Homeಮುಖಪುಟನಾಲ್ಕು ರಾಜ್ಯಗಳ 5 ವಿಧಾನಸಭಾ ಸ್ಥಾನಗಳ ಉಪಚುನಾವಣೆ: ಮುಂದುವರಿದ ಮತ ಎಣಿಕೆ

ನಾಲ್ಕು ರಾಜ್ಯಗಳ 5 ವಿಧಾನಸಭಾ ಸ್ಥಾನಗಳ ಉಪಚುನಾವಣೆ: ಮುಂದುವರಿದ ಮತ ಎಣಿಕೆ

- Advertisement -
- Advertisement -

ಗುಜರಾತ್, ಪಂಜಾಬ್, ಕೇರಳ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ ಒಟ್ಟು ಐದು ವಿಧಾನಸಭಾ ಸ್ಥಾನಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಇಂದು(ಜೂ.23) ನಡೆಯುತ್ತಿದೆ.

ಗುಜರಾತ್‌ನ ಎರಡು ವಿಧಾನಸಭಾ ಸ್ಥಾನಗಳಾದ ವಿಸಾವದರ್ ಮತ್ತು ಕಾಡಿ, ಪಂಜಾಬ್‌ನ ಲುಧಿಯಾನ ಪಶ್ಚಿಮ, ಪಶ್ಚಿಮ ಬಂಗಾಳದ ಕಾಳಿಗಂಜ್ ಮತ್ತು ಕೇರಳದ ನಿಲಂಬೂರ್ ವಿಧಾನಸಭಾ ಕ್ಷೇತ್ರಗಳಿಗೆ ಜೂನ್ 19ರಂದು ಮತದಾನ ನಡೆದಿತ್ತು.

ಈ ಸುದ್ದಿ ಬರೆಯುವ ಹೊತ್ತಿಗೆ (ಮಧ್ಯಾಹ್ನ 12 ಗಂಟೆ) ಭಾರತೀಯ ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಗೊಂಡ ಮಾಹಿತಿ ಪ್ರಕಾರ, ಗುಜರಾತ್‌ನ ಕಾಡಿಯಲ್ಲಿ ಬಿಜೆಪಿ, ವಿಸಾವದರ್‌ನಲ್ಲಿ ಎಎಪಿ. ಕೇರಳದ ನಿಲಂಬೂರ್‌ನಲ್ಲಿ ಯುಡಿಎಫ್‌, ಪಶ್ಚಿಮ ಬಂಗಾಳದ ಕಾಳಿಗಂಜ್‌ನಲ್ಲಿ ಟಿಎಂಸಿ, ಲುದಿಯಾನ ಪಶ್ವಿಮದಲ್ಲಿ ಎಎಪಿ ಮುನ್ನಡೆ ಸಾಧಿಸಿದೆ ಎಂದು ತಿಳಿದು ಬಂದಿದೆ.

ಗುಜರಾತ್‌ನ ವಿಸಾವದರ್ ಕ್ಷೇತ್ರದಲ್ಲಿ ಶೇ. 56.89 ಮತ್ತು ಕಾಡಿ ಕ್ಷೇತ್ರದಲ್ಲಿ ಶೇ. 57.90 ರಷ್ಟು ಮತದಾನವಾಗಿದೆ.

ಕೇರಳದ ನಿಲಂಬೂರ್‌ನಲ್ಲಿ ಶೇ. 75.27, ಪಶ್ಚಿಮ ಬಂಗಾಳದ ಕಾಳಿಗಂಜ್‌ನಲ್ಲಿ ಶೇ. 69.85 ಮತ್ತು ಪಂಜಾಬ್‌ನ ಲುಧಿಯಾನ ಪಶ್ಚಿಮ ಕ್ಷೇತ್ರದಲ್ಲಿ ಶೇ. 51.33 ರಷ್ಟು ಮತ ಚಲಾವಣೆಯಾಗಿದೆ.

ಹಾಲಿ ಶಾಸಕರ ನಿಧನದಿಂದಾಗಿ ಗುಜರಾತ್, ಪಶ್ಚಿಮ ಬಂಗಾಳ ಮತ್ತು ಪಂಜಾಬ್‌ನ ತಲಾ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಸಬೇಕಾಗಿತ್ತು. ಶಾಸಕರ ರಾಜೀನಾಮೆಯಿಂದಾಗಿ ಕೇರಳ ಮತ್ತು ಗುಜರಾತ್‌ನ ತಲಾ ಒಂದೊಂದು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದೆ.

