Homeಚಳವಳಿದೇಶದಲ್ಲೆ ಅತ್ಯಂತ ದೊಡ್ಡ ಕಾರ್ಮಿಕ ಮುಷ್ಕರ | ಸ್ಯಾಮ್‌ಸಂಗ್ 30% ಉತ್ಪಾದನೆಗೆ ಹೊಡೆತ | ಹೋರಾಟದ...

ದೇಶದಲ್ಲೆ ಅತ್ಯಂತ ದೊಡ್ಡ ಕಾರ್ಮಿಕ ಮುಷ್ಕರ | ಸ್ಯಾಮ್‌ಸಂಗ್ 30% ಉತ್ಪಾದನೆಗೆ ಹೊಡೆತ | ಹೋರಾಟದ ಬಗ್ಗೆ ಸಂಕ್ಷಿಪ್ತ ವಿವರ

- Advertisement -
- Advertisement -

ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿರುವ ಸ್ಯಾಮ್‌ಸಂಗ್ ಸ್ಥಾವರದಲ್ಲಿ ಕಾರ್ಮಿಕ ಸಂಘಟನೆಯಾದ ಸಿಐಟಿಯು ನೇತೃತ್ವದಲ್ಲಿ ನಡೆಯುತ್ತಿರುವ ಮುಷ್ಕರವು ಎರಡನೇ ತಿಂಗಳಿಗೆ ಕಾಲಿಟ್ಟಿದೆ. ಭಾರತದಲ್ಲಿ ಇತ್ತಿಚೆಗೆ ನಡೆದ ಅತಿ ದೊಡ್ಡ ಮುಷ್ಕರಗಳಲ್ಲಿ ಇದು ಒಂದಾಗಿದೆ ಎಂದು ವರದಿಯಾಗಿದೆ. ಭಾರತದಲ್ಲಿ ಸ್ಯಾಮ್‌ಸಂಗ್‌ನ ವಾರ್ಷಿಕ ಆದಾಯದ ಸರಿಸುಮಾರು ಮೂರನೇ ಒಂದು ಭಾಗದಷ್ಟು ಆರ್ಥಿಕ ವಹಿವಾಟು ತಮಿಳುನಾಡಿನ ಈ ಸ್ಥಾವರದಲ್ಲಿ ನಡೆಯುತ್ತಿದೆ. ಸ್ಯಾಮ್‌ಸಂಗ್‌ ವಿರುದ್ಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸ್ಯಾಮ್‌ಸಂಗ್‌ನ ಶ್ರೀಪೆರಂಬದೂರ್ ಸ್ಥಾವರವು ರೆಫ್ರಿಜರೇಟರ್‌ಗಳು, ಟೆಲಿವಿಷನ್‌ಗಳು ಮತ್ತು ವಾಷಿಂಗ್‌ಮಿಷನ್ ಯಂತ್ರಗಳಂತಹ ಎಲೆಕ್ಟ್ರಾನಿಕ್ ಉತ್ಪನ್ನಗಳನ್ನು ತಯಾರಿಸುತ್ತದೆ. ಭಾರತದ ತನ್ನ 12 ಶತಕೋಟಿ ಡಾರಲ್‌ ಆದಾಯದ ಸರಿಸುಮಾರು 30% ರಷ್ಟು ವಹಿವಾಟು ಈ ಕಾರ್ಖಾನೆಯಲ್ಲೆ ನಡೆಯುವುದರಿಂದ ಕಾರ್ಮಿಕರ ಈ ಪ್ರತಿಭಟನೆಯು ಸ್ಯಾಮ್‌ಸಂಗ್ ಉತ್ಪಾದನೆಯ ಮೇಲೆ ಭಾರಿ ಪರಿಣಾಮ ಬೀರಿದೆ.

