Homeಮುಖಪುಟನಾಲ್ಕು ರಾಜ್ಯಗಳ 5 ವಿಧಾನಸಭಾ ಸ್ಥಾನಗಳ ಉಪಚುನಾವಣೆ: ಮುಂದುವರಿದ ಮತ ಎಣಿಕೆ

ನಾಲ್ಕು ರಾಜ್ಯಗಳ 5 ವಿಧಾನಸಭಾ ಸ್ಥಾನಗಳ ಉಪಚುನಾವಣೆ: ಮುಂದುವರಿದ ಮತ ಎಣಿಕೆ

- Advertisement -
- Advertisement -

ಗುಜರಾತ್, ಪಂಜಾಬ್, ಕೇರಳ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ ಒಟ್ಟು ಐದು ವಿಧಾನಸಭಾ ಸ್ಥಾನಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಇಂದು(ಜೂ.23) ನಡೆಯುತ್ತಿದೆ.

ಗುಜರಾತ್‌ನ ಎರಡು ವಿಧಾನಸಭಾ ಸ್ಥಾನಗಳಾದ ವಿಸಾವದರ್ ಮತ್ತು ಕಾಡಿ, ಪಂಜಾಬ್‌ನ ಲುಧಿಯಾನ ಪಶ್ಚಿಮ, ಪಶ್ಚಿಮ ಬಂಗಾಳದ ಕಾಳಿಗಂಜ್ ಮತ್ತು ಕೇರಳದ ನಿಲಂಬೂರ್ ವಿಧಾನಸಭಾ ಕ್ಷೇತ್ರಗಳಿಗೆ ಜೂನ್ 19ರಂದು ಮತದಾನ ನಡೆದಿತ್ತು.

ಈ ಸುದ್ದಿ ಬರೆಯುವ ಹೊತ್ತಿಗೆ (ಮಧ್ಯಾಹ್ನ 12 ಗಂಟೆ) ಭಾರತೀಯ ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಗೊಂಡ ಮಾಹಿತಿ ಪ್ರಕಾರ, ಗುಜರಾತ್‌ನ ಕಾಡಿಯಲ್ಲಿ ಬಿಜೆಪಿ, ವಿಸಾವದರ್‌ನಲ್ಲಿ ಎಎಪಿ. ಕೇರಳದ ನಿಲಂಬೂರ್‌ನಲ್ಲಿ ಯುಡಿಎಫ್‌, ಪಶ್ಚಿಮ ಬಂಗಾಳದ ಕಾಳಿಗಂಜ್‌ನಲ್ಲಿ ಟಿಎಂಸಿ, ಲುದಿಯಾನ ಪಶ್ವಿಮದಲ್ಲಿ ಎಎಪಿ ಮುನ್ನಡೆ ಸಾಧಿಸಿದೆ ಎಂದು ತಿಳಿದು ಬಂದಿದೆ.

ಗುಜರಾತ್‌ನ ವಿಸಾವದರ್ ಕ್ಷೇತ್ರದಲ್ಲಿ ಶೇ. 56.89 ಮತ್ತು ಕಾಡಿ ಕ್ಷೇತ್ರದಲ್ಲಿ ಶೇ. 57.90 ರಷ್ಟು ಮತದಾನವಾಗಿದೆ.

ಕೇರಳದ ನಿಲಂಬೂರ್‌ನಲ್ಲಿ ಶೇ. 75.27, ಪಶ್ಚಿಮ ಬಂಗಾಳದ ಕಾಳಿಗಂಜ್‌ನಲ್ಲಿ ಶೇ. 69.85 ಮತ್ತು ಪಂಜಾಬ್‌ನ ಲುಧಿಯಾನ ಪಶ್ಚಿಮ ಕ್ಷೇತ್ರದಲ್ಲಿ ಶೇ. 51.33 ರಷ್ಟು ಮತ ಚಲಾವಣೆಯಾಗಿದೆ.

ಹಾಲಿ ಶಾಸಕರ ನಿಧನದಿಂದಾಗಿ ಗುಜರಾತ್, ಪಶ್ಚಿಮ ಬಂಗಾಳ ಮತ್ತು ಪಂಜಾಬ್‌ನ ತಲಾ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಸಬೇಕಾಗಿತ್ತು. ಶಾಸಕರ ರಾಜೀನಾಮೆಯಿಂದಾಗಿ ಕೇರಳ ಮತ್ತು ಗುಜರಾತ್‌ನ ತಲಾ ಒಂದೊಂದು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದೆ.

ಗುಜರಾತ್‌ನ ಕಾಡಿಯಲ್ಲಿ ಬಿಜೆಪಿ ರಾಜೇಂದ್ರ ಚಾವ್ಡಾ, ಕಾಂಗ್ರೆಸ್‌ ಮಾಜಿ ಶಾಸಕ ರಮೇಶ್ ಚಾವ್ಡಾ ಮತ್ತು ಎಎಪಿ ಜಗದೀಶ್ ಚಾವ್ಡಾ ಅವರನ್ನು ಕಣಕ್ಕಿಳಿಸಿದೆ.

