Homeಚಳವಳಿದೇಶದಲ್ಲೆ ಅತ್ಯಂತ ದೊಡ್ಡ ಕಾರ್ಮಿಕ ಮುಷ್ಕರ | ಸ್ಯಾಮ್‌ಸಂಗ್ 30% ಉತ್ಪಾದನೆಗೆ ಹೊಡೆತ | ಹೋರಾಟದ...

ದೇಶದಲ್ಲೆ ಅತ್ಯಂತ ದೊಡ್ಡ ಕಾರ್ಮಿಕ ಮುಷ್ಕರ | ಸ್ಯಾಮ್‌ಸಂಗ್ 30% ಉತ್ಪಾದನೆಗೆ ಹೊಡೆತ | ಹೋರಾಟದ ಬಗ್ಗೆ ಸಂಕ್ಷಿಪ್ತ ವಿವರ

- Advertisement -
- Advertisement -

ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿರುವ ಸ್ಯಾಮ್‌ಸಂಗ್ ಸ್ಥಾವರದಲ್ಲಿ ಕಾರ್ಮಿಕ ಸಂಘಟನೆಯಾದ ಸಿಐಟಿಯು ನೇತೃತ್ವದಲ್ಲಿ ನಡೆಯುತ್ತಿರುವ ಮುಷ್ಕರವು ಎರಡನೇ ತಿಂಗಳಿಗೆ ಕಾಲಿಟ್ಟಿದೆ. ಭಾರತದಲ್ಲಿ ಇತ್ತಿಚೆಗೆ ನಡೆದ ಅತಿ ದೊಡ್ಡ ಮುಷ್ಕರಗಳಲ್ಲಿ ಇದು ಒಂದಾಗಿದೆ ಎಂದು ವರದಿಯಾಗಿದೆ. ಭಾರತದಲ್ಲಿ ಸ್ಯಾಮ್‌ಸಂಗ್‌ನ ವಾರ್ಷಿಕ ಆದಾಯದ ಸರಿಸುಮಾರು ಮೂರನೇ ಒಂದು ಭಾಗದಷ್ಟು ಆರ್ಥಿಕ ವಹಿವಾಟು ತಮಿಳುನಾಡಿನ ಈ ಸ್ಥಾವರದಲ್ಲಿ ನಡೆಯುತ್ತಿದೆ. ಸ್ಯಾಮ್‌ಸಂಗ್‌ ವಿರುದ್ಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸ್ಯಾಮ್‌ಸಂಗ್‌ನ ಶ್ರೀಪೆರಂಬದೂರ್ ಸ್ಥಾವರವು ರೆಫ್ರಿಜರೇಟರ್‌ಗಳು, ಟೆಲಿವಿಷನ್‌ಗಳು ಮತ್ತು ವಾಷಿಂಗ್‌ಮಿಷನ್ ಯಂತ್ರಗಳಂತಹ ಎಲೆಕ್ಟ್ರಾನಿಕ್ ಉತ್ಪನ್ನಗಳನ್ನು ತಯಾರಿಸುತ್ತದೆ. ಭಾರತದ ತನ್ನ 12 ಶತಕೋಟಿ ಡಾರಲ್‌ ಆದಾಯದ ಸರಿಸುಮಾರು 30% ರಷ್ಟು ವಹಿವಾಟು ಈ ಕಾರ್ಖಾನೆಯಲ್ಲೆ ನಡೆಯುವುದರಿಂದ ಕಾರ್ಮಿಕರ ಈ ಪ್ರತಿಭಟನೆಯು ಸ್ಯಾಮ್‌ಸಂಗ್ ಉತ್ಪಾದನೆಯ ಮೇಲೆ ಭಾರಿ ಪರಿಣಾಮ ಬೀರಿದೆ.

