Homeಕರ್ನಾಟಕಸಮುದಾಯ ಬೆಸೆಯುವ ‘ಕೊಡವ ಹಾಕಿ ಹಬ್ಬ’ಕ್ಕೆ ದಿನಗಣನೆ; ‘ಅಪ್ಪಚೆಟ್ಟೋಳಂಡ’ ಕುಟುಂಬದಿಂದ ಆತಿಥ್ಯ

ಸಮುದಾಯ ಬೆಸೆಯುವ ‘ಕೊಡವ ಹಾಕಿ ಹಬ್ಬ’ಕ್ಕೆ ದಿನಗಣನೆ; ‘ಅಪ್ಪಚೆಟ್ಟೋಳಂಡ’ ಕುಟುಂಬದಿಂದ ಆತಿಥ್ಯ

- Advertisement -
- Advertisement -

ಪ್ರಾಕೃತಿಕ ಸೌಂದರ್ಯದಿಂದ ಕಂಗೊಳಿಸುತ್ತಿರುವ, ಮಂಜು, ಮಳೆ ಮತ್ತು ವೀರ ಯೋಧರಿಗೆ ಹೆಸರಾದ ಕೊಡಗು ಜಿಲ್ಲೆ ಹಾಕಿಗೂ ಸುಪ್ರಸಿದ್ಧ. ಮುಖ್ಯವಾಗಿ ಇಲ್ಲಿ ಹಾಕಿ ಎಂಬುದು ಕೇವಲ ಕ್ರೀಡೆಯಲ್ಲ; ಕೊಡವ ಸಮುದಾಯವನ್ನು ಬೆಸೆಯುವ ಸಾಧನ.

ಕೊಡಗಿಗೂ ಹಾಕಿಗೂ ಅವಿನಾಭಾವ ಸಂಬಂಧ. ಕೊಡಗು ಜಿಲ್ಲೆಯನ್ನು ಭಾರತೀಯ ಹಾಕಿಯ ತೊಟ್ಟಿಲು ಎಂದೂ ಬಣ್ಣಿಸಲಾಗುತ್ತದೆ. 50ಕ್ಕೂ ಹೆಚ್ಚು ಕೊಡವರು ಅಂತಾರಾಷ್ಟ್ರೀಯ ಹಾಕಿ ಪಂದ್ಯಾವಳಿಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ, ಅವರಲ್ಲಿ 16 ಮಂದಿ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದಾರೆ. ಇಂತಹ ಕೊಡಗಿನಲ್ಲಿ ಮಾರ್ಚ್, ಏಪ್ರಿಲ್‌, ಮೇ ಬಂತೆಂದರೆ ಹಾಕಿ ಕ್ರೀಡೆಯ ಸಡಗರ ಮನೆಮಾಡುತ್ತದೆ. ‘ಕೊಡವ ಹಾಕಿ ಹಬ್ಬ’ ಅವಿಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾಗುತ್ತದೆ. ವಿಶೇಷವೆಂದರೆ ಕೊಡವ ಕುಟುಂಬಗಳ ನಡುವೆ ನಡೆಯುವ ಸೌದಾರ್ಹಯುತ ಟೂರ್ನಿ ಇದಾಗಿದೆ. ಬಹುಶಃ ಸಮುದಾಯಗಳ ನಡುವೆ ಬಾಂಧವ್ಯ ಬೆಸೆಯುವ ಇಂತಹ ಹಾಕಿ ಟೂರ್ನಿ ಮತ್ತೆಲ್ಲೂ ಇರಲಾರದು.

ಪ್ರಪಂಚದ ಅತಿ ದೊಡ್ಡ ಸ್ಪರ್ಧೆ ಎಂದೇ ಪರಿಗಣಿಸಲ್ಪಟ್ಟಿರುವ ಈ ಹಾಕಿ ಹಬ್ಬವು ಗಿನ್ನಿಸ್‌ ದಾಖಲೆಗಳ ಪುಸ್ತಕದಲ್ಲಿ ಸೇರ್ಪಡೆಯಾಗಲು ನಿರ್ದೇಶಿಸಲ್ಪಟ್ಟಿದೆ. ಗಿನೆಸ್ ದಾಖಲೆಗಳ ಪುಸ್ತಕಕ್ಕೆ ಭಾರತೀಯ ಪರ್ಯಾಯವಾಗಿರುವ ಲಿಮ್ಕಾ ದಾಖಲೆಗಳ ಪುಸ್ತಕದಲ್ಲಿ ಈಗಾಗಲೇ ಉಲ್ಲೇಖಗೊಂಡಿದೆ. ಇಂತಹ ಅದ್ಭುತ ಕ್ಷಣಕ್ಕೆ ಮಾರ್ಚ್ 18ರಂದು ನಾಪೊಕ್ಲುವಿನಲ್ಲಿ ಚಾಲನೆ ನೀಡಲಾಗುತ್ತಿದೆ. ಏಪ್ರಿಲ್‌ 9ರವರೆಗೆ ಟೂರ್ನಿ ನಡೆಯಲಿದೆ.

