Homeಮುಖಪುಟ'ದೇಶವನ್ನು ಸಂವಿಧಾನದ ಪ್ರಕಾರ ನಡೆಸಲಾಗುತ್ತಿಲ್ಲ': ಬಿಜೆಪಿ ತೊರೆದ ಬುಡಕಟ್ಟು ನಾಯಕ

‘ದೇಶವನ್ನು ಸಂವಿಧಾನದ ಪ್ರಕಾರ ನಡೆಸಲಾಗುತ್ತಿಲ್ಲ’: ಬಿಜೆಪಿ ತೊರೆದ ಬುಡಕಟ್ಟು ನಾಯಕ

- Advertisement -
- Advertisement -

ಗುಜರಾತ್‌ನ ನರ್ಮದಾ ಜಿಲ್ಲೆಯ ದೇಡಿಯಾಪದ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಭಾರತೀಯ ಬುಡಕಟ್ಟು ಪಕ್ಷದ (ಬಿಟಿಪಿ) ರಾಷ್ಟ್ರೀಯ ಅಧ್ಯಕ್ಷ ಮಹೇಶ್ ವಾಸವ ಅವರು ಸೋಮವಾರ (ಏ.14) ಬಿಜೆಪಿ ತೊರೆದಿದ್ದು, ಕೇಸರಿ ಪಕ್ಷದೊಂದಿಗಿನ ತಮ್ಮ ಒಂಬತ್ತು ತಿಂಗಳ ಸಂಬಂಧವನ್ನು ಕೊನೆಗೊಳಿಸಿದ್ದಾರೆ. ಮಹೇಶ್ ವಾಸವ ಅವರು ಹಿರಿಯ ಬುಡಕಟ್ಟು ನಾಯಕ ಛೋಟು ವಾಸವ ಅವರ ಮಗ.

“ನನ್ನ ಪ್ರದೇಶಗಳ ಸಾರ್ವಜನಿಕ ಪ್ರಯೋಜನಕಾರಿ ಕೆಲಸಗಳು ನಡೆಯಲಿ ಎಂದು ನಾನು ಬಿಜೆಪಿಗೆ ಸೇರಿದ್ದೆ, ಆದರೆ ನನ್ನ ಶಿಫಾರಸುಗಳ ಮೇಲೂ ಏನೂ ನಡೆಯುತ್ತಿಲ್ಲ. ನಾನು ಲೋಕಸಭಾ ಚುನಾವಣೆಯ ಸಮಯದಲ್ಲಿ ಕೆಲಸ ಮಾಡಿದ್ದೇನೆ ಮತ್ತು ಬಿಜೆಪಿ ಅಭ್ಯರ್ಥಿ ಮತ್ತು ಹಾಲಿ ಸಂಸದ ಮನ್ಸುಖ್ ವಾಸವಾ ಪರ ಪ್ರಚಾರ ಮಾಡಿದ್ದೇನೆ. ಅವರು ಚುನಾವಣೆಯಲ್ಲಿ ಗೆದ್ದಿದ್ದಾರೆ. ಚುನಾವಣಾ ಫಲಿತಾಂಶಗಳು ಪ್ರಕಟವಾದ ನಂತರ, ಬಿಜೆಪಿ ನಾಯಕರು ನನ್ನನ್ನು ಯಾವುದೇ ಪಕ್ಷದ ಕಾರ್ಯಕರ್ತರ ಸಭೆ ಅಥವಾ ಸಾರ್ವಜನಿಕ ಸಭೆಗೆ ಆಹ್ವಾನಿಸಿಲ್ಲ. ಅವರು ಉದ್ದೇಶಪೂರ್ವಕವಾಗಿ ನನ್ನಿಂದ ದೂರವಾಗಿದ್ದಾರೆ. ನಾನು ಬಿಟಿಪಿಗಾಗಿ ಕೆಲಸ ಮಾಡುತ್ತೇನೆ. ಮುಂಬರುವ ದಿನಗಳಲ್ಲಿ, ರಾಜಕೀಯ ಭೂಕಂಪ ಸಂಭವಿಸಲಿದೆ ಮತ್ತು ಅದಕ್ಕೆ  ಭರೂಚ್ ಕೇಂದ್ರ ಬಿಂದುವಾಗಿರುತ್ತದೆ” ಎಂದು ಮಹೇಶ್ ವಾಸವಾ ಹೇಳಿದ್ದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮಹೇಶ್ ವಾಸವ ಮತ್ತು ಬನಸ್ಕಾಂತದ ಪಾಲನ್‌ಪುರದ (2017) ಮಾಜಿ ಕಾಂಗ್ರೆಸ್ ಶಾಸಕ ಮಹೇಶ್ ಪಟೇಲ್ ಅವರು ಲೋಕಸಭಾ ಚುನಾವಣೆಗೆ ಮುನ್ನ ಮಾರ್ಚ್ 11, 2024 ರಂದು ಬಿಜೆಪಿಗೆ ಪಕ್ಷಾಂತರ ಮಾಡಿದ್ದರು. ಈ ಇಬ್ಬರೂ ನಾಯಕರು 2,000ಕ್ಕೂ ಹೆಚ್ಚು ಬೆಂಬಲಿಗರೊಂದಿಗೆ ಗಾಂಧಿನಗರದ ಕಮಲಂ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಪಾಟೀಲ್ ಸ್ವಾಗತಿಸಿದ್ದರು.

