತಿರುವ ನಿರ್ದಿಷ್ಟ `ಜಾತಿ’ ಕೂಟವೊಂದು, ಅದನ್ನು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡು ತಮಗಾಗದವರನ್ನು ಟಾರ್ಗೆಟ್ ಮಾಡಿ ಸಂಸ್ಥೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ ಎಂಬ ಆರೋಪವೂ ಕೇಳಿಬರುತ್ತಿದೆ. ಹಾಗೆ ನೋಡಿದರೆ, ಕೆ.ಎನ್.ಗುರುಸ್ವಾಮಿಯವರು ಪ್ರಜಾವಾಣಿ ಪತ್ರಿಕೆಯನ್ನು ಹುಟ್ಟುಹಾಕಿದ್ದೇ, ಒಂದು `ಮೇಲ್ಜಾತಿ’ಯ ಕೈಯಲ್ಲೇ ಇದ್ದ ಪತ್ರಿಕೋದ್ಯಮದಲ್ಲಿ `ಇತರರ’ ಪಾಲ್ಗೊಳ್ಳುವಿಕೆಯನ್ನು ಪ್ರೋತ್ಸಾಹಿಸುವ ಸಲುವಾಗಿ. ಆದಾಗ್ಯೂ ಅದು `ಮೇಲ್ಜಾತಿ’ಯ ವೈರಸ್‍ನಿಂದ ಸಣ್ಣಗೆ ಬಳಲುತ್ತಲೇ ಬಂದಿತ್ತು. ಅದೀಗ ವಿರಾಟ್ ರೂಪದಲ್ಲಿ ಉಲ್ಬಣಿಸಿ ಕನ್ನಡಿಗರ ವಿಶ್ವಾಸಾರ್ಹ ಪತ್ರಿಕೆಯ ಘನತೆಯನ್ನೇ ಮಣ್ಣುಪಾಲು ಮಾಡಲಿದೆಯೇನೊ ಎಂಬ ಆತಂಕ ಶುರುವಾಗಿದೆ. ಪತ್ರಿಕೆ ತನ್ನ ಮೂಲ ಬದ್ಧತೆಯಿಂದ ಸಂಪೂರ್ಣ ವಿಮುಖವಾಗದಂತೆ ನೋಡಿಕೊಂಡು ಬಂದ, ಸಂಸ್ಥೆಯ ಮುಖ್ಯಸ್ಥರು ಇತ್ತ ತುರ್ತು ಗಮನಹರಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...