Homeಮುಖಪುಟ"ವಿಶ್ವಾಸಾರ್ಹ" ಪತ್ರಿಕೆಯೊಳಗೆ ನಡೆಯುತ್ತಿರೋದು ಕಾಸ್ಟ್ ಕಟಿಂಗೊ? ಕ್ಯಾಸ್ಟ್ ಕಟಿಂಗೊ?

“ವಿಶ್ವಾಸಾರ್ಹ” ಪತ್ರಿಕೆಯೊಳಗೆ ನಡೆಯುತ್ತಿರೋದು ಕಾಸ್ಟ್ ಕಟಿಂಗೊ? ಕ್ಯಾಸ್ಟ್ ಕಟಿಂಗೊ?

- Advertisement -
- Advertisement -

`ವಿಶ್ವಾಸಾರ್ಹ’ ಬ್ರ್ಯಾಂಡಿನ ಪತ್ರಿಕೆಯ ವಿಶ್ವಾಸವೇ ಕುಸಿದುಬೀಳುತ್ತಿರುವ ಆಘಾತಕಾರಿ ಸುದ್ದಿಯೊಂದು `ನಂ.75, ಎಂ.ಜಿ.ರೋಡ್’ ಬಿಲ್ಡಿಂಗಿನಿಂದ ಹೊರಬರುತ್ತಿದೆ. ಹೌದು, ಪತ್ರಿಕಾರಂಗವೇ ಮೀಡಿಯೋದ್ಯಮವಾದ ಈ ಕಾಲಘಟ್ಟದಲ್ಲಿ ಕಿಂಚಿತ್ತು ವಿಶ್ವಾಸ ಉಳಿಸಿಕೊಂಡಿರುವ ಪತ್ರಿಕೆಯೆಂದರೆ ಪ್ರಜಾವಾಣಿ. ಆದರೆ ಕಾಸ್ಟ್ ಕಟ್ಟಿಂಗ್ ನೆಪದಲ್ಲಿ ಇದೀಗ ಅಲ್ಲಿ ನಡೆಯುತ್ತಿರುವ `ಟರ್ಮಿನೇಟಿಂಗ್’ ಧಾವಂತ ನೋಡಿದರೆ, ಹಲವು ಅನುಮಾನಗಳು ಮೂಡುತ್ತಿವೆ. ದೇಶದ ಆರ್ಥಿಕ ಪರಿಸ್ಥಿತಿ ಅದೆಷ್ಟು ಹದಗೆಟ್ಟು ಕೂತಿದೆಯೆಂದರೆ ಪತ್ರಿಕಾ ಕಚೇರಿಗಳಿರಲಿ, ಎಂಎನ್‍ಸಿ ಕಂಪನಿಗಳೇ ದೊಡ್ಡ ಸಂಖ್ಯೆಯ ಉದ್ಯೋಗಿಗಳನ್ನು ಮುಲಾಜಿಲ್ಲದೆ ಮನೆಗೆ ಕಳಿಸುತ್ತಿವೆ. ಕನ್ನಡದ ಅದೆಷ್ಟೊ ಪತ್ರಿಕೆ, ಟಿವಿ ಚಾನೆಲ್‍ಗಳು ತಮ್ಮ ಸಿಬ್ಬಂದಿಗಳ ಜೊತೆ ನಿರ್ದಯವಾಗಿ ನಡೆದುಕೊಂಡಿವೆ. ಅಂತದ್ದರಲ್ಲಿ ಪ್ರಜಾವಾಣಿ ಪತ್ರಿಕೆ ತನ್ನ ಆರ್ಥಿಕ ಹೊರೆ ಕಡಿಮೆ ಮಾಡಿಕೊಳ್ಳಲು ನೌಕರರನ್ನು ಕಿತ್ತುಹಾಕಿದರೆ ಏನು ತಪ್ಪು?

