Homeಕರ್ನಾಟಕಬಿಜೆಪಿಯ ಅದೃಷ್ಟ ಸಂಖ್ಯೆ ‘40’ ಇರಬಹುದೇನೋ; ಯತ್ನಾಳ್ ಆರೋಪಕ್ಕೆ ಕಾಂಗ್ರೆಸ್ ವ್ಯಂಗ್ಯ

ಬಿಜೆಪಿಯ ಅದೃಷ್ಟ ಸಂಖ್ಯೆ ‘40’ ಇರಬಹುದೇನೋ; ಯತ್ನಾಳ್ ಆರೋಪಕ್ಕೆ ಕಾಂಗ್ರೆಸ್ ವ್ಯಂಗ್ಯ

- Advertisement -
- Advertisement -

‘ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾಗ ಕೋವಿಡ್ ನಿರ್ವಹಣೆಯಲ್ಲಿ ₹40 ಸಾವಿರ ಕೋಟಿ ಹಗರಣ ನಡೆದಿದೆ’ ಎಂದು ತಮ್ಮ ಪಕ್ಷದ ನಾಯಕರ ವಿರುದ್ಧವೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ವ್ಯಂಗ್ಯ ಮಾಡಿರುವ ರಾಜ್ಯ ಕಾಂಗ್ರೆಸ್, ‘40 ಬಿಜೆಪಿಯ ಅದೃಷ್ಟ ಸಂಖ್ಯೆ ಇರಬಹುದೇನೋ! ಕಮಿಷನ್ – 40%, ಕೋವಿಡ್ ಹಗರಣ – 40 ಸಾವಿರ ಕೋಟಿ’ ಎಂದು ಹೇಳಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ’40 ಬಿಜೆಪಿಯ ಅದೃಷ್ಟ ಸಂಖ್ಯೆ ಇರಬಹುದೇನೋ! ಕಮಿಷನ್ – 40%, ಕೋವಿಡ್ ಹಗರಣ – 40 ಸಾವಿರ ಕೋಟಿ. ಸ್ವತಃ ಬಿಜೆಪಿಯ ಹಿರಿಯ ನಾಯಕರಿಂದಲೇ ಹೊರಬಿದ್ದ 40 ಸಾವಿರ ಕೋಟಿ ರೂಪಾಯಿಯ ಕೋವಿಡ್ ಹಗರಣದ ಬಗ್ಗೆ ಬಿ.ವೈ. ವಿಜಯೇಂದ್ರ ಜನತೆಗೆ ಉತ್ತರಿಸದೆ ಮೌನವಾಗಿರುವುದೇಕೆ? ಈ ₹40 ಸಾವಿರ ಕೋಟಿಯಲ್ಲಿ ಹೈಕಮಾಂಡ್ ನಾಯಕರ ಪಾಲೆಷ್ಟು’ ಎಂದು ಬಿಜೆಪಿಯನ್ನು ಕಾಂಗ್ರೆಸ್ ಪ್ರಶ್ನಿಸಿದೆ.

‘ಸ್ವತಃ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿದ್ದರೂ, ಬಿಎಸ್‌ವೈ ಮತ್ತು ಮಕ್ಕಳ ವಿರುದ್ಧ ಇಷ್ಟೆಲ್ಲಾ ಮಾತಾಡಿದರೂ ಯತ್ನಾಳ್ ವಿರುದ್ಧ ಬಿಜೆಪಿ ಪಕ್ಷ ಕಠಿಣ ಕ್ರಮ ಕೈಗೊಳ್ಳದಿರುವುದು ನೋಡಿದರೆ 40 ಸಾವಿರ ಕೋಟಿಯ ಹಗರಣದ ಕಬಂದ ಬಾಹುಗಳು ವಿಸ್ತಾರವಾಗಿ ಹಬ್ಬಿರುವುದು ಸ್ಪಷ್ಟ. ಮಾಜಿ ಶ್ಯಾಡೋ ಸಿಎಂ ವಿಜಯೇಂದ್ರ ಅವರೇ, ಕೋವಿಡ್ ಹಗರಣದ ಬಗ್ಗೆ ಮೌನಕ್ಕೆ ಜಾರಿರುವುದೇಕೆ? ತಮ್ಮಲ್ಲಿ ಸಾಚಾತನವಿದ್ದರೆ ಈ ಹಗರಣದ ತನಿಖೆಗೆ ಒತ್ತಾಯಿಸುತ್ತಿಲ್ಲವೇಕೆ’ ಎಂದು ಕಾಂಗ್ರೆಸ್ ಸವಾಲು ಹಾಕಿದೆ.

‘ಕರ್ನಾಟಕದ ಜನರನ್ನು ಕಾಡಿದ ಅತಿ ದೊಡ್ಡ ವೈರಸ್ ಭ್ರಷ್ಟ ಬಿಜೆಪಿಯೇ ಹೊರತು ಕರೋನವಲ್ಲ! ಸಾವಿನ ಮನೆಯಲ್ಲಿ ಭ್ರಷ್ಟಾಚಾರದ ಸಂಭ್ರಮಾಚರಣೆ ಮಾಡಿದ ಬಿಜೆಪಿ ಸರ್ಕಾರದ ಹಗರಣಗಳು ಬಿಜೆಪಿಗರಿಂದಲೇ ಬಯಲಾಗುತ್ತಿದೆ. ವಿಜಯೇಂದ್ರ ಅವರೇ, ಅಂದು ಶ್ಯಾಡೋ ಸಿಎಂ ಆಗಿ ಇಡೀ ಆಡಳಿತವನ್ನು ನಿಯಂತ್ರಿಸಿದ್ದು ನೀವೇ ಅಲ್ಲವೇ? ವಿಜಯೇಂದ್ರ ಸರ್ವಿಸ್ ಟ್ಯಾಕ್ಸ್ (VijayendraServiceTax) ಜಾರಿಗೊಳಿದ್ದು ನೀವೇ ಅಲ್ಲವೇ? 40 ಸಾವಿರ ಕೋಟಿ ಯಾರ ಜೇಬಿಗೆ ಇಳಿಯಿತು’ ಎಂದು ಪ್ರಶ್ನಿಸಿದೆ.

