Homeಚಳವಳಿದೇಶದಲ್ಲೆ ಅತ್ಯಂತ ದೊಡ್ಡ ಕಾರ್ಮಿಕ ಮುಷ್ಕರ | ಸ್ಯಾಮ್‌ಸಂಗ್ 30% ಉತ್ಪಾದನೆಗೆ ಹೊಡೆತ | ಹೋರಾಟದ...

ದೇಶದಲ್ಲೆ ಅತ್ಯಂತ ದೊಡ್ಡ ಕಾರ್ಮಿಕ ಮುಷ್ಕರ | ಸ್ಯಾಮ್‌ಸಂಗ್ 30% ಉತ್ಪಾದನೆಗೆ ಹೊಡೆತ | ಹೋರಾಟದ ಬಗ್ಗೆ ಸಂಕ್ಷಿಪ್ತ ವಿವರ

- Advertisement -
- Advertisement -

ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿರುವ ಸ್ಯಾಮ್‌ಸಂಗ್ ಸ್ಥಾವರದಲ್ಲಿ ಕಾರ್ಮಿಕ ಸಂಘಟನೆಯಾದ ಸಿಐಟಿಯು ನೇತೃತ್ವದಲ್ಲಿ ನಡೆಯುತ್ತಿರುವ ಮುಷ್ಕರವು ಎರಡನೇ ತಿಂಗಳಿಗೆ ಕಾಲಿಟ್ಟಿದೆ. ಭಾರತದಲ್ಲಿ ಇತ್ತಿಚೆಗೆ ನಡೆದ ಅತಿ ದೊಡ್ಡ ಮುಷ್ಕರಗಳಲ್ಲಿ ಇದು ಒಂದಾಗಿದೆ ಎಂದು ವರದಿಯಾಗಿದೆ. ಭಾರತದಲ್ಲಿ ಸ್ಯಾಮ್‌ಸಂಗ್‌ನ ವಾರ್ಷಿಕ ಆದಾಯದ ಸರಿಸುಮಾರು ಮೂರನೇ ಒಂದು ಭಾಗದಷ್ಟು ಆರ್ಥಿಕ ವಹಿವಾಟು ತಮಿಳುನಾಡಿನ ಈ ಸ್ಥಾವರದಲ್ಲಿ ನಡೆಯುತ್ತಿದೆ. ಸ್ಯಾಮ್‌ಸಂಗ್‌ ವಿರುದ್ಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸ್ಯಾಮ್‌ಸಂಗ್‌ನ ಶ್ರೀಪೆರಂಬದೂರ್ ಸ್ಥಾವರವು ರೆಫ್ರಿಜರೇಟರ್‌ಗಳು, ಟೆಲಿವಿಷನ್‌ಗಳು ಮತ್ತು ವಾಷಿಂಗ್‌ಮಿಷನ್ ಯಂತ್ರಗಳಂತಹ ಎಲೆಕ್ಟ್ರಾನಿಕ್ ಉತ್ಪನ್ನಗಳನ್ನು ತಯಾರಿಸುತ್ತದೆ. ಭಾರತದ ತನ್ನ 12 ಶತಕೋಟಿ ಡಾರಲ್‌ ಆದಾಯದ ಸರಿಸುಮಾರು 30% ರಷ್ಟು ವಹಿವಾಟು ಈ ಕಾರ್ಖಾನೆಯಲ್ಲೆ ನಡೆಯುವುದರಿಂದ ಕಾರ್ಮಿಕರ ಈ ಪ್ರತಿಭಟನೆಯು ಸ್ಯಾಮ್‌ಸಂಗ್ ಉತ್ಪಾದನೆಯ ಮೇಲೆ ಭಾರಿ ಪರಿಣಾಮ ಬೀರಿದೆ.