ಪ್ರತಿ ವರ್ಷ ಒಂದೊಂದು ಕೊಡವ ಕುಟುಂಬ ಆತಿಥ್ಯ ವಹಿಸಿ ನಡೆಸಿಕೊಂಡು ಬರುತ್ತಿರುವ ‘ಕೊಡವ ಹಾಕಿ ಹಬ್ಬ’ದ ಜವಾಬ್ದಾರಿಯನ್ನು ಈ ವರ್ಷ ‘ಅಪ್ಪಚೆಟ್ಟೋಳಂಡ’ ಫ್ಯಾಮಿಲಿ ವಹಿಸಿಕೊಂಡಿದೆ. ಯಾವ ಕುಟುಂಬ ಟೂರ್ನಿಯ ಮುಂದಾಳತ್ವ ವಹಿಸಿರುತ್ತದೆಯೋ ಈ ಕುಟುಂಬದ ಹೆಸರಲ್ಲಿ ಕಪ್‌ ನೀಡಲಾಗುತ್ತದೆ.

ಕೊಡವ ಕುಟುಂಬಗಳನ್ನು ಬೆಸೆಯುವ ವಿನೂತನ ಹಬ್ಬವಿದು

ಭಾರತೀಯ ಸ್ಟೇಟ್ ಬ್ಯಾಂಕಿನ ನಿವೃತ್ತ ಉದ್ಯೋಗಿ ಹಾಗೂ ಪ್ರಥಮ ದರ್ಜೆಯ ಹಾಕಿ ಆಟದ ತೀರ್ಪುಗಾರರಾಗಿದ್ದ ಪಾಂಡಂಡ ಕುಟ್ಟಪ್ಪ- ಕಾಶಿ ಸಹೋದರರ ಕನಸಿನ ಕೂಸಾಗಿ ಕೊಡವ ಹಾಕಿ ಕಪ್‌ 1997ರಲ್ಲಿ ಆರಂಭವಾಯಿತು. ವಿರಾಜಪೇಟೆಯ ಸಮೀಪದ ಕರಡ ಗ್ರಾಮದ ಮೈದಾನದಲ್ಲಿ ನಡೆದ ‘ಪಾಡಂಡ ಕಪ್’ ಎಂದು ಕರೆಯಲ್ಪಟ್ಟ ಈ ಟೂರ್ನಿಯಲ್ಲಿ 60 ಕುಟುಂಬಗಳು ಪಾಲ್ಗೊಂಡಿದ್ದವು. ಈ ಸ್ಪರ್ಧೆಯ ಪ್ರಪ್ರಥಮ ಉದ್ಘಾಟನಾ ಸಮಾರಂಭದ ಆರ್ಥಿಕ ವೆಚ್ಚವನ್ನು ಕುಟ್ಟಪ್ಪನವರೇ ಭರಿಸಿದರು. ನಂತರದ ವರ್ಷಗಳಲ್ಲಿ 250-300ಕ್ಕೂ ಹೆಚ್ಚು ಕುಟುಂಬಗಳು ಈ ಹಬ್ಬದಲ್ಲಿ ಭಾಗವಹಿಸುತ್ತಾ ಬಂದಿವೆ.

ವರ್ಷದಿಂದ ವರ್ಷಕ್ಕೆ ಈ ಹಾಕಿ ಹಬ್ಬದಲ್ಲಿ ಪಾಲ್ಗೊಳ್ಳುವ ಕೊಡವ ಕುಟುಂಬಗಳ ಸಂಖ್ಯೆ ಹೆಚ್ಚುತ್ತಿದೆ. ಜಿಲ್ಲೆಯ ಹೊರಗಿರುವ ಕೊಡವ ಸದಸ್ಯರೂ ತಮ್ಮ ಕುಟುಂಬದ ಆಟದಲ್ಲಿ ಭಾಗವಹಿಸಲು ತಮ್ಮ ನೌಕರಿಗೆ ರಜೆಯಿತ್ತು ಬರುತ್ತಾರೆ. ಹಬ್ಬದ ಉದ್ಘಾಟನಾ ಮತ್ತು ಸಮಾರೋಪ ಸಮಾರಂಭಗಳು ಕೊಡವರ ವಿವಿಧ ನೃತ್ಯ ಮತ್ತು ಕೋಲಾಟಗಳಿಂದ ಕೂಡಿರುತ್ತದೆ.

