Homeಮುಖಪುಟನಾಲ್ಕು ರಾಜ್ಯಗಳ 5 ವಿಧಾನಸಭಾ ಸ್ಥಾನಗಳ ಉಪಚುನಾವಣೆ: ಮುಂದುವರಿದ ಮತ ಎಣಿಕೆ

ನಾಲ್ಕು ರಾಜ್ಯಗಳ 5 ವಿಧಾನಸಭಾ ಸ್ಥಾನಗಳ ಉಪಚುನಾವಣೆ: ಮುಂದುವರಿದ ಮತ ಎಣಿಕೆ

- Advertisement -
- Advertisement -

ಗುಜರಾತ್, ಪಂಜಾಬ್, ಕೇರಳ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ ಒಟ್ಟು ಐದು ವಿಧಾನಸಭಾ ಸ್ಥಾನಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಇಂದು(ಜೂ.23) ನಡೆಯುತ್ತಿದೆ.

ಗುಜರಾತ್‌ನ ಎರಡು ವಿಧಾನಸಭಾ ಸ್ಥಾನಗಳಾದ ವಿಸಾವದರ್ ಮತ್ತು ಕಾಡಿ, ಪಂಜಾಬ್‌ನ ಲುಧಿಯಾನ ಪಶ್ಚಿಮ, ಪಶ್ಚಿಮ ಬಂಗಾಳದ ಕಾಳಿಗಂಜ್ ಮತ್ತು ಕೇರಳದ ನಿಲಂಬೂರ್ ವಿಧಾನಸಭಾ ಕ್ಷೇತ್ರಗಳಿಗೆ ಜೂನ್ 19ರಂದು ಮತದಾನ ನಡೆದಿತ್ತು.

ಈ ಸುದ್ದಿ ಬರೆಯುವ ಹೊತ್ತಿಗೆ (ಮಧ್ಯಾಹ್ನ 12 ಗಂಟೆ) ಭಾರತೀಯ ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಗೊಂಡ ಮಾಹಿತಿ ಪ್ರಕಾರ, ಗುಜರಾತ್‌ನ ಕಾಡಿಯಲ್ಲಿ ಬಿಜೆಪಿ, ವಿಸಾವದರ್‌ನಲ್ಲಿ ಎಎಪಿ. ಕೇರಳದ ನಿಲಂಬೂರ್‌ನಲ್ಲಿ ಯುಡಿಎಫ್‌, ಪಶ್ಚಿಮ ಬಂಗಾಳದ ಕಾಳಿಗಂಜ್‌ನಲ್ಲಿ ಟಿಎಂಸಿ, ಲುದಿಯಾನ ಪಶ್ವಿಮದಲ್ಲಿ ಎಎಪಿ ಮುನ್ನಡೆ ಸಾಧಿಸಿದೆ ಎಂದು ತಿಳಿದು ಬಂದಿದೆ.

ಗುಜರಾತ್‌ನ ವಿಸಾವದರ್ ಕ್ಷೇತ್ರದಲ್ಲಿ ಶೇ. 56.89 ಮತ್ತು ಕಾಡಿ ಕ್ಷೇತ್ರದಲ್ಲಿ ಶೇ. 57.90 ರಷ್ಟು ಮತದಾನವಾಗಿದೆ.

ಕೇರಳದ ನಿಲಂಬೂರ್‌ನಲ್ಲಿ ಶೇ. 75.27, ಪಶ್ಚಿಮ ಬಂಗಾಳದ ಕಾಳಿಗಂಜ್‌ನಲ್ಲಿ ಶೇ. 69.85 ಮತ್ತು ಪಂಜಾಬ್‌ನ ಲುಧಿಯಾನ ಪಶ್ಚಿಮ ಕ್ಷೇತ್ರದಲ್ಲಿ ಶೇ. 51.33 ರಷ್ಟು ಮತ ಚಲಾವಣೆಯಾಗಿದೆ.

ಹಾಲಿ ಶಾಸಕರ ನಿಧನದಿಂದಾಗಿ ಗುಜರಾತ್, ಪಶ್ಚಿಮ ಬಂಗಾಳ ಮತ್ತು ಪಂಜಾಬ್‌ನ ತಲಾ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಸಬೇಕಾಗಿತ್ತು. ಶಾಸಕರ ರಾಜೀನಾಮೆಯಿಂದಾಗಿ ಕೇರಳ ಮತ್ತು ಗುಜರಾತ್‌ನ ತಲಾ ಒಂದೊಂದು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದೆ.

ಗುಜರಾತ್‌ನ ಕಾಡಿಯಲ್ಲಿ ಬಿಜೆಪಿ ರಾಜೇಂದ್ರ ಚಾವ್ಡಾ, ಕಾಂಗ್ರೆಸ್‌ ಮಾಜಿ ಶಾಸಕ ರಮೇಶ್ ಚಾವ್ಡಾ ಮತ್ತು ಎಎಪಿ ಜಗದೀಶ್ ಚಾವ್ಡಾ ಅವರನ್ನು ಕಣಕ್ಕಿಳಿಸಿದೆ.

