Homeಮುಖಪುಟದುಬಾರಿ ದುನಿಯಾ: ಟೊಮೆಟೋ ಕಳ್ಳತನಕ್ಕೆ ಹೆದರಿ ಬೌನ್ಸರ್‌ಗಳನ್ನು ನೇಮಿಸಿಕೊಂಡ ತರಕಾರಿ ವ್ಯಾಪಾರಿ!

ದುಬಾರಿ ದುನಿಯಾ: ಟೊಮೆಟೋ ಕಳ್ಳತನಕ್ಕೆ ಹೆದರಿ ಬೌನ್ಸರ್‌ಗಳನ್ನು ನೇಮಿಸಿಕೊಂಡ ತರಕಾರಿ ವ್ಯಾಪಾರಿ!

- Advertisement -
- Advertisement -

ದೇಶದಲ್ಲಿ ಟೊಮೆಟೋ ಬೆಲೆ ಗಗನಕ್ಕೇರಿದೆ. ಈ ಮಧ್ಯೆ ತರಕಾರಿ ಮಾರಾಟಗಾರರು ಗ್ರಾಹಕರನ್ನು ನಿರ್ವಹಿಸಲು ಬೌನ್ಸರ್‌ಗಳನ್ನು ನೇಮಿಸಿಕೊಳ್ಳುವಂತಹ ಅಸಾಮಾನ್ಯ ವಿಧಾನಗಳನ್ನು ಪ್ರಯತ್ನಿಸುತ್ತಿದ್ದಾರೆ. ಮತ್ತೊಂದೆಡೆ ಸ್ಮಾರ್ಟ್‌ಫೋನ್ ಖರೀದಿಸಿದವರಿಗೆ ಕಾಂಪ್ಲಿಮೆಂಟರಿಯಾಗಿ ಟೊಮೆಟೊಗಳನ್ನು ಉಚಿತವಾಗಿ ನೀಡಲಾಗುತ್ತಿದೆ.

ಟೊಮೆಟೋ ಬೆಲೆ ಏರಿಕೆಯಾಗಿರುವುದರಿಂದ ಉತ್ತರ ಪ್ರದೇಶದ ವಾರಣಾಸಿಯಲ್ಲಿ, ಅಜಯ್ ಫೌಜಿ ಎಂಬ ತರಕಾರಿ ಮಾರಾಟಗಾರ ಟೊಮೇಟೊ ಕಳ್ಳತನಕ್ಕೆ ಹೆದರಿ ಬೌನ್ಸರ್‌ಗಳನ್ನು ನೇಮಿಸಿಕೊಂಡು ಖರೀದಿಗೆ ಬರುವ ಗ್ರಾಹಕರನ್ನು ನಿರ್ವಹಿಸುತ್ತಿದ್ದಾರೆ.

ಈ ಬಗ್ಗೆ ಮಾತನಾಡಿದ ಅಜಯ್ ಫೌಜಿ, ”ಟೊಮೆಟೋ ಬೆಲೆ ತುಂಬಾ ಹೆಚ್ಚಿರುವುದರಿಂದ ನಾನು ಬೌನ್ಸರ್‌ಗಳನ್ನು ನೇಮಿಸಿಕೊಂಡಿದ್ದೇನೆ. ಜನರು ಗಲಾಟೆ ಮಾಡುತ್ತಾ, ಟೊಮೆಟೊಗಳನ್ನು ಕಳ್ಳತನ ಮಾಡುತ್ತಿದ್ದಾರೆ. ನಮ್ಮ ಅಂಗಡಿಯಲ್ಲಿ ಟೊಮೆಟೋಗಾಗಿ ಯಾವುದೇ ವಾದ ವಿವಾದಗಳು ಬೇಡ ಹಾಗಾಗಿ ಇಲ್ಲಿ ಬೌನ್ಸರ್‌ಗಳಿದ್ದಾರೆ. ಟೊಮೆಟೊ ಕೆಜಿಗೆ ₹160ಕ್ಕೆ ಮಾರಾಟವಾಗುತ್ತಿದೆ. ಜನರು 50 ಅಥವಾ 100 ಗ್ರಾಂ ಖರೀದಿಸುತ್ತಿದ್ದಾರೆ” ಎಂದು ಹೇಳಿದರು.

ಮಧ್ಯಪ್ರದೇಶದ ಅಶೋಕ್ ನಗರದಲ್ಲಿ, ಸ್ಮಾರ್ಟ್‌ಫೋನ್ ಅಂಗಡಿ ಮಾಲೀಕರು ಆಸಕ್ತಿದಾಯಕ ಕೊಡುಗೆ ನೀಡುತ್ತಿದ್ದಾರೆ. ಅವರ ಅಂಗಡಿಯಿಂದ ಮೊಬೈಲ್ ಫೋನ್‌ಗಳನ್ನು ಖರೀದಿಸುವ ಗ್ರಾಹಕರಿಗೆ ಕಾಂಪ್ಲಿಮೆಂಟರಿಯಾಗಿ 2 ಕೆಜಿ ಟೊಮೆಟೋಗಳನ್ನು ನೀಡುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅಂಗಡಿ ಮಾಲೀಕ ಅಭಿಷೇಕ್ ಅಗರ್ವಾಲ್, ”ಟೊಮೆಟೋ ಬೆಲೆ ದುಬಾರಿಯಾಗಿರುವುದರಿಂದ ಮತ್ತು ಮಾರುಕಟ್ಟೆಯಲ್ಲಿ ಹೆಚ್ಚಿದ ಪೈಪೋಟಿಯಿಂದಾಗಿ ಗ್ರಾಹಕರಿಗೆ ನಾವು ಸ್ಮಾರ್ಟ್‌ಫೋನ್‌ಗಳೊಂದಿಗೆ ಕಾಂಪ್ಲಿಮೆಂಟರಿಯಾಗಿ ಬೇರೆ ವಸ್ತಗಳನ್ನು ನೀಡುವ ಬದಲಿಗೆ ಟೊಮೆಟೋಗಳನ್ನು ನೀಡಲು ನಿರ್ಧರಿಸಿದ್ದೇವೆ. ಈ ಆಫರ್ ಅನ್ನು ಪ್ರಾರಂಭಿಸಿದ ನಂತರ ನಮ್ಮ ಅಂಗಡಿಯಲ್ಲಿ ವ್ಯಾಪಾರ ಹೆಚ್ಚಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಕಾರ, ಟೊಮೆಟೋ ಕೆಜಿಗೆ ಸರಾಸರಿ ಬೆಲೆ ₹ 100 ಆಗಿದೆ. ದೆಹಲಿಯಲ್ಲಿ ₹127, ಲಕ್ನೋದಲ್ಲಿ ₹147, ಚೆನ್ನೈನಲ್ಲಿ ₹105 ಮತ್ತು ದಿಬ್ರುಗಢದಲ್ಲಿ ₹115 ಆಗಿದೆ.

ಇದನ್ನೂ ಓದಿ: ಮೋದಿ ಸರ್ಕಾರದ ಲೂಟಿಯಿಂದಾಗಿ ತರಕಾರಿ ಬೆಲೆ ಗಗನಕ್ಕೇರುತ್ತಿದೆ: ಖರ್ಗೆ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...