ಮುಷ್ಕರದ ಹಿನ್ನೆಲೆ

ಕಾರ್ಮಿಕರ ಮುಷ್ಕರವು 2024ರ ಸೆಪ್ಟೆಂಬರ್ 9ರಂದು ಪ್ರಾರಂಭವಾಯಿತು. ಈ ಮುಷ್ಕರದಲ್ಲಿ ಕಾರ್ಖಾನೆಯ 1,500 ಕ್ಕೂ ಹೆಚ್ಚು ಕಾರ್ಮಿಕರು ಭಾಗವಹಿಸಿದ್ದರು. ಇದು ಕಾರ್ಖಾನೆಯಲ್ಲಿ ಕೆಲಸ ಮಾಡುವ 80% ಕ್ಕಿಂತ ಹೆಚ್ಚು ಕಾರ್ಮಿಕರ ಸಂಖ್ಯೆಯಾಗಿದ್ದು, ಉತ್ಪಾದನೆ ಮೇಲೆ ತೀವ್ರ ಹೊಡೆತ ಬಿದ್ದಿದೆ.

ಕಾರ್ಮಿಕರು ಉತ್ತಮ ವೇತನ, ಸುಧಾರಿತ ಕೆಲಸದ ಪರಿಸ್ಥಿತಿಗಳು ಮತ್ತು ಹೊಸದಾಗಿ ರೂಪುಗೊಂಡ ತಮ್ಮ ಟ್ರೇಡ್ ಯೂನಿಯನ್, ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್'(SIWU)ಗೆ ಮಾನ್ಯತೆ ನೀಡಬೇಕು ಎಂಬ ಪ್ರಮುಖ ಬೇಡಿಕೆಯನ್ನು ಮುಂದಿಟ್ಟಿದ್ದಾರೆ.ಸ್ಯಾಮ್‌ಸಂಗ್‌ ವಿರುದ್ಧ

ಇದನ್ನೂಓದಿ: ಅಮೆರಿಕ ಅಧ್ಯಕ್ಷೀಯ ಚುನಾವಣೆ | ಟ್ರಂಪ್ ಪರವಾಗಿ ಸಭೆ ನಡೆಸುತ್ತಿರುವ ಬಿಜೆಪಿಯ ಮಾಜಿ ಶಾಸಕ!

ಮುಷ್ಕರ ನಿರತ ಕಾರ್ಮಿಕರ ಪ್ರಮುಖ ಬೇಡಿಕೆಗಳು

ಉತ್ತಮ ವೇತನ: ಕಾರ್ಖಾನೆಯ ಪ್ರಸ್ತುತ ವೇತನವು ರೂ. 20,000 ರಿಂದ ರೂ 40,000 ವರೆಗೆ ಇವೆ. ಈ ವೇತವನ್ನು ಹೆಚ್ಚು ಮಾಡಬೇಕು ಎಂದು ಕಾರ್ಮಿಕರು ಒತ್ತಾಯಿಸುತ್ತಿದ್ದಾರೆ. ಸ್ಯಾಮ್‌ಸಂಗ್‌ನ ದಕ್ಷಿಣ ಕೊರಿಯಾದಲ್ಲಿ ಇದೆ ರೀತಿ ಕೆಲಸ ಮಾಡುವ ಕಾರ್ಮಿಕರು ವೇತನ ತಿಂಗಳಿಗೆ ಸುಮಾರು 4.55 ಲಕ್ಷವರೆಗೂ ಇವೆ. ಇತ್ತಿಚೆಗಷ್ಟೆ ದಕ್ಷಿಣ ಕೊರಿಯಾದ ಸ್ಟಾವರದಲ್ಲೂ ಕಾರ್ಮಿಕರು ಪ್ರತಿಭಟನೆ ನಡೆಸಿ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಂಡಿದ್ದರು.

ಸುಧಾರಿತ ಕೆಲಸದ ಪರಿಸ್ಥಿತಿಗಳು: ಅನೇಕ ಕಾರ್ಮಿಕರು ಶಾಸನಬದ್ಧ ಕೆಲಸದ ಸಮಯವನ್ನು ಮೀರಿ ಕಾರ್ಖನೆಯು ಕೆಲಸ ಮಾಡಿಸುತ್ತಿದೆ ಎಂದು ವರದಿಯಾಗಿವೆ. ನಿರ್ದಿಷ್ಟವಾಗಿ, ಎಂಟು ಗಂಟೆಗಳ ಕೆಲಸಕ್ಕಾಗಿ ಕಾರ್ಮಿಕರು ಬೇಡಿಕೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕಾರ್ಖಾನೆಯಲ್ಲಿ ಕಾರ್ಮಿಕರ ಸ್ವಾಭಿಮಾನಕ್ಕೆ ಧಕ್ಕೆಯಾಗುತ್ತಿದ್ದು, ಅಧಿಕಾರಿಗಳು ಸೌಜನ್ಯದಿಂದ ವರ್ತಿಸುವಂತೆ ಬೇಡಿಕೆ ಸಲ್ಲಿಸಿದ್ದಾರೆ.

