Homeಮುಖಪುಟದೇಶದ ಗೂಢಚಾರಿ ಸಂಸ್ಥೆಯ ಅಧಿಕಾರಿಯೆ ಇಸ್ರೇಲಿ ಗೂಢಚಾರರಾಗಿದ್ದರು: ಇರಾನ್‌ ಮಾಜಿ ಅಧ್ಯಕ್ಷ

ದೇಶದ ಗೂಢಚಾರಿ ಸಂಸ್ಥೆಯ ಅಧಿಕಾರಿಯೆ ಇಸ್ರೇಲಿ ಗೂಢಚಾರರಾಗಿದ್ದರು: ಇರಾನ್‌ ಮಾಜಿ ಅಧ್ಯಕ್ಷ

- Advertisement -
- Advertisement -

ಇರಾನಿನ ಉನ್ನತ ರಹಸ್ಯ ಸೇವಾ ಅಧಿಕಾರಿ ಇಸ್ರೇಲಿ ಗೂಢಚಾರರಾಗಿದ್ದರು ಎಂದು ಇರಾನ್ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಗಂಭೀರ ಆರೋಪ ಮಾಡಿದ್ದಾರೆ. ಇರಾನ್‌ನಲ್ಲಿ ಇಸ್ರೇಲಿ ಬೇಹುಗಾರಿಕೆಯನ್ನು ಎದುರಿಸುವ ರಹಸ್ಯ ಸೇವಾ ಘಟಕದ ಮುಖ್ಯಸ್ಥರೇ ಇಸ್ರೇಲಿ ಗೂಢಚಾರಿ ಎಂದು ಅವರು ಹೇಳಿದ್ದಾರೆ.ಇರಾನ್‌ ಗೂಢಚಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಇಸ್ರೇಲ್ ಇರಾನ್‌ನಲ್ಲಿ ಸಂಕೀರ್ಣ ಕಾರ್ಯಾಚರಣೆಗಳನ್ನು ಆಯೋಜಿಸಿತು. ಅವರು ಸುಲಭವಾಗಿ ಮಾಹಿತಿಯನ್ನು ಪಡೆಯಬಹುದಾಗಿತ್ತು.ಆದರೆ ಇರಾನ್‌ನಲ್ಲಿ ಅವರು ಇನ್ನೂ ಈ ಬಗ್ಗೆ ಮೌನವಾಗಿದ್ದಾರೆ. ಇಸ್ರೇಲ್ ವಿರುದ್ಧ ಕಾರ್ಯಾಚರಿಸುವ ಇರಾನ್‌ನ ಘಟಕದ ಉಸ್ತುವಾರಿ ವಹಿಸಿದ್ದ ವ್ಯಕ್ತಿಯೆ ಇಸ್ರೇಲಿ ಏಜೆಂಟ್” ಎಂದು ಅಹ್ಮದಿನೆಜಾದ್ ಸಿಎನ್‌ಎನ್ ಟರ್ಕ್‌ಗೆ ನೀಡಿದ್ದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇರಾನ್‌ ಗೂಢಚಾರಿ

ಇದನ್ನೂಓದಿ: ‘ಬಾಲಕಿ ಆಘಾತಗೊಂಡಿಲ್ಲ’ ಎಂದು ಅತ್ಯಾಚಾರ ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

ಇಸ್ರೇಲಿ ಗುಪ್ತಚರ ಚಟುವಟಿಕೆಗಳ ಮೇಲೆ ನಿಗಾ ಇಡುವ ಇರಾನಿನ ಗುಪ್ತಚರ ತಂಡದೊಳಗೆ ಹೆಚ್ಚುವರಿ 20 ಏಜೆಂಟ್‌ಗಳು ಮೊಸ್ಸಾದ್‌ಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಅಹ್ಮದಿನೆಜಾದ್ ಹೇಳಿದ್ದು, ಇದು ಪ್ರತ್ಯೇಕ ಘಟನೆಯಲ್ಲ ಎಂದು ಹೇಳಿದ್ದಾರೆ.

