Homeಕರ್ನಾಟಕಸಮುದಾಯ ಬೆಸೆಯುವ ‘ಕೊಡವ ಹಾಕಿ ಹಬ್ಬ’ಕ್ಕೆ ದಿನಗಣನೆ; ‘ಅಪ್ಪಚೆಟ್ಟೋಳಂಡ’ ಕುಟುಂಬದಿಂದ ಆತಿಥ್ಯ

ಸಮುದಾಯ ಬೆಸೆಯುವ ‘ಕೊಡವ ಹಾಕಿ ಹಬ್ಬ’ಕ್ಕೆ ದಿನಗಣನೆ; ‘ಅಪ್ಪಚೆಟ್ಟೋಳಂಡ’ ಕುಟುಂಬದಿಂದ ಆತಿಥ್ಯ

- Advertisement -
- Advertisement -

ಪ್ರಾಕೃತಿಕ ಸೌಂದರ್ಯದಿಂದ ಕಂಗೊಳಿಸುತ್ತಿರುವ, ಮಂಜು, ಮಳೆ ಮತ್ತು ವೀರ ಯೋಧರಿಗೆ ಹೆಸರಾದ ಕೊಡಗು ಜಿಲ್ಲೆ ಹಾಕಿಗೂ ಸುಪ್ರಸಿದ್ಧ. ಮುಖ್ಯವಾಗಿ ಇಲ್ಲಿ ಹಾಕಿ ಎಂಬುದು ಕೇವಲ ಕ್ರೀಡೆಯಲ್ಲ; ಕೊಡವ ಸಮುದಾಯವನ್ನು ಬೆಸೆಯುವ ಸಾಧನ.

ಕೊಡಗಿಗೂ ಹಾಕಿಗೂ ಅವಿನಾಭಾವ ಸಂಬಂಧ. ಕೊಡಗು ಜಿಲ್ಲೆಯನ್ನು ಭಾರತೀಯ ಹಾಕಿಯ ತೊಟ್ಟಿಲು ಎಂದೂ ಬಣ್ಣಿಸಲಾಗುತ್ತದೆ. 50ಕ್ಕೂ ಹೆಚ್ಚು ಕೊಡವರು ಅಂತಾರಾಷ್ಟ್ರೀಯ ಹಾಕಿ ಪಂದ್ಯಾವಳಿಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ, ಅವರಲ್ಲಿ 16 ಮಂದಿ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದಾರೆ. ಇಂತಹ ಕೊಡಗಿನಲ್ಲಿ ಮಾರ್ಚ್, ಏಪ್ರಿಲ್‌, ಮೇ ಬಂತೆಂದರೆ ಹಾಕಿ ಕ್ರೀಡೆಯ ಸಡಗರ ಮನೆಮಾಡುತ್ತದೆ. ‘ಕೊಡವ ಹಾಕಿ ಹಬ್ಬ’ ಅವಿಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾಗುತ್ತದೆ. ವಿಶೇಷವೆಂದರೆ ಕೊಡವ ಕುಟುಂಬಗಳ ನಡುವೆ ನಡೆಯುವ ಸೌದಾರ್ಹಯುತ ಟೂರ್ನಿ ಇದಾಗಿದೆ. ಬಹುಶಃ ಸಮುದಾಯಗಳ ನಡುವೆ ಬಾಂಧವ್ಯ ಬೆಸೆಯುವ ಇಂತಹ ಹಾಕಿ ಟೂರ್ನಿ ಮತ್ತೆಲ್ಲೂ ಇರಲಾರದು.

ಪ್ರಪಂಚದ ಅತಿ ದೊಡ್ಡ ಸ್ಪರ್ಧೆ ಎಂದೇ ಪರಿಗಣಿಸಲ್ಪಟ್ಟಿರುವ ಈ ಹಾಕಿ ಹಬ್ಬವು ಗಿನ್ನಿಸ್‌ ದಾಖಲೆಗಳ ಪುಸ್ತಕದಲ್ಲಿ ಸೇರ್ಪಡೆಯಾಗಲು ನಿರ್ದೇಶಿಸಲ್ಪಟ್ಟಿದೆ. ಗಿನೆಸ್ ದಾಖಲೆಗಳ ಪುಸ್ತಕಕ್ಕೆ ಭಾರತೀಯ ಪರ್ಯಾಯವಾಗಿರುವ ಲಿಮ್ಕಾ ದಾಖಲೆಗಳ ಪುಸ್ತಕದಲ್ಲಿ ಈಗಾಗಲೇ ಉಲ್ಲೇಖಗೊಂಡಿದೆ. ಇಂತಹ ಅದ್ಭುತ ಕ್ಷಣಕ್ಕೆ ಮಾರ್ಚ್ 18ರಂದು ನಾಪೊಕ್ಲುವಿನಲ್ಲಿ ಚಾಲನೆ ನೀಡಲಾಗುತ್ತಿದೆ. ಏಪ್ರಿಲ್‌ 9ರವರೆಗೆ ಟೂರ್ನಿ ನಡೆಯಲಿದೆ.

ಪ್ರತಿ ವರ್ಷ ಒಂದೊಂದು ಕೊಡವ ಕುಟುಂಬ ಆತಿಥ್ಯ ವಹಿಸಿ ನಡೆಸಿಕೊಂಡು ಬರುತ್ತಿರುವ ‘ಕೊಡವ ಹಾಕಿ ಹಬ್ಬ’ದ ಜವಾಬ್ದಾರಿಯನ್ನು ಈ ವರ್ಷ ‘ಅಪ್ಪಚೆಟ್ಟೋಳಂಡ’ ಫ್ಯಾಮಿಲಿ ವಹಿಸಿಕೊಂಡಿದೆ. ಯಾವ ಕುಟುಂಬ ಟೂರ್ನಿಯ ಮುಂದಾಳತ್ವ ವಹಿಸಿರುತ್ತದೆಯೋ ಈ ಕುಟುಂಬದ ಹೆಸರಲ್ಲಿ ಕಪ್‌ ನೀಡಲಾಗುತ್ತದೆ.

ಕೊಡವ ಕುಟುಂಬಗಳನ್ನು ಬೆಸೆಯುವ ವಿನೂತನ ಹಬ್ಬವಿದು

ಭಾರತೀಯ ಸ್ಟೇಟ್ ಬ್ಯಾಂಕಿನ ನಿವೃತ್ತ ಉದ್ಯೋಗಿ ಹಾಗೂ ಪ್ರಥಮ ದರ್ಜೆಯ ಹಾಕಿ ಆಟದ ತೀರ್ಪುಗಾರರಾಗಿದ್ದ ಪಾಂಡಂಡ ಕುಟ್ಟಪ್ಪ- ಕಾಶಿ ಸಹೋದರರ ಕನಸಿನ ಕೂಸಾಗಿ ಕೊಡವ ಹಾಕಿ ಕಪ್‌ 1997ರಲ್ಲಿ ಆರಂಭವಾಯಿತು. ವಿರಾಜಪೇಟೆಯ ಸಮೀಪದ ಕರಡ ಗ್ರಾಮದ ಮೈದಾನದಲ್ಲಿ ನಡೆದ ‘ಪಾಡಂಡ ಕಪ್’ ಎಂದು ಕರೆಯಲ್ಪಟ್ಟ ಈ ಟೂರ್ನಿಯಲ್ಲಿ 60 ಕುಟುಂಬಗಳು ಪಾಲ್ಗೊಂಡಿದ್ದವು. ಈ ಸ್ಪರ್ಧೆಯ ಪ್ರಪ್ರಥಮ ಉದ್ಘಾಟನಾ ಸಮಾರಂಭದ ಆರ್ಥಿಕ ವೆಚ್ಚವನ್ನು ಕುಟ್ಟಪ್ಪನವರೇ ಭರಿಸಿದರು. ನಂತರದ ವರ್ಷಗಳಲ್ಲಿ 250-300ಕ್ಕೂ ಹೆಚ್ಚು ಕುಟುಂಬಗಳು ಈ ಹಬ್ಬದಲ್ಲಿ ಭಾಗವಹಿಸುತ್ತಾ ಬಂದಿವೆ.

ವರ್ಷದಿಂದ ವರ್ಷಕ್ಕೆ ಈ ಹಾಕಿ ಹಬ್ಬದಲ್ಲಿ ಪಾಲ್ಗೊಳ್ಳುವ ಕೊಡವ ಕುಟುಂಬಗಳ ಸಂಖ್ಯೆ ಹೆಚ್ಚುತ್ತಿದೆ. ಜಿಲ್ಲೆಯ ಹೊರಗಿರುವ ಕೊಡವ ಸದಸ್ಯರೂ ತಮ್ಮ ಕುಟುಂಬದ ಆಟದಲ್ಲಿ ಭಾಗವಹಿಸಲು ತಮ್ಮ ನೌಕರಿಗೆ ರಜೆಯಿತ್ತು ಬರುತ್ತಾರೆ. ಹಬ್ಬದ ಉದ್ಘಾಟನಾ ಮತ್ತು ಸಮಾರೋಪ ಸಮಾರಂಭಗಳು ಕೊಡವರ ವಿವಿಧ ನೃತ್ಯ ಮತ್ತು ಕೋಲಾಟಗಳಿಂದ ಕೂಡಿರುತ್ತದೆ.

ಪಾಂಡಂಡ, ಕೋಡಿರ, ಬಲ್ಲಚಂಡ, ಚೆಪ್ಪುಡಿರ, ನೆಲ್ಲಮಕ್ಕಡ, ಚೆಕ್ಕೆರ, ಕಲಿಯಂಡ, ಮಾಳೆಯಂಡ, ಬಿದ್ದಂಡ,  ಕಳ್ಳಿಚಂಡ, ಮಂಡೇಟಿರ, ಅಳಮೇಂಗಡ, ಮಂಡೇಪಂಡ, ಮನೆಯಪಂಡ, ಮಚ್ಚಾಮಾಡ, ಐಚೆಟ್ಟಿರ, ಮಾದಂಡ ಮೊದಲಾದ ಕೊಡವ ಕುಟುಂಬಗಳು ಈವರೆಗಿನ ಕೊಡವ ಹಾಕಿ ಟೂರ್ನಿಗಳ ಆತಿಥ್ಯ ವಹಿಸಿವೆ. ಪ್ರತಿ ವರ್ಷ ಟೂರ್ನಿ ಮುಗಿದ ನಂತರ ಮುಂದಿನ ವರ್ಷದ ಆತಿಥ್ಯವನ್ನು ಯಾರು ವಹಿಸಬೇಕೆಂಬ ನಿರ್ಣಯ ಮಾಡಲಾಗುತ್ತದೆ.

ಕರಡ, ಕಡಂಗ, ಕಾಕೋಟುಪರಂಬು, ಪೊನ್ನಂಪೇಟೆ, ಅಮ್ಮತ್ತಿ, ಹುದಿಕೇರಿ, ನಾಪ್ಲೊಕ್ಲು, ಮಾದಾಪುರ, ಮಡಿಕೇರಿ, ಬಾಳುಗೋಡು ಮೊದಲಾದ ಸ್ಥಳಗಳಲ್ಲಿ ಟೂರ್ನಿಯನ್ನು ಆಯೋಜಿಸಲಾಗಿದೆ. ಕೂತಂಡ, ನೆಲ್ಲಮಕ್ಕಳ, ಚೆಪ್ಪುಡಿರ, ಕೋಣೇರಿರ, ಮಚ್ಚಾಮಾಡ, ಅಂಜಪರವಂಡ, ಮುಕ್ಕಾಟಿರ, ಕಲಿಯಂಡ ಇತರ ಕುಟುಂಬಗಳು ಟೂರ್ನಿಯಲ್ಲಿ ಕಪ್‌ ಗೆದ್ದಿವೆ.

ಈ ಟೂರ್ನಿಯ ವಿಶೇಷವೆಂದರೆ ಒಂದು ತಂಡದ ಆಟಗಾರರೆಲ್ಲರೂ ಒಂದೇ ಮನೆತನಕ್ಕೆ ಸೇರಿದವರಾಗಿರಬೇಕು; ಪ್ರತಿಯೊಬ್ಬರೂ ಆಟದ ಸಂಪೂರ್ಣ ಪೋಷಾಕು ಪರಿಕರಗಳನ್ನು ಧರಿಸಿರಬೇಕು; ಸ್ತ್ರೀಯರೂ ಆಟದಲ್ಲಿ ಭಾಗವಹಿಸಬಹುದು; ವಿವಾಹಿತ ಮಹಿಳೆಯರು ತಾವು ತವರು ಮನೆತನವನ್ನು ಪ್ರತಿನಿಧಿಸಬೇಕೋ ಅಥವಾ ಗಂಡನ ಮನೆಯನ್ನು ಪ್ರತಿನಿಧಿಸಬೇಕೋ ಎಂಬುದನ್ನು ಅವರೇ ನಿರ್ಧರಿಸಬೇಕು ಎಂಬ ನಿಯಮಗಳನ್ನು ರೂಪಿಸಲಾಗಿರುತ್ತದೆ.

ಕೋವಿಡ್ ಬಿಕ್ಕಟ್ಟಿನ ನಂತರ ಸಂಭ್ರಮ

ಕೋವಿಡ್‌ ಮತ್ತು ಪ್ರಾಕೃತಿಕ ಬಿಕ್ಕಟ್ಟಿನಿಂದ ನಲುಗು ಹೋಗಿದ್ದ ಕೊಡಗು ಜಿಲ್ಲೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಕೊಡವ ಹಾಕಿ ಉತ್ಸವ ಆಯೋಜನೆಯಾಗಿರಲಿಲ್ಲ. ಅಂತೂ ಮತ್ತೆ ಸಂಭ್ರಮ ಮನೆ ಮಾಡಿದೆ. ‘ಅಪ್ಪಚೆಟ್ಟೋಳಂಡ ಹಾಕಿ ಕಪ್‌’ಗೆ ಸೆಣಸಾಡಲು 336 ತಂಡಗಳು ಪಾಲ್ಗೊಳ್ಳುತ್ತಿವೆ. 22 ವರ್ಷಗಳ ಇತಿಹಾಸವಿರುವ ಈ ಟೂರ್ನಿಗೆ ದಿನಗಣನೆ ಆರಂಭವಾಗಲಿದ್ದು ಮಾರ್ಚ್ 18ರಿಂದ ಕೊಡಗು ಜಿಲ್ಲೆಯ ನಾಪೊಕ್ಲು ಈ ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗಲಿದೆ.

ಇದನ್ನೂ ಓದಿರಿ: ಇದು ಕ್ರಿಕೆಟ್ ಪಂದ್ಯವೋ ರಾಜಕೀಯ ರ್‍ಯಾಲಿಯೋ?: ಬಿಜೆಪಿಯವರೇ ಟಿಕೆಟ್‌ ಖರೀದಿಸಿದ ಕಥೆ!

ಎಲ್ಲಾ ಕೊಡವ ಕುಟುಂಬಗಳು ಇದರಲ್ಲಿ ಭಾಗಿಯಾಗುವಂತೆ ಅಪ್ಪಚೆಟ್ಟೋಳಂಡ ಫ್ಯಾಮಿಲಿ ಆಹ್ವಾನ ನೀಡಿದೆ. ಕರ್ನಾಟಕ ಸರ್ಕಾರದ ಸಹಕಾರವೂ ಈ ಟೂರ್ನಿಗಿದೆ. ಸುಮಾರು ಒಂದೂವರೆ ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜು ಮಾಡಲಾಗಿದ್ದು ಕರ್ನಾಟಕ ಸರ್ಕಾರ 1 ಕೋಟಿ ರೂ. ಮಂಜೂರು ಮಾಡಿದೆ. ಸನ್‌ಫ್ಯೂರ್‌ ಸಂಸ್ಥೆ ಪ್ರಾಯೋಜಕತ್ವ ವಹಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಿವಿಧ ಸಂಘಸಂಸ್ಥೆಗಳು, ದಾನಿಗಳು ಆರ್ಥಿಕ ನೆರವು ನೀಡಿದ್ದಾರೆ.

ಮಾರ್ಚ್ 18ರಂದು ಮಧ್ಯಾಹ್ನ 2.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟೂರ್ನಿಗೆ ಚಾಲನೆ ನೀಡಲಿದ್ದಾರೆ. ನಾಪೊಕ್ಲುವಿನಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್‌ ವ್ಯಾಪ್ತಿಗೆ ಸೇರಿದ ಜನರಲ್ ಕೆ.ಎಸ್.ತಿಮ್ಮಯ್ಯ ತಾಲ್ಲೂಕು ಕ್ರೀಡಾಂಗಣದ 3 ಮೈದಾನದಲ್ಲಿ ಪಂದ್ಯಗಳು ನಡೆಯಲಿವೆ.

“ಪ್ರವಾಹ ಮತ್ತು ಸಾಂಕ್ರಾಮಿಕ ರೋಗದ ಬಿಕ್ಕಟ್ಟು ಎದುರಾದ ನಾಲ್ಕು ವರ್ಷಗಳ ವಿರಾಮದ ನಂತರ, ಕೊಡವ ಹಾಕಿ ಉತ್ಸವವು ನಡೆಯುತ್ತಿದ್ದು ಹಿಂದೆಂದಿಗಿಂತಲೂ ಉತ್ತಮವಾಗಿರುತ್ತದೆ ಎಂದು ತಿಳಿಸಲು ನಾವು ಉತ್ಸುಕರಾಗಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಟೂರ್ನಿಯು ಅದ್ಭುತವಾಗಿ ಆಯೋಜನೆಗೊಂಡಿದೆ ಎಂದು ಭರವಸೆ ನೀಡುತ್ತೇವೆ. ಭಾಗವಹಿಸುವವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನಾವು ಹೆಚ್ಚಿನ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದೇವೆ” ಎಂದು  ಅಪ್ಪಚೆಟ್ಟೋಳಂಡ ಹಾಕಿ ಹಬ್ಬದ ಕನ್ವೀನರ್‌ ಮನು ಮುತ್ತಪ್ಪ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...