Homeಚಳವಳಿಗೋದಿ ಮೀಡಿಯಾಗಳಿಗೆ ಸೆಡ್ಡು: ಸ್ವಂತ ಚಾನೆಲ್ ಆರಂಭಿಸಿದ ದೆಹಲಿಯ ಹೋರಾಟನಿರತ ರೈತರು!

ಗೋದಿ ಮೀಡಿಯಾಗಳಿಗೆ ಸೆಡ್ಡು: ಸ್ವಂತ ಚಾನೆಲ್ ಆರಂಭಿಸಿದ ದೆಹಲಿಯ ಹೋರಾಟನಿರತ ರೈತರು!

ಸದ್ಯಕ್ಕೆ ಯೂಟ್ಯೂಬ್‌ನಲ್ಲಿ Kisan Ekta Morcha ಹೆಸರಿನಲ್ಲಿ ಚಾನೆಲ್ ಆರಂಭವಾಗಿದ್ದು ಕೇವಲ 4 ದಿನಗಳಲ್ಲಿಯೇ 5.87 ಲಕ್ಷ ಚಂದಾದಾರರಾಗಿದ್ದಾರೆ.

- Advertisement -
- Advertisement -

ಕೇಂದ್ರದ ವಿವಾದಾತ್ಮಕ ಕೃಷಿ ಮಸೂದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯ ಗಡಿಗಳಲ್ಲಿ ಹೋರಾಡುತ್ತಿರುವ ರೈತರ ಪ್ರತಿಭಟನೆ 25ನೇ ದಿನಕ್ಕೆ ಕಾಲಿಟ್ಟಿದೆ. ರೈತರ ಹೋರಾಟಕ್ಕೆ ಹಲವೆಡೆಯಿಂದ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಆದರೆ ತಮ್ಮ ದಿಟ್ಟ ಹೋರಾಟವನ್ನು ಕೆಲ ಮಾಧ್ಯಮಗಳು ತೋರಿಸುತ್ತಿಲ್ಲ ಎಂದು ಅವನ್ನು ಗೋದಿ ಮೀಡಿಯಾ ಆರೋಪಿಸಿರುವ ರೈತರು ಅವುಗಳಿಗೆ ಸೆಡ್ಡು ಹೊಡೆದು ಸ್ವಂತ ಚಾನೆಲ್ ಆರಂಭಿಸಿದ್ದಾರೆ.

ಸದ್ಯಕ್ಕೆ ಯೂಟ್ಯೂಬ್‌ನಲ್ಲಿ Kisan Ekta Morcha ಹೆಸರಿನಲ್ಲಿ ಚಾನೆಲ್ ಆರಂಭವಾಗಿದ್ದು ಕೇವಲ 4 ದಿನಗಳಲ್ಲಿಯೇ 5.87 ಲಕ್ಷ ಚಂದಾದಾರರನ್ನು ಪಡೆದಿದ್ದಾರೆ. ಅದೇ ಹೆಸರಿನ ಫೇಸ್‌ಬುಕ್, ಟ್ವಿಟ್ಟರ್ ಅಕೌಂಟ್‌ಗಳನ್ನು ಸಹ ತೆರೆಯಲಾಗಿದ್ದು ತಲಾ ಒಂದು ಲಕ್ಷಕ್ಕೂ ಮೀರಿ ಫಾಲೋವರ್ಸ್ ಪಡೆದಿವೆ. ಹೋರಾಟದ ಎಲ್ಲಾ ವಿವರಗಳನ್ನು ಈ ಚಾನೆಲ್‌ಗಳ ಮೂಲಕ ನೀಡಲಾಗುತ್ತಿದೆ.

ಹೋರಾಟನಿರತ ರೈತರನ್ನು ಖಲಿಸ್ತಾನಿಗಳು, ಭಯೋತ್ಪಾದಕರೆಂಬಂತೆ ಕೆಲ ಮಾಧ್ಯಮಗಳು ಚಿತ್ರಿಸುತ್ತಿವೆ. ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ‘ಕೇವಲ 1 ಲಕ್ಷ ರೈತರಷ್ಟೇ ಹೋರಾಡುತ್ತಿದ್ದಾರೆ’ ಎಂದು ಹೇಳಿಕೆ ನೀಡಿದ್ದಾರೆ. ಅವುಗಳಿಗೆ ತಿರುಗೇಟು ನೀಡಲು ಮತ್ತು ಹೋರಾಟವನ್ನು ದೇಶಕ್ಕೆ ತಲುಪಿಸಲು ನಾವು ಈ ಚಾನೆಲ್‌ಗಳನ್ನು ಆರಂಭಿಸಿದ್ದೇವೆ. ಹಾಗಾಗಿ ಡಿಸೆಂಬರ್ 25 ರೊಳಗೆ ಒಂದು ಕೋಟಿ ಚಂದಾದಾರರಾಗುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ನಮ್ಮ ತಾಕತ್ತು ತೋರಿಸಬೇಕು. ದಯವಿಟ್ಟು ಚಂದಾದಾರರಾಗಿ ಎಂದು ಹೋರಾಟ ನಿರತ ರೈತರು ಕರೆ ನೀಡಿದ್ದಾರೆ.

ಟ್ವಿಟ್ಟರ್‌ ಮೂಲಕ ಪ್ರತಿ ಕ್ಷಣವೂ ಹೋರಾಟದಲ್ಲಿ ಏನಾಗುತ್ತಿದೆ ಎಂಬ ಮಾಹಿತಿ ನೀಡಲಾಗುತ್ತಿದೆ. ಯೂಟ್ಯೂಬ್‌ ಚಾನೆಲ್‌ನಲ್ಲಿ 21 ವಿಡಿಯೋಗಳನ್ನು ಅಪ್‌ಲೋಡ್ ಮಾಡಲಾಗಿದೆ. ನಂತರ ಪೂರ್ಣಪ್ರಮಾಣದಲ್ಲಿ ಚಾನೆಲ್‌ ಮಾಡಬೇಕೆಂದು ರೈತ ಹೋರಾಟಗಾರರು ಯೋಚಿಸಿತ್ತಿದ್ದಾರೆ.


ಇದನ್ನೂ ಓದಿ: ರೈತ ಹೋರಾಟದ ಚರ್ಚೆಯಿಂದ ತಪ್ಪಿಸಿಕೊಳ್ಳಲು ಅಧಿವೇಶನ ರದ್ದು: ಕೇಂದ್ರದ ವಿರುದ್ಧ ರಾವತ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...