Homeಚಳವಳಿದೇಶದಲ್ಲೆ ಅತ್ಯಂತ ದೊಡ್ಡ ಕಾರ್ಮಿಕ ಮುಷ್ಕರ | ಸ್ಯಾಮ್‌ಸಂಗ್ 30% ಉತ್ಪಾದನೆಗೆ ಹೊಡೆತ | ಹೋರಾಟದ...

ದೇಶದಲ್ಲೆ ಅತ್ಯಂತ ದೊಡ್ಡ ಕಾರ್ಮಿಕ ಮುಷ್ಕರ | ಸ್ಯಾಮ್‌ಸಂಗ್ 30% ಉತ್ಪಾದನೆಗೆ ಹೊಡೆತ | ಹೋರಾಟದ ಬಗ್ಗೆ ಸಂಕ್ಷಿಪ್ತ ವಿವರ

- Advertisement -
- Advertisement -

ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿರುವ ಸ್ಯಾಮ್‌ಸಂಗ್ ಸ್ಥಾವರದಲ್ಲಿ ಕಾರ್ಮಿಕ ಸಂಘಟನೆಯಾದ ಸಿಐಟಿಯು ನೇತೃತ್ವದಲ್ಲಿ ನಡೆಯುತ್ತಿರುವ ಮುಷ್ಕರವು ಎರಡನೇ ತಿಂಗಳಿಗೆ ಕಾಲಿಟ್ಟಿದೆ. ಭಾರತದಲ್ಲಿ ಇತ್ತಿಚೆಗೆ ನಡೆದ ಅತಿ ದೊಡ್ಡ ಮುಷ್ಕರಗಳಲ್ಲಿ ಇದು ಒಂದಾಗಿದೆ ಎಂದು ವರದಿಯಾಗಿದೆ. ಭಾರತದಲ್ಲಿ ಸ್ಯಾಮ್‌ಸಂಗ್‌ನ ವಾರ್ಷಿಕ ಆದಾಯದ ಸರಿಸುಮಾರು ಮೂರನೇ ಒಂದು ಭಾಗದಷ್ಟು ಆರ್ಥಿಕ ವಹಿವಾಟು ತಮಿಳುನಾಡಿನ ಈ ಸ್ಥಾವರದಲ್ಲಿ ನಡೆಯುತ್ತಿದೆ. ಸ್ಯಾಮ್‌ಸಂಗ್‌ ವಿರುದ್ಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸ್ಯಾಮ್‌ಸಂಗ್‌ನ ಶ್ರೀಪೆರಂಬದೂರ್ ಸ್ಥಾವರವು ರೆಫ್ರಿಜರೇಟರ್‌ಗಳು, ಟೆಲಿವಿಷನ್‌ಗಳು ಮತ್ತು ವಾಷಿಂಗ್‌ಮಿಷನ್ ಯಂತ್ರಗಳಂತಹ ಎಲೆಕ್ಟ್ರಾನಿಕ್ ಉತ್ಪನ್ನಗಳನ್ನು ತಯಾರಿಸುತ್ತದೆ. ಭಾರತದ ತನ್ನ 12 ಶತಕೋಟಿ ಡಾರಲ್‌ ಆದಾಯದ ಸರಿಸುಮಾರು 30% ರಷ್ಟು ವಹಿವಾಟು ಈ ಕಾರ್ಖಾನೆಯಲ್ಲೆ ನಡೆಯುವುದರಿಂದ ಕಾರ್ಮಿಕರ ಈ ಪ್ರತಿಭಟನೆಯು ಸ್ಯಾಮ್‌ಸಂಗ್ ಉತ್ಪಾದನೆಯ ಮೇಲೆ ಭಾರಿ ಪರಿಣಾಮ ಬೀರಿದೆ.

ಮುಷ್ಕರದ ಹಿನ್ನೆಲೆ

ಕಾರ್ಮಿಕರ ಮುಷ್ಕರವು 2024ರ ಸೆಪ್ಟೆಂಬರ್ 9ರಂದು ಪ್ರಾರಂಭವಾಯಿತು. ಈ ಮುಷ್ಕರದಲ್ಲಿ ಕಾರ್ಖಾನೆಯ 1,500 ಕ್ಕೂ ಹೆಚ್ಚು ಕಾರ್ಮಿಕರು ಭಾಗವಹಿಸಿದ್ದರು. ಇದು ಕಾರ್ಖಾನೆಯಲ್ಲಿ ಕೆಲಸ ಮಾಡುವ 80% ಕ್ಕಿಂತ ಹೆಚ್ಚು ಕಾರ್ಮಿಕರ ಸಂಖ್ಯೆಯಾಗಿದ್ದು, ಉತ್ಪಾದನೆ ಮೇಲೆ ತೀವ್ರ ಹೊಡೆತ ಬಿದ್ದಿದೆ.

ಕಾರ್ಮಿಕರು ಉತ್ತಮ ವೇತನ, ಸುಧಾರಿತ ಕೆಲಸದ ಪರಿಸ್ಥಿತಿಗಳು ಮತ್ತು ಹೊಸದಾಗಿ ರೂಪುಗೊಂಡ ತಮ್ಮ ಟ್ರೇಡ್ ಯೂನಿಯನ್, ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್'(SIWU)ಗೆ ಮಾನ್ಯತೆ ನೀಡಬೇಕು ಎಂಬ ಪ್ರಮುಖ ಬೇಡಿಕೆಯನ್ನು ಮುಂದಿಟ್ಟಿದ್ದಾರೆ.ಸ್ಯಾಮ್‌ಸಂಗ್‌ ವಿರುದ್ಧ

ಇದನ್ನೂಓದಿ: ಅಮೆರಿಕ ಅಧ್ಯಕ್ಷೀಯ ಚುನಾವಣೆ | ಟ್ರಂಪ್ ಪರವಾಗಿ ಸಭೆ ನಡೆಸುತ್ತಿರುವ ಬಿಜೆಪಿಯ ಮಾಜಿ ಶಾಸಕ!

ಮುಷ್ಕರ ನಿರತ ಕಾರ್ಮಿಕರ ಪ್ರಮುಖ ಬೇಡಿಕೆಗಳು

ಉತ್ತಮ ವೇತನ: ಕಾರ್ಖಾನೆಯ ಪ್ರಸ್ತುತ ವೇತನವು ರೂ. 20,000 ರಿಂದ ರೂ 40,000 ವರೆಗೆ ಇವೆ. ಈ ವೇತವನ್ನು ಹೆಚ್ಚು ಮಾಡಬೇಕು ಎಂದು ಕಾರ್ಮಿಕರು ಒತ್ತಾಯಿಸುತ್ತಿದ್ದಾರೆ. ಸ್ಯಾಮ್‌ಸಂಗ್‌ನ ದಕ್ಷಿಣ ಕೊರಿಯಾದಲ್ಲಿ ಇದೆ ರೀತಿ ಕೆಲಸ ಮಾಡುವ ಕಾರ್ಮಿಕರು ವೇತನ ತಿಂಗಳಿಗೆ ಸುಮಾರು 4.55 ಲಕ್ಷವರೆಗೂ ಇವೆ. ಇತ್ತಿಚೆಗಷ್ಟೆ ದಕ್ಷಿಣ ಕೊರಿಯಾದ ಸ್ಟಾವರದಲ್ಲೂ ಕಾರ್ಮಿಕರು ಪ್ರತಿಭಟನೆ ನಡೆಸಿ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಂಡಿದ್ದರು.

ಸುಧಾರಿತ ಕೆಲಸದ ಪರಿಸ್ಥಿತಿಗಳು: ಅನೇಕ ಕಾರ್ಮಿಕರು ಶಾಸನಬದ್ಧ ಕೆಲಸದ ಸಮಯವನ್ನು ಮೀರಿ ಕಾರ್ಖನೆಯು ಕೆಲಸ ಮಾಡಿಸುತ್ತಿದೆ ಎಂದು ವರದಿಯಾಗಿವೆ. ನಿರ್ದಿಷ್ಟವಾಗಿ, ಎಂಟು ಗಂಟೆಗಳ ಕೆಲಸಕ್ಕಾಗಿ ಕಾರ್ಮಿಕರು ಬೇಡಿಕೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕಾರ್ಖಾನೆಯಲ್ಲಿ ಕಾರ್ಮಿಕರ ಸ್ವಾಭಿಮಾನಕ್ಕೆ ಧಕ್ಕೆಯಾಗುತ್ತಿದ್ದು, ಅಧಿಕಾರಿಗಳು ಸೌಜನ್ಯದಿಂದ ವರ್ತಿಸುವಂತೆ ಬೇಡಿಕೆ ಸಲ್ಲಿಸಿದ್ದಾರೆ.

ಒಕ್ಕೂಟದ ಮಾನ್ಯತೆ: ಇದು ಪ್ರಮುಖವಾದ ಬೇಡಿಕೆಯಾಗಿದ್ದು, ತಮ್ಮ ಕಾರ್ಮಿಕ ಸಂಘಟನೆಗೆ ಕಾರ್ಖಾನೆಯ ಆಡಳಿತ ಮಾನ್ಯತೆ ನೀಡಬೇಕು ಎಂದು ಕಾರ್ಮಿಕರು ಬೇಡಿಕೆ ಮುಂದಿಟ್ಟಿದ್ದಾರೆ. ತಮಿಳುನಾಡು ಕಾರ್ಮಿಕ ಇಲಾಖೆಯಲ್ಲಿ ಯೂನಿಯನ್ ನೋಂದಣಿಗಾಗಿ ಬಾಕಿ ಉಳಿದಿರುವ ಅರ್ಜಿಯ ಹೊರತಾಗಿಯೂ, SIWU ಅನ್ನು ಆಡಳಿತವು ಅಂಗೀಕರಿಸಿಲ್ಲ. ಆಡಳಿತ ಮಂಡಳಿತಯು ಸಿಐಟಿಯು ನೇತೃತ್ವದ ಸಂಘಟನೆಯ ಮಾನ್ಯತೆಯ ಬಗ್ಗೆ ತರಕಾರು ಮಾಡುತ್ತಿವೆ.

ಕಾರ್ಮಿಕ ಹಕ್ಕುಗಳ ದೃಷ್ಟಿಕೋನದಿಂದ, ನ್ಯಾಯಯುತ ವೇತನ ಮತ್ತು ಸುಧಾರಿತ ಕೆಲಸದ ಪರಿಸ್ಥಿತಿಗಳ ಬೇಡಿಕೆಗಳು ಜಾಗತಿಕ ಕಾರ್ಮಿಕ ಮಾನದಂಡಗಳಾಗಿವೆ. ಅಲ್ಲದೆ, ಕಾರ್ಮಿಕರ ಪ್ರಮುಖ ಬೇಡಿಕೆಯಾದ ಕಾರ್ಮಿಕ ಸಂಘದ ಮಾನ್ಯತೆ ಕೂಡಾ, ಕಾರ್ಮಿಕ ಒಕ್ಕೂಟಗಳನ್ನು ರಚಿಸುವ ಹಕ್ಕನ್ನು ಅಂತರರಾಷ್ಟ್ರೀಯ ಕಾರ್ಮಿಕ ಕಾನೂನುಗಳ ಅಡಿಯಲ್ಲಿ ರಕ್ಷಿಸಲಾಗಿದೆ. ಈ ಹಕ್ಕನ್ನು ನಿರಾಕರಿಸುವುದು ಮೂಲಭೂತ ಕಾರ್ಮಿಕರ ಹಕ್ಕುಗಳ ಉಲ್ಲಂಘನೆಯಾಗಿದೆ.

ಇದನ್ನೂಓದಿ: ಕೂಲಿ ಕೇಳಿದ ದಲಿತ ಕಾರ್ಮಿಕನಿಗೆ ಹಲ್ಲೆ : ದೇಹದ ಮೇಲೆ ಉಗುಳಿ, ಮೂತ್ರ ವಿಸರ್ಜಿಸಿ ವಿಕೃತಿ

ತಮಿಳುನಾಡು ಸರ್ಕಾರ ಮತ್ತು ಕಾರ್ಮಿಕರ ಮುಷ್ಕರ

ತಮಿಳುನಾಡು ಸರ್ಕಾರವು ಕಾರ್ಮಿಕರು ಮತ್ತು ಸ್ಯಾಮ್‌ಸಂಗ್ ಆಡಳಿತದ ನಡುವೆ ಹಲವು ಬಾರಿ ಮಧ್ಯಸ್ಥಿಕೆ ವಹಿಸಿದೆ. ಕಾರ್ಮಿಕರಿಗೆ ಮಾಸಿಕ ಉತ್ಪಾದಕತೆ ಸ್ಥಿರೀಕರಣ ಪ್ರೋತ್ಸಾಹ ಮತ್ತು ಸುಧಾರಿತ ಸಾರಿಗೆ ಸೌಲಭ್ಯಗಳನ್ನು ಒಳಗೊಂಡಿರುವ ಒಪ್ಪಂದದ ಜ್ಞಾಪಕ ಪತ್ರಕ್ಕೆ (MoA) ಸಹಿ ಮಾಡಿದ ಹೊರತಾಗಿಯೂ, ಕಾರ್ಮಿಕರ ಪ್ರಮುಖ ಬೇಡಿಕೆಯಾಗಿರುವ ಯೂನಿಯನ್ ಮಾನ್ಯತೆಯನ್ನು ಒಪ್ಪದ ಕಾರಣಕ್ಕೆ ಮುಷ್ಕರ ನಿರತ ನೌಕರರು ಒಪ್ಪಂದವನ್ನು ತಿರಸ್ಕರಿಸಿದ್ದಾರೆ.

ತನ್ನ ಉತ್ಪಾದನಾ ಕಾರ್ಯಾಚರಣೆಗಳನ್ನು ತಮಿಳುನಾಡಿನಿಂದ ಸ್ಥಳಾಂತರಿಸುವ ಯೋಜನೆಯಿದೆ ಎಂಬ ವದಂತಿಗಳನ್ನು ಸ್ಯಾಮ್‌ಸಂಗ್ ನಿರಾಕರಿಸಿದೆ. ಅದರ ಆಡಳಿತವು ತಮಿಳುನಾಡು ಸರ್ಕಾರ ಮತ್ತು ಅದರ ಹೂಡಿಕೆ ಸ್ನೇಹಿ ಪರಿಸರ ಬಗ್ಗೆಗಿನ ತಮ್ಮ ಬದ್ಧತೆಯನ್ನು ಒತ್ತಿಹೇಳಿದೆ. ಈ ನಡುವೆ ತಮಿಳುನಾಡು ಸರ್ಕಾರದ ಮೈತ್ರಿ ಪಕ್ಷವಾಗಿರುವ ಸಿಪಿಐ(ಎಂ) ಕಾರ್ಮಿಕರಿಗೆ ಬೆಂಬಲ ವ್ಯಕ್ತಪಡಿಸಿದೆ.

ಮೈತ್ರಿಯಲ್ಲಿ ಬಿರುಕು ಉಂಟಾಗುತ್ತಿದ್ದು, ಸಿಪಿಐ(ಎಂ) ಮೈತ್ರಿಗೆ ದ್ರೋಹ ಬಗೆದಿದೆ ಎಂದು ಕೂಡಾ ಡಿಎಂಕೆ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ ಕಾರ್ಮಿಕ ನಾಯಕರು ಇದನ್ನು ನಿರಾಕರಿಸಿದ್ದಾರೆ. “ಈ ಹೋರಾಟ ಕಾರ್ಮಿಕರ ಹಿತಾಸಕ್ತಿಗಾಗಿ ನಡೆಯುತ್ತಿದ್ದು, ಕಮ್ಯನಿಸ್ಟ್ ಪಕ್ಷಕ್ಕಾಗಿ ಅಲ್ಲ. ಸಿಐಟಿಯು ಈ ಸಂದರ್ಭದಲ್ಲಿ ಕಮ್ಯುನಿಸ್ಟ್ ಪಕ್ಷದ ಜೊತೆಗೆ ನೇರ ಸಂಬಂಧವಿಲ್ಲದ ಸಂಘಟನೆಯಾಗಿದೆ. ನಮಗೆ ಎಲ್ಲಾ ಪಕ್ಷಗಳ ಬೆಂಬಲವಿದೆ. ಈ ಮುಷ್ಕರವು ಕಮ್ಯುನಿಸಂ ಬಗ್ಗೆ ಅಲ್ಲ” ಎಂದು ಪ್ರತಿಭಟನಾನಿರತ ಕಾರ್ಮಿಕ ನಾಯಕರೊಬ್ಬರು ಹೇಳಿದ್ದಾರೆ.

ಇದನ್ನೂಓದಿ: ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಕಿರಿಯರ ಪ್ರತಿಭಟನೆ ಬೆಂಬಲಿಸಿ 100ಕ್ಕೂ ಹೆಚ್ಚು ಹಿರಿಯ ವೈದ್ಯರಿಂದ ರಾಜೀನಾಮೆ

ಕಾಂಗ್ರೆಸ್, ಸಿಪಿಐ(ಎಂ), ಸಿಪಿಐ, ಎಂಡಿಎಂಕೆ, ವಿಸಿಕೆ ಸೇರಿದಂತೆ ಡಿಎಂಕೆಯ ಮೈತ್ರಿಕೂಟದ ಪ್ರಮುಖ ನಾಯಕರು ಬುಧವಾರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡುವ ಮುನ್ನ ಬುಧವಾರ ಮುಂಜಾನೆ, ತಮಿಳುನಾಡು ಪೊಲೀಸರು 11 ಪ್ರಮುಖ ಯೂನಿಯನ್ ನಾಯಕರನ್ನು ಬಂಧಿಸಿ, ಪ್ರತಿಭಟನಾ ಡೇರೆಗಳನ್ನು ಕೆಡವಿದ್ದಾರೆ.

ಇತ್ತೀಚಿನ ಬೆಳವಣಿಗೆಗಳು

ಇತ್ತಿಚೆಗೆ ಪೊಲೀಸರ ಕೈವಾಡದಿಂದ ಪ್ರತಿಭಟನಾ ಸ್ಥಳದಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ಪ್ರತಿಭಟನೆಯ ಸಮಯದಲ್ಲಿ ನಡೆದ ವಾಗ್ವಾದದ ನಂತರ ಏಳು ಕಾರ್ಮಿಕರನ್ನು ಬಂಧಿಸಲಾಗಿದೆ. ಪ್ರತಿಭಟನಾ ನಿರತ ಕಾರ್ಮಿಕರ ವಿರುದ್ಧ ಪೋಲಿಸರು ಕಿರುಕುಳ ನೀಡುತ್ತಿದ್ದು, ಬೆದರಿಕೆ ತಂತ್ರಗಳನ್ನು ಅನುಸರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಮುಷ್ಕರ ನಿರತ ಕಾರ್ಮಿಕರನ್ನು ಮೇಲ್ವಿಚಾರಣೆ ಮಾಡಲು ಪೊಲೀಸರು ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಪ್ರತಿಭಟನಾ ಟೆಂಟ್‌ಗಳನ್ನು ಕೆಡವಿದ್ದಾರೆ. ಇದು ಅಧಿಕಾರಿಗಳು ಮತ್ತು ನೌಕರರ ನಡುವಿನ ಉದ್ವಿಗ್ನತೆಯನ್ನು ಇನ್ನಷ್ಟು ತೀವ್ರಗೊಳಿಸಿದ್ದಾರೆ.

ಸಮುದಾಯ ಮತ್ತು ರಾಜಕೀಯ ಬೆಂಬಲ

ಮುಷ್ಕರ ನಿರತ ಕಾರ್ಮಿಕರಿಗೆ ಕಾಂಗ್ರೆಸ್, ಸಿಪಿಐ(ಎಂ), ಸಿಪಿಐ, ಎಂಡಿಎಂಕೆ, ವಿಸಿಕೆ ಸೇರಿದಂತೆ ಡಿಎಂಕೆಯ ಮೈತ್ರಿಕೂಟದ ಪ್ರಮುಖ ನಾಯಕರು, ವಿವಿಧ ರಾಜಕೀಯ ಪಕ್ಷಗಳು ಮತ್ತು ಕಾರ್ಮಿಕ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ.

ವಿಡಿಯೊ ನೋಡಿ: ಬೆಂಗಳೂರು: ಜಯನಗರದಲ್ಲಿ ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...