Homeಕರ್ನಾಟಕಬಿಜೆಪಿಯ ಅದೃಷ್ಟ ಸಂಖ್ಯೆ ‘40’ ಇರಬಹುದೇನೋ; ಯತ್ನಾಳ್ ಆರೋಪಕ್ಕೆ ಕಾಂಗ್ರೆಸ್ ವ್ಯಂಗ್ಯ

ಬಿಜೆಪಿಯ ಅದೃಷ್ಟ ಸಂಖ್ಯೆ ‘40’ ಇರಬಹುದೇನೋ; ಯತ್ನಾಳ್ ಆರೋಪಕ್ಕೆ ಕಾಂಗ್ರೆಸ್ ವ್ಯಂಗ್ಯ

- Advertisement -
- Advertisement -

‘ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾಗ ಕೋವಿಡ್ ನಿರ್ವಹಣೆಯಲ್ಲಿ ₹40 ಸಾವಿರ ಕೋಟಿ ಹಗರಣ ನಡೆದಿದೆ’ ಎಂದು ತಮ್ಮ ಪಕ್ಷದ ನಾಯಕರ ವಿರುದ್ಧವೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ವ್ಯಂಗ್ಯ ಮಾಡಿರುವ ರಾಜ್ಯ ಕಾಂಗ್ರೆಸ್, ‘40 ಬಿಜೆಪಿಯ ಅದೃಷ್ಟ ಸಂಖ್ಯೆ ಇರಬಹುದೇನೋ! ಕಮಿಷನ್ – 40%, ಕೋವಿಡ್ ಹಗರಣ – 40 ಸಾವಿರ ಕೋಟಿ’ ಎಂದು ಹೇಳಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ’40 ಬಿಜೆಪಿಯ ಅದೃಷ್ಟ ಸಂಖ್ಯೆ ಇರಬಹುದೇನೋ! ಕಮಿಷನ್ – 40%, ಕೋವಿಡ್ ಹಗರಣ – 40 ಸಾವಿರ ಕೋಟಿ. ಸ್ವತಃ ಬಿಜೆಪಿಯ ಹಿರಿಯ ನಾಯಕರಿಂದಲೇ ಹೊರಬಿದ್ದ 40 ಸಾವಿರ ಕೋಟಿ ರೂಪಾಯಿಯ ಕೋವಿಡ್ ಹಗರಣದ ಬಗ್ಗೆ ಬಿ.ವೈ. ವಿಜಯೇಂದ್ರ ಜನತೆಗೆ ಉತ್ತರಿಸದೆ ಮೌನವಾಗಿರುವುದೇಕೆ? ಈ ₹40 ಸಾವಿರ ಕೋಟಿಯಲ್ಲಿ ಹೈಕಮಾಂಡ್ ನಾಯಕರ ಪಾಲೆಷ್ಟು’ ಎಂದು ಬಿಜೆಪಿಯನ್ನು ಕಾಂಗ್ರೆಸ್ ಪ್ರಶ್ನಿಸಿದೆ.

‘ಸ್ವತಃ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿದ್ದರೂ, ಬಿಎಸ್‌ವೈ ಮತ್ತು ಮಕ್ಕಳ ವಿರುದ್ಧ ಇಷ್ಟೆಲ್ಲಾ ಮಾತಾಡಿದರೂ ಯತ್ನಾಳ್ ವಿರುದ್ಧ ಬಿಜೆಪಿ ಪಕ್ಷ ಕಠಿಣ ಕ್ರಮ ಕೈಗೊಳ್ಳದಿರುವುದು ನೋಡಿದರೆ 40 ಸಾವಿರ ಕೋಟಿಯ ಹಗರಣದ ಕಬಂದ ಬಾಹುಗಳು ವಿಸ್ತಾರವಾಗಿ ಹಬ್ಬಿರುವುದು ಸ್ಪಷ್ಟ. ಮಾಜಿ ಶ್ಯಾಡೋ ಸಿಎಂ ವಿಜಯೇಂದ್ರ ಅವರೇ, ಕೋವಿಡ್ ಹಗರಣದ ಬಗ್ಗೆ ಮೌನಕ್ಕೆ ಜಾರಿರುವುದೇಕೆ? ತಮ್ಮಲ್ಲಿ ಸಾಚಾತನವಿದ್ದರೆ ಈ ಹಗರಣದ ತನಿಖೆಗೆ ಒತ್ತಾಯಿಸುತ್ತಿಲ್ಲವೇಕೆ’ ಎಂದು ಕಾಂಗ್ರೆಸ್ ಸವಾಲು ಹಾಕಿದೆ.

‘ಕರ್ನಾಟಕದ ಜನರನ್ನು ಕಾಡಿದ ಅತಿ ದೊಡ್ಡ ವೈರಸ್ ಭ್ರಷ್ಟ ಬಿಜೆಪಿಯೇ ಹೊರತು ಕರೋನವಲ್ಲ! ಸಾವಿನ ಮನೆಯಲ್ಲಿ ಭ್ರಷ್ಟಾಚಾರದ ಸಂಭ್ರಮಾಚರಣೆ ಮಾಡಿದ ಬಿಜೆಪಿ ಸರ್ಕಾರದ ಹಗರಣಗಳು ಬಿಜೆಪಿಗರಿಂದಲೇ ಬಯಲಾಗುತ್ತಿದೆ. ವಿಜಯೇಂದ್ರ ಅವರೇ, ಅಂದು ಶ್ಯಾಡೋ ಸಿಎಂ ಆಗಿ ಇಡೀ ಆಡಳಿತವನ್ನು ನಿಯಂತ್ರಿಸಿದ್ದು ನೀವೇ ಅಲ್ಲವೇ? ವಿಜಯೇಂದ್ರ ಸರ್ವಿಸ್ ಟ್ಯಾಕ್ಸ್ (VijayendraServiceTax) ಜಾರಿಗೊಳಿದ್ದು ನೀವೇ ಅಲ್ಲವೇ? 40 ಸಾವಿರ ಕೋಟಿ ಯಾರ ಜೇಬಿಗೆ ಇಳಿಯಿತು’ ಎಂದು ಪ್ರಶ್ನಿಸಿದೆ.