ವಿಷಯ ಇಷ್ಟು ಸರಳವಾಗಿದ್ದಿದ್ದರೆ, ಇಂತದ್ದೊಂದು ಪ್ರಶ್ನೆಗೆ ಬೆಲೆ ಇರುತ್ತಿತ್ತು. ಆದರೆ, ಒಂದಾನೊಂದು ಕಾಲದಲ್ಲಿ ಪ್ರಜಾವಾಣಿ ಪತ್ರಿಕೆಯಲ್ಲಿ ಕೆಲಸ ಸಿಗುವುದೆಂದರೆ ಸರ್ಕಾರಿ ನೌಕರಿ ಸಿಕ್ಕಷ್ಟೇ `ಜಾಬ್ ಸೆಕ್ಯೂರಿಟಿ’ ಭಾವನೆ ಇರುತ್ತಿದ್ದ ಸಂಸ್ಥೆ ಅದು. ಈಗ ಅದೇ ಸಂಸ್ಥೆ ಕಾಸ್ಟ್ ಕಟ್ಟಿಂಗ್ ಹೆಸರಲ್ಲಿ ತನ್ನ ಸಿಬ್ಬಂದಿಗಳನ್ನು ನಿವಾರಿಸಿಕೊಳ್ಳಲು ಬಳಸುತ್ತಿರುವ ರೀತಿಯೇ ಆಶ್ಚರ್ಯಕರವಾಗಿದೆ. ಇದಕ್ಕೆ ಕಾರಣವಿಲ್ಲದಿಲ್ಲ. ಸಾಮಾನ್ಯವಾಗಿ ಪ್ರಜಾವಾಣಿ ಪತ್ರಿಕೆ ತನ್ನ ಸಿಬ್ಬಂದಿಗಳನ್ನು ಕೆಲಸದಿಂದ ಕೈಬಿಡಬೇಕಾದ ಸಂದರ್ಭ ಬಂದಾಗ ಗ್ರೆಡೇಶನ್ ನಿಯಮ ಪಾಲಿಸುತ್ತಿತ್ತು. ಅಂದರೆ ಸಿಬ್ಬಂದಿಯ ಕಾರ್ಯದಕ್ಷತೆ, ಸಂಸ್ಥೆಗೆ ಅವರಿಂದ ಆಗುತ್ತಿರುವ ಅನುಕೂಲದ ಆಧಾರದಲ್ಲಿ ಗ್ರೇಡ್-1, ಗ್ರೇಡ್-2, ಗ್ರೇಡ್-3, ಗ್ರೇಡ್-4 ಎಂದು ವರ್ಗೀಕರಿಸಲಾಗುತ್ತಿತ್ತು. ಗ್ರೇಡ್-4ರಲ್ಲಿರುತ್ತಿದ್ದ ಕಳಪೆ ಸಾಮಥ್ರ್ಯದ ಸಿಬ್ಬಂದಿಗಳನ್ನು ಅವರಿಗೆ ನ್ಯಾಯಯುತವಾಗಿ ಸಿಗಬೇಕಾದ ಸವಲತ್ತುಗಳನ್ನು ನೀಡಿಯೇ, ಅಂದರೆ ಒಂದೆರಡು ತಿಂಗಳ ನೋಟಿಸ್ ಕೊಟ್ಟು, ಮೂರ್ನಾಲ್ಕು ತಿಂಗಳ ಸಂಬಳವನ್ನು ಒಟ್ಟಿಗೇ ಕೊಟ್ಟು ಕೆಲಸದಿಂದ ತೆಗೆದುಹಾಕಲಾಗುತ್ತಿತ್ತು. ತೀರಾ ಅನಿವಾರ್ಯವೆನಿಸಿದರೆ ಗ್ರೇಡ್-3 ಸಿಬ್ಬಂದಿಗಳನ್ನು ತೆಗೆದುಹಾಕುವ ಸಂಪ್ರದಾಯವಿತ್ತು. ಆದರೆ ಗ್ರೇಡ್-1, ಗ್ರೇಡ್-2 ದಕ್ಷತೆಯ ಸಿಬ್ಬಂದಿಗಳನ್ನು ಸಂಸ್ಥೆ ಗೌರವಯುತವಾಗಿಯೇ ಮುಂದುವರೆಸುತ್ತಿತ್ತು. ಪ್ರಜಾವಾಣಿ ಪತ್ರಿಕೆಯ ನೌಕರಿಗೆ ಸರ್ಕಾರಿ ನೌಕರಿಯಷ್ಟೆ ಘನತೆ ಬಂದಿದ್ದೇ ಇಂತಹ ನಡೆಗಳಿಂದ.