ಒಕ್ಕೂಟದ ಮಾನ್ಯತೆ: ಇದು ಪ್ರಮುಖವಾದ ಬೇಡಿಕೆಯಾಗಿದ್ದು, ತಮ್ಮ ಕಾರ್ಮಿಕ ಸಂಘಟನೆಗೆ ಕಾರ್ಖಾನೆಯ ಆಡಳಿತ ಮಾನ್ಯತೆ ನೀಡಬೇಕು ಎಂದು ಕಾರ್ಮಿಕರು ಬೇಡಿಕೆ ಮುಂದಿಟ್ಟಿದ್ದಾರೆ. ತಮಿಳುನಾಡು ಕಾರ್ಮಿಕ ಇಲಾಖೆಯಲ್ಲಿ ಯೂನಿಯನ್ ನೋಂದಣಿಗಾಗಿ ಬಾಕಿ ಉಳಿದಿರುವ ಅರ್ಜಿಯ ಹೊರತಾಗಿಯೂ, SIWU ಅನ್ನು ಆಡಳಿತವು ಅಂಗೀಕರಿಸಿಲ್ಲ. ಆಡಳಿತ ಮಂಡಳಿತಯು ಸಿಐಟಿಯು ನೇತೃತ್ವದ ಸಂಘಟನೆಯ ಮಾನ್ಯತೆಯ ಬಗ್ಗೆ ತರಕಾರು ಮಾಡುತ್ತಿವೆ.

ಕಾರ್ಮಿಕ ಹಕ್ಕುಗಳ ದೃಷ್ಟಿಕೋನದಿಂದ, ನ್ಯಾಯಯುತ ವೇತನ ಮತ್ತು ಸುಧಾರಿತ ಕೆಲಸದ ಪರಿಸ್ಥಿತಿಗಳ ಬೇಡಿಕೆಗಳು ಜಾಗತಿಕ ಕಾರ್ಮಿಕ ಮಾನದಂಡಗಳಾಗಿವೆ. ಅಲ್ಲದೆ, ಕಾರ್ಮಿಕರ ಪ್ರಮುಖ ಬೇಡಿಕೆಯಾದ ಕಾರ್ಮಿಕ ಸಂಘದ ಮಾನ್ಯತೆ ಕೂಡಾ, ಕಾರ್ಮಿಕ ಒಕ್ಕೂಟಗಳನ್ನು ರಚಿಸುವ ಹಕ್ಕನ್ನು ಅಂತರರಾಷ್ಟ್ರೀಯ ಕಾರ್ಮಿಕ ಕಾನೂನುಗಳ ಅಡಿಯಲ್ಲಿ ರಕ್ಷಿಸಲಾಗಿದೆ. ಈ ಹಕ್ಕನ್ನು ನಿರಾಕರಿಸುವುದು ಮೂಲಭೂತ ಕಾರ್ಮಿಕರ ಹಕ್ಕುಗಳ ಉಲ್ಲಂಘನೆಯಾಗಿದೆ.

ಇದನ್ನೂಓದಿ: ಕೂಲಿ ಕೇಳಿದ ದಲಿತ ಕಾರ್ಮಿಕನಿಗೆ ಹಲ್ಲೆ : ದೇಹದ ಮೇಲೆ ಉಗುಳಿ, ಮೂತ್ರ ವಿಸರ್ಜಿಸಿ ವಿಕೃತಿ