ಬಿಜೆಪಿ ಸೇರಿದ ನಂತರ, ಮಹೇಶ್ ವಾಸವ ಅವರು ಮಾಧ್ಯಮಗಳಿಗೆ ನೀಡಿದ ಹೇಳಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಶ್ಲಾಘಿಸಿದ್ದರು. “ಕಾಂಗ್ರೆಸ್ ಬಹಳ ವರ್ಷಗಳಿಂದ ಮಾಡದ ಕೆಲಸವನ್ನು ಕಳೆದ ಒಂದು ದಶಕದಲ್ಲಿ ಬಿಜೆಪಿ ಮಾಡಿದೆ”ಎಂದಿದ್ದರು.

ಬಿಜೆಪಿ ಅಧ್ಯಕ್ಷ ಪಾಟೀಲ್ ಅವರಿಗೆ ಕಳುಹಿಸಿರುವ ರಾಜೀನಾಮೆ ಪತ್ರದಲ್ಲಿ ಮಹೇಶ್ ವಾಸವ, “ಭಾರತದ ಸಂವಿಧಾನವನ್ನು ಬರೆದ ಡಾ. ಭೀಮರಾವ್ ಅಂಬೇಡ್ಕರ್ ಅವರ ಜನ್ಮದಿನದಂದು ನಾನು ಅವರಿಗೆ ನಮಸ್ಕರಿಸುತ್ತೇನೆ. ಪ್ರಸ್ತುತ ಕಾಲದಲ್ಲಿ, ಭಾರತವು ಸಂವಿಧಾನದೊಂದಿಗೆ ನಡೆಯುತ್ತಿಲ್ಲ. ಆದಿವಾಸಿ, ದಲಿತ, ಒಬಿಸಿ, ಮುಸ್ಲಿಂ, ಕ್ರಿಶ್ಚಿಯನ್, ಸಿಖ್ ಎಲ್ಲರೂ ಒಟ್ಟಾಗಿ ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಸಿದ್ಧಾಂತದ ವಿರುದ್ಧ ಒಟ್ಟಾಗಿ ಹೋರಾಡಲಿದ್ದಾರೆ. ಇದು ದೀರ್ಘ ಯುದ್ಧ ಮತ್ತು ಇದಕ್ಕಾಗಿ ನಾವು ಒಗ್ಗಟ್ಟಾಗಿರಬೇಕು. ಆಂತರಿಕವಾಗಿ ಕಚ್ಚಾಡುತ್ತಿರಬಾರದು ಎಂಬುವುದಾಗಿ ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ತಿಳಿಸಿದೆ.

ಗಮನಾರ್ಹವಾಗಿ, ಮಹೇಶ್ ವಾಸವ ಅವರ ತಂದೆ ಭರೂಚ್ ಜಿಲ್ಲೆಯ ಜಗಾಡಿಯಾ ವಿಧಾನಸಭಾ ಕ್ಷೇತ್ರದಿಂದ ಏಳು ಬಾರಿ ಶಾಸಕರಾಗಿದ್ದರು. ಮಹೇಶ್ ವಾಸವ 2002 ಮತ್ತು 2017 ರಲ್ಲಿ ದೇಡಿಯಾಪದಾ ಕ್ಷೇತ್ರದಿಂದ ಗೆಲುವು ದಾಖಲಿಸಿದ್ದರು. ಕಳೆದ 2022ರ ಚುನಾವಣೆಯಲ್ಲಿ, ಅವರ ಆಪ್ತ ಸಹಾಯಕ ಚೈತರ್ ವಾಸವ ಎಎಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ ಗೆದ್ದಿದ್ದರು.

ತಮಿಳುನಾಡಿನ ಸ್ವಾಯತ್ತತೆಗಾಗಿ ಸಮಿತಿ ರಚಿಸಿದ ಸಿಎಂ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...