ಇತ್ತೀಚಿನ ಕೆಲ ವರ್ಷಗಳಲ್ಲಿ ಪ್ರಜಾವಾಣಿ ಬಳಗ ಅಂತಹ ಗ್ರೆಡೇಷನ್ ವ್ಯವಸ್ಥೆಯಿಂದ ದೂರ ಸರಿದಿತ್ತಾದರೂ ಕೆಲಸಗಾರರನ್ನು ತೆಗೆಯುವಾಗ ದಕ್ಷತೆ, ಅನುಭವ, ಅವರ ಸೇವೆಗಳಿಗೆ ಬೆಲೆ ಕೊಡುವ ಪರಂಪರೆಯನ್ನು ಕಾಯ್ದುಕೊಂಡು ಬಂದಿತ್ತು. ಆದರೆ ಇದೀಗ ಕಾಸ್ಟ್ ಕಟಿಂಗ್ ನೆಪದಲ್ಲಿ ತೀರಾ ಗ್ರೇಡ್-1ಗೆ ಒಳಪಡಬಹುದಾದ ಹಿರಿಯ ಸಿಬ್ಬಂದಿಗಳನ್ನೇ ತೆಗೆದುಹಾಕಲು ಸಂಸ್ಥೆ ಮುಂದಾಗಿರೋದು ನಿಜಕ್ಕೂ ಆಘಾತಕಾರಿಯಾಗಿದೆ. ಅಷ್ಟಕ್ಕೂ ಪ್ರಜಾವಾಣಿ ಈಗ ಮನೆಗೆ ಕಳಿಸಲು ಹೊರಟಿರೋದು ಕೇಶವ ಜಿಂಗಾಡೆ, ಹೊನಕೆರೆ ನಂಜುಂಡೇಗೌಡ, ಸಿದ್ದೇಗೌಡ, ಷಣ್ಮುಖಪ್ಪ, ಶೈಲಜಾ ಹೂಗಾರ್ ಮೊದಲಾದ ಹಿರಿಯ ಉಪಸಂಪಾದಕರುಗಳನ್ನು!

ಈ ಒಬ್ಬೊಬ್ಬರು ಏನಿಲ್ಲವೆಂದರು ಹತ್ತಾರು ವರ್ಷ ಪತ್ರಿಕೆಗಾಗಿ ದುಡಿದಿದ್ದಾರೆ. ಪತ್ರಿಕೆಯೇ ಅವರನ್ನು ಬ್ರ್ಯಾಂಡ್ ಮಾಡಿ ಬೆಳೆಸುತ್ತಾ ಬಂದಿದೆ. ಈಗ ಏಕಾಏಕಿ ಕಾಸ್ಟ್ ಕಟಿಂಗ್ ಹೆಸರಲ್ಲಿ ಇಂತಹ ಹಿರಿಯರನ್ನೆಲ್ಲ ಮನೆಗೆ ಕಳಿಸಲು ಮುಂದಾಗಿರೋದು ಪತ್ರಿಕೆ ಇಷ್ಟುದಿನ ನಡೆದುಬಂದ ಹಾದಿಗೆ ತಕ್ಕುನಾದುದಲ್ಲವೆಂಬುದು ಒಟ್ಟು ಪತ್ರಕರ್ತ ವಲಯದ ಒಳಗಿನ ಮಾತು. ಪತ್ರಿಕಾ ಸಂಸ್ಥೆಗಳಲ್ಲೂ ಕಾರ್ಪೊರೇಟ್ ಶೈಲಿಯ ಸಿಇಒ ಹುದ್ದೆಗಳು ಸೃಷ್ಟಿಯಾಗಿ, ಅಲ್ಲಿಗೆ ಎಂಬಿಎ ಮ್ಯಾನೇಜ್‍ಮೆಂಟಿಗರು ಕಾಲಿರಿಸಿದಾಗಿನಿಂದ ಪತ್ರಿಕೋದ್ಯಮ ಇಂಥಾ ವಿಚಾರಗಳಲ್ಲಿ ತನ್ನ ಸ್ಪಂದನೆಯನ್ನು ಕಳೆದುಕೊಳ್ಳುತ್ತಾ ಬಂದಿದೆ. ಪ್ರಜಾವಾಣಿ ಸಂಸ್ಥೆಯ ಈ ನಡೆಗೂ ಇಂತಹ ಶುಷ್ಕ ಆಲೋಚನೆಗಳೇ ಕಾರಣ ಎನ್ನಲಾಗುತ್ತಿದೆ. ಅಲ್ಲದೇ, ಸಂಸ್ಥೆ ಮತ್ತು ಆಡಳಿತ ಮಂಡಳಿಗೆ ಈಗಿರುವ ಆರ್ಥಿಕ ಮುಗ್ಗಟ್ಟಿನ ಲಾಭ ಪಡೆಯುತ್ತಿರುವ ನಿರ್ದಿಷ್ಟ `ಜಾತಿ’ ಕೂಟವೊಂದು, ಅದನ್ನು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡು ತಮಗಾಗದವರನ್ನು ಟಾರ್ಗೆಟ್ ಮಾಡಿ ಸಂಸ್ಥೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ ಎಂಬ ಆರೋಪವೂ ಕೇಳಿಬರುತ್ತಿದೆ. ಹಾಗೆ ನೋಡಿದರೆ, ಕೆ.ಎನ್.ಗುರುಸ್ವಾಮಿಯವರು ಪ್ರಜಾವಾಣಿ ಪತ್ರಿಕೆಯನ್ನು ಹುಟ್ಟುಹಾಕಿದ್ದೇ, ಒಂದು `ಮೇಲ್ಜಾತಿ’ಯ ಕೈಯಲ್ಲೇ ಇದ್ದ ಪತ್ರಿಕೋದ್ಯಮದಲ್ಲಿ `ಇತರರ’ ಪಾಲ್ಗೊಳ್ಳುವಿಕೆಯನ್ನು ಪ್ರೋತ್ಸಾಹಿಸುವ ಸಲುವಾಗಿ. ಆದಾಗ್ಯೂ ಅದು `ಮೇಲ್ಜಾತಿ’ಯ ವೈರಸ್‍ನಿಂದ ಸಣ್ಣಗೆ ಬಳಲುತ್ತಲೇ ಬಂದಿತ್ತು. ಅದೀಗ ವಿರಾಟ್ ರೂಪದಲ್ಲಿ ಉಲ್ಬಣಿಸಿ ಕನ್ನಡಿಗರ ವಿಶ್ವಾಸಾರ್ಹ ಪತ್ರಿಕೆಯ ಘನತೆಯನ್ನೇ ಮಣ್ಣುಪಾಲು ಮಾಡಲಿದೆಯೇನೊ ಎಂಬ ಆತಂಕ ಶುರುವಾಗಿದೆ. ಪತ್ರಿಕೆ ತನ್ನ ಮೂಲ ಬದ್ಧತೆಯಿಂದ ಸಂಪೂರ್ಣ ವಿಮುಖವಾಗದಂತೆ ನೋಡಿಕೊಂಡು ಬಂದ, ಸಂಸ್ಥೆಯ ಮುಖ್ಯಸ್ಥರು ಇತ್ತ ತುರ್ತು ಗಮನಹರಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....