ಇರಾನ್‌ನ ಪರಮಾಣು ಕಾರ್ಯಕ್ರಮದ ಕುರಿತು ಸೂಕ್ಷ್ಮ ಮಾಹಿತಿಯನ್ನು ಇಸ್ರೇಲ್‌ಗೆ ಒದಗಿಸಲು ಈ ಡಬಲ್ ಏಜೆಂಟ್‌ಗಳು ಜವಾಬ್ದಾರರಾಗಿದ್ದರು. ಅವರು 2018 ರಲ್ಲಿ ಇರಾನ್ ಪರಮಾಣು ದಾಖಲೆಗಳ ಕಳ್ಳತನದಲ್ಲಿ ಭಾಗಿಯಾಗಿದ್ದಾರೆ ಮತ್ತು ಹಲವಾರು ಇರಾನ್ ಪರಮಾಣು ವಿಜ್ಞಾನಿಗಳನ್ನು ಕೊಂದಿದ್ದಾರೆ ಎಂದು ಅಹ್ಮದಿನೆಜಾದ್ ಆರೋಪಿಸಿದ್ದಾರೆ.

ಇರಾನ್‌ನ ಗೂಢಚಾರರೊಬ್ಬರು ಹಿಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಅವರ ಸ್ಥಳದ ಬಗ್ಗೆ ಇಸ್ರೇಲ್‌ಗೆ ಸುಳಿವು ನೀಡಿದ್ದಾರೆ ಎಂಬ ವರದಿಗಳ ಹಿನ್ನಲೆ ಇರಾನ್‌ನ ಮಾಜಿ ಅಧ್ಯಕ್ಷರ ಹೇಳಿಕೆಗೆ ಮಹತ್ವ ಬಂದಿದೆ. ಇಸ್ರೇಲ್‌ ಬೈರುತ್‌ನ ಹೆಜ್ಬುಲ್ಲಾ ಪ್ರಧಾನ ಕಚೇರಿಯ ಮೇಲೆ ವೈಮಾನಿಕ ದಾಳಿ ಮಾಡಿ ಸಂಘಟನೆಯ ಪ್ರಮುಖ ನಾಯಕರನ್ನು ಕೊಂದು ಹಾಕಿತ್ತು.

ಇದನ್ನೂ ಓದಿ: ಬೆಂಗಳೂರಿನಲ್ಲಿ ವಾಸಿಸುತ್ತಿದ್ದ ಪಾಕ್ ಮೂಲದ ನಾಲ್ವರ ಬಂಧನ; ‘ಶರ್ಮಾ’ ಹೆಸರಿನಲ್ಲಿ ಆಧಾರ್ ಪಡೆದಿದ್ದ ಶಂಕಿತ ಆರೋಪಿಗಳು

ಅಹ್ಮದಿನೆಜಾದ್ ಅವರು ಪ್ರಸ್ತುತ ಇರಾನ್ ಸರ್ಕಾರದ ತೀವ್ರ ಟೀಕಾಕಾರರಾಗಿದ್ದಾರೆ. ಈ ಹಿಂದೆ ಇರಾನಿನ ಮಾಜಿ ಗುಪ್ತಚರ ಸಚಿವ ಅಲಿ ಯೂನೆಸಿ ಅವರು ಕೂಡಾ ಇಂತದ್ದೆ ಹೇಳಿಕೆಗಳನ್ನು ನೀಡಿದ್ದರು. ಇಸ್ರೇಲಿ ಗೂಢಚಾರರು ಇರಾನ್‌ ಸರ್ಕಾರದ ಉನ್ನತ ಶ್ರೇಣಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದರು.

“ಕಳೆದ 10 ವರ್ಷಗಳಲ್ಲಿ ದೇಶದ ಎಲ್ಲಾ ಉನ್ನತ ಅಧಿಕಾರಿಗಳು ತಮ್ಮ ಜೀವಕ್ಕೆ ಭಯಪಡುವ ಮಟ್ಟಕ್ಕೆ ಮೊಸಾದ್ ಅನೇಕ ಸರ್ಕಾರಿ ಇಲಾಖೆಗಳಿಗೆ ನುಸುಳಿದೆ” ಎಂದು ಯೂನೇಸಿ 2021 ರಲ್ಲಿ ಸಂದರ್ಶನವೊಂದರಲ್ಲಿ ಹೇಳಿದ್ದರು.

ಇಸ್ರೇಲ್ ಸೆಪ್ಟೆಂಬರ್ 23 ರಿಂದ ಲೆಬನಾನ್‌ನಲ್ಲಿ ಹೆಜ್ಬೊಲ್ಲಾ ಸಂಘಟನೆಗಳನ್