ವಿಸಾವದರ್‌ನಲ್ಲಿ ಎಎಪಿಯ ಗೋಪಾಲ್ ಇಟಾಲಿಯಾ ಮತ್ತು ಕಾಂಗ್ರೆಸ್‌ನ ನಿತಿನ್ ರಾನ್‌ಪಾರಿಯಾ ವಿರುದ್ಧ ಬಿಜೆಪಿ ಮಾಜಿ ಜುನಾಗಡ್ ಜಿಲ್ಲಾ ಅಧ್ಯಕ್ಷ ಕಿರಿತ್ ಪಟೇಲ್ ಅವರಿಗೆ ಟಿಕೆಟ್ ಕೊಟ್ಟಿದೆ.

ಪಶ್ಚಿಮ ಬಂಗಾಳದ ಕಾಳಿಗಂಜ್‌ನಲ್ಲಿ ಎಡಪಕ್ಷಗಳ ಬೆಂಬಲದೊಂದಿಗೆ ಕಾಂಗ್ರೆಸ್ ಅಭ್ಯರ್ಥಿ ಕಬಿಲ್ ಉದ್ದೀನ್ ಶೇಖ್, ತೃಣಮೂಲ ಕಾಂಗ್ರೆಸ್‌ನ ಅಲಿಫಾ ಅಹ್ಮದ್ ಮತ್ತು ಬಿಜೆಪಿಯ ಆಶಿಶ್ ಘೋಷ್ ಸ್ಪರ್ಧೆಯಲ್ಲಿದ್ದಾರೆ.

ಕೇರಳದ ನಿಲಂಬೂರ್‌ನಲ್ಲಿ ಆಡಳಿತಾರೂಢ ಎಲ್‌ಡಿಎಫ್ ಎಂ. ಸ್ವರಾಜ್ ಅವರನ್ನು ಕಣಕ್ಕಿಳಿಸಿದರೆ, ಕಾಂಗ್ರೆಸ್ ನೇತೃತ್ವದ ಯುಡಿಎಫ್‌ನಿಂದ ಆರ್ಯದನ್ ಶೌಕತ್, ತೃಣಮೂಲ ಕಾಂಗ್ರೆಸ್‌ನಿಂದ ಪಿ.ವಿ. ಅನ್ವರ್ ಮತ್ತು ಬಿಜೆಪಿ ನೇತೃತ್ವದ ಎನ್‌ಡಿಎಯಿಂದ ಮೋಹನ್ ಜಾರ್ಜ್ ಕಣದಲ್ಲಿದ್ದಾರೆ.

ನಿಲಂಬೂರ್‌ನಲ್ಲಿ ಒಟ್ಟು ಹತ್ತು ಮಂದಿ ಈ ಚುನಾವಣೆಗೆ ಸ್ಪರ್ಧಿಸಿದ್ದು, ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿರುವ ಕಾರಣ, ಆಡಳಿತಾರೂಢ ಎಲ್‌ಡಿಎಫ್‌ಗೆ ತನ್ನ ಭವಿಷ್ಯದ ದೃಷ್ಠಿಯಿಂದ ಅಗ್ನಿ ಪರೀಕ್ಷೆಯಾಗಿದೆ.

ಲುಧಿಯಾನ ಪಶ್ಚಿಮ ಉಪಚುನಾವಣೆಯಲ್ಲಿ ಎಎಪಿಯಿಂದ ಸಂಜೀವ್ ಅರೋರಾ, ಕಾಂಗ್ರೆಸ್‌ನಿಂದ ಭರತ್ ಭೂಷಣ್ ಆಶು, ಬಿಜೆಪಿಯಿಂದ ಜೀವನ್ ಗುಪ್ತಾ ಮತ್ತು ಶಿರೋಮಣಿ ಅಕಾಲಿದಳ (ಎಸ್‌ಎಡಿ) ನಿಂದ ಪರುಪ್ಕರ್ ಸಿಂಗ್ ಘುಮ್ಮನ್ ನಡುವೆ ಚತುಷ್ಕೋನ ಸ್ಪರ್ಧೆ ಏರ್ಪಟ್ಟಿದೆ.

ಅರೋರಾ ಎಎಪಿಯ ರಾಜ್ಯಸಭಾ ಅಭ್ಯರ್ಥಿಯಾಗಿದ್ದು, ಅರೋರಾ ಗೆದ್ದರೆ ವಿಧಾನಸಭೆಗೆ ಆಯ್ಕೆಯಾದರೆ ಅರವಿಂದ್ ಕೇಜ್ರಿವಾಲ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡುವ ಯೋಚನೆಯಲ್ಲಿ ಎಎಪಿ ಇದೆ. ಆದರೆ, ಎಎಪಿ ನಾಯಕರು ಆ ರೀತಿಯ ಲೆಕ್ಕಾಚಾರ ಇಲ್ಲ ಎಂದಿದ್ದಾರೆ. ಲುಧಿಯಾನ ಪಶ್ಚಿಮ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಖಾಲ್ಸಾ ಮಹಿಳಾ ಕಾಲೇಜಿನಲ್ಲಿ ನಡೆಯುತ್ತಿದೆ.

ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನಿ ಪ್ರಜೆಗಳು: ಎನ್‌ಐಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...