’40 ಸಾವಿರ ಕೋಟಿ ಹಗರಣದ ಆರೋಪವನ್ನು ಸ್ವತಃ ಬಿಜೆಪಿಯ ಹಿರಿಯ ನಾಯಕರೇ ಮಾಡಿದ್ದಾರೆ. ಈ ಬಗ್ಗೆ ಉತ್ತರಿಸುವ ಹೊಣೆಗಾರಿಕೆ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಅವರದ್ದು. 40 ಸಾವಿರ ಕೋಟಿಯಲ್ಲಿ ಯಾರ ಪಾಲೆಷ್ಟು? ಹೆಣದ ಮೇಲೆ ಹಣ ಮಾಡುವ ದುರ್ಬುದ್ಧಿ ಬಂದಿದ್ದೇಕೆ’ ಎಂದು ಪೋಸ್ಟ್‌ ಮಾಡಿದೆ.

ಯತ್ನಾಳ್ ಆರೋಪವೇನು?

ಸ್ವಪಕ್ಷೀಯ ನಾಯಕರ ವಿರುದ್ಧ, ಅದರಲ್ಲೂ ಬಿಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಬಹಿರಂಗವಾಗಿ ಕತ್ತಿ ಮಸೆಯುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ‘ಅವರು, ನನ್ನನ್ನು ಪಕ್ಷದಿಂದ ಉಚ್ಚಾಟಿಸಿದ್ರೆ ಕೋವಿಡ್ ಸಂದರ್ಭದಲ್ಲಿ ನಡೆದಿರುವ ₹40 ಸಾವಿರ ಕೋಟಿ ರೂಪಾಯಿ ಅವ್ಯವಹಾರದ ದಾಖಲೆ ರಿಲೀಸ್ ಮಾಡುತ್ತೇನೆ’ ಎಂದು ಮಂಗಳವಾರ ಸ್ಪೋಟಕ ಹೇಳಿಕೆ ನೀಡಿದ್ದರು.

‘ಸತ್ಯ ಹೇಳಿದರೆ ಎಲ್ಲರಿಗೂ ಭಯವಾಗುತ್ತದೆ. ಬಿಜೆಪಿ ಸರ್ಕಾರದ ಅವಧಿಯ ಕೋವಿಡ್ ನಿರ್ವಹಣೆಯಲ್ಲಿ 40 ಸಾವಿರ ಕೋಟಿ ರೂಪಾಯಿಯ ಅವ್ಯವಹಾರ ನಡೆದಿದೆ. ನಾನು ಪ್ರಧಾನಿ ಮೋದಿ ಅವರಿಗಾಗಿ ಕೆಲಸ ಮಾಡುತ್ತಿದ್ದೇನೆ. ಹೀಗಾಗಿ ನನಗೆ ನೋಟಿಸ್ ಕೊಟ್ಟು ಪಕ್ಷದಿಂದ ಉಚ್ಚಾಟಿಸಿ ನೋಡಲಿ. ಆಗ ಇವರೆಲ್ಲರ ಬಣ್ಣ ಬಯಲು ಮಾಡುತ್ತೇನೆ’ ಎಂದು ಯತ್ನಾಳ್ ಸವಾಲು ಹಾಕಿದ್ದರು.

‘45 ರೂಪಾಯಿ ಮಾಸ್ಕ್ ಗೆ 485 ರೂಪಾಯಿ ಬಿಲ್ ಹಾಕಿದ್ದಾರೆ. ಬೆಡ್ಗಳಿಗೆ ಒಂದು ದಿನಕ್ಕೆ 10 ಸಾವಿರ ರೂಪಾಯಿ ಬಾಡಿಗೆ ನೀಡಿದ್ದಾರೆ. ಖರೀದಿ ಮಾಡಿದ್ರೆ ಒಂದು ದಿನದ ಬಿಲ್ ನಲ್ಲಿ ಎರಡು ಬೆಡ್ ಬರ್ತಿದ್ದವು. ಮಾಸ್ಕ್, ಬೆಡ್ಗಳಲ್ಲೂ ಭ್ರಷ್ಟಾಚಾರ ನಡೆದಿದೆ. ನಮ್ಮ ಸರ್ಕಾರ ಆದ್ರೆ ಏನಂತೆ? ಕಳ್ಳರು ಕಳ್ಳರೇ ಅಲ್ವಾ? ಆಸ್ಪತ್ರೆಯಲ್ಲಿ ದಾಖಲಾಗಿದ್ದಾಗ ನನಗೇ ₹5 ಲಕ್ಷ ಬಿಲ್ ಹಾಕಿದ್ದರು. ಇನ್ನು ಬಡವರು ಏನು ಮಾಡಬೇಕು. ಕೊರೋನಾ ವೇಳೆ ಕೋಟಿ ಕೋಟಿ ಲೂಟಿ ಆಗಿದೆ’ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ; ‘ದೇಶದ ಸಂಸತ್ತು ಗಾಢ ಕತ್ತಲೆ ಕೋಣೆಯಾಗಿ ಮಾರ್ಪಟ್ಟಿದೆ’; ಮೋದಿ-ಅಮಿತ್ ಶಾ ವಿರುದ್ಧ ಒಬ್ರಿಯಾನ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...