Homeಮುಖಪುಟಪುಲ್ವಾಮ ಕುರಿತು ಸತ್ಯಪಾಲ್ ಮಲಿಕ್‌ ಹೇಳಿಕೆಯಿಂದ ದೇಶವೇ ಬೆಚ್ಚಿಬಿದ್ದಿದೆ: ಕಾಂಗ್ರೆಸ್

ಪುಲ್ವಾಮ ಕುರಿತು ಸತ್ಯಪಾಲ್ ಮಲಿಕ್‌ ಹೇಳಿಕೆಯಿಂದ ದೇಶವೇ ಬೆಚ್ಚಿಬಿದ್ದಿದೆ: ಕಾಂಗ್ರೆಸ್

ಮೋದಿ ಸರ್ಕಾರದ ಅಸಮರ್ಥತೆಯಿಂದ ಪುಲ್ವಾಮ ದಾಳಿ ನಡೆದು 40 ಭಾರತೀಯ ಸೈನಿಕರು ಹುತಾತ್ಮರಾಗಬೇಕಾಯಿತು ಎಂದು ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಹೇಳಿದ್ದಾರೆ.

- Advertisement -
- Advertisement -

ನರೇಂದ್ರ ಮೋದಿಜಿ ನಿಮ್ಮ ಸರ್ಕಾರದ ತಪ್ಪಿನಿಂದಾಗಿ ಪುಲ್ವಾಮ ದಾಳಿಯಲ್ಲಿ 40 ಧೈರ್ಯವಂತ ಸೈನಿಕರು ಹುತಾತ್ಮರಾಗಬೇಕಾಯಿತು. ನಮ್ಮ ಯೋಧರಿಗೆ ವಿಮಾನ ಸಿಕ್ಕಿದ್ದರೆ ಈ ದಾಳಿಯನ್ನು ತಪ್ಪಿಸಬಹುದಿತ್ತು. ಈ ಬಹುದೊಡ್ಡ ತಪ್ಪಿಗೆ ಕ್ರಮ ತೆಗೆದುಕೊಳ್ಳುವ ಬದಲು ನೀವು ವಿಷಯವನ್ನು ನಿಗ್ರಹಿಸಿ ನಿಮ್ಮ ಇಮೇಜ್‌ಗೆ ಧಕ್ಕೆ ಆಗದಂತೆ ನೋಡಿಕೊಂಡಿರಿ. ಪುಲ್ವಾಮದ ಕುರಿತು ಸತ್ಯಪಾಲ್ ಮಲಿಕ್‌ರವರ ಹೇಳಿಕೆಯಿಂದ ದೇಶವೇ ಬೆಚ್ಚಿಬಿದ್ದಿದೆ ಎಂದು ಕಾಂಗ್ರೆಸ್ ಹೇಳಿದೆ.

ಮೋದಿ ಸರ್ಕಾರದ ಅಸಮರ್ಥತೆಯಿಂದ 2019ರ ಫೆಬ್ರವರಿಯಲ್ಲಿ ಪುಲ್ವಾಮ ದಾಳಿ ನಡೆದು 40 ಭಾರತೀಯ ಸೈನಿಕರು ಹುತಾತ್ಮರಾಗಬೇಕಾಯಿತು ಎಂದು ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಈ ಸಂದರ್ಶನ ಬಿತ್ತರಗೊಳ್ಳುತ್ತಿದ್ದಂತೆ ಪ್ರತಿಪಕ್ಷ ಕಾಂಗ್ರೆಸ್ ನರೇಂದ್ರ ಮೋದಿಯವರ ಮೇಲೆ ಟೀಕಾಪ್ರಹಾರ ನಡೆಸಿದೆ. ರಾಹುಲ್ ಗಾಂಧಿಯವರು ವೈರ್ ವರದಿಯನ್ನು ಟ್ವೀಟ್ ಮಾಡಿದ್ದು, “ಪ್ರಧಾನಿಯವರು ಭ್ರಷ್ಟಾಚಾರವನ್ನು ಹೆಚ್ಚು ದ್ವೇಷಿಸುವುದಿಲ್ಲ” ಎಂದು ಬರೆದಿದ್ದಾರೆ.

ಕಾಂಗ್ರೆಸ್ ಪಕ್ಷವು ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಮೋದಿಯವರ ಬಗ್ಗೆ ಮಲಿಕ್ ಮಾಡಿದ ಆರೋಪಗಳನ್ನು ಪುನರಾವರ್ತಿಸಿದೆ. 2019 ರ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ತಮ್ಮ ವೈಯಕ್ತಿಕ ಇಮೇಜ್ ಅನ್ನು ಉಳಿಸಲು ಮೋದಿ ಅವರು ಪುಲ್ವಾಮ ಘಟನೆಯನ್ನು “ನಿಗ್ರಹಿಸಿದ್ದಾರೆ” ಎಂದು ಕಾಂಗ್ರೆಸ್ ಆರೋಪಿಸಿದೆ.

ದಿ ವೈರ್ ಪತ್ರಕರ್ತ ಕರಣ್ ಥಾಪರ್‌ರವರಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ, “ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಬೆಂಗಾವಲು ಪಡೆಯ ಮೇಲಿನ ದಾಳಿಯು ಭಾರತೀಯ ಗುಪ್ತಚರ ಇಲಾಖೆಯ ಬಹುದೊಡ್ಡ ವೈಫಲ್ಯ ಮತ್ತು ನಿರ್ದಿಷ್ಟವಾಗಿ ಗೃಹ ಸಚಿವಾಲಯದ ಅಸಮರ್ಥತೆಯ ಪರಿಣಾಮವಾಗಿದೆ. ಆಗ ರಾಜನಾಥ್ ಸಿಂಗ್ ಗೃಹ ಸಚಿವರಾಗಿದ್ದರು. ಸಿಆರ್‌ಪಿಎಫ್ ತನ್ನ ಜವಾನರನ್ನು ಸಾಗಿಸಲು ವಿಮಾನವನ್ನು ಕೇಳಿತ್ತು. ಆದರೆ ಕೇಂದ್ರ ಗೃಹ ಸಚಿವಾಲಯ ಅದನ್ನು ನಿರಾಕರಿಸಿತು” ಎಂದು ಮಲಿಕ್ ದೂರಿದ್ದಾರೆ.

ದಾಳಿ ನಡೆದ ದಿನ ಸಂಜೆಯೇ ಪ್ರಧಾನಿ ಮೋದಿಯವರಿಗೆ ಈ ವೈಫಲ್ಯಗಳ ಬಗ್ಗೆ ತಿಳಿಸಿದೆ. ನಮ್ಮ ತಪ್ಪಿನಿಂದಾಗಿ 40 ಸೈನಿಕರು ಪ್ರಾಣ ಕಳೆದುಕೊಳ್ಳಬೇಕಾಯಿತು ಎಂದು ವಿವರಿಸಿದೆ. ಆದರೆ ಅವರು ಯಾರಿಗೂ ಹೇಳಬೇಡಿ, ಸುಮ್ಮನಿದ್ದುಬಿಡಿ ಎಂದರು. ಎನ್‌ಎಸ್‌ಎ ಅಜಿತ್ ದೋವಲ್ ಕೂಡ ನನ್ನ ಬಾಯಿ ಮುಚ್ಚಿಸಿದರು. ಆಗ ನನಗೆ ತಕ್ಷಣವೇ ಅರ್ಥವಾಯಿತು, ಅವರ ಉದ್ದೇಶ ಪಾಕಿಸ್ತಾನದ ಮೇಲೆ ದೋಷಾರೋಪ ಮಾಡಿ ಚುನಾವಣೆಯಲ್ಲಿ ಸರ್ಕಾರ ಮತ್ತು ಬಿಜೆಪಿಗೆ ಲಾಭ ಪಡೆಯುವುದಾಗಿತ್ತು ಎಂದು ಸತ್ಯಪಾಲ್ ಮಲಿಕ್ ಸಂದರ್ಶನದಲ್ಲಿ ಹೇಳಿದ್ದಾರೆ.

ಪುಲ್ವಾಮಾ ಘಟನೆಯಲ್ಲಿ 300 ಕೆಜಿ ಆರ್‌ಡಿಎಕ್ಸ್ ಸ್ಫೋಟಕಗಳನ್ನು ಹೊತ್ತ ಕಾರು ಪಾಕಿಸ್ತಾನದಿಂದ ಬಂದಿದ್ದು, ಜಮ್ಮು ಮತ್ತು ಕಾಶ್ಮೀರದ ರಸ್ತೆಗಳು ಮತ್ತು ಹಳ್ಳಿಗಳಲ್ಲಿ 10-15 ದಿನಗಳ ಕಾಲ ಯಾರಿಗೂ ಗೊತ್ತಾಗದಂತೆ ಮತ್ತು ಯಾರಿಗೂ ತಿಳಿಯದಂತೆ ಸಂಚರಿಸುತ್ತಿತ್ತು ಎಂದರೆ ಇದು ಗಂಭೀರ ಗುಪ್ತಚರ ವೈಫಲ್ಯ ಅಲ್ಲವೇ ಎಂದಿದ್ದಾರೆ.

ಭ್ರಷ್ಟಾಚಾರದ ವಿಷಯಕ ಕುರಿತು ಮಾತನಾಡಿದ ಅವರು, “ಹೈಡ್ರೋ ಎಲೆಕ್ಟ್ರಿಕ್ ಯೋಜನೆ ಮತ್ತು ರಿಲಯೆನ್ಸ್ ಇನ್ಸೂರೆನ್ಸ್ ಯೋಜನೆಗೆ ಅನುಮತಿ ಪಡೆಯಲು ಬಿಜೆಪಿ ಆರ್‌ಎಸ್‌ಎಸ್‌ ಮುಖಂಡ ರಾಮ್ ಮಾಧವ್ ಬಂದಿದ್ದರು. ಆ ಯೋಜನೆಗಳಿಗೆ ಸಹಿ ಹಾಕಿದ್ದರೆ ನನಗೆ 300 ಕೋಟಿ ಸಿಗುತ್ತದೆ ಎಂದು ಜನ ಮಾತನಾಡುತ್ತಿದ್ದರು. ಆದರೆ ನಾನು ಆ ತಪ್ಪು ಕೆಲಸ ಮಾಡಲಿಲ್ಲ. ರಾಮ್ ಮಾಧವ್ ಎಷ್ಟೇ ಪ್ರಯತ್ನ ಪಟ್ಟರೂ ನಾನು ಆ ಯೋಜನೆಗಳನ್ನು ಜಾರಿಗೊಳಿಸಲಿಲ್ಲ ಎಂದಿದ್ದಾರೆ.

ಅದೇ ರೀತಿ ಗೋವಾದ ರಾಜ್ಯಪಾಲನಾಗಿದ್ದಾಗ ಅಲ್ಲಿನ ಭ್ರಷ್ಟಾಚಾರಗಳ ಕುರಿತು ಪ್ರಧಾನಿ ಮೋದಿಯವರಿಗೆ ದೂರು ನೀಡಿದ್ದೆ. ಅವುಗಳನ್ನು ಸರಿಪಡಿಸುವ ಬದಲು ನಿರ್ಲಕ್ಷ್ಯ ಮಾಡಿದ್ದಲ್ಲದೆ ನನ್ನನ್ನು ಗೋವಾದ ರಾಜ್ಯಪಾಲ ಸ್ಥಾನದಿಂದ ಕಿತ್ತು ಮೇಘಾಲಯಕ್ಕೆ ಕಳಿಸಿದರು. ಪ್ರಧಾನಿಯವರ ಸುತ್ತಲಿನ ಜನರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಮತ್ತು ಆಗಾಗ್ಗೆ ಪ್ರಧಾನಿ ಕಚೇರಿಯ ಹೆಸರನ್ನು ಬಳಸಿಕೊಳ್ಳುತ್ತಿದ್ದಾರೆ. ಇದೆಲ್ಲವನ್ನೂ ಮೋದಿಯವರ ಗಮನಕ್ಕೆ ತಂದಿದ್ದೇನೆ, ಆದರೆ ಪ್ರಧಾನಿ ಕಾಳಜಿ ತೋರುತ್ತಿಲ್ಲ. ಹಾಗಾಗಿ ನಾನು ಖಚಿತವಾಗಿ ಹೇಳಬಲ್ಲೆ ಭ್ರಷ್ಟಾಚಾರ ಕುರಿತು ನರೇಂದ್ರ ಮೋದಿಯವರಿಗೆ ಹೆಚ್ಚಿನ ದ್ವೇಷವಿಲ್ಲ ಎಂದು ಸತ್ಯಪಾಲ್ ಮಲಿಕ್ ಹೇಳಿದ್ದಾರೆ.

ಈ ಕುರಿತು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಪ್ರಶ್ನೆ ಮಾಡಿವೆ. ಸಮಾಜವಾದಿ ಪಕ್ಷದ ವಕ್ತಾರ ಮನೋಜ್ ಸಿಂಗ್ ಕಾಕಾ ಪುಲ್ವಾಮಾ ಘಟನೆಯನ್ನು ತಡೆಯುವಲ್ಲಿ ಮೋದಿ ಸರ್ಕಾರದ ಅಸಮರ್ಥತೆಯನ್ನು ಉಲ್ಲೇಖಿಸಿದ್ದಾರೆ. “ಸಿಆರ್‌ಪಿಎಫ್‌ನ ವೀರ ಸೈನಿಕರು ವಿಮಾನವನ್ನು ಕೇಳಿದಾಗ ಅದನ್ನು ಏಕೆ ನೀಡಲಿಲ್ಲ? ನಮ್ಮ ಸೈನಿಕರು ಹುತಾತ್ಮತೆಗೆ ಯಾರು ಹೊಣೆ?” ಎಂದು ಪ್ರಶ್ನಿಸಿದ್ದಾರೆ.

ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಟ್ವೀಟ್ ಮಾಡಿ, ಸತ್ಯಪಾಲ್ ಮಲಿಕ್‌ರವರ ಹೇಳಿಕೆಗಳ ಕುರಿತು ರಾಷ್ಟ್ರೀಯ ಮಾಧ್ಯಮಗಳ ಮೌನವನ್ನು ಪ್ರಶ್ನಿಸಿದ್ದಾರೆ. “ಪುಲ್ವಾಮ ದಾಳಿಯ ಸತ್ಯದ ಬಗ್ಗೆ ಮಾಜಿ ಜಮ್ಮು ಕಾಶ್ಮೀರ ಗವರ್ನರ್ ಮತ್ತು ಬಿಜೆಪಿ ನಾಯಕ ಸತ್ಯಪಾಲ್ ಮಲಿಕ್ ಅವರು ಮಾಡಿದ ದೊಡ್ಡ ಬಹಿರಂಗಪಡಿಸುವಿಕೆಯ ಬಗ್ಗೆ ಎಷ್ಟು ರಾಷ್ಟ್ರೀಯವಾದಿ ಭಾರತೀಯ ಮಾಧ್ಯಮ ಚಾನೆಲ್‌ಗಳು ಪ್ರೈಮ್-ಟೈಮ್ ಚರ್ಚೆ ನಡೆಸುತ್ತಿವೆ? ಯಾರಾದರೂ?” ಎಂದಿದ್ದಾರೆ.

ಇದನ್ನೂ ಓದಿ ; ಮುಸ್ಲಿಂ ಮೀಸಲಾತಿ ರದ್ದು ವಿಚಾರ: ಅತಿ ಕಳಪೆ, ದೋಷಪೂರಿತ ನಿರ್ಧಾರವೆಂದು ರಾಜ್ಯ ಸರ್ಕಾರಕ್ಕೆ ಸುಪ್ರೀಂ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...