Homeಕರ್ನಾಟಕರಾಜ್ಯದಲ್ಲಿ ಕಾಟನ್‌ ಕ್ಯಾಂಡಿಯಲ್ಲಿ ಹೆಚ್ಚಿನ ಕೃತಕ ಬಣ್ಣಗಳ ಬಳಕೆ ನಿಷೇಧ

ರಾಜ್ಯದಲ್ಲಿ ಕಾಟನ್‌ ಕ್ಯಾಂಡಿಯಲ್ಲಿ ಹೆಚ್ಚಿನ ಕೃತಕ ಬಣ್ಣಗಳ ಬಳಕೆ ನಿಷೇಧ

- Advertisement -
- Advertisement -

ರಾಜ್ಯದಲ್ಲಿ ಕಾಟನ್‌ ಕ್ಯಾಂಡಿಯಲ್ಲಿ ಹೆಚ್ಚಿನ ಕೃತಕ ಬಣ್ಣಗಳನ್ನು ಬಳಸುವಂತಿಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮಹತ್ವದ ಮಾಹಿತಿಯನ್ನು ನೀಡಿದ್ದಾರೆ.

ಈ ಕುರಿತು ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ಕಲರ್ ಕಾಟನ್‌ ಕ್ಯಾಂಡಿಯಲ್ಲಿ ಹಲವು ವಿಷಕಾರಿ ಅಂಶಗಳು ಇರುವುದರಿಂದ ಅವುಗಳ ಮಾರಾಟ, ಬಳಕೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು, ಗೋಬಿ ಮಂಚೂರಿಯನ್‌ ತಯಾರಿಕೆಯಲ್ಲಿ ಕೂಡ ಯಾವುದೇ ಕೃತಕ ಬಣ್ಣಗಳನ್ನು ಉಪಯೋಗಿಸುವಂತಿಲ್ಲ ಎಂದು ಹೇಳಿದ್ದಾರೆ.

ಗೋಬಿ ಮಂಚೂರಿ ಸಸ್ಯಾಹಾರಿ ಪದಾರ್ಥ, ಹೀಗಾಗಿ ನಿಷೇಧ ಮಾಡಲು ಸಾಧ್ಯವಿಲ್ಲ. ಹೀಗಾಗಿ ಕೃತಕ ಬಣ್ಣ ಬಳಸದಂತೆ ಸೂಚಿಸಲಾಗಿದೆ, ಕಾಟನ್‌ ಕ್ಯಾಂಡಿಯಲ್ಲಿ ಹಾನಿಕಾರಕ ರೋಡಮೈನ್‌-ಬಿ ಹಾಗೂ ಗೋಬಿ ಮಂಚೂರಿಯಲ್ಲಿ ಸನ್‌ಸೆಟ್‌ ಯೆಲ್ಲೊ ಬಣ್ಣ ಮತ್ತು ಟಾಟ್ರ್ರಾಜಿನ್‌ ರಾಸಾಯನಿಕ ಅಂಶ ಪತ್ತೆಯಾಗಿದೆ.

ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೊರಗಡೆ ಆಹಾರ ಸೇವನೆ ಮಾಡುತ್ತಾರೆ. ಇದರಿಂದ ಕ್ಯಾನ್ಸರ್ ಹಾಗೂ ಇತರ ಖಾಯಿಲೆ ಹೆಚ್ಚಳವಾಗುತ್ತಿದೆ. ಸರಿಯಾದ ಆಹಾರ ತಯಾರು ಮಾಡದಿರುವುದು, ಹೆಚ್ಚು ಕೊಬ್ಬುಕಾರಕ, ಉಪ್ಪು ಹಾಗೂ ಸಕ್ಕರೆಯ ಆಹಾರ ಬಳಕೆಯಿಂದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.

ಈ ಕುರಿತು ನಿಯಮಗಳನ್ನು ಉಲ್ಲಂಘನೆ ಮಾಡಿರುವುದು ಕಂಡುಬಂದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಅವಧಿಯವರೆಗೆ ಜೈಲು ಶಿಕ್ಷೆಯನ್ನು ಮತ್ತು ರೂ.10 ಲಕ್ಷಗಳವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಹೇಳಿದ್ದಾರೆ.

ಕೃತಕ ಬಣ್ಣಗಳನ್ನು ಬಳಸಿರುವ ತಿಂಡಿ ತಿನಿಸುಗಳನ್ನು ದೀರ್ಘಕಾಲದಿಂದ ತಿನ್ನುವುದರಿಂದ ಕ್ಯಾನ್ಸರ್‌ನಂತಹ ಮಾರಕ ರೋಗಗಳು ಬರುವ ಸಾಧ್ಯತೆ ಇದೆ, ಆದ್ದರಿಂದ ಸಾರ್ವಜನಿಕರು ಕೃತಕ ಬಣ್ಣಗಳನ್ನು ಬಳಸಿ ತಯಾರಿಸಲಾಗುವ ಆಹಾರಗಳನ್ನು ಮಿತವಾಗಿ ಬಳಸಬೇಕು ಎಂದು ಹೇಳಿದ್ದಾರೆ.

171 ಕಡೆ ಗೋಬಿ ಮಂಚೂರಿ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ಮಾಡಿದ್ದೇವೆ, ಇದರಲ್ಲಿ 107 ಮಾದರಿಯಲ್ಲಿ ಕೃತಕ ಬಣ್ಣ ಕಂಡು ಬಂದಿದೆ. 64 ಸುರಕ್ಷಿತವಾದ ಮಾದರಿಗಳು ಕಂಡು ಬಂದಿದೆ. ಟಾರ್ಟ್ರಾಜಿನ್, ಸನ್​ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್​ನಂತ ಕೃತಕ ಬಣ್ಣಗಳನ್ನು ಬಳಸಲಾಗಿದೆ ಇವು ಆರೋಗ್ಯಕ್ಕೆ ತುಂಬಾ ಅಪಾಯಕಾರಿ. 25 ವಿಧದ ಕಾಟನ್​​ ಕ್ಯಾಂಡಿ ಮಾದರಿಗಳನ್ನು ಸಂಗ್ರಹಿಸಲಾಗಿದೆ. 15 ಮಾದರಿಗಳಲ್ಲಿ ಕೃತಕ ಬಣ್ಣ ಬಳಸಿರುವುದು ಕಂಡು ಬಂದಿದೆ ಎಂದು ಹೇಳಿದ್ದಾರೆ.

ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ವಿಭಾಗವು, ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿತ್ತು. ಪರೀಕ್ಷೆಗೆ ಒಳಪಡಿಸಿದಾಗ ಇವುಗಳಲ್ಲಿ ಕೃತಕ ಬಣ್ಣಗಳ ಬಳಸಿರುವುದು ಪತ್ತೆಯಾಗಿದೆ. ಕಲಬೆರಕೆ ಕಲರ್ ಬಳಕೆ ಮಾಡೋದು ಮತ್ತು ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿದೆ.  ಪರೀಕ್ಷೆಯ ವರದಿ ಬಂದ ಹಿನ್ನೆಲೆ ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಇದನ್ನು ಓದಿ: ಚುನಾವಣಾ ಆಯುಕ್ತರ ನೇಮಕಕ್ಕೆ ತಡೆ ಕೋರಿ ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್ ನಾಯಕಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...