ಗುಜರಾತ್‌ನ ಕಾಡಿಯಲ್ಲಿ ಬಿಜೆಪಿ ರಾಜೇಂದ್ರ ಚಾವ್ಡಾ, ಕಾಂಗ್ರೆಸ್‌ ಮಾಜಿ ಶಾಸಕ ರಮೇಶ್ ಚಾವ್ಡಾ ಮತ್ತು ಎಎಪಿ ಜಗದೀಶ್ ಚಾವ್ಡಾ ಅವರನ್ನು ಕಣಕ್ಕಿಳಿಸಿದೆ.

ವಿಸಾವದರ್‌ನಲ್ಲಿ ಎಎಪಿಯ ಗೋಪಾಲ್ ಇಟಾಲಿಯಾ ಮತ್ತು ಕಾಂಗ್ರೆಸ್‌ನ ನಿತಿನ್ ರಾನ್‌ಪಾರಿಯಾ ವಿರುದ್ಧ ಬಿಜೆಪಿ ಮಾಜಿ ಜುನಾಗಡ್ ಜಿಲ್ಲಾ ಅಧ್ಯಕ್ಷ ಕಿರಿತ್ ಪಟೇಲ್ ಅವರಿಗೆ ಟಿಕೆಟ್ ಕೊಟ್ಟಿದೆ.

ಪಶ್ಚಿಮ ಬಂಗಾಳದ ಕಾಳಿಗಂಜ್‌ನಲ್ಲಿ ಎಡಪಕ್ಷಗಳ ಬೆಂಬಲದೊಂದಿಗೆ ಕಾಂಗ್ರೆಸ್ ಅಭ್ಯರ್ಥಿ ಕಬಿಲ್ ಉದ್ದೀನ್ ಶೇಖ್, ತೃಣಮೂಲ ಕಾಂಗ್ರೆಸ್‌ನ ಅಲಿಫಾ ಅಹ್ಮದ್ ಮತ್ತು ಬಿಜೆಪಿಯ ಆಶಿಶ್ ಘೋಷ್ ಸ್ಪರ್ಧೆಯಲ್ಲಿದ್ದಾರೆ.

ಕೇರಳದ ನಿಲಂಬೂರ್‌ನಲ್ಲಿ ಆಡಳಿತಾರೂಢ ಎಲ್‌ಡಿಎಫ್ ಎಂ. ಸ್ವರಾಜ್ ಅವರನ್ನು ಕಣಕ್ಕಿಳಿಸಿದರೆ, ಕಾಂಗ್ರೆಸ್ ನೇತೃತ್ವದ ಯುಡಿಎಫ್‌ನಿಂದ ಆರ್ಯದನ್ ಶೌಕತ್, ತೃಣಮೂಲ ಕಾಂಗ್ರೆಸ್‌ನಿಂದ ಪಿ.ವಿ. ಅನ್ವರ್ ಮತ್ತು ಬಿಜೆಪಿ ನೇತೃತ್ವದ ಎನ್‌ಡಿಎಯಿಂದ ಮೋಹನ್ ಜಾರ್ಜ್ ಕಣದಲ್ಲಿದ್ದಾರೆ.

ನಿಲಂಬೂರ್‌ನಲ್ಲಿ ಒಟ್ಟು ಹತ್ತು ಮಂದಿ ಈ ಚುನಾವಣೆಗೆ ಸ್ಪರ್ಧಿಸಿದ್ದು, ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿರುವ ಕಾರಣ, ಆಡಳಿತಾರೂಢ ಎಲ್‌ಡಿಎಫ್‌ಗೆ ತನ್ನ ಭವಿಷ್ಯದ ದೃಷ್ಠಿಯಿಂದ ಅಗ್ನಿ ಪರೀಕ್ಷೆಯಾಗಿದೆ.

ಲುಧಿಯಾನ ಪಶ್ಚಿಮ ಉಪಚುನಾವಣೆಯಲ್ಲಿ ಎಎಪಿಯಿಂದ ಸಂಜೀವ್ ಅರೋರಾ, ಕಾಂಗ್ರೆಸ್‌ನಿಂದ ಭರತ್ ಭೂಷಣ್ ಆಶು, ಬಿಜೆಪಿಯಿಂದ ಜೀವನ್ ಗುಪ್ತಾ ಮತ್ತು ಶಿರೋಮಣಿ ಅಕಾಲಿದಳ (ಎಸ್‌ಎಡಿ) ನಿಂದ ಪರುಪ್ಕರ್ ಸಿಂಗ್ ಘುಮ್ಮನ್ ನಡುವೆ ಚತುಷ್ಕೋನ ಸ್ಪರ್ಧೆ ಏರ್ಪಟ್ಟಿದೆ.