ಪಾಂಡಂಡ, ಕೋಡಿರ, ಬಲ್ಲಚಂಡ, ಚೆಪ್ಪುಡಿರ, ನೆಲ್ಲಮಕ್ಕಡ, ಚೆಕ್ಕೆರ, ಕಲಿಯಂಡ, ಮಾಳೆಯಂಡ, ಬಿದ್ದಂಡ,  ಕಳ್ಳಿಚಂಡ, ಮಂಡೇಟಿರ, ಅಳಮೇಂಗಡ, ಮಂಡೇಪಂಡ, ಮನೆಯಪಂಡ, ಮಚ್ಚಾಮಾಡ, ಐಚೆಟ್ಟಿರ, ಮಾದಂಡ ಮೊದಲಾದ ಕೊಡವ ಕುಟುಂಬಗಳು ಈವರೆಗಿನ ಕೊಡವ ಹಾಕಿ ಟೂರ್ನಿಗಳ ಆತಿಥ್ಯ ವಹಿಸಿವೆ. ಪ್ರತಿ ವರ್ಷ ಟೂರ್ನಿ ಮುಗಿದ ನಂತರ ಮುಂದಿನ ವರ್ಷದ ಆತಿಥ್ಯವನ್ನು ಯಾರು ವಹಿಸಬೇಕೆಂಬ ನಿರ್ಣಯ ಮಾಡಲಾಗುತ್ತದೆ.

ಕರಡ, ಕಡಂಗ, ಕಾಕೋಟುಪರಂಬು, ಪೊನ್ನಂಪೇಟೆ, ಅಮ್ಮತ್ತಿ, ಹುದಿಕೇರಿ, ನಾಪ್ಲೊಕ್ಲು, ಮಾದಾಪುರ, ಮಡಿಕೇರಿ, ಬಾಳುಗೋಡು ಮೊದಲಾದ ಸ್ಥಳಗಳಲ್ಲಿ ಟೂರ್ನಿಯನ್ನು ಆಯೋಜಿಸಲಾಗಿದೆ. ಕೂತಂಡ, ನೆಲ್ಲಮಕ್ಕಳ, ಚೆಪ್ಪುಡಿರ, ಕೋಣೇರಿರ, ಮಚ್ಚಾಮಾಡ, ಅಂಜಪರವಂಡ, ಮುಕ್ಕಾಟಿರ, ಕಲಿಯಂಡ ಇತರ ಕುಟುಂಬಗಳು ಟೂರ್ನಿಯಲ್ಲಿ ಕಪ್‌ ಗೆದ್ದಿವೆ.

ಈ ಟೂರ್ನಿಯ ವಿಶೇಷವೆಂದರೆ ಒಂದು ತಂಡದ ಆಟಗಾರರೆಲ್ಲರೂ ಒಂದೇ ಮನೆತನಕ್ಕೆ ಸೇರಿದವರಾಗಿರಬೇಕು; ಪ್ರತಿಯೊಬ್ಬರೂ ಆಟದ ಸಂಪೂರ್ಣ ಪೋಷಾಕು ಪರಿಕರಗಳನ್ನು ಧರಿಸಿರಬೇಕು; ಸ್ತ್ರೀಯರೂ ಆಟದಲ್ಲಿ ಭಾಗವಹಿಸಬಹುದು; ವಿವಾಹಿತ ಮಹಿಳೆಯರು ತಾವು ತವರು ಮನೆತನವನ್ನು ಪ್ರತಿನಿಧಿಸಬೇಕೋ ಅಥವಾ ಗಂಡನ ಮನೆಯನ್ನು ಪ್ರತಿನಿಧಿಸಬೇಕೋ ಎಂಬುದನ್ನು ಅವರೇ ನಿರ್ಧರಿಸಬೇಕು ಎಂಬ ನಿಯಮಗಳನ್ನು ರೂಪಿಸಲಾಗಿರುತ್ತದೆ.