ಮುಷ್ಕರದ ಹಿನ್ನೆಲೆ

ಕಾರ್ಮಿಕರ ಮುಷ್ಕರವು 2024ರ ಸೆಪ್ಟೆಂಬರ್ 9ರಂದು ಪ್ರಾರಂಭವಾಯಿತು. ಈ ಮುಷ್ಕರದಲ್ಲಿ ಕಾರ್ಖಾನೆಯ 1,500 ಕ್ಕೂ ಹೆಚ್ಚು ಕಾರ್ಮಿಕರು ಭಾಗವಹಿಸಿದ್ದರು. ಇದು ಕಾರ್ಖಾನೆಯಲ್ಲಿ ಕೆಲಸ ಮಾಡುವ 80% ಕ್ಕಿಂತ ಹೆಚ್ಚು ಕಾರ್ಮಿಕರ ಸಂಖ್ಯೆಯಾಗಿದ್ದು, ಉತ್ಪಾದನೆ ಮೇಲೆ ತೀವ್ರ ಹೊಡೆತ ಬಿದ್ದಿದೆ.

ಕಾರ್ಮಿಕರು ಉತ್ತಮ ವೇತನ, ಸುಧಾರಿತ ಕೆಲಸದ ಪರಿಸ್ಥಿತಿಗಳು ಮತ್ತು ಹೊಸದಾಗಿ ರೂಪುಗೊಂಡ ತಮ್ಮ ಟ್ರೇಡ್ ಯೂನಿಯನ್, ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್'(SIWU)ಗೆ ಮಾನ್ಯತೆ ನೀಡಬೇಕು ಎಂಬ ಪ್ರಮುಖ ಬೇಡಿಕೆಯನ್ನು ಮುಂದಿಟ್ಟಿದ್ದಾರೆ.ಸ್ಯಾಮ್‌ಸಂಗ್‌ ವಿರುದ್ಧ

ಇದನ್ನೂಓದಿ: ಅಮೆರಿಕ ಅಧ್ಯಕ್ಷೀಯ ಚುನಾವಣೆ | ಟ್ರಂಪ್ ಪರವಾಗಿ ಸಭೆ ನಡೆಸುತ್ತಿರುವ ಬಿಜೆಪಿಯ ಮಾಜಿ ಶಾಸಕ!

ಮುಷ್ಕರ ನಿರತ ಕಾರ್ಮಿಕರ ಪ್ರಮುಖ ಬೇಡಿಕೆಗಳು

ಉತ್ತಮ ವೇತನ: ಕಾರ್ಖಾನೆಯ ಪ್ರಸ್ತುತ ವೇತನವು ರೂ. 20,000 ರಿಂದ ರೂ 40,000 ವರೆಗೆ ಇವೆ. ಈ ವೇತವನ್ನು ಹೆಚ್ಚು ಮಾಡಬೇಕು ಎಂದು ಕಾರ್ಮಿಕರು ಒತ್ತಾಯಿಸುತ್ತಿದ್ದಾರೆ. ಸ್ಯಾಮ್‌ಸಂಗ್‌ನ ದಕ್ಷಿಣ ಕೊರಿಯಾದಲ್ಲಿ ಇದೆ ರೀತಿ ಕೆಲಸ ಮಾಡುವ ಕಾರ್ಮಿಕರು ವೇತನ ತಿಂಗಳಿಗೆ ಸುಮಾರು 4.55 ಲಕ್ಷವರೆಗೂ ಇವೆ. ಇತ್ತಿಚೆಗಷ್ಟೆ ದಕ್ಷಿಣ ಕೊರಿಯಾದ ಸ್ಟಾವರದಲ್ಲೂ ಕಾರ್ಮಿಕರು ಪ್ರತಿಭಟನೆ ನಡೆಸಿ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಂಡಿದ್ದರು.

ಸುಧಾರಿತ ಕೆಲಸದ ಪರಿಸ್ಥಿತಿಗಳು: ಅನೇಕ ಕಾರ್ಮಿಕರು ಶಾಸನಬದ್ಧ ಕೆಲಸದ ಸಮಯವನ್ನು ಮೀರಿ ಕಾರ್ಖನೆಯು ಕೆಲಸ ಮಾಡಿಸುತ್ತಿದೆ ಎಂದು ವರದಿಯಾಗಿವೆ. ನಿರ್ದಿಷ್ಟವಾಗಿ, ಎಂಟು ಗಂಟೆಗಳ ಕೆಲಸಕ್ಕಾಗಿ ಕಾರ್ಮಿಕರು ಬೇಡಿಕೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕಾರ್ಖಾನೆಯಲ್ಲಿ ಕಾರ್ಮಿಕರ ಸ್ವಾಭಿಮಾನಕ್ಕೆ ಧಕ್ಕೆಯಾಗುತ್ತಿದ್ದು, ಅಧಿಕಾರಿಗಳು ಸೌಜನ್ಯದಿಂದ ವರ್ತಿಸುವಂತೆ ಬೇಡಿಕೆ ಸಲ್ಲಿಸಿದ್ದಾರೆ.

ಒಕ್ಕೂಟದ ಮಾನ್ಯತೆ: ಇದು ಪ್ರಮುಖವಾದ ಬೇಡಿಕೆಯಾಗಿದ್ದು, ತಮ್ಮ ಕಾರ್ಮಿಕ ಸಂಘಟನೆಗೆ ಕಾರ್ಖಾನೆಯ ಆಡಳಿತ ಮಾನ್ಯತೆ ನೀಡಬೇಕು ಎಂದು ಕಾರ್ಮಿಕರು ಬೇಡಿಕೆ ಮುಂದಿಟ್ಟಿದ್ದಾರೆ. ತಮಿಳುನಾಡು ಕಾರ್ಮಿಕ ಇಲಾಖೆಯಲ್ಲಿ ಯೂನಿಯನ್ ನೋಂದಣಿಗಾಗಿ ಬಾಕಿ ಉಳಿದಿರುವ ಅರ್ಜಿಯ ಹೊರತಾಗಿಯೂ, SIWU ಅನ್ನು ಆಡಳಿತವು ಅಂಗೀಕರಿಸಿಲ್ಲ. ಆಡಳಿತ ಮಂಡಳಿತಯು ಸಿಐಟಿಯು ನೇತೃತ್ವದ ಸಂಘಟನೆಯ ಮಾನ್ಯತೆಯ ಬಗ್ಗೆ ತರಕಾರು ಮಾಡುತ್ತಿವೆ.

ಕಾರ್ಮಿಕ ಹಕ್ಕುಗಳ ದೃಷ್ಟಿಕೋನದಿಂದ, ನ್ಯಾಯಯುತ ವೇತನ ಮತ್ತು ಸುಧಾರಿತ ಕೆಲಸದ ಪರಿಸ್ಥಿತಿಗಳ ಬೇಡಿಕೆಗಳು ಜಾಗತಿಕ ಕಾರ್ಮಿಕ ಮಾನದಂಡಗಳಾಗಿವೆ. ಅಲ್ಲದೆ, ಕಾರ್ಮಿಕರ ಪ್ರಮುಖ ಬೇಡಿಕೆಯಾದ ಕಾರ್ಮಿಕ ಸಂಘದ ಮಾನ್ಯತೆ ಕೂಡಾ, ಕಾರ್ಮಿಕ ಒಕ್ಕೂಟಗಳನ್ನು ರಚಿಸುವ ಹಕ್ಕನ್ನು ಅಂತರರಾಷ್ಟ್ರೀಯ ಕಾರ್ಮಿಕ ಕಾನೂನುಗಳ ಅಡಿಯಲ್ಲಿ ರಕ್ಷಿಸಲಾಗಿದೆ. ಈ ಹಕ್ಕನ್ನು ನಿರಾಕರಿಸುವುದು ಮೂಲಭೂತ ಕಾರ್ಮಿಕರ ಹಕ್ಕುಗಳ ಉಲ್ಲಂಘನೆಯಾಗಿದೆ.

ಇದನ್ನೂಓದಿ: ಕೂಲಿ ಕೇಳಿದ ದಲಿತ ಕಾರ್ಮಿಕನಿಗೆ ಹಲ್ಲೆ : ದೇಹದ ಮೇಲೆ ಉಗುಳಿ, ಮೂತ್ರ ವಿಸರ್ಜಿಸಿ ವಿಕೃತಿ

ತಮಿಳುನಾಡು ಸರ್ಕಾರ ಮತ್ತು ಕಾರ್ಮಿಕರ ಮುಷ್ಕರ

ತಮಿಳುನಾಡು ಸರ್ಕಾರವು ಕಾರ್ಮಿಕರು ಮತ್ತು ಸ್ಯಾಮ್‌ಸಂಗ್ ಆಡಳಿತದ ನಡುವೆ ಹಲವು ಬಾರಿ ಮಧ್ಯಸ್ಥಿಕೆ ವಹಿಸಿದೆ. ಕಾರ್ಮಿಕರಿಗೆ ಮಾಸಿಕ ಉತ್ಪಾದಕತೆ ಸ್ಥಿರೀಕರಣ ಪ್ರೋತ್ಸಾಹ ಮತ್ತು ಸುಧಾರಿತ ಸಾರಿಗೆ ಸೌಲಭ್ಯಗಳನ್ನು ಒಳಗೊಂಡಿರುವ ಒಪ್ಪಂದದ ಜ್ಞಾಪಕ ಪತ್ರಕ್ಕೆ (MoA) ಸಹಿ ಮಾಡಿದ ಹೊರತಾಗಿಯೂ, ಕಾರ್ಮಿಕರ ಪ್ರಮುಖ ಬೇಡಿಕೆಯಾಗಿರುವ ಯೂನಿಯನ್ ಮಾನ್ಯತೆಯನ್ನು ಒಪ್ಪದ ಕಾರಣಕ್ಕೆ ಮುಷ್ಕರ ನಿರತ ನೌಕರರು ಒಪ್ಪಂದವನ್ನು ತಿರಸ್ಕರಿಸಿದ್ದಾರೆ.

ತನ್ನ ಉತ್ಪಾದನಾ ಕಾರ್ಯಾಚರಣೆಗಳನ್ನು ತಮಿಳುನಾಡಿನಿಂದ ಸ್ಥಳಾಂತರಿಸುವ ಯೋಜನೆಯಿದೆ ಎಂಬ ವದಂತಿಗಳನ್ನು ಸ್ಯಾಮ್‌ಸಂಗ್ ನಿರಾಕರಿಸಿದೆ. ಅದರ ಆಡಳಿತವು ತಮಿಳುನಾಡು ಸರ್ಕಾರ ಮತ್ತು ಅದರ ಹೂಡಿಕೆ ಸ್ನೇಹಿ ಪರಿಸರ ಬಗ್ಗೆಗಿನ ತಮ್ಮ ಬದ್ಧತೆಯನ್ನು ಒತ್ತಿಹೇಳಿದೆ. ಈ ನಡುವೆ ತಮಿಳುನಾಡು ಸರ್ಕಾರದ ಮೈತ್ರಿ ಪಕ್ಷವಾಗಿರುವ ಸಿಪಿಐ(ಎಂ) ಕಾರ್ಮಿಕರಿಗೆ ಬೆಂಬಲ ವ್ಯಕ್ತಪಡಿಸಿದೆ.

ಮೈತ್ರಿಯಲ್ಲಿ ಬಿರುಕು ಉಂಟಾಗುತ್ತಿದ್ದು, ಸಿಪಿಐ(ಎಂ) ಮೈತ್ರಿಗೆ ದ್ರೋಹ ಬಗೆದಿದೆ ಎಂದು ಕೂಡಾ ಡಿಎಂಕೆ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ ಕಾರ್ಮಿಕ ನಾಯಕರು ಇದನ್ನು ನಿರಾಕರಿಸಿದ್ದಾರೆ. “ಈ ಹೋರಾಟ ಕಾರ್ಮಿಕರ ಹಿತಾಸಕ್ತಿಗಾಗಿ ನಡೆಯುತ್ತಿದ್ದು, ಕಮ್ಯನಿಸ್ಟ್ ಪಕ್ಷಕ್ಕಾಗಿ ಅಲ್ಲ. ಸಿಐಟಿಯು ಈ ಸಂದರ್ಭದಲ್ಲಿ ಕಮ್ಯುನಿಸ್ಟ್ ಪಕ್ಷದ ಜೊತೆಗೆ ನೇರ ಸಂಬಂಧವಿಲ್ಲದ ಸಂಘಟನೆಯಾಗಿದೆ. ನಮಗೆ ಎಲ್ಲಾ ಪಕ್ಷಗಳ ಬೆಂಬಲವಿದೆ. ಈ ಮುಷ್ಕರವು ಕಮ್ಯುನಿಸಂ ಬಗ್ಗೆ ಅಲ್ಲ” ಎಂದು ಪ್ರತಿಭಟನಾನಿರತ ಕಾರ್ಮಿಕ ನಾಯಕರೊಬ್ಬರು ಹೇಳಿದ್ದಾರೆ.

ಇದನ್ನೂಓದಿ: ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಕಿರಿಯರ ಪ್ರತಿಭಟನೆ ಬೆಂಬಲಿಸಿ 100ಕ್ಕೂ ಹೆಚ್ಚು ಹಿರಿಯ ವೈದ್ಯರಿಂದ ರಾಜೀನಾಮೆ

ಕಾಂಗ್ರೆಸ್, ಸಿಪಿಐ(ಎಂ), ಸಿಪಿಐ, ಎಂಡಿಎಂಕೆ, ವಿಸಿಕೆ ಸೇರಿದಂತೆ ಡಿಎಂಕೆಯ ಮೈತ್ರಿಕೂಟದ ಪ್ರಮುಖ ನಾಯಕರು ಬುಧವಾರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡುವ ಮುನ್ನ ಬುಧವಾರ ಮುಂಜಾನೆ, ತಮಿಳುನಾಡು ಪೊಲೀಸರು 11 ಪ್ರಮುಖ ಯೂನಿಯನ್ ನಾಯಕರನ್ನು ಬಂಧಿಸಿ, ಪ್ರತಿಭಟನಾ ಡೇರೆಗಳನ್ನು ಕೆಡವಿದ್ದಾರೆ.

ಇತ್ತೀಚಿನ ಬೆಳವಣಿಗೆಗಳು

ಇತ್ತಿಚೆಗೆ ಪೊಲೀಸರ ಕೈವಾಡದಿಂದ ಪ್ರತಿಭಟನಾ ಸ್ಥಳದಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ಪ್ರತಿಭಟನೆಯ ಸಮಯದಲ್ಲಿ ನಡೆದ ವಾಗ್ವಾದದ ನಂತರ ಏಳು ಕಾರ್ಮಿಕರನ್ನು ಬಂಧಿಸಲಾಗಿದೆ. ಪ್ರತಿಭಟನಾ ನಿರತ ಕಾರ್ಮಿಕರ ವಿರುದ್ಧ ಪೋಲಿಸರು ಕಿರುಕುಳ ನೀಡುತ್ತಿದ್ದು, ಬೆದರಿಕೆ ತಂತ್ರಗಳನ್ನು ಅನುಸರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಮುಷ್ಕರ ನಿರತ ಕಾರ್ಮಿಕರನ್ನು ಮೇಲ್ವಿಚಾರಣೆ ಮಾಡಲು ಪೊಲೀಸರು ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಪ್ರತಿಭಟನಾ ಟೆಂಟ್‌ಗಳನ್ನು ಕೆಡವಿದ್ದಾರೆ. ಇದು ಅಧಿಕಾರಿಗಳು ಮತ್ತು ನೌಕರರ ನಡುವಿನ ಉದ್ವಿಗ್ನತೆಯನ್ನು ಇನ್ನಷ್ಟು ತೀವ್ರಗೊಳಿಸಿದ್ದಾರೆ.

ಸಮುದಾಯ ಮತ್ತು ರಾಜಕೀಯ ಬೆಂಬಲ

ಮುಷ್ಕರ ನಿರತ ಕಾರ್ಮಿಕರಿಗೆ ಕಾಂಗ್ರೆಸ್, ಸಿಪಿಐ(ಎಂ), ಸಿಪಿಐ, ಎಂಡಿಎಂಕೆ, ವಿಸಿಕೆ ಸೇರಿದಂತೆ ಡಿಎಂಕೆಯ ಮೈತ್ರಿಕೂಟದ ಪ್ರಮುಖ ನಾಯಕರು, ವಿವಿಧ ರಾಜಕೀಯ ಪಕ್ಷಗಳು ಮತ್ತು ಕಾರ್ಮಿಕ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ.

ವಿಡಿಯೊ ನೋಡಿ: ಬೆಂಗಳೂರು: ಜಯನಗರದಲ್ಲಿ ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...