Homeಮುಖಪುಟದುಬಾರಿ ದುನಿಯಾ: ಟೊಮೆಟೋ ಕಳ್ಳತನಕ್ಕೆ ಹೆದರಿ ಬೌನ್ಸರ್‌ಗಳನ್ನು ನೇಮಿಸಿಕೊಂಡ ತರಕಾರಿ ವ್ಯಾಪಾರಿ!

ದುಬಾರಿ ದುನಿಯಾ: ಟೊಮೆಟೋ ಕಳ್ಳತನಕ್ಕೆ ಹೆದರಿ ಬೌನ್ಸರ್‌ಗಳನ್ನು ನೇಮಿಸಿಕೊಂಡ ತರಕಾರಿ ವ್ಯಾಪಾರಿ!

- Advertisement -
- Advertisement -

ದೇಶದಲ್ಲಿ ಟೊಮೆಟೋ ಬೆಲೆ ಗಗನಕ್ಕೇರಿದೆ. ಈ ಮಧ್ಯೆ ತರಕಾರಿ ಮಾರಾಟಗಾರರು ಗ್ರಾಹಕರನ್ನು ನಿರ್ವಹಿಸಲು ಬೌನ್ಸರ್‌ಗಳನ್ನು ನೇಮಿಸಿಕೊಳ್ಳುವಂತಹ ಅಸಾಮಾನ್ಯ ವಿಧಾನಗಳನ್ನು ಪ್ರಯತ್ನಿಸುತ್ತಿದ್ದಾರೆ. ಮತ್ತೊಂದೆಡೆ ಸ್ಮಾರ್ಟ್‌ಫೋನ್ ಖರೀದಿಸಿದವರಿಗೆ ಕಾಂಪ್ಲಿಮೆಂಟರಿಯಾಗಿ ಟೊಮೆಟೊಗಳನ್ನು ಉಚಿತವಾಗಿ ನೀಡಲಾಗುತ್ತಿದೆ.

ಟೊಮೆಟೋ ಬೆಲೆ ಏರಿಕೆಯಾಗಿರುವುದರಿಂದ ಉತ್ತರ ಪ್ರದೇಶದ ವಾರಣಾಸಿಯಲ್ಲಿ, ಅಜಯ್ ಫೌಜಿ ಎಂಬ ತರಕಾರಿ ಮಾರಾಟಗಾರ ಟೊಮೇಟೊ ಕಳ್ಳತನಕ್ಕೆ ಹೆದರಿ ಬೌನ್ಸರ್‌ಗಳನ್ನು ನೇಮಿಸಿಕೊಂಡು ಖರೀದಿಗೆ ಬರುವ ಗ್ರಾಹಕರನ್ನು ನಿರ್ವಹಿಸುತ್ತಿದ್ದಾರೆ.

ಈ ಬಗ್ಗೆ ಮಾತನಾಡಿದ ಅಜಯ್ ಫೌಜಿ, ”ಟೊಮೆಟೋ ಬೆಲೆ ತುಂಬಾ ಹೆಚ್ಚಿರುವುದರಿಂದ ನಾನು ಬೌನ್ಸರ್‌ಗಳನ್ನು ನೇಮಿಸಿಕೊಂಡಿದ್ದೇನೆ. ಜನರು ಗಲಾಟೆ ಮಾಡುತ್ತಾ, ಟೊಮೆಟೊಗಳನ್ನು ಕಳ್ಳತನ ಮಾಡುತ್ತಿದ್ದಾರೆ. ನಮ್ಮ ಅಂಗಡಿಯಲ್ಲಿ ಟೊಮೆಟೋಗಾಗಿ ಯಾವುದೇ ವಾದ ವಿವಾದಗಳು ಬೇಡ ಹಾಗಾಗಿ ಇಲ್ಲಿ ಬೌನ್ಸರ್‌ಗಳಿದ್ದಾರೆ. ಟೊಮೆಟೊ ಕೆಜಿಗೆ ₹160ಕ್ಕೆ ಮಾರಾಟವಾಗುತ್ತಿದೆ. ಜನರು 50 ಅಥವಾ 100 ಗ್ರಾಂ ಖರೀದಿಸುತ್ತಿದ್ದಾರೆ” ಎಂದು ಹೇಳಿದರು.

ಮಧ್ಯಪ್ರದೇಶದ ಅಶೋಕ್ ನಗರದಲ್ಲಿ, ಸ್ಮಾರ್ಟ್‌ಫೋನ್ ಅಂಗಡಿ ಮಾಲೀಕರು ಆಸಕ್ತಿದಾಯಕ ಕೊಡುಗೆ ನೀಡುತ್ತಿದ್ದಾರೆ. ಅವರ ಅಂಗಡಿಯಿಂದ ಮೊಬೈಲ್ ಫೋನ್‌ಗಳನ್ನು ಖರೀದಿಸುವ ಗ್ರಾಹಕರಿಗೆ ಕಾಂಪ್ಲಿಮೆಂಟರಿಯಾಗಿ 2 ಕೆಜಿ ಟೊಮೆಟೋಗಳನ್ನು ನೀಡುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅಂಗಡಿ ಮಾಲೀಕ ಅಭಿಷೇಕ್ ಅಗರ್ವಾಲ್, ”ಟೊಮೆಟೋ ಬೆಲೆ ದುಬಾರಿಯಾಗಿರುವುದರಿಂದ ಮತ್ತು ಮಾರುಕಟ್ಟೆಯಲ್ಲಿ ಹೆಚ್ಚಿದ ಪೈಪೋಟಿಯಿಂದಾಗಿ ಗ್ರಾಹಕರಿಗೆ ನಾವು ಸ್ಮಾರ್ಟ್‌ಫೋನ್‌ಗಳೊಂದಿಗೆ ಕಾಂಪ್ಲಿಮೆಂಟರಿಯಾಗಿ ಬೇರೆ ವಸ್ತಗಳನ್ನು ನೀಡುವ ಬದಲಿಗೆ ಟೊಮೆಟೋಗಳನ್ನು ನೀಡಲು ನಿರ್ಧರಿಸಿದ್ದೇವೆ. ಈ ಆಫರ್ ಅನ್ನು ಪ್ರಾರಂಭಿಸಿದ ನಂತರ ನಮ್ಮ ಅಂಗಡಿಯಲ್ಲಿ ವ್ಯಾಪಾರ ಹೆಚ್ಚಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಕಾರ, ಟೊಮೆಟೋ ಕೆಜಿಗೆ ಸರಾಸರಿ ಬೆಲೆ ₹ 100 ಆಗಿದೆ. ದೆಹಲಿಯಲ್ಲಿ ₹127, ಲಕ್ನೋದಲ್ಲಿ ₹147, ಚೆನ್ನೈನಲ್ಲಿ ₹105 ಮತ್ತು ದಿಬ್ರುಗಢದಲ್ಲಿ ₹115 ಆಗಿದೆ.

ಇದನ್ನೂ ಓದಿ: ಮೋದಿ ಸರ್ಕಾರದ ಲೂಟಿಯಿಂದಾಗಿ ತರಕಾರಿ ಬೆಲೆ ಗಗನಕ್ಕೇರುತ್ತಿದೆ: ಖರ್ಗೆ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...