ತಮಿಳುನಾಡು ಸರ್ಕಾರ ಮತ್ತು ಕಾರ್ಮಿಕರ ಮುಷ್ಕರ

ತಮಿಳುನಾಡು ಸರ್ಕಾರವು ಕಾರ್ಮಿಕರು ಮತ್ತು ಸ್ಯಾಮ್‌ಸಂಗ್ ಆಡಳಿತದ ನಡುವೆ ಹಲವು ಬಾರಿ ಮಧ್ಯಸ್ಥಿಕೆ ವಹಿಸಿದೆ. ಕಾರ್ಮಿಕರಿಗೆ ಮಾಸಿಕ ಉತ್ಪಾದಕತೆ ಸ್ಥಿರೀಕರಣ ಪ್ರೋತ್ಸಾಹ ಮತ್ತು ಸುಧಾರಿತ ಸಾರಿಗೆ ಸೌಲಭ್ಯಗಳನ್ನು ಒಳಗೊಂಡಿರುವ ಒಪ್ಪಂದದ ಜ್ಞಾಪಕ ಪತ್ರಕ್ಕೆ (MoA) ಸಹಿ ಮಾಡಿದ ಹೊರತಾಗಿಯೂ, ಕಾರ್ಮಿಕರ ಪ್ರಮುಖ ಬೇಡಿಕೆಯಾಗಿರುವ ಯೂನಿಯನ್ ಮಾನ್ಯತೆಯನ್ನು ಒಪ್ಪದ ಕಾರಣಕ್ಕೆ ಮುಷ್ಕರ ನಿರತ ನೌಕರರು ಒಪ್ಪಂದವನ್ನು ತಿರಸ್ಕರಿಸಿದ್ದಾರೆ.

ತನ್ನ ಉತ್ಪಾದನಾ ಕಾರ್ಯಾಚರಣೆಗಳನ್ನು ತಮಿಳುನಾಡಿನಿಂದ ಸ್ಥಳಾಂತರಿಸುವ ಯೋಜನೆಯಿದೆ ಎಂಬ ವದಂತಿಗಳನ್ನು ಸ್ಯಾಮ್‌ಸಂಗ್ ನಿರಾಕರಿಸಿದೆ. ಅದರ ಆಡಳಿತವು ತಮಿಳುನಾಡು ಸರ್ಕಾರ ಮತ್ತು ಅದರ ಹೂಡಿಕೆ ಸ್ನೇಹಿ ಪರಿಸರ ಬಗ್ಗೆಗಿನ ತಮ್ಮ ಬದ್ಧತೆಯನ್ನು ಒತ್ತಿಹೇಳಿದೆ. ಈ ನಡುವೆ ತಮಿಳುನಾಡು ಸರ್ಕಾರದ ಮೈತ್ರಿ ಪಕ್ಷವಾಗಿರುವ ಸಿಪಿಐ(ಎಂ) ಕಾರ್ಮಿಕರಿಗೆ ಬೆಂಬಲ ವ್ಯಕ್ತಪಡಿಸಿದೆ.

ಮೈತ್ರಿಯಲ್ಲಿ ಬಿರುಕು ಉಂಟಾಗುತ್ತಿದ್ದು, ಸಿಪಿಐ(ಎಂ) ಮೈತ್ರಿಗೆ ದ್ರೋಹ ಬಗೆದಿದೆ ಎಂದು ಕೂಡಾ ಡಿಎಂಕೆ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ ಕಾರ್ಮಿಕ ನಾಯಕರು ಇದನ್ನು ನಿರಾಕರಿಸಿದ್ದಾರೆ. “ಈ ಹೋರಾಟ ಕಾರ್ಮಿಕರ ಹಿತಾಸಕ್ತಿಗಾಗಿ ನಡೆಯುತ್ತಿದ್ದು, ಕಮ್ಯನಿಸ್ಟ್ ಪಕ್ಷಕ್ಕಾಗಿ ಅಲ್ಲ. ಸಿಐಟಿಯು ಈ ಸಂದರ್ಭದಲ್ಲಿ ಕಮ್ಯುನಿಸ್ಟ್ ಪಕ್ಷದ ಜೊತೆಗೆ ನೇರ ಸಂಬಂಧವಿಲ್ಲದ ಸಂಘಟನೆಯಾಗಿದೆ. ನಮಗೆ ಎಲ್ಲಾ ಪಕ್ಷಗಳ ಬೆಂಬಲವಿದೆ. ಈ ಮುಷ್ಕರವು ಕಮ್ಯುನಿಸಂ ಬಗ್ಗೆ ಅಲ್ಲ” ಎಂದು ಪ್ರತಿಭಟನಾನಿರತ ಕಾರ್ಮಿಕ ನಾಯಕರೊಬ್ಬರು ಹೇಳಿದ್ದಾರೆ.