ಅರೋರಾ ಎಎಪಿಯ ರಾಜ್ಯಸಭಾ ಅಭ್ಯರ್ಥಿಯಾಗಿದ್ದು, ಅರೋರಾ ಗೆದ್ದರೆ ವಿಧಾನಸಭೆಗೆ ಆಯ್ಕೆಯಾದರೆ ಅರವಿಂದ್ ಕೇಜ್ರಿವಾಲ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡುವ ಯೋಚನೆಯಲ್ಲಿ ಎಎಪಿ ಇದೆ. ಆದರೆ, ಎಎಪಿ ನಾಯಕರು ಆ ರೀತಿಯ ಲೆಕ್ಕಾಚಾರ ಇಲ್ಲ ಎಂದಿದ್ದಾರೆ. ಲುಧಿಯಾನ ಪಶ್ಚಿಮ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಖಾಲ್ಸಾ ಮಹಿಳಾ ಕಾಲೇಜಿನಲ್ಲಿ ನಡೆಯುತ್ತಿದೆ.

ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನಿ ಪ್ರಜೆಗಳು: ಎನ್‌ಐಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪುಸ್ತಕ ಮನೆʼಯ ಅಂಕೇಗೌಡ ಸೇರಿ ರಾಜ್ಯದ ಮೂವರಿಗೆ ಪದ್ಮಶ್ರೀ ಪ್ರಶಸ್ತಿ

ಕರ್ನಾಟಕದ ಮೂವರು ಸೇರಿದಂತೆ ದೇಶದ ಒಟ್ಟು 45 ಸಾಧಕರನ್ನು 2026ನೇ ಸಾಲಿನ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ. ಮಂಡ್ಯ ಮೂಲದ ಪುಸ್ತಕ ಪ್ರೇಮಿ ಅಂಕೇಗೌಡ, ದಾವಣಗೆರೆಯ ಹಿಮೋಫಿಲಿಯಾ ಸೊಸೈಟಿಯ ವೈದ್ಯ...

ದೆಹಲಿ ಲೆಫ್ಟಿನೆಂಟ್ ಗವರ್ನರ್ ಮಾನನಷ್ಟ ಪ್ರಕರಣ : ಹೋರಾಟಗಾರ್ತಿ ಮೇಧಾ ಪಾಟ್ಕರ್ ಖುಲಾಸೆ

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು 20 ವರ್ಷಗಳ ಹಿಂದಿನ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಪರಿಸರ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರನ್ನು ದೆಹಲಿ ನ್ಯಾಯಾಲಯ ಶನಿವಾರ (ಜ.24) ಖುಲಾಸೆಗೊಳಿಸಿದೆ ಎಂದು ಬಾರ್...

ಆರ್‌ಜೆಡಿ ರಾಷ್ಟ್ರೀಯ ಕಾರ್ಯಕಾರಿ ಸಭೆ; ಕಾರ್ಯಕಾರಿ ಅಧ್ಯಕ್ಷರಾಗಿ ತೇಜಸ್ವಿ ನೇಮಕ

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಅವರ ಕಿರಿಯ ಪುತ್ರ ತೇಜಸ್ವಿ ಯಾದವ್ ಅವರನ್ನು, ಇಂದು (ಜ.25) ನಡೆದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಪಕ್ಷದ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಿಸಲಾಯಿತು. 'ಮಹಾಘಟಬಂಧನ್' 36...

ಹಿಂದುತ್ವ ಗುಂಪಿನಿಂದ ಕಿರುಕುಳ : ಪಿಜ್ಜಾ ಔಟ್‌ಲೆಟ್‌ನ ಎರಡನೇ ಮಹಡಿಯಿಂದ ಜಿಗಿದ ಜೋಡಿ

ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಹಿಂದುತ್ವ ಗುಂಪು ಕಿರುಕುಳ ನೀಡಿದ್ದರಿಂದ ಜೋಡಿಯೊಂದು ಪಿಜ್ಜಾ ಔಟ್‌ಲೆಟ್‌ನ ಎರಡನೇ ಮಹಡಿಯಿಂದ ಜಿಗಿದಿದ್ದು, ಈ ಸಂಬಂಧ ಎಂಟು ಮಂದಿಯ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ದಿ ನ್ಯೂ...

ಹಿಂದಿ ಚಿತ್ರಗಳು ತಮ್ಮ ಬೇರುಗಳನ್ನು ಕಳೆದುಕೊಂಡಿವೆ, ಹಣ ಆಧಾರಿತವಾಗಿವೆ: ಪ್ರಕಾಶ್ ರಾಜ್

ದೃಢ, ವಿಷಯಾಧಾರಿತ ಕಥೆ ನಿರೂಪಣೆಯಿಂದ ಪ್ರಶಂಸಿಸಲಾದ ಮಲಯಾಳಂ ಮತ್ತು ತಮಿಳು ಸಿನಿಮಾಗಳಿಗಿಂತ ಭಿನ್ನವಾಗಿ, ಹಿಂದಿ ಸಿನಿಮಾ ತನ್ನ ಬೇರುಗಳನ್ನು ಕಳೆದುಕೊಂಡಿದೆ. ಹೆಚ್ಚು ಹೆಚ್ಚು ನಕಲಿ ಮತ್ತು ಹಣ-ಆಧಾರಿತವಾಗುತ್ತಿದೆ ಎಂದು ನಟ ಪ್ರಕಾಶ್ ರಾಜ್...

ಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂ. ದರೋಡೆ: ಏನಿದು ಪ್ರಕರಣ..ಬೆಳಗಾವಿ ಎಸ್ಪಿ ಹೇಳಿದ್ದೇನು?

ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿಯಲ್ಲಿರುವ ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಚೋರ್ಲಾ ಘಾಟ್‌ನಲ್ಲಿ ಬರೋಬ್ಬರಿ 400 ಕೋಟಿ ರೂಪಾಯಿ ಹಣ ಸಾಗಿಸುತ್ತಿದ್ದ ಕಂಟೇನರ್‌ಗಳನ್ನು ದರೋಡೆ ಮಾಡಲಾಗಿದೆ ಎಂಬ ವಿಚಾರ ದೊಡ್ಡ ಮಟ್ಟದಲ್ಲಿ...

‘ಅಲೈಡ್ ಹೆಲ್ತ್ ಕೋರ್ಸ್‌ಗಳ ನೀಟ್ ಪರೀಕ್ಷೆಯಿಂದ ಬಡ ವಿದ್ಯಾರ್ಥಿಗಳಿಗೆ ಅನ್ಯಾಯ..’; ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ಅಲೈಡ್ ಹೆಲ್ತ್ ಕೋರ್ಸ್‌ಗಳ ಪ್ರವೇಶದಿಂದ ಹೊರಗಿಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು...

ಬಾಂಗ್ಲಾದೇಶ| ಗ್ಯಾರೇಜ್ ಒಳಗೆ ಮಲಗಿದ್ದ ಹಿಂದೂ ಯುವಕ ಜೀವಂತ ದಹನ

ಬಾಂಗ್ಲಾದೇಶದ ರಾಜಧಾನಿ ಢಾಕಾದಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ನರಸಿಂಗ್ಡಿಯಲ್ಲಿ ಗ್ಯಾರೇಜ್ ಒಳಗೆ ಮಲಗಿದ್ದ 23 ವರ್ಷದ ಹಿಂದೂ ವ್ಯಕ್ತಿ ಜೀವಂತವಾಗಿ ದಹನಗೊಂಡ ಘಟನೆ ನಡೆದಿದ್ದು, ಈ ಘಟನೆಯು ರಾಷ್ಟ್ರೀಯ ಚುನಾವಣೆಗೂ ಮುನ್ನ...

ಚುನಾವಣಾ ಆಯೋಗ ನಿರಂತರ ಒತ್ತಡ ಎದುರಿಸುತ್ತಿದೆ, ಅದರ ಸ್ವಾತಂತ್ರ್ಯ ರಕ್ಷಿಸಬೇಕಿದೆ : ಮಲ್ಲಿಕಾರ್ಜುನ ಖರ್ಗೆ

ಇತ್ತೀಚಿನ ದಿನಗಳಲ್ಲಿ, ಚುನಾವಣಾ ಆಯೋಗದಂತಹ ಸಂಸ್ಥೆಗಳು ನಿರಂತರ ಒತ್ತಡವನ್ನು ಎದುರಿಸುತ್ತಿವೆ. ಆದ್ದರಿಂದ ಪ್ರಜಾಪ್ರಭುತ್ವವು ಕೇವಲ ಉಳಿಯುವುದಲ್ಲದೆ, ನಿಜವಾಗಿಯೂ ಅಭಿವೃದ್ಧಿ ಹೊಂದುವಂತೆ ಅವುಗಳ ಸ್ವಾತಂತ್ರ್ಯವನ್ನು ರಕ್ಷಿಸುವುದು 'ನಮ್ಮ ಜವಾಬ್ದಾರಿ' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...

ಗುಜರಾತ್ ಸೇರಿದಂತೆ ಇತರ ರಾಜ್ಯಗಳಲ್ಲಿ ‘ಮತ ಕಳ್ಳತನ’ಕ್ಕೆ ಎಸ್‌ಐಆರ್‌ ಬಳಕೆ: ರಾಹುಲ್ ಗಾಂಧಿ

ದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ ಕುರಿತ ತಮ್ಮ ವಾಗ್ದಾಳಿಯನ್ನು ಲೋಕಸಭೆ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತೀವ್ರಗೊಳಿಸಿದ್ದಾರೆ. ಗುಜರಾತ್ ಸೇರಿದಂತೆ ಇತರ ರಾಜ್ಯಗಳಲ್ಲಿ...