ವಿಸಾವದರ್‌ನಲ್ಲಿ ಎಎಪಿಯ ಗೋಪಾಲ್ ಇಟಾಲಿಯಾ ಮತ್ತು ಕಾಂಗ್ರೆಸ್‌ನ ನಿತಿನ್ ರಾನ್‌ಪಾರಿಯಾ ವಿರುದ್ಧ ಬಿಜೆಪಿ ಮಾಜಿ ಜುನಾಗಡ್ ಜಿಲ್ಲಾ ಅಧ್ಯಕ್ಷ ಕಿರಿತ್ ಪಟೇಲ್ ಅವರಿಗೆ ಟಿಕೆಟ್ ಕೊಟ್ಟಿದೆ.

ಪಶ್ಚಿಮ ಬಂಗಾಳದ ಕಾಳಿಗಂಜ್‌ನಲ್ಲಿ ಎಡಪಕ್ಷಗಳ ಬೆಂಬಲದೊಂದಿಗೆ ಕಾಂಗ್ರೆಸ್ ಅಭ್ಯರ್ಥಿ ಕಬಿಲ್ ಉದ್ದೀನ್ ಶೇಖ್, ತೃಣಮೂಲ ಕಾಂಗ್ರೆಸ್‌ನ ಅಲಿಫಾ ಅಹ್ಮದ್ ಮತ್ತು ಬಿಜೆಪಿಯ ಆಶಿಶ್ ಘೋಷ್ ಸ್ಪರ್ಧೆಯಲ್ಲಿದ್ದಾರೆ.

ಕೇರಳದ ನಿಲಂಬೂರ್‌ನಲ್ಲಿ ಆಡಳಿತಾರೂಢ ಎಲ್‌ಡಿಎಫ್ ಎಂ. ಸ್ವರಾಜ್ ಅವರನ್ನು ಕಣಕ್ಕಿಳಿಸಿದರೆ, ಕಾಂಗ್ರೆಸ್ ನೇತೃತ್ವದ ಯುಡಿಎಫ್‌ನಿಂದ ಆರ್ಯದನ್ ಶೌಕತ್, ತೃಣಮೂಲ ಕಾಂಗ್ರೆಸ್‌ನಿಂದ ಪಿ.ವಿ. ಅನ್ವರ್ ಮತ್ತು ಬಿಜೆಪಿ ನೇತೃತ್ವದ ಎನ್‌ಡಿಎಯಿಂದ ಮೋಹನ್ ಜಾರ್ಜ್ ಕಣದಲ್ಲಿದ್ದಾರೆ.

ನಿಲಂಬೂರ್‌ನಲ್ಲಿ ಒಟ್ಟು ಹತ್ತು ಮಂದಿ ಈ ಚುನಾವಣೆಗೆ ಸ್ಪರ್ಧಿಸಿದ್ದು, ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿರುವ ಕಾರಣ, ಆಡಳಿತಾರೂಢ ಎಲ್‌ಡಿಎಫ್‌ಗೆ ತನ್ನ ಭವಿಷ್ಯದ ದೃಷ್ಠಿಯಿಂದ ಅಗ್ನಿ ಪರೀಕ್ಷೆಯಾಗಿದೆ.

ಲುಧಿಯಾನ ಪಶ್ಚಿಮ ಉಪಚುನಾವಣೆಯಲ್ಲಿ ಎಎಪಿಯಿಂದ ಸಂಜೀವ್ ಅರೋರಾ, ಕಾಂಗ್ರೆಸ್‌ನಿಂದ ಭರತ್ ಭೂಷಣ್ ಆಶು, ಬಿಜೆಪಿಯಿಂದ ಜೀವನ್ ಗುಪ್ತಾ ಮತ್ತು ಶಿರೋಮಣಿ ಅಕಾಲಿದಳ (ಎಸ್‌ಎಡಿ) ನಿಂದ ಪರುಪ್ಕರ್ ಸಿಂಗ್ ಘುಮ್ಮನ್ ನಡುವೆ ಚತುಷ್ಕೋನ ಸ್ಪರ್ಧೆ ಏರ್ಪಟ್ಟಿದೆ.

ಅರೋರಾ ಎಎಪಿಯ ರಾಜ್ಯಸಭಾ ಅಭ್ಯರ್ಥಿಯಾಗಿದ್ದು, ಅರೋರಾ ಗೆದ್ದರೆ ವಿಧಾನಸಭೆಗೆ ಆಯ್ಕೆಯಾದರೆ ಅರವಿಂದ್ ಕೇಜ್ರಿವಾಲ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡುವ ಯೋಚನೆಯಲ್ಲಿ ಎಎಪಿ ಇದೆ. ಆದರೆ, ಎಎಪಿ ನಾಯಕರು ಆ ರೀತಿಯ ಲೆಕ್ಕಾಚಾರ ಇಲ್ಲ ಎಂದಿದ್ದಾರೆ. ಲುಧಿಯಾನ ಪಶ್ಚಿಮ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಖಾಲ್ಸಾ ಮಹಿಳಾ ಕಾಲೇಜಿನಲ್ಲಿ ನಡೆಯುತ್ತಿದೆ.

ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನಿ ಪ್ರಜೆಗಳು: ಎನ್‌ಐಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...