ಕೋವಿಡ್ ಬಿಕ್ಕಟ್ಟಿನ ನಂತರ ಸಂಭ್ರಮ

ಕೋವಿಡ್‌ ಮತ್ತು ಪ್ರಾಕೃತಿಕ ಬಿಕ್ಕಟ್ಟಿನಿಂದ ನಲುಗು ಹೋಗಿದ್ದ ಕೊಡಗು ಜಿಲ್ಲೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಕೊಡವ ಹಾಕಿ ಉತ್ಸವ ಆಯೋಜನೆಯಾಗಿರಲಿಲ್ಲ. ಅಂತೂ ಮತ್ತೆ ಸಂಭ್ರಮ ಮನೆ ಮಾಡಿದೆ. ‘ಅಪ್ಪಚೆಟ್ಟೋಳಂಡ ಹಾಕಿ ಕಪ್‌’ಗೆ ಸೆಣಸಾಡಲು 336 ತಂಡಗಳು ಪಾಲ್ಗೊಳ್ಳುತ್ತಿವೆ. 22 ವರ್ಷಗಳ ಇತಿಹಾಸವಿರುವ ಈ ಟೂರ್ನಿಗೆ ದಿನಗಣನೆ ಆರಂಭವಾಗಲಿದ್ದು ಮಾರ್ಚ್ 18ರಿಂದ ಕೊಡಗು ಜಿಲ್ಲೆಯ ನಾಪೊಕ್ಲು ಈ ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಗಲಿದೆ.

ಇದನ್ನೂ ಓದಿರಿ: ಇದು ಕ್ರಿಕೆಟ್ ಪಂದ್ಯವೋ ರಾಜಕೀಯ ರ್‍ಯಾಲಿಯೋ?: ಬಿಜೆಪಿಯವರೇ ಟಿಕೆಟ್‌ ಖರೀದಿಸಿದ ಕಥೆ!

ಎಲ್ಲಾ ಕೊಡವ ಕುಟುಂಬಗಳು ಇದರಲ್ಲಿ ಭಾಗಿಯಾಗುವಂತೆ ಅಪ್ಪಚೆಟ್ಟೋಳಂಡ ಫ್ಯಾಮಿಲಿ ಆಹ್ವಾನ ನೀಡಿದೆ. ಕರ್ನಾಟಕ ಸರ್ಕಾರದ ಸಹಕಾರವೂ ಈ ಟೂರ್ನಿಗಿದೆ. ಸುಮಾರು ಒಂದೂವರೆ ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜು ಮಾಡಲಾಗಿದ್ದು ಕರ್ನಾಟಕ ಸರ್ಕಾರ 1 ಕೋಟಿ ರೂ. ಮಂಜೂರು ಮಾಡಿದೆ. ಸನ್‌ಫ್ಯೂರ್‌ ಸಂಸ್ಥೆ ಪ್ರಾಯೋಜಕತ್ವ ವಹಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಿವಿಧ ಸಂಘಸಂಸ್ಥೆಗಳು, ದಾನಿಗಳು ಆರ್ಥಿಕ ನೆರವು ನೀಡಿದ್ದಾರೆ.

ಮಾರ್ಚ್ 18ರಂದು ಮಧ್ಯಾಹ್ನ 2.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟೂರ್ನಿಗೆ ಚಾಲನೆ ನೀಡಲಿದ್ದಾರೆ. ನಾಪೊಕ್ಲುವಿನಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್‌ ವ್ಯಾಪ್ತಿಗೆ ಸೇರಿದ ಜನರಲ್ ಕೆ.ಎಸ್.ತಿಮ್ಮಯ್ಯ ತಾಲ್ಲೂಕು ಕ್ರೀಡಾಂಗಣದ 3 ಮೈದಾನದಲ್ಲಿ ಪಂದ್ಯಗಳು ನಡೆಯಲಿವೆ.

“ಪ್ರವಾಹ ಮತ್ತು ಸಾಂಕ್ರಾಮಿಕ ರೋಗದ ಬಿಕ್ಕಟ್ಟು ಎದುರಾದ ನಾಲ್ಕು ವರ್ಷಗಳ ವಿರಾಮದ ನಂತರ, ಕೊಡವ ಹಾಕಿ ಉತ್ಸವವು ನಡೆಯುತ್ತಿದ್ದು ಹಿಂದೆಂದಿಗಿಂತಲೂ ಉತ್ತಮವಾಗಿರುತ್ತದೆ ಎಂದು ತಿಳಿಸಲು ನಾವು ಉತ್ಸುಕರಾಗಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಟೂರ್ನಿಯು ಅದ್ಭುತವಾಗಿ ಆಯೋಜನೆಗೊಂಡಿದೆ ಎಂದು ಭರವಸೆ ನೀಡುತ್ತೇವೆ. ಭಾಗವಹಿಸುವವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನಾವು ಹೆಚ್ಚಿನ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದೇವೆ” ಎಂದು  ಅಪ್ಪಚೆಟ್ಟೋಳಂಡ ಹಾಕಿ ಹಬ್ಬದ ಕನ್ವೀನರ್‌ ಮನು ಮುತ್ತಪ್ಪ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...