Homeಚಳವಳಿದೇಶದಲ್ಲೆ ಅತ್ಯಂತ ದೊಡ್ಡ ಕಾರ್ಮಿಕ ಮುಷ್ಕರ | ಸ್ಯಾಮ್‌ಸಂಗ್ 30% ಉತ್ಪಾದನೆಗೆ ಹೊಡೆತ | ಹೋರಾಟದ...

ದೇಶದಲ್ಲೆ ಅತ್ಯಂತ ದೊಡ್ಡ ಕಾರ್ಮಿಕ ಮುಷ್ಕರ | ಸ್ಯಾಮ್‌ಸಂಗ್ 30% ಉತ್ಪಾದನೆಗೆ ಹೊಡೆತ | ಹೋರಾಟದ ಬಗ್ಗೆ ಸಂಕ್ಷಿಪ್ತ ವಿವರ

- Advertisement -
- Advertisement -

ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿರುವ ಸ್ಯಾಮ್‌ಸಂಗ್ ಸ್ಥಾವರದಲ್ಲಿ ಕಾರ್ಮಿಕ ಸಂಘಟನೆಯಾದ ಸಿಐಟಿಯು ನೇತೃತ್ವದಲ್ಲಿ ನಡೆಯುತ್ತಿರುವ ಮುಷ್ಕರವು ಎರಡನೇ ತಿಂಗಳಿಗೆ ಕಾಲಿಟ್ಟಿದೆ. ಭಾರತದಲ್ಲಿ ಇತ್ತಿಚೆಗೆ ನಡೆದ ಅತಿ ದೊಡ್ಡ ಮುಷ್ಕರಗಳಲ್ಲಿ ಇದು ಒಂದಾಗಿದೆ ಎಂದು ವರದಿಯಾಗಿದೆ. ಭಾರತದಲ್ಲಿ ಸ್ಯಾಮ್‌ಸಂಗ್‌ನ ವಾರ್ಷಿಕ ಆದಾಯದ ಸರಿಸುಮಾರು ಮೂರನೇ ಒಂದು ಭಾಗದಷ್ಟು ಆರ್ಥಿಕ ವಹಿವಾಟು ತಮಿಳುನಾಡಿನ ಈ ಸ್ಥಾವರದಲ್ಲಿ ನಡೆಯುತ್ತಿದೆ. ಸ್ಯಾಮ್‌ಸಂಗ್‌ ವಿರುದ್ಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸ್ಯಾಮ್‌ಸಂಗ್‌ನ ಶ್ರೀಪೆರಂಬದೂರ್ ಸ್ಥಾವರವು ರೆಫ್ರಿಜರೇಟರ್‌ಗಳು, ಟೆಲಿವಿಷನ್‌ಗಳು ಮತ್ತು ವಾಷಿಂಗ್‌ಮಿಷನ್ ಯಂತ್ರಗಳಂತಹ ಎಲೆಕ್ಟ್ರಾನಿಕ್ ಉತ್ಪನ್ನಗಳನ್ನು ತಯಾರಿಸುತ್ತದೆ. ಭಾರತದ ತನ್ನ 12 ಶತಕೋಟಿ ಡಾರಲ್‌ ಆದಾಯದ ಸರಿಸುಮಾರು 30% ರಷ್ಟು ವಹಿವಾಟು ಈ ಕಾರ್ಖಾನೆಯಲ್ಲೆ ನಡೆಯುವುದರಿಂದ ಕಾರ್ಮಿಕರ ಈ ಪ್ರತಿಭಟನೆಯು ಸ್ಯಾಮ್‌ಸಂಗ್ ಉತ್ಪಾದನೆಯ ಮೇಲೆ ಭಾರಿ ಪರಿಣಾಮ ಬೀರಿದೆ.

ಮುಷ್ಕರದ ಹಿನ್ನೆಲೆ

ಕಾರ್ಮಿಕರ ಮುಷ್ಕರವು 2024ರ ಸೆಪ್ಟೆಂಬರ್ 9ರಂದು ಪ್ರಾರಂಭವಾಯಿತು. ಈ ಮುಷ್ಕರದಲ್ಲಿ ಕಾರ್ಖಾನೆಯ 1,500 ಕ್ಕೂ ಹೆಚ್ಚು ಕಾರ್ಮಿಕರು ಭಾಗವಹಿಸಿದ್ದರು. ಇದು ಕಾರ್ಖಾನೆಯಲ್ಲಿ ಕೆಲಸ ಮಾಡುವ 80% ಕ್ಕಿಂತ ಹೆಚ್ಚು ಕಾರ್ಮಿಕರ ಸಂಖ್ಯೆಯಾಗಿದ್ದು, ಉತ್ಪಾದನೆ ಮೇಲೆ ತೀವ್ರ ಹೊಡೆತ ಬಿದ್ದಿದೆ.

ಕಾರ್ಮಿಕರು ಉತ್ತಮ ವೇತನ, ಸುಧಾರಿತ ಕೆಲಸದ ಪರಿಸ್ಥಿತಿಗಳು ಮತ್ತು ಹೊಸದಾಗಿ ರೂಪುಗೊಂಡ ತಮ್ಮ ಟ್ರೇಡ್ ಯೂನಿಯನ್, ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್'(SIWU)ಗೆ ಮಾನ್ಯತೆ ನೀಡಬೇಕು ಎಂಬ ಪ್ರಮುಖ ಬೇಡಿಕೆಯನ್ನು ಮುಂದಿಟ್ಟಿದ್ದಾರೆ.ಸ್ಯಾಮ್‌ಸಂಗ್‌ ವಿರುದ್ಧ

ಇದನ್ನೂಓದಿ: ಅಮೆರಿಕ ಅಧ್ಯಕ್ಷೀಯ ಚುನಾವಣೆ | ಟ್ರಂಪ್ ಪರವಾಗಿ ಸಭೆ ನಡೆಸುತ್ತಿರುವ ಬಿಜೆಪಿಯ ಮಾಜಿ ಶಾಸಕ!

ಮುಷ್ಕರ ನಿರತ ಕಾರ್ಮಿಕರ ಪ್ರಮುಖ ಬೇಡಿಕೆಗಳು

ಉತ್ತಮ ವೇತನ: ಕಾರ್ಖಾನೆಯ ಪ್ರಸ್ತುತ ವೇತನವು ರೂ. 20,000 ರಿಂದ ರೂ 40,000 ವರೆಗೆ ಇವೆ. ಈ ವೇತವನ್ನು ಹೆಚ್ಚು ಮಾಡಬೇಕು ಎಂದು ಕಾರ್ಮಿಕರು ಒತ್ತಾಯಿಸುತ್ತಿದ್ದಾರೆ. ಸ್ಯಾಮ್‌ಸಂಗ್‌ನ ದಕ್ಷಿಣ ಕೊರಿಯಾದಲ್ಲಿ ಇದೆ ರೀತಿ ಕೆಲಸ ಮಾಡುವ ಕಾರ್ಮಿಕರು ವೇತನ ತಿಂಗಳಿಗೆ ಸುಮಾರು 4.55 ಲಕ್ಷವರೆಗೂ ಇವೆ. ಇತ್ತಿಚೆಗಷ್ಟೆ ದಕ್ಷಿಣ ಕೊರಿಯಾದ ಸ್ಟಾವರದಲ್ಲೂ ಕಾರ್ಮಿಕರು ಪ್ರತಿಭಟನೆ ನಡೆಸಿ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಂಡಿದ್ದರು.

ಸುಧಾರಿತ ಕೆಲಸದ ಪರಿಸ್ಥಿತಿಗಳು: ಅನೇಕ ಕಾರ್ಮಿಕರು ಶಾಸನಬದ್ಧ ಕೆಲಸದ ಸಮಯವನ್ನು ಮೀರಿ ಕಾರ್ಖನೆಯು ಕೆಲಸ ಮಾಡಿಸುತ್ತಿದೆ ಎಂದು ವರದಿಯಾಗಿವೆ. ನಿರ್ದಿಷ್ಟವಾಗಿ, ಎಂಟು ಗಂಟೆಗಳ ಕೆಲಸಕ್ಕಾಗಿ ಕಾರ್ಮಿಕರು ಬೇಡಿಕೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕಾರ್ಖಾನೆಯಲ್ಲಿ ಕಾರ್ಮಿಕರ ಸ್ವಾಭಿಮಾನಕ್ಕೆ ಧಕ್ಕೆಯಾಗುತ್ತಿದ್ದು, ಅಧಿಕಾರಿಗಳು ಸೌಜನ್ಯದಿಂದ ವರ್ತಿಸುವಂತೆ ಬೇಡಿಕೆ ಸಲ್ಲಿಸಿದ್ದಾರೆ.

ಒಕ್ಕೂಟದ ಮಾನ್ಯತೆ: ಇದು ಪ್ರಮುಖವಾದ ಬೇಡಿಕೆಯಾಗಿದ್ದು, ತಮ್ಮ ಕಾರ್ಮಿಕ ಸಂಘಟನೆಗೆ ಕಾರ್ಖಾನೆಯ ಆಡಳಿತ ಮಾನ್ಯತೆ ನೀಡಬೇಕು ಎಂದು ಕಾರ್ಮಿಕರು ಬೇಡಿಕೆ ಮುಂದಿಟ್ಟಿದ್ದಾರೆ. ತಮಿಳುನಾಡು ಕಾರ್ಮಿಕ ಇಲಾಖೆಯಲ್ಲಿ ಯೂನಿಯನ್ ನೋಂದಣಿಗಾಗಿ ಬಾಕಿ ಉಳಿದಿರುವ ಅರ್ಜಿಯ ಹೊರತಾಗಿಯೂ, SIWU ಅನ್ನು ಆಡಳಿತವು ಅಂಗೀಕರಿಸಿಲ್ಲ. ಆಡಳಿತ ಮಂಡಳಿತಯು ಸಿಐಟಿಯು ನೇತೃತ್ವದ ಸಂಘಟನೆಯ ಮಾನ್ಯತೆಯ ಬಗ್ಗೆ ತರಕಾರು ಮಾಡುತ್ತಿವೆ.

ಕಾರ್ಮಿಕ ಹಕ್ಕುಗಳ ದೃಷ್ಟಿಕೋನದಿಂದ, ನ್ಯಾಯಯುತ ವೇತನ ಮತ್ತು ಸುಧಾರಿತ ಕೆಲಸದ ಪರಿಸ್ಥಿತಿಗಳ ಬೇಡಿಕೆಗಳು ಜಾಗತಿಕ ಕಾರ್ಮಿಕ ಮಾನದಂಡಗಳಾಗಿವೆ. ಅಲ್ಲದೆ, ಕಾರ್ಮಿಕರ ಪ್ರಮುಖ ಬೇಡಿಕೆಯಾದ ಕಾರ್ಮಿಕ ಸಂಘದ ಮಾನ್ಯತೆ ಕೂಡಾ, ಕಾರ್ಮಿಕ ಒಕ್ಕೂಟಗಳನ್ನು ರಚಿಸುವ ಹಕ್ಕನ್ನು ಅಂತರರಾಷ್ಟ್ರೀಯ ಕಾರ್ಮಿಕ ಕಾನೂನುಗಳ ಅಡಿಯಲ್ಲಿ ರಕ್ಷಿಸಲಾಗಿದೆ. ಈ ಹಕ್ಕನ್ನು ನಿರಾಕರಿಸುವುದು ಮೂಲಭೂತ ಕಾರ್ಮಿಕರ ಹಕ್ಕುಗಳ ಉಲ್ಲಂಘನೆಯಾಗಿದೆ.

ಇದನ್ನೂಓದಿ: ಕೂಲಿ ಕೇಳಿದ ದಲಿತ ಕಾರ್ಮಿಕನಿಗೆ ಹಲ್ಲೆ : ದೇಹದ ಮೇಲೆ ಉಗುಳಿ, ಮೂತ್ರ ವಿಸರ್ಜಿಸಿ ವಿಕೃತಿ