ಮುಷ್ಕರದ ಹಿನ್ನೆಲೆ

ಕಾರ್ಮಿಕರ ಮುಷ್ಕರವು 2024ರ ಸೆಪ್ಟೆಂಬರ್ 9ರಂದು ಪ್ರಾರಂಭವಾಯಿತು. ಈ ಮುಷ್ಕರದಲ್ಲಿ ಕಾರ್ಖಾನೆಯ 1,500 ಕ್ಕೂ ಹೆಚ್ಚು ಕಾರ್ಮಿಕರು ಭಾಗವಹಿಸಿದ್ದರು. ಇದು ಕಾರ್ಖಾನೆಯಲ್ಲಿ ಕೆಲಸ ಮಾಡುವ 80% ಕ್ಕಿಂತ ಹೆಚ್ಚು ಕಾರ್ಮಿಕರ ಸಂಖ್ಯೆಯಾಗಿದ್ದು, ಉತ್ಪಾದನೆ ಮೇಲೆ ತೀವ್ರ ಹೊಡೆತ ಬಿದ್ದಿದೆ.

ಕಾರ್ಮಿಕರು ಉತ್ತಮ ವೇತನ, ಸುಧಾರಿತ ಕೆಲಸದ ಪರಿಸ್ಥಿತಿಗಳು ಮತ್ತು ಹೊಸದಾಗಿ ರೂಪುಗೊಂಡ ತಮ್ಮ ಟ್ರೇಡ್ ಯೂನಿಯನ್, ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್'(SIWU)ಗೆ ಮಾನ್ಯತೆ ನೀಡಬೇಕು ಎಂಬ ಪ್ರಮುಖ ಬೇಡಿಕೆಯನ್ನು ಮುಂದಿಟ್ಟಿದ್ದಾರೆ.ಸ್ಯಾಮ್‌ಸಂಗ್‌ ವಿರುದ್ಧ

ಇದನ್ನೂಓದಿ: ಅಮೆರಿಕ ಅಧ್ಯಕ್ಷೀಯ ಚುನಾವಣೆ | ಟ್ರಂಪ್ ಪರವಾಗಿ ಸಭೆ ನಡೆಸುತ್ತಿರುವ ಬಿಜೆಪಿಯ ಮಾಜಿ ಶಾಸಕ!

ಮುಷ್ಕರ ನಿರತ ಕಾರ್ಮಿಕರ ಪ್ರಮುಖ ಬೇಡಿಕೆಗಳು

ಉತ್ತಮ ವೇತನ: ಕಾರ್ಖಾನೆಯ ಪ್ರಸ್ತುತ ವೇತನವು ರೂ. 20,000 ರಿಂದ ರೂ 40,000 ವರೆಗೆ ಇವೆ. ಈ ವೇತವನ್ನು ಹೆಚ್ಚು ಮಾಡಬೇಕು ಎಂದು ಕಾರ್ಮಿಕರು ಒತ್ತಾಯಿಸುತ್ತಿದ್ದಾರೆ. ಸ್ಯಾಮ್‌ಸಂಗ್‌ನ ದಕ್ಷಿಣ ಕೊರಿಯಾದಲ್ಲಿ ಇದೆ ರೀತಿ ಕೆಲಸ ಮಾಡುವ ಕಾರ್ಮಿಕರು ವೇತನ ತಿಂಗಳಿಗೆ ಸುಮಾರು 4.55 ಲಕ್ಷವರೆಗೂ ಇವೆ. ಇತ್ತಿಚೆಗಷ್ಟೆ ದಕ್ಷಿಣ ಕೊರಿಯಾದ ಸ್ಟಾವರದಲ್ಲೂ ಕಾರ್ಮಿಕರು ಪ್ರತಿಭಟನೆ ನಡೆಸಿ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಂಡಿದ್ದರು.

ಸುಧಾರಿತ ಕೆಲಸದ ಪರಿಸ್ಥಿತಿಗಳು: ಅನೇಕ ಕಾರ್ಮಿಕರು ಶಾಸನಬದ್ಧ ಕೆಲಸದ ಸಮಯವನ್ನು ಮೀರಿ ಕಾರ್ಖನೆಯು ಕೆಲಸ ಮಾಡಿಸುತ್ತಿದೆ ಎಂದು ವರದಿಯಾಗಿವೆ. ನಿರ್ದಿಷ್ಟವಾಗಿ, ಎಂಟು ಗಂಟೆಗಳ ಕೆಲಸಕ್ಕಾಗಿ ಕಾರ್ಮಿಕರು ಬೇಡಿಕೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕಾರ್ಖಾನೆಯಲ್ಲಿ ಕಾರ್ಮಿಕರ ಸ್ವಾಭಿಮಾನಕ್ಕೆ ಧಕ್ಕೆಯಾಗುತ್ತಿದ್ದು, ಅಧಿಕಾರಿಗಳು ಸೌಜನ್ಯದಿಂದ ವರ್ತಿಸುವಂತೆ ಬೇಡಿಕೆ ಸಲ್ಲಿಸಿದ್ದಾರೆ.