ಇದನ್ನೂಓದಿ: ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಕಿರಿಯರ ಪ್ರತಿಭಟನೆ ಬೆಂಬಲಿಸಿ 100ಕ್ಕೂ ಹೆಚ್ಚು ಹಿರಿಯ ವೈದ್ಯರಿಂದ ರಾಜೀನಾಮೆ

ಕಾಂಗ್ರೆಸ್, ಸಿಪಿಐ(ಎಂ), ಸಿಪಿಐ, ಎಂಡಿಎಂಕೆ, ವಿಸಿಕೆ ಸೇರಿದಂತೆ ಡಿಎಂಕೆಯ ಮೈತ್ರಿಕೂಟದ ಪ್ರಮುಖ ನಾಯಕರು ಬುಧವಾರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡುವ ಮುನ್ನ ಬುಧವಾರ ಮುಂಜಾನೆ, ತಮಿಳುನಾಡು ಪೊಲೀಸರು 11 ಪ್ರಮುಖ ಯೂನಿಯನ್ ನಾಯಕರನ್ನು ಬಂಧಿಸಿ, ಪ್ರತಿಭಟನಾ ಡೇರೆಗಳನ್ನು ಕೆಡವಿದ್ದಾರೆ.

ಇತ್ತೀಚಿನ ಬೆಳವಣಿಗೆಗಳು

ಇತ್ತಿಚೆಗೆ ಪೊಲೀಸರ ಕೈವಾಡದಿಂದ ಪ್ರತಿಭಟನಾ ಸ್ಥಳದಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ಪ್ರತಿಭಟನೆಯ ಸಮಯದಲ್ಲಿ ನಡೆದ ವಾಗ್ವಾದದ ನಂತರ ಏಳು ಕಾರ್ಮಿಕರನ್ನು ಬಂಧಿಸಲಾಗಿದೆ. ಪ್ರತಿಭಟನಾ ನಿರತ ಕಾರ್ಮಿಕರ ವಿರುದ್ಧ ಪೋಲಿಸರು ಕಿರುಕುಳ ನೀಡುತ್ತಿದ್ದು, ಬೆದರಿಕೆ ತಂತ್ರಗಳನ್ನು ಅನುಸರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಮುಷ್ಕರ ನಿರತ ಕಾರ್ಮಿಕರನ್ನು ಮೇಲ್ವಿಚಾರಣೆ ಮಾಡಲು ಪೊಲೀಸರು ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಪ್ರತಿಭಟನಾ ಟೆಂಟ್‌ಗಳನ್ನು ಕೆಡವಿದ್ದಾರೆ. ಇದು ಅಧಿಕಾರಿಗಳು ಮತ್ತು ನೌಕರರ ನಡುವಿನ ಉದ್ವಿಗ್ನತೆಯನ್ನು ಇನ್ನಷ್ಟು ತೀವ್ರಗೊಳಿಸಿದ್ದಾರೆ.

ಸಮುದಾಯ ಮತ್ತು ರಾಜಕೀಯ ಬೆಂಬಲ

ಮುಷ್ಕರ ನಿರತ ಕಾರ್ಮಿಕರಿಗೆ ಕಾಂಗ್ರೆಸ್, ಸಿಪಿಐ(ಎಂ), ಸಿಪಿಐ, ಎಂಡಿಎಂಕೆ, ವಿಸಿಕೆ ಸೇರಿದಂತೆ ಡಿಎಂಕೆಯ ಮೈತ್ರಿಕೂಟದ ಪ್ರಮುಖ ನಾಯಕರು, ವಿವಿಧ ರಾಜಕೀಯ ಪಕ್ಷಗಳು ಮತ್ತು ಕಾರ್ಮಿಕ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ.

ವಿಡಿಯೊ ನೋಡಿ: ಬೆಂಗಳೂರು: ಜಯನಗರದಲ್ಲಿ ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...