’40 ಸಾವಿರ ಕೋಟಿ ಹಗರಣದ ಆರೋಪವನ್ನು ಸ್ವತಃ ಬಿಜೆಪಿಯ ಹಿರಿಯ ನಾಯಕರೇ ಮಾಡಿದ್ದಾರೆ. ಈ ಬಗ್ಗೆ ಉತ್ತರಿಸುವ ಹೊಣೆಗಾರಿಕೆ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಅವರದ್ದು. 40 ಸಾವಿರ ಕೋಟಿಯಲ್ಲಿ ಯಾರ ಪಾಲೆಷ್ಟು? ಹೆಣದ ಮೇಲೆ ಹಣ ಮಾಡುವ ದುರ್ಬುದ್ಧಿ ಬಂದಿದ್ದೇಕೆ’ ಎಂದು ಪೋಸ್ಟ್‌ ಮಾಡಿದೆ.

ಯತ್ನಾಳ್ ಆರೋಪವೇನು?

ಸ್ವಪಕ್ಷೀಯ ನಾಯಕರ ವಿರುದ್ಧ, ಅದರಲ್ಲೂ ಬಿಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಬಹಿರಂಗವಾಗಿ ಕತ್ತಿ ಮಸೆಯುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ‘ಅವರು, ನನ್ನನ್ನು ಪಕ್ಷದಿಂದ ಉಚ್ಚಾಟಿಸಿದ್ರೆ ಕೋವಿಡ್ ಸಂದರ್ಭದಲ್ಲಿ ನಡೆದಿರುವ ₹40 ಸಾವಿರ ಕೋಟಿ ರೂಪಾಯಿ ಅವ್ಯವಹಾರದ ದಾಖಲೆ ರಿಲೀಸ್ ಮಾಡುತ್ತೇನೆ’ ಎಂದು ಮಂಗಳವಾರ ಸ್ಪೋಟಕ ಹೇಳಿಕೆ ನೀಡಿದ್ದರು.

‘ಸತ್ಯ ಹೇಳಿದರೆ ಎಲ್ಲರಿಗೂ ಭಯವಾಗುತ್ತದೆ. ಬಿಜೆಪಿ ಸರ್ಕಾರದ ಅವಧಿಯ ಕೋವಿಡ್ ನಿರ್ವಹಣೆಯಲ್ಲಿ 40 ಸಾವಿರ ಕೋಟಿ ರೂಪಾಯಿಯ ಅವ್ಯವಹಾರ ನಡೆದಿದೆ. ನಾನು ಪ್ರಧಾನಿ ಮೋದಿ ಅವರಿಗಾಗಿ ಕೆಲಸ ಮಾಡುತ್ತಿದ್ದೇನೆ. ಹೀಗಾಗಿ ನನಗೆ ನೋಟಿಸ್ ಕೊಟ್ಟು ಪಕ್ಷದಿಂದ ಉಚ್ಚಾಟಿಸಿ ನೋಡಲಿ. ಆಗ ಇವರೆಲ್ಲರ ಬಣ್ಣ ಬಯಲು ಮಾಡುತ್ತೇನೆ’ ಎಂದು ಯತ್ನಾಳ್ ಸವಾಲು ಹಾಕಿದ್ದರು.

‘45 ರೂಪಾಯಿ ಮಾಸ್ಕ್ ಗೆ 485 ರೂಪಾಯಿ ಬಿಲ್ ಹಾಕಿದ್ದಾರೆ. ಬೆಡ್ಗಳಿಗೆ ಒಂದು ದಿನಕ್ಕೆ 10 ಸಾವಿರ ರೂಪಾಯಿ ಬಾಡಿಗೆ ನೀಡಿದ್ದಾರೆ. ಖರೀದಿ ಮಾಡಿದ್ರೆ ಒಂದು ದಿನದ ಬಿಲ್ ನಲ್ಲಿ ಎರಡು ಬೆಡ್ ಬರ್ತಿದ್ದವು. ಮಾಸ್ಕ್, ಬೆಡ್ಗಳಲ್ಲೂ ಭ್ರಷ್ಟಾಚಾರ ನಡೆದಿದೆ. ನಮ್ಮ ಸರ್ಕಾರ ಆದ್ರೆ ಏನಂತೆ? ಕಳ್ಳರು ಕಳ್ಳರೇ ಅಲ್ವಾ? ಆಸ್ಪತ್ರೆಯಲ್ಲಿ ದಾಖಲಾಗಿದ್ದಾಗ ನನಗೇ ₹5 ಲಕ್ಷ ಬಿಲ್ ಹಾಕಿದ್ದರು. ಇನ್ನು ಬಡವರು ಏನು ಮಾಡಬೇಕು. ಕೊರೋನಾ ವೇಳೆ ಕೋಟಿ ಕೋಟಿ ಲೂಟಿ ಆಗಿದೆ’ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ; ‘ದೇಶದ ಸಂಸತ್ತು ಗಾಢ ಕತ್ತಲೆ ಕೋಣೆಯಾಗಿ ಮಾರ್ಪಟ್ಟಿದೆ’; ಮೋದಿ-ಅಮಿತ್ ಶಾ ವಿರುದ್ಧ ಒಬ್ರಿಯಾನ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...