ತಮಿಳುನಾಡು ಸರ್ಕಾರ ಮತ್ತು ಕಾರ್ಮಿಕರ ಮುಷ್ಕರ

ತಮಿಳುನಾಡು ಸರ್ಕಾರವು ಕಾರ್ಮಿಕರು ಮತ್ತು ಸ್ಯಾಮ್‌ಸಂಗ್ ಆಡಳಿತದ ನಡುವೆ ಹಲವು ಬಾರಿ ಮಧ್ಯಸ್ಥಿಕೆ ವಹಿಸಿದೆ. ಕಾರ್ಮಿಕರಿಗೆ ಮಾಸಿಕ ಉತ್ಪಾದಕತೆ ಸ್ಥಿರೀಕರಣ ಪ್ರೋತ್ಸಾಹ ಮತ್ತು ಸುಧಾರಿತ ಸಾರಿಗೆ ಸೌಲಭ್ಯಗಳನ್ನು ಒಳಗೊಂಡಿರುವ ಒಪ್ಪಂದದ ಜ್ಞಾಪಕ ಪತ್ರಕ್ಕೆ (MoA) ಸಹಿ ಮಾಡಿದ ಹೊರತಾಗಿಯೂ, ಕಾರ್ಮಿಕರ ಪ್ರಮುಖ ಬೇಡಿಕೆಯಾಗಿರುವ ಯೂನಿಯನ್ ಮಾನ್ಯತೆಯನ್ನು ಒಪ್ಪದ ಕಾರಣಕ್ಕೆ ಮುಷ್ಕರ ನಿರತ ನೌಕರರು ಒಪ್ಪಂದವನ್ನು ತಿರಸ್ಕರಿಸಿದ್ದಾರೆ.

ತನ್ನ ಉತ್ಪಾದನಾ ಕಾರ್ಯಾಚರಣೆಗಳನ್ನು ತಮಿಳುನಾಡಿನಿಂದ ಸ್ಥಳಾಂತರಿಸುವ ಯೋಜನೆಯಿದೆ ಎಂಬ ವದಂತಿಗಳನ್ನು ಸ್ಯಾಮ್‌ಸಂಗ್ ನಿರಾಕರಿಸಿದೆ. ಅದರ ಆಡಳಿತವು ತಮಿಳುನಾಡು ಸರ್ಕಾರ ಮತ್ತು ಅದರ ಹೂಡಿಕೆ ಸ್ನೇಹಿ ಪರಿಸರ ಬಗ್ಗೆಗಿನ ತಮ್ಮ ಬದ್ಧತೆಯನ್ನು ಒತ್ತಿಹೇಳಿದೆ. ಈ ನಡುವೆ ತಮಿಳುನಾಡು ಸರ್ಕಾರದ ಮೈತ್ರಿ ಪಕ್ಷವಾಗಿರುವ ಸಿಪಿಐ(ಎಂ) ಕಾರ್ಮಿಕರಿಗೆ ಬೆಂಬಲ ವ್ಯಕ್ತಪಡಿಸಿದೆ.

ಮೈತ್ರಿಯಲ್ಲಿ ಬಿರುಕು ಉಂಟಾಗುತ್ತಿದ್ದು, ಸಿಪಿಐ(ಎಂ) ಮೈತ್ರಿಗೆ ದ್ರೋಹ ಬಗೆದಿದೆ ಎಂದು ಕೂಡಾ ಡಿಎಂಕೆ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ ಕಾರ್ಮಿಕ ನಾಯಕರು ಇದನ್ನು ನಿರಾಕರಿಸಿದ್ದಾರೆ. “ಈ ಹೋರಾಟ ಕಾರ್ಮಿಕರ ಹಿತಾಸಕ್ತಿಗಾಗಿ ನಡೆಯುತ್ತಿದ್ದು, ಕಮ್ಯನಿಸ್ಟ್ ಪಕ್ಷಕ್ಕಾಗಿ ಅಲ್ಲ. ಸಿಐಟಿಯು ಈ ಸಂದರ್ಭದಲ್ಲಿ ಕಮ್ಯುನಿಸ್ಟ್ ಪಕ್ಷದ ಜೊತೆಗೆ ನೇರ ಸಂಬಂಧವಿಲ್ಲದ ಸಂಘಟನೆಯಾಗಿದೆ. ನಮಗೆ ಎಲ್ಲಾ ಪಕ್ಷಗಳ ಬೆಂಬಲವಿದೆ. ಈ ಮುಷ್ಕರವು ಕಮ್ಯುನಿಸಂ ಬಗ್ಗೆ ಅಲ್ಲ” ಎಂದು ಪ್ರತಿಭಟನಾನಿರತ ಕಾರ್ಮಿಕ ನಾಯಕರೊಬ್ಬರು ಹೇಳಿದ್ದಾರೆ.

ಇದನ್ನೂಓದಿ: ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಕಿರಿಯರ ಪ್ರತಿಭಟನೆ ಬೆಂಬಲಿಸಿ 100ಕ್ಕೂ ಹೆಚ್ಚು ಹಿರಿಯ ವೈದ್ಯರಿಂದ ರಾಜೀನಾಮೆ

ಕಾಂಗ್ರೆಸ್, ಸಿಪಿಐ(ಎಂ), ಸಿಪಿಐ, ಎಂಡಿಎಂಕೆ, ವಿಸಿಕೆ ಸೇರಿದಂತೆ ಡಿಎಂಕೆಯ ಮೈತ್ರಿಕೂಟದ ಪ್ರಮುಖ ನಾಯಕರು ಬುಧವಾರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡುವ ಮುನ್ನ ಬುಧವಾರ ಮುಂಜಾನೆ, ತಮಿಳುನಾಡು ಪೊಲೀಸರು 11 ಪ್ರಮುಖ ಯೂನಿಯನ್ ನಾಯಕರನ್ನು ಬಂಧಿಸಿ, ಪ್ರತಿಭಟನಾ ಡೇರೆಗಳನ್ನು ಕೆಡವಿದ್ದಾರೆ.

ಇತ್ತೀಚಿನ ಬೆಳವಣಿಗೆಗಳು

ಇತ್ತಿಚೆಗೆ ಪೊಲೀಸರ ಕೈವಾಡದಿಂದ ಪ್ರತಿಭಟನಾ ಸ್ಥಳದಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ಪ್ರತಿಭಟನೆಯ ಸಮಯದಲ್ಲಿ ನಡೆದ ವಾಗ್ವಾದದ ನಂತರ ಏಳು ಕಾರ್ಮಿಕರನ್ನು ಬಂಧಿಸಲಾಗಿದೆ. ಪ್ರತಿಭಟನಾ ನಿರತ ಕಾರ್ಮಿಕರ ವಿರುದ್ಧ ಪೋಲಿಸರು ಕಿರುಕುಳ ನೀಡುತ್ತಿದ್ದು, ಬೆದರಿಕೆ ತಂತ್ರಗಳನ್ನು ಅನುಸರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಮುಷ್ಕರ ನಿರತ ಕಾರ್ಮಿಕರನ್ನು ಮೇಲ್ವಿಚಾರಣೆ ಮಾಡಲು ಪೊಲೀಸರು ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಪ್ರತಿಭಟನಾ ಟೆಂಟ್‌ಗಳನ್ನು ಕೆಡವಿದ್ದಾರೆ. ಇದು ಅಧಿಕಾರಿಗಳು ಮತ್ತು ನೌಕರರ ನಡುವಿನ ಉದ್ವಿಗ್ನತೆಯನ್ನು ಇನ್ನಷ್ಟು ತೀವ್ರಗೊಳಿಸಿದ್ದಾರೆ.

ಸಮುದಾಯ ಮತ್ತು ರಾಜಕೀಯ ಬೆಂಬಲ

ಮುಷ್ಕರ ನಿರತ ಕಾರ್ಮಿಕರಿಗೆ ಕಾಂಗ್ರೆಸ್, ಸಿಪಿಐ(ಎಂ), ಸಿಪಿಐ, ಎಂಡಿಎಂಕೆ, ವಿಸಿಕೆ ಸೇರಿದಂತೆ ಡಿಎಂಕೆಯ ಮೈತ್ರಿಕೂಟದ ಪ್ರಮುಖ ನಾಯಕರು, ವಿವಿಧ ರಾಜಕೀಯ ಪಕ್ಷಗಳು ಮತ್ತು ಕಾರ್ಮಿಕ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ.

ವಿಡಿಯೊ ನೋಡಿ: ಬೆಂಗಳೂರು: ಜಯನಗರದಲ್ಲಿ ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...