Homeಮುಖಪುಟದೇಶದ ಗೂಢಚಾರಿ ಸಂಸ್ಥೆಯ ಅಧಿಕಾರಿಯೆ ಇಸ್ರೇಲಿ ಗೂಢಚಾರರಾಗಿದ್ದರು: ಇರಾನ್‌ ಮಾಜಿ ಅಧ್ಯಕ್ಷ

ದೇಶದ ಗೂಢಚಾರಿ ಸಂಸ್ಥೆಯ ಅಧಿಕಾರಿಯೆ ಇಸ್ರೇಲಿ ಗೂಢಚಾರರಾಗಿದ್ದರು: ಇರಾನ್‌ ಮಾಜಿ ಅಧ್ಯಕ್ಷ

- Advertisement -
- Advertisement -

ಇರಾನಿನ ಉನ್ನತ ರಹಸ್ಯ ಸೇವಾ ಅಧಿಕಾರಿ ಇಸ್ರೇಲಿ ಗೂಢಚಾರರಾಗಿದ್ದರು ಎಂದು ಇರಾನ್ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಗಂಭೀರ ಆರೋಪ ಮಾಡಿದ್ದಾರೆ. ಇರಾನ್‌ನಲ್ಲಿ ಇಸ್ರೇಲಿ ಬೇಹುಗಾರಿಕೆಯನ್ನು ಎದುರಿಸುವ ರಹಸ್ಯ ಸೇವಾ ಘಟಕದ ಮುಖ್ಯಸ್ಥರೇ ಇಸ್ರೇಲಿ ಗೂಢಚಾರಿ ಎಂದು ಅವರು ಹೇಳಿದ್ದಾರೆ.ಇರಾನ್‌ ಗೂಢಚಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಇಸ್ರೇಲ್ ಇರಾನ್‌ನಲ್ಲಿ ಸಂಕೀರ್ಣ ಕಾರ್ಯಾಚರಣೆಗಳನ್ನು ಆಯೋಜಿಸಿತು. ಅವರು ಸುಲಭವಾಗಿ ಮಾಹಿತಿಯನ್ನು ಪಡೆಯಬಹುದಾಗಿತ್ತು.ಆದರೆ ಇರಾನ್‌ನಲ್ಲಿ ಅವರು ಇನ್ನೂ ಈ ಬಗ್ಗೆ ಮೌನವಾಗಿದ್ದಾರೆ. ಇಸ್ರೇಲ್ ವಿರುದ್ಧ ಕಾರ್ಯಾಚರಿಸುವ ಇರಾನ್‌ನ ಘಟಕದ ಉಸ್ತುವಾರಿ ವಹಿಸಿದ್ದ ವ್ಯಕ್ತಿಯೆ ಇಸ್ರೇಲಿ ಏಜೆಂಟ್” ಎಂದು ಅಹ್ಮದಿನೆಜಾದ್ ಸಿಎನ್‌ಎನ್ ಟರ್ಕ್‌ಗೆ ನೀಡಿದ್ದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇರಾನ್‌ ಗೂಢಚಾರಿ

ಇದನ್ನೂಓದಿ: ‘ಬಾಲಕಿ ಆಘಾತಗೊಂಡಿಲ್ಲ’ ಎಂದು ಅತ್ಯಾಚಾರ ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

ಇಸ್ರೇಲಿ ಗುಪ್ತಚರ ಚಟುವಟಿಕೆಗಳ ಮೇಲೆ ನಿಗಾ ಇಡುವ ಇರಾನಿನ ಗುಪ್ತಚರ ತಂಡದೊಳಗೆ ಹೆಚ್ಚುವರಿ 20 ಏಜೆಂಟ್‌ಗಳು ಮೊಸ್ಸಾದ್‌ಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಅಹ್ಮದಿನೆಜಾದ್ ಹೇಳಿದ್ದು, ಇದು ಪ್ರತ್ಯೇಕ ಘಟನೆಯಲ್ಲ ಎಂದು ಹೇಳಿದ್ದಾರೆ.

ಇರಾನ್‌ನ ಪರಮಾಣು ಕಾರ್ಯಕ್ರಮದ ಕುರಿತು ಸೂಕ್ಷ್ಮ ಮಾಹಿತಿಯನ್ನು ಇಸ್ರೇಲ್‌ಗೆ ಒದಗಿಸಲು ಈ ಡಬಲ್ ಏಜೆಂಟ್‌ಗಳು ಜವಾಬ್ದಾರರಾಗಿದ್ದರು. ಅವರು 2018 ರಲ್ಲಿ ಇರಾನ್ ಪರಮಾಣು ದಾಖಲೆಗಳ ಕಳ್ಳತನದಲ್ಲಿ ಭಾಗಿಯಾಗಿದ್ದಾರೆ ಮತ್ತು ಹಲವಾರು ಇರಾನ್ ಪರಮಾಣು ವಿಜ್ಞಾನಿಗಳನ್ನು ಕೊಂದಿದ್ದಾರೆ ಎಂದು ಅಹ್ಮದಿನೆಜಾದ್ ಆರೋಪಿಸಿದ್ದಾರೆ.

ಇರಾನ್‌ನ ಗೂಢಚಾರರೊಬ್ಬರು ಹಿಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಅವರ ಸ್ಥಳದ ಬಗ್ಗೆ ಇಸ್ರೇಲ್‌ಗೆ ಸುಳಿವು ನೀಡಿದ್ದಾರೆ ಎಂಬ ವರದಿಗಳ ಹಿನ್ನಲೆ ಇರಾನ್‌ನ ಮಾಜಿ ಅಧ್ಯಕ್ಷರ ಹೇಳಿಕೆಗೆ ಮಹತ್ವ ಬಂದಿದೆ. ಇಸ್ರೇಲ್‌ ಬೈರುತ್‌ನ ಹೆಜ್ಬುಲ್ಲಾ ಪ್ರಧಾನ ಕಚೇರಿಯ ಮೇಲೆ ವೈಮಾನಿಕ ದಾಳಿ ಮಾಡಿ ಸಂಘಟನೆಯ ಪ್ರಮುಖ ನಾಯಕರನ್ನು ಕೊಂದು ಹಾಕಿತ್ತು.

ಇದನ್ನೂ ಓದಿ: ಬೆಂಗಳೂರಿನಲ್ಲಿ ವಾಸಿಸುತ್ತಿದ್ದ ಪಾಕ್ ಮೂಲದ ನಾಲ್ವರ ಬಂಧನ; ‘ಶರ್ಮಾ’ ಹೆಸರಿನಲ್ಲಿ ಆಧಾರ್ ಪಡೆದಿದ್ದ ಶಂಕಿತ ಆರೋಪಿಗಳು

ಅಹ್ಮದಿನೆಜಾದ್ ಅವರು ಪ್ರಸ್ತುತ ಇರಾನ್ ಸರ್ಕಾರದ ತೀವ್ರ ಟೀಕಾಕಾರರಾಗಿದ್ದಾರೆ. ಈ ಹಿಂದೆ ಇರಾನಿನ ಮಾಜಿ ಗುಪ್ತಚರ ಸಚಿವ ಅಲಿ ಯೂನೆಸಿ ಅವರು ಕೂಡಾ ಇಂತದ್ದೆ ಹೇಳಿಕೆಗಳನ್ನು ನೀಡಿದ್ದರು. ಇಸ್ರೇಲಿ ಗೂಢಚಾರರು ಇರಾನ್‌ ಸರ್ಕಾರದ ಉನ್ನತ ಶ್ರೇಣಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದರು.

“ಕಳೆದ 10 ವರ್ಷಗಳಲ್ಲಿ ದೇಶದ ಎಲ್ಲಾ ಉನ್ನತ ಅಧಿಕಾರಿಗಳು ತಮ್ಮ ಜೀವಕ್ಕೆ ಭಯಪಡುವ ಮಟ್ಟಕ್ಕೆ ಮೊಸಾದ್ ಅನೇಕ ಸರ್ಕಾರಿ ಇಲಾಖೆಗಳಿಗೆ ನುಸುಳಿದೆ” ಎಂದು ಯೂನೇಸಿ 2021 ರಲ್ಲಿ ಸಂದರ್ಶನವೊಂದರಲ್ಲಿ ಹೇಳಿದ್ದರು.

ಇಸ್ರೇಲ್ ಸೆಪ್ಟೆಂಬರ್ 23 ರಿಂದ ಲೆಬನಾನ್‌ನಲ್ಲಿ ಹೆಜ್ಬೊಲ್ಲಾ ಸಂಘಟನೆಗಳನ್ನು ಗುರಿಯಾಗಿಸಿ ವ್ಯಾಪಕವಾದ ವಾಯುದಾಳಿಗಳನ್ನು ನಡೆಸುತ್ತಿದೆ. ಇದರ ಪರಿಣಾಮವಾಗಿ 960 ಕ್ಕೂ ಹೆಚ್ಚು ಸಾವುಗಳು ಮತ್ತು 2,770 ಕ್ಕೂ ಹೆಚ್ಚು ಗಾಯಗಳಾಗಿವೆ ಎಂದು ಲೆಬನಾನಿನ ಆರೋಗ್ಯ ಸಚಿವಾಲಯ ತಿಳಿಸಿದೆ.

ವಿಡಿಯೊ ನೋಡಿ: ಕೇರಳ ಸಿನಿಮಾ ರಂಗದಲ್ಲಿ ಲೈಂಗಿಕ ದೌರ್ಜನ್ಯದ ಭಯಾನಕ ಕಥೆಗಳನ್ನು ಬಿಚ್ಚಿಟ್ಟ ಹೇಮಾ ಸಮಿತಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...