Homeಮುಖಪುಟನಾಲ್ಕು ರಾಜ್ಯಗಳ 5 ವಿಧಾನಸಭಾ ಸ್ಥಾನಗಳ ಉಪಚುನಾವಣೆ: ಮುಂದುವರಿದ ಮತ ಎಣಿಕೆ

ನಾಲ್ಕು ರಾಜ್ಯಗಳ 5 ವಿಧಾನಸಭಾ ಸ್ಥಾನಗಳ ಉಪಚುನಾವಣೆ: ಮುಂದುವರಿದ ಮತ ಎಣಿಕೆ

- Advertisement -
- Advertisement -

ಗುಜರಾತ್, ಪಂಜಾಬ್, ಕೇರಳ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ ಒಟ್ಟು ಐದು ವಿಧಾನಸಭಾ ಸ್ಥಾನಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಇಂದು(ಜೂ.23) ನಡೆಯುತ್ತಿದೆ.

ಗುಜರಾತ್‌ನ ಎರಡು ವಿಧಾನಸಭಾ ಸ್ಥಾನಗಳಾದ ವಿಸಾವದರ್ ಮತ್ತು ಕಾಡಿ, ಪಂಜಾಬ್‌ನ ಲುಧಿಯಾನ ಪಶ್ಚಿಮ, ಪಶ್ಚಿಮ ಬಂಗಾಳದ ಕಾಳಿಗಂಜ್ ಮತ್ತು ಕೇರಳದ ನಿಲಂಬೂರ್ ವಿಧಾನಸಭಾ ಕ್ಷೇತ್ರಗಳಿಗೆ ಜೂನ್ 19ರಂದು ಮತದಾನ ನಡೆದಿತ್ತು.

ಈ ಸುದ್ದಿ ಬರೆಯುವ ಹೊತ್ತಿಗೆ (ಮಧ್ಯಾಹ್ನ 12 ಗಂಟೆ) ಭಾರತೀಯ ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಗೊಂಡ ಮಾಹಿತಿ ಪ್ರಕಾರ, ಗುಜರಾತ್‌ನ ಕಾಡಿಯಲ್ಲಿ ಬಿಜೆಪಿ, ವಿಸಾವದರ್‌ನಲ್ಲಿ ಎಎಪಿ. ಕೇರಳದ ನಿಲಂಬೂರ್‌ನಲ್ಲಿ ಯುಡಿಎಫ್‌, ಪಶ್ಚಿಮ ಬಂಗಾಳದ ಕಾಳಿಗಂಜ್‌ನಲ್ಲಿ ಟಿಎಂಸಿ, ಲುದಿಯಾನ ಪಶ್ವಿಮದಲ್ಲಿ ಎಎಪಿ ಮುನ್ನಡೆ ಸಾಧಿಸಿದೆ ಎಂದು ತಿಳಿದು ಬಂದಿದೆ.

ಗುಜರಾತ್‌ನ ವಿಸಾವದರ್ ಕ್ಷೇತ್ರದಲ್ಲಿ ಶೇ. 56.89 ಮತ್ತು ಕಾಡಿ ಕ್ಷೇತ್ರದಲ್ಲಿ ಶೇ. 57.90 ರಷ್ಟು ಮತದಾನವಾಗಿದೆ.

ಕೇರಳದ ನಿಲಂಬೂರ್‌ನಲ್ಲಿ ಶೇ. 75.27, ಪಶ್ಚಿಮ ಬಂಗಾಳದ ಕಾಳಿಗಂಜ್‌ನಲ್ಲಿ ಶೇ. 69.85 ಮತ್ತು ಪಂಜಾಬ್‌ನ ಲುಧಿಯಾನ ಪಶ್ಚಿಮ ಕ್ಷೇತ್ರದಲ್ಲಿ ಶೇ. 51.33 ರಷ್ಟು ಮತ ಚಲಾವಣೆಯಾಗಿದೆ.

ಹಾಲಿ ಶಾಸಕರ ನಿಧನದಿಂದಾಗಿ ಗುಜರಾತ್, ಪಶ್ಚಿಮ ಬಂಗಾಳ ಮತ್ತು ಪಂಜಾಬ್‌ನ ತಲಾ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಸಬೇಕಾಗಿತ್ತು. ಶಾಸಕರ ರಾಜೀನಾಮೆಯಿಂದಾಗಿ ಕೇರಳ ಮತ್ತು ಗುಜರಾತ್‌ನ ತಲಾ ಒಂದೊಂದು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದೆ.

ಗುಜರಾತ್‌ನ ಕಾಡಿಯಲ್ಲಿ ಬಿಜೆಪಿ ರಾಜೇಂದ್ರ ಚಾವ್ಡಾ, ಕಾಂಗ್ರೆಸ್‌ ಮಾಜಿ ಶಾಸಕ ರಮೇಶ್ ಚಾವ್ಡಾ ಮತ್ತು ಎಎಪಿ ಜಗದೀಶ್ ಚಾವ್ಡಾ ಅವರನ್ನು ಕಣಕ್ಕಿಳಿಸಿದೆ.

ವಿಸಾವದರ್‌ನಲ್ಲಿ ಎಎಪಿಯ ಗೋಪಾಲ್ ಇಟಾಲಿಯಾ ಮತ್ತು ಕಾಂಗ್ರೆಸ್‌ನ ನಿತಿನ್ ರಾನ್‌ಪಾರಿಯಾ ವಿರುದ್ಧ ಬಿಜೆಪಿ ಮಾಜಿ ಜುನಾಗಡ್ ಜಿಲ್ಲಾ ಅಧ್ಯಕ್ಷ ಕಿರಿತ್ ಪಟೇಲ್ ಅವರಿಗೆ ಟಿಕೆಟ್ ಕೊಟ್ಟಿದೆ.

ಪಶ್ಚಿಮ ಬಂಗಾಳದ ಕಾಳಿಗಂಜ್‌ನಲ್ಲಿ ಎಡಪಕ್ಷಗಳ ಬೆಂಬಲದೊಂದಿಗೆ ಕಾಂಗ್ರೆಸ್ ಅಭ್ಯರ್ಥಿ ಕಬಿಲ್ ಉದ್ದೀನ್ ಶೇಖ್, ತೃಣಮೂಲ ಕಾಂಗ್ರೆಸ್‌ನ ಅಲಿಫಾ ಅಹ್ಮದ್ ಮತ್ತು ಬಿಜೆಪಿಯ ಆಶಿಶ್ ಘೋಷ್ ಸ್ಪರ್ಧೆಯಲ್ಲಿದ್ದಾರೆ.

ಕೇರಳದ ನಿಲಂಬೂರ್‌ನಲ್ಲಿ ಆಡಳಿತಾರೂಢ ಎಲ್‌ಡಿಎಫ್ ಎಂ. ಸ್ವರಾಜ್ ಅವರನ್ನು ಕಣಕ್ಕಿಳಿಸಿದರೆ, ಕಾಂಗ್ರೆಸ್ ನೇತೃತ್ವದ ಯುಡಿಎಫ್‌ನಿಂದ ಆರ್ಯದನ್ ಶೌಕತ್, ತೃಣಮೂಲ ಕಾಂಗ್ರೆಸ್‌ನಿಂದ ಪಿ.ವಿ. ಅನ್ವರ್ ಮತ್ತು ಬಿಜೆಪಿ ನೇತೃತ್ವದ ಎನ್‌ಡಿಎಯಿಂದ ಮೋಹನ್ ಜಾರ್ಜ್ ಕಣದಲ್ಲಿದ್ದಾರೆ.

ನಿಲಂಬೂರ್‌ನಲ್ಲಿ ಒಟ್ಟು ಹತ್ತು ಮಂದಿ ಈ ಚುನಾವಣೆಗೆ ಸ್ಪರ್ಧಿಸಿದ್ದು, ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿರುವ ಕಾರಣ, ಆಡಳಿತಾರೂಢ ಎಲ್‌ಡಿಎಫ್‌ಗೆ ತನ್ನ ಭವಿಷ್ಯದ ದೃಷ್ಠಿಯಿಂದ ಅಗ್ನಿ ಪರೀಕ್ಷೆಯಾಗಿದೆ.

ಲುಧಿಯಾನ ಪಶ್ಚಿಮ ಉಪಚುನಾವಣೆಯಲ್ಲಿ ಎಎಪಿಯಿಂದ ಸಂಜೀವ್ ಅರೋರಾ, ಕಾಂಗ್ರೆಸ್‌ನಿಂದ ಭರತ್ ಭೂಷಣ್ ಆಶು, ಬಿಜೆಪಿಯಿಂದ ಜೀವನ್ ಗುಪ್ತಾ ಮತ್ತು ಶಿರೋಮಣಿ ಅಕಾಲಿದಳ (ಎಸ್‌ಎಡಿ) ನಿಂದ ಪರುಪ್ಕರ್ ಸಿಂಗ್ ಘುಮ್ಮನ್ ನಡುವೆ ಚತುಷ್ಕೋನ ಸ್ಪರ್ಧೆ ಏರ್ಪಟ್ಟಿದೆ.

ಅರೋರಾ ಎಎಪಿಯ ರಾಜ್ಯಸಭಾ ಅಭ್ಯರ್ಥಿಯಾಗಿದ್ದು, ಅರೋರಾ ಗೆದ್ದರೆ ವಿಧಾನಸಭೆಗೆ ಆಯ್ಕೆಯಾದರೆ ಅರವಿಂದ್ ಕೇಜ್ರಿವಾಲ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡುವ ಯೋಚನೆಯಲ್ಲಿ ಎಎಪಿ ಇದೆ. ಆದರೆ, ಎಎಪಿ ನಾಯಕರು ಆ ರೀತಿಯ ಲೆಕ್ಕಾಚಾರ ಇಲ್ಲ ಎಂದಿದ್ದಾರೆ. ಲುಧಿಯಾನ ಪಶ್ಚಿಮ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಖಾಲ್ಸಾ ಮಹಿಳಾ ಕಾಲೇಜಿನಲ್ಲಿ ನಡೆಯುತ್ತಿದೆ.

ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನಿ ಪ್ರಜೆಗಳು: ಎನ್‌ಐಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...