Homeಮುಖಪುಟನೀಟ್-ಯುಜಿ ಕೌನ್ಸಿಲಿಂಗ್‌ಗೆ ತಡೆ : ಕೇಂದ್ರದ ವಿರುದ್ದ ಕಾಂಗ್ರೆಸ್ ಕಿಡಿ

ನೀಟ್-ಯುಜಿ ಕೌನ್ಸಿಲಿಂಗ್‌ಗೆ ತಡೆ : ಕೇಂದ್ರದ ವಿರುದ್ದ ಕಾಂಗ್ರೆಸ್ ಕಿಡಿ

- Advertisement -
- Advertisement -

ಮುಂದಿನ ಸೂಚನೆಯವರೆಗೆ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್-ಯುಜಿ)ಯ ಕೌನ್ಸಿಲಿಂಗ್ ಅನ್ನು ಇಂದು (ಜುಲೈ 6) ತಡೆ ಹಿಡಿಯಲಾಗಿದೆ ಎಂದು ವರದಿಯಾಗಿದೆ.

ಜುಲೈ 8ರಂದು ನಡೆಯಲಿರುವ ನ್ಯಾಯಾಲಯದ ವಿಚಾರಣೆಯವರೆಗೂ ಕಾಯುವಂತೆ ಪರೀಕ್ಷಾ ಪ್ರಾಧಿಕಾರಗಳಿಗೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ಈ ಕುರಿತು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಪ್ರತಿಕ್ರಿಯಿಸಿದ್ದು, “ದಿನಕಳೆದಂತೆ ಇಡೀ ನೀಟ್-ಯುಜಿ ಹಗರಣವು ಮತ್ತಷ್ಟು ಹದಗೆಡತೊಡಗಿದೆ. ಈ ವಿಚಾರದಲ್ಲಿ ಅಜೈವಿಕ ಪ್ರಧಾನಿ ಹಾಗೂ ಅವರ ಜೈವಿಕ ಶಿಕ್ಷಣ ಸಚಿವರು ತಮ್ಮ ಅದಕ್ಷತೆ ಮತ್ತು ಅಸೂಕ್ಷ್ಮತೆಗಳಿಗೆ ಮತ್ತಷ್ಟು ಪುರಾವೆಗಳನ್ನು ಒದಗಿಸುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

ಜೂನ್ 4ರಂದು ಪ್ರಕಟಗೊಂಡ 2024ರ ನೀಟ್-ಯುಜಿ ಫಲಿತಾಂಶದಲ್ಲಿ 1,563 ವಿದ್ಯಾರ್ಥಿಗಳಿಗೆ ಕೃಪಾಂಕ ನೀಡಿರುವುದು ಮತ್ತು 67 ವಿದ್ಯಾರ್ಥಿಗಳು 720 ಪೂರ್ಣ ಅಂಕ ಗಳಿಸಿರುವುದು ಹಾಗೂ ಕೆಲ ವಿದ್ಯಾರ್ಥಿಗಳು 718, 719 ಅಂಕಗಳನ್ನು ಪಡೆದಿರುವುದು ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆ ವಿದ್ಯಾರ್ಥಿಗಳ ಕೃಪಾಂಕ ರದ್ದುಗೊಳಿಸಿ ಮರು ಪರೀಕ್ಷೆ ನಡೆಸಲಾಗಿತ್ತು.

ಬರೋಬ್ಬರಿ 24 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದ ಪರೀಕ್ಷೆ ಮೇ 5, 2024 ರಂದು ನಡೆದಿತ್ತು. ಜೂನ್ 4, 2024ರಂದು ಫಲಿತಾಂಶ ಪ್ರಕಟಗೊಂಡ ನಂತರ ಭಾರೀ ವಿವಾದಕ್ಕೆ ಕಾರಣವಾಗಿತ್ತು.

ಪರೀಕ್ಷೆ ಬರೆಯಲು ಸರಿಯಾಗಿ ಸಮಯ ಸಿಕ್ಕಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡಲಾಗಿದೆ. ಈ ಕಾರಣದಿಂದ 718, 719 ಅಂಕಗಳು ಲಭಿಸಿವೆ. ಕೆಲ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ಸುಲಭವಾಗಿದ್ದುದೇ ಅವರು ಭಾರೀ ಅಂಕ ಪಡೆಯಲು ಕಾರಣ ಎಂದು ರಾಷ್ಟ್ರೀಯ ಪರಿಕ್ಷಾ ಸಂಸ್ಥೆ (ಎನ್‌ಟಿಎ) ಆರಂಭದಲ್ಲಿ ಹೇಳಿತ್ತು.

ಆದರೆ, ವಿದ್ಯಾರ್ಥಿಗಳು ಮತ್ತು ಇತರರಿಂದ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಕೃಪಾಂಕ ಕುರಿತು ಮರು ಪರಿಶೀಲಿಸಲು ಕೇಂದ್ರ ಶಿಕ್ಷಣ ಸಚಿವಾಲಯ ನಾಲ್ವರ ಸಮಿತಿ ರಚಿಸಿದೆ ಎಂದು ಎನ್‌ಟಿಎ ಮಹಾನಿರ್ದೇಶಕ ಸುಬೋಧ್ ಕುಮಾರ್ ಸಿಂಗ್ ಜೂನ್ 8ರಂದು ಸುದ್ದಿಗೋಷ್ಟಿ ನಡೆಸಿ ತಿಳಿಸಿದ್ದರು.

ಈ ನಡುವೆ ನೀಟ್ ಮರು ಪರೀಕ್ಷೆ ನಡೆಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು. ಅರ್ಜಿ ಸಂಬಂಧ ಪ್ರತಿಕ್ರಿಯೆ ಕೇಳಿ ಜೂನ್ 11ರಂದು ಸುಪ್ರೀಂ ಕೋರ್ಟ್ ಎನ್‌ಟಿಎಗೆ ನೋಟಿಸ್ ಜಾರಿ ಮಾಡಿತ್ತು. ಇದಕ್ಕೆ ಉತ್ತರಿಸಿದ್ದ ಎನ್‌ಟಿಎ 1,563 ವಿದ್ಯಾರ್ಥಿಗಳ ಗ್ರೇಸ್ ಅಂಕಗಳನ್ನು ರದ್ದುಗೊಳಿಸಲಾಗುವುದು. ಅವರು ಮತ್ತೆ ಪರೀಕ್ಷೆಗೆ ಹಾಜರಾಗಲು ಆಯ್ಕೆಯನ್ನು ಹೊಂದಿರುತ್ತಾರೆ ಎಂದು ತಿಳಿಸಿತ್ತು. ಅದರಂತೆ ಗ್ರೇಸ್ ಅಂಕ ರದ್ದುಪಡಿಸಿ ಮರು ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಲಾಗಿದೆ.

ಇದನ್ನೂ ಓದಿ : ಚುನಾವಣಾ ಬಾಂಡ್ ಮೂಲಕ ರಾಜಕೀಯ ಪಕ್ಷಗಳು ಪಡೆದ ಹಣ ಮುಟ್ಟುಗೋಲು ಹಾಕಿಕೊಳ್ಳುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...