Homeಕರ್ನಾಟಕಬಿಜೆಪಿಯ ಅದೃಷ್ಟ ಸಂಖ್ಯೆ ‘40’ ಇರಬಹುದೇನೋ; ಯತ್ನಾಳ್ ಆರೋಪಕ್ಕೆ ಕಾಂಗ್ರೆಸ್ ವ್ಯಂಗ್ಯ

ಬಿಜೆಪಿಯ ಅದೃಷ್ಟ ಸಂಖ್ಯೆ ‘40’ ಇರಬಹುದೇನೋ; ಯತ್ನಾಳ್ ಆರೋಪಕ್ಕೆ ಕಾಂಗ್ರೆಸ್ ವ್ಯಂಗ್ಯ

- Advertisement -
- Advertisement -

‘ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾಗ ಕೋವಿಡ್ ನಿರ್ವಹಣೆಯಲ್ಲಿ ₹40 ಸಾವಿರ ಕೋಟಿ ಹಗರಣ ನಡೆದಿದೆ’ ಎಂದು ತಮ್ಮ ಪಕ್ಷದ ನಾಯಕರ ವಿರುದ್ಧವೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ವ್ಯಂಗ್ಯ ಮಾಡಿರುವ ರಾಜ್ಯ ಕಾಂಗ್ರೆಸ್, ‘40 ಬಿಜೆಪಿಯ ಅದೃಷ್ಟ ಸಂಖ್ಯೆ ಇರಬಹುದೇನೋ! ಕಮಿಷನ್ – 40%, ಕೋವಿಡ್ ಹಗರಣ – 40 ಸಾವಿರ ಕೋಟಿ’ ಎಂದು ಹೇಳಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ’40 ಬಿಜೆಪಿಯ ಅದೃಷ್ಟ ಸಂಖ್ಯೆ ಇರಬಹುದೇನೋ! ಕಮಿಷನ್ – 40%, ಕೋವಿಡ್ ಹಗರಣ – 40 ಸಾವಿರ ಕೋಟಿ. ಸ್ವತಃ ಬಿಜೆಪಿಯ ಹಿರಿಯ ನಾಯಕರಿಂದಲೇ ಹೊರಬಿದ್ದ 40 ಸಾವಿರ ಕೋಟಿ ರೂಪಾಯಿಯ ಕೋವಿಡ್ ಹಗರಣದ ಬಗ್ಗೆ ಬಿ.ವೈ. ವಿಜಯೇಂದ್ರ ಜನತೆಗೆ ಉತ್ತರಿಸದೆ ಮೌನವಾಗಿರುವುದೇಕೆ? ಈ ₹40 ಸಾವಿರ ಕೋಟಿಯಲ್ಲಿ ಹೈಕಮಾಂಡ್ ನಾಯಕರ ಪಾಲೆಷ್ಟು’ ಎಂದು ಬಿಜೆಪಿಯನ್ನು ಕಾಂಗ್ರೆಸ್ ಪ್ರಶ್ನಿಸಿದೆ.

‘ಸ್ವತಃ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿದ್ದರೂ, ಬಿಎಸ್‌ವೈ ಮತ್ತು ಮಕ್ಕಳ ವಿರುದ್ಧ ಇಷ್ಟೆಲ್ಲಾ ಮಾತಾಡಿದರೂ ಯತ್ನಾಳ್ ವಿರುದ್ಧ ಬಿಜೆಪಿ ಪಕ್ಷ ಕಠಿಣ ಕ್ರಮ ಕೈಗೊಳ್ಳದಿರುವುದು ನೋಡಿದರೆ 40 ಸಾವಿರ ಕೋಟಿಯ ಹಗರಣದ ಕಬಂದ ಬಾಹುಗಳು ವಿಸ್ತಾರವಾಗಿ ಹಬ್ಬಿರುವುದು ಸ್ಪಷ್ಟ. ಮಾಜಿ ಶ್ಯಾಡೋ ಸಿಎಂ ವಿಜಯೇಂದ್ರ ಅವರೇ, ಕೋವಿಡ್ ಹಗರಣದ ಬಗ್ಗೆ ಮೌನಕ್ಕೆ ಜಾರಿರುವುದೇಕೆ? ತಮ್ಮಲ್ಲಿ ಸಾಚಾತನವಿದ್ದರೆ ಈ ಹಗರಣದ ತನಿಖೆಗೆ ಒತ್ತಾಯಿಸುತ್ತಿಲ್ಲವೇಕೆ’ ಎಂದು ಕಾಂಗ್ರೆಸ್ ಸವಾಲು ಹಾಕಿದೆ.

‘ಕರ್ನಾಟಕದ ಜನರನ್ನು ಕಾಡಿದ ಅತಿ ದೊಡ್ಡ ವೈರಸ್ ಭ್ರಷ್ಟ ಬಿಜೆಪಿಯೇ ಹೊರತು ಕರೋನವಲ್ಲ! ಸಾವಿನ ಮನೆಯಲ್ಲಿ ಭ್ರಷ್ಟಾಚಾರದ ಸಂಭ್ರಮಾಚರಣೆ ಮಾಡಿದ ಬಿಜೆಪಿ ಸರ್ಕಾರದ ಹಗರಣಗಳು ಬಿಜೆಪಿಗರಿಂದಲೇ ಬಯಲಾಗುತ್ತಿದೆ. ವಿಜಯೇಂದ್ರ ಅವರೇ, ಅಂದು ಶ್ಯಾಡೋ ಸಿಎಂ ಆಗಿ ಇಡೀ ಆಡಳಿತವನ್ನು ನಿಯಂತ್ರಿಸಿದ್ದು ನೀವೇ ಅಲ್ಲವೇ? ವಿಜಯೇಂದ್ರ ಸರ್ವಿಸ್ ಟ್ಯಾಕ್ಸ್ (VijayendraServiceTax) ಜಾರಿಗೊಳಿದ್ದು ನೀವೇ ಅಲ್ಲವೇ? 40 ಸಾವಿರ ಕೋಟಿ ಯಾರ ಜೇಬಿಗೆ ಇಳಿಯಿತು’ ಎಂದು ಪ್ರಶ್ನಿಸಿದೆ.

’40 ಸಾವಿರ ಕೋಟಿ ಹಗರಣದ ಆರೋಪವನ್ನು ಸ್ವತಃ ಬಿಜೆಪಿಯ ಹಿರಿಯ ನಾಯಕರೇ ಮಾಡಿದ್ದಾರೆ. ಈ ಬಗ್ಗೆ ಉತ್ತರಿಸುವ ಹೊಣೆಗಾರಿಕೆ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಅವರದ್ದು. 40 ಸಾವಿರ ಕೋಟಿಯಲ್ಲಿ ಯಾರ ಪಾಲೆಷ್ಟು? ಹೆಣದ ಮೇಲೆ ಹಣ ಮಾಡುವ ದುರ್ಬುದ್ಧಿ ಬಂದಿದ್ದೇಕೆ’ ಎಂದು ಪೋಸ್ಟ್‌ ಮಾಡಿದೆ.

ಯತ್ನಾಳ್ ಆರೋಪವೇನು?

ಸ್ವಪಕ್ಷೀಯ ನಾಯಕರ ವಿರುದ್ಧ, ಅದರಲ್ಲೂ ಬಿಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಬಹಿರಂಗವಾಗಿ ಕತ್ತಿ ಮಸೆಯುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ‘ಅವರು, ನನ್ನನ್ನು ಪಕ್ಷದಿಂದ ಉಚ್ಚಾಟಿಸಿದ್ರೆ ಕೋವಿಡ್ ಸಂದರ್ಭದಲ್ಲಿ ನಡೆದಿರುವ ₹40 ಸಾವಿರ ಕೋಟಿ ರೂಪಾಯಿ ಅವ್ಯವಹಾರದ ದಾಖಲೆ ರಿಲೀಸ್ ಮಾಡುತ್ತೇನೆ’ ಎಂದು ಮಂಗಳವಾರ ಸ್ಪೋಟಕ ಹೇಳಿಕೆ ನೀಡಿದ್ದರು.

‘ಸತ್ಯ ಹೇಳಿದರೆ ಎಲ್ಲರಿಗೂ ಭಯವಾಗುತ್ತದೆ. ಬಿಜೆಪಿ ಸರ್ಕಾರದ ಅವಧಿಯ ಕೋವಿಡ್ ನಿರ್ವಹಣೆಯಲ್ಲಿ 40 ಸಾವಿರ ಕೋಟಿ ರೂಪಾಯಿಯ ಅವ್ಯವಹಾರ ನಡೆದಿದೆ. ನಾನು ಪ್ರಧಾನಿ ಮೋದಿ ಅವರಿಗಾಗಿ ಕೆಲಸ ಮಾಡುತ್ತಿದ್ದೇನೆ. ಹೀಗಾಗಿ ನನಗೆ ನೋಟಿಸ್ ಕೊಟ್ಟು ಪಕ್ಷದಿಂದ ಉಚ್ಚಾಟಿಸಿ ನೋಡಲಿ. ಆಗ ಇವರೆಲ್ಲರ ಬಣ್ಣ ಬಯಲು ಮಾಡುತ್ತೇನೆ’ ಎಂದು ಯತ್ನಾಳ್ ಸವಾಲು ಹಾಕಿದ್ದರು.

‘45 ರೂಪಾಯಿ ಮಾಸ್ಕ್ ಗೆ 485 ರೂಪಾಯಿ ಬಿಲ್ ಹಾಕಿದ್ದಾರೆ. ಬೆಡ್ಗಳಿಗೆ ಒಂದು ದಿನಕ್ಕೆ 10 ಸಾವಿರ ರೂಪಾಯಿ ಬಾಡಿಗೆ ನೀಡಿದ್ದಾರೆ. ಖರೀದಿ ಮಾಡಿದ್ರೆ ಒಂದು ದಿನದ ಬಿಲ್ ನಲ್ಲಿ ಎರಡು ಬೆಡ್ ಬರ್ತಿದ್ದವು. ಮಾಸ್ಕ್, ಬೆಡ್ಗಳಲ್ಲೂ ಭ್ರಷ್ಟಾಚಾರ ನಡೆದಿದೆ. ನಮ್ಮ ಸರ್ಕಾರ ಆದ್ರೆ ಏನಂತೆ? ಕಳ್ಳರು ಕಳ್ಳರೇ ಅಲ್ವಾ? ಆಸ್ಪತ್ರೆಯಲ್ಲಿ ದಾಖಲಾಗಿದ್ದಾಗ ನನಗೇ ₹5 ಲಕ್ಷ ಬಿಲ್ ಹಾಕಿದ್ದರು. ಇನ್ನು ಬಡವರು ಏನು ಮಾಡಬೇಕು. ಕೊರೋನಾ ವೇಳೆ ಕೋಟಿ ಕೋಟಿ ಲೂಟಿ ಆಗಿದೆ’ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ; ‘ದೇಶದ ಸಂಸತ್ತು ಗಾಢ ಕತ್ತಲೆ ಕೋಣೆಯಾಗಿ ಮಾರ್ಪಟ್ಟಿದೆ’; ಮೋದಿ-ಅಮಿತ್ ಶಾ ವಿರುದ್ಧ ಒಬ್ರಿಯಾನ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...