ಕೋಲ್ಡ್ರಿಫ್ ತಯಾರಕ ಶ್ರೇಸನ್ ಫಾರ್ಮಾಸ್ಯುಟಿಕಲ್ನ ಪರವಾನಗಿಯನ್ನು ರದ್ದುಗೊಳಿಸಲಾಗಿದೆ ಎಂದು ತಮಿಳುನಾಡು ಸರ್ಕಾರ ಸೋಮವಾರ ಹೇಳಿದೆ. ಕೆಮ್ಮು ಸಿರಪ್ ಆಗಿರುವ ಕೋಲ್ಡ್ರಿಫ್ ಮಧ್ಯಪ್ರದೇಶ ಮತ್ತು ಇತರ ರಾಜ್ಯಗಳಲ್ಲಿ ಹಲವಾರು ಮಕ್ಕಳ ಸಾವಿಗೆ ಸಂಬಂಧಿಸಿದೆ ಎಂದು ಆರೋಪಿಸಲಾಗಿದೆ.
ತಮಿಳುನಾಡು ಸರ್ಕಾರದ ಆದೇಶದಲ್ಲಿ, ರಾಜ್ಯ ಸರ್ಕಾರವು ಕಂಪನಿಯನ್ನು ಮುಚ್ಚಲು ಆದೇಶಿಸಲಾಗಿದೆ ಎಂದು ಹೇಳಿದೆ.
“ಶ್ರೇಸನ್ ಫಾರ್ಮಾಸ್ಯುಟಿಕಲ್ ಕಂಪನಿಯ ಉತ್ಪಾದನಾ ಪರವಾನಗಿಗಳನ್ನು ರದ್ದುಗೊಳಿಸಲಾಗಿದೆ, ಅಕ್ಟೋಬರ್ 13, 2025 ರಿಂದ ಕಂಪನಿಯನ್ನು ಮುಚ್ಚಲಾಗಿದೆ. ಮಧ್ಯಪ್ರದೇಶದಲ್ಲಿ ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ನ ಕೆಮ್ಮು ಸಿರಪ್ನಲ್ಲಿ ವಿಷಕಾರಿ ಮಾಲಿನ್ಯಕಾರಕಗಳನ್ನು, ನಿರ್ದಿಷ್ಟವಾಗಿ ಡೈಥಿಲೀನ್ ಗ್ಲೈಕಾಲ್ (ಡಿಇಜಿ) ಪತ್ತೆಹಚ್ಚಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ” ಎಂದು ತಮಿಳುನಾಡು ಸರ್ಕಾರದ ಆರೋಗ್ಯ ಇಲಾಖೆ ತಿಳಿಸಿದೆ.
ಇಡಿ ದಾಳಿ
ಶ್ರೀಸನ್ ಫಾರ್ಮಾ ಮತ್ತು ಅದರ ಉಸ್ತುವಾರಿ ನಿರ್ದೇಶಕ ಪಿಯು ಕಾರ್ತಿಕೇಯನ್ ಸೇರಿದಂತೆ ತಮಿಳುನಾಡು ಆಹಾರ ಮತ್ತು ಔಷಧ ಆಡಳಿತದ ಉನ್ನತ ಅಧಿಕಾರಿಗಳ ಏಳು ಸ್ಥಳಗಳ ಮೇಲೆ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಕೆಲವೇ ಗಂಟೆಗಳ ನಂತರ ಈ ಬೆಳವಣಿಗೆ ನಡಡೆದಿದೆ. ಕಳಪೆ ಮೂಲಸೌಕರ್ಯಗಳ ಹೊರತಾಗಿಯೂ ಶ್ರೀಸನ್ ಫಾರ್ಮಾ ತನ್ನ ಕಾರ್ಯಾಚರಣೆಯನ್ನು ಮುಂದುವರಿಸಲು ಅವಕಾಶ ನೀಡಿದ್ದಕ್ಕಾಗಿ ಟಿಎನ್ಎಫ್ಡಿಎ ಗಂಭೀರ ಲೋಪಗಳನ್ನು ಮಾಡಿದೆ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.
ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ ಪ್ರಕಾರ, ಶ್ರೀಸನ್ ಫಾರ್ಮಾ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿದೆ. ಇದರ ಕೆಮ್ಮು ಸಿರಪ್ನಲ್ಲಿ ಡೈಥಿಲೀನ್ ಗ್ಲೈಕಾಲ್ (ಡಿಇಜಿ) ಕೂಡ ಇತ್ತು, ಇದು ಮಧ್ಯಪ್ರದೇಶದಲ್ಲಿ ಐದು ವರ್ಷದೊಳಗಿನ 22 ಮಕ್ಕಳ ಸಾವಿಗೆ ಕಾರಣವಾಗಬಹುದಾದ ಅತ್ಯಂತ ವಿಷಕಾರಿ ವಸ್ತುವಾಗಿದೆ.
ಮಕ್ಕಳ ಸಾವಿನ ನಂತರ, ಮಧ್ಯಪ್ರದೇಶ, ಅರುಣಾಚಲ ಪ್ರದೇಶ, ದೆಹಲಿ, ಪಂಜಾಬ್, ತಮಿಳುನಾಡು ಮತ್ತು ಜಾರ್ಖಂಡ್ನಂತಹ ಅನೇಕ ರಾಜ್ಯಗಳು ಕೋಲ್ಡ್ರಿಫ್ ಬಳಕೆಯನ್ನು ನಿಷೇಧಿಸಿವೆ.