ಒಕ್ಕೂಟದ ಮಾನ್ಯತೆ: ಇದು ಪ್ರಮುಖವಾದ ಬೇಡಿಕೆಯಾಗಿದ್ದು, ತಮ್ಮ ಕಾರ್ಮಿಕ ಸಂಘಟನೆಗೆ ಕಾರ್ಖಾನೆಯ ಆಡಳಿತ ಮಾನ್ಯತೆ ನೀಡಬೇಕು ಎಂದು ಕಾರ್ಮಿಕರು ಬೇಡಿಕೆ ಮುಂದಿಟ್ಟಿದ್ದಾರೆ. ತಮಿಳುನಾಡು ಕಾರ್ಮಿಕ ಇಲಾಖೆಯಲ್ಲಿ ಯೂನಿಯನ್ ನೋಂದಣಿಗಾಗಿ ಬಾಕಿ ಉಳಿದಿರುವ ಅರ್ಜಿಯ ಹೊರತಾಗಿಯೂ, SIWU ಅನ್ನು ಆಡಳಿತವು ಅಂಗೀಕರಿಸಿಲ್ಲ. ಆಡಳಿತ ಮಂಡಳಿತಯು ಸಿಐಟಿಯು ನೇತೃತ್ವದ ಸಂಘಟನೆಯ ಮಾನ್ಯತೆಯ ಬಗ್ಗೆ ತರಕಾರು ಮಾಡುತ್ತಿವೆ.

ಕಾರ್ಮಿಕ ಹಕ್ಕುಗಳ ದೃಷ್ಟಿಕೋನದಿಂದ, ನ್ಯಾಯಯುತ ವೇತನ ಮತ್ತು ಸುಧಾರಿತ ಕೆಲಸದ ಪರಿಸ್ಥಿತಿಗಳ ಬೇಡಿಕೆಗಳು ಜಾಗತಿಕ ಕಾರ್ಮಿಕ ಮಾನದಂಡಗಳಾಗಿವೆ. ಅಲ್ಲದೆ, ಕಾರ್ಮಿಕರ ಪ್ರಮುಖ ಬೇಡಿಕೆಯಾದ ಕಾರ್ಮಿಕ ಸಂಘದ ಮಾನ್ಯತೆ ಕೂಡಾ, ಕಾರ್ಮಿಕ ಒಕ್ಕೂಟಗಳನ್ನು ರಚಿಸುವ ಹಕ್ಕನ್ನು ಅಂತರರಾಷ್ಟ್ರೀಯ ಕಾರ್ಮಿಕ ಕಾನೂನುಗಳ ಅಡಿಯಲ್ಲಿ ರಕ್ಷಿಸಲಾಗಿದೆ. ಈ ಹಕ್ಕನ್ನು ನಿರಾಕರಿಸುವುದು ಮೂಲಭೂತ ಕಾರ್ಮಿಕರ ಹಕ್ಕುಗಳ ಉಲ್ಲಂಘನೆಯಾಗಿದೆ.

ಇದನ್ನೂಓದಿ: ಕೂಲಿ ಕೇಳಿದ ದಲಿತ ಕಾರ್ಮಿಕನಿಗೆ ಹಲ್ಲೆ : ದೇಹದ ಮೇಲೆ ಉಗುಳಿ, ಮೂತ್ರ ವಿಸರ್ಜಿಸಿ ವಿಕೃತಿ

ತಮಿಳುನಾಡು ಸರ್ಕಾರ ಮತ್ತು ಕಾರ್ಮಿಕರ ಮುಷ್ಕರ

ತಮಿಳುನಾಡು ಸರ್ಕಾರವು ಕಾರ್ಮಿಕರು ಮತ್ತು ಸ್ಯಾಮ್‌ಸಂಗ್ ಆಡಳಿತದ ನಡುವೆ ಹಲವು ಬಾರಿ ಮಧ್ಯಸ್ಥಿಕೆ ವಹಿಸಿದೆ. ಕಾರ್ಮಿಕರಿಗೆ ಮಾಸಿಕ ಉತ್ಪಾದಕತೆ ಸ್ಥಿರೀಕರಣ ಪ್ರೋತ್ಸಾಹ ಮತ್ತು ಸುಧಾರಿತ ಸಾರಿಗೆ ಸೌಲಭ್ಯಗಳನ್ನು ಒಳಗೊಂಡಿರುವ ಒಪ್ಪಂದದ ಜ್ಞಾಪಕ ಪತ್ರಕ್ಕೆ (MoA) ಸಹಿ ಮಾಡಿದ ಹೊರತಾಗಿಯೂ, ಕಾರ್ಮಿಕರ ಪ್ರಮುಖ ಬೇಡಿಕೆಯಾಗಿರುವ ಯೂನಿಯನ್ ಮಾನ್ಯತೆಯನ್ನು ಒಪ್ಪದ ಕಾರಣಕ್ಕೆ ಮುಷ್ಕರ ನಿರತ ನೌಕರರು ಒಪ್ಪಂದವನ್ನು ತಿರಸ್ಕರಿಸಿದ್ದಾರೆ.

ತನ್ನ ಉತ್ಪಾದನಾ ಕಾರ್ಯಾಚರಣೆಗಳನ್ನು ತಮಿಳುನಾಡಿನಿಂದ ಸ್ಥಳಾಂತರಿಸುವ ಯೋಜನೆಯಿದೆ ಎಂಬ ವದಂತಿಗಳನ್ನು ಸ್ಯಾಮ್‌ಸಂಗ್ ನಿರಾಕರಿಸಿದೆ. ಅದರ ಆಡಳಿತವು ತಮಿಳುನಾಡು ಸರ್ಕಾರ ಮತ್ತು ಅದರ ಹೂಡಿಕೆ ಸ್ನೇಹಿ ಪರಿಸರ ಬಗ್ಗೆಗಿನ ತಮ್ಮ ಬದ್ಧತೆಯನ್ನು ಒತ್ತಿಹೇಳಿದೆ. ಈ ನಡುವೆ ತಮಿಳುನಾಡು ಸರ್ಕಾರದ ಮೈತ್ರಿ ಪಕ್ಷವಾಗಿರುವ ಸಿಪಿಐ(ಎಂ) ಕಾರ್ಮಿಕರಿಗೆ ಬೆಂಬಲ ವ್ಯಕ್ತಪಡಿಸಿದೆ.

ಮೈತ್ರಿಯಲ್ಲಿ ಬಿರುಕು ಉಂಟಾಗುತ್ತಿದ್ದು, ಸಿಪಿಐ(ಎಂ) ಮೈತ್ರಿಗೆ ದ್ರೋಹ ಬಗೆದಿದೆ ಎಂದು ಕೂಡಾ ಡಿಎಂಕೆ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ ಕಾರ್ಮಿಕ ನಾಯಕರು ಇದನ್ನು ನಿರಾಕರಿಸಿದ್ದಾರೆ. “ಈ ಹೋರಾಟ ಕಾರ್ಮಿಕರ ಹಿತಾಸಕ್ತಿಗಾಗಿ ನಡೆಯುತ್ತಿದ್ದು, ಕಮ್ಯನಿಸ್ಟ್ ಪಕ್ಷಕ್ಕಾಗಿ ಅಲ್ಲ. ಸಿಐಟಿಯು ಈ ಸಂದರ್ಭದಲ್ಲಿ ಕಮ್ಯುನಿಸ್ಟ್ ಪಕ್ಷದ ಜೊತೆಗೆ ನೇರ ಸಂಬಂಧವಿಲ್ಲದ ಸಂಘಟನೆಯಾಗಿದೆ. ನಮಗೆ ಎಲ್ಲಾ ಪಕ್ಷಗಳ ಬೆಂಬಲವಿದೆ. ಈ ಮುಷ್ಕರವು ಕಮ್ಯುನಿಸಂ ಬಗ್ಗೆ ಅಲ್ಲ” ಎಂದು ಪ್ರತಿಭಟನಾನಿರತ ಕಾರ್ಮಿಕ ನಾಯಕರೊಬ್ಬರು ಹೇಳಿದ್ದಾರೆ.

ಇದನ್ನೂಓದಿ: ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಕಿರಿಯರ ಪ್ರತಿಭಟನೆ ಬೆಂಬಲಿಸಿ 100ಕ್ಕೂ ಹೆಚ್ಚು ಹಿರಿಯ ವೈದ್ಯರಿಂದ ರಾಜೀನಾಮೆ

ಕಾಂಗ್ರೆಸ್, ಸಿಪಿಐ(ಎಂ), ಸಿಪಿಐ, ಎಂಡಿಎಂಕೆ, ವಿಸಿಕೆ ಸೇರಿದಂತೆ ಡಿಎಂಕೆಯ ಮೈತ್ರಿಕೂಟದ ಪ್ರಮುಖ ನಾಯಕರು ಬುಧವಾರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡುವ ಮುನ್ನ ಬುಧವಾರ ಮುಂಜಾನೆ, ತಮಿಳುನಾಡು ಪೊಲೀಸರು 11 ಪ್ರಮುಖ ಯೂನಿಯನ್ ನಾಯಕರನ್ನು ಬಂಧಿಸಿ, ಪ್ರತಿಭಟನಾ ಡೇರೆಗಳನ್ನು ಕೆಡವಿದ್ದಾರೆ.

ಇತ್ತೀಚಿನ ಬೆಳವಣಿಗೆಗಳು

ಇತ್ತಿಚೆಗೆ ಪೊಲೀಸರ ಕೈವಾಡದಿಂದ ಪ್ರತಿಭಟನಾ ಸ್ಥಳದಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ಪ್ರತಿಭಟನೆಯ ಸಮಯದಲ್ಲಿ ನಡೆದ ವಾಗ್ವಾದದ ನಂತರ ಏಳು ಕಾರ್ಮಿಕರನ್ನು ಬಂಧಿಸಲಾಗಿದೆ. ಪ್ರತಿಭಟನಾ ನಿರತ ಕಾರ್ಮಿಕರ ವಿರುದ್ಧ ಪೋಲಿಸರು ಕಿರುಕುಳ ನೀಡುತ್ತಿದ್ದು, ಬೆದರಿಕೆ ತಂತ್ರಗಳನ್ನು ಅನುಸರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಮುಷ್ಕರ ನಿರತ ಕಾರ್ಮಿಕರನ್ನು ಮೇಲ್ವಿಚಾರಣೆ ಮಾಡಲು ಪೊಲೀಸರು ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಪ್ರತಿಭಟನಾ ಟೆಂಟ್‌ಗಳನ್ನು ಕೆಡವಿದ್ದಾರೆ. ಇದು ಅಧಿಕಾರಿಗಳು ಮತ್ತು ನೌಕರರ ನಡುವಿನ ಉದ್ವಿಗ್ನತೆಯನ್ನು ಇನ್ನಷ್ಟು ತೀವ್ರಗೊಳಿಸಿದ್ದಾರೆ.

ಸಮುದಾಯ ಮತ್ತು ರಾಜಕೀಯ ಬೆಂಬಲ

ಮುಷ್ಕರ ನಿರತ ಕಾರ್ಮಿಕರಿಗೆ ಕಾಂಗ್ರೆಸ್, ಸಿಪಿಐ(ಎಂ), ಸಿಪಿಐ, ಎಂಡಿಎಂಕೆ, ವಿಸಿಕೆ ಸೇರಿದಂತೆ ಡಿಎಂಕೆಯ ಮೈತ್ರಿಕೂಟದ ಪ್ರಮುಖ ನಾಯಕರು, ವಿವಿಧ ರಾಜಕೀಯ ಪಕ್ಷಗಳು ಮತ್ತು ಕಾರ್ಮಿಕ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ.

ವಿಡಿಯೊ ನೋಡಿ: ಬೆಂಗಳೂರು: ಜಯನಗರದಲ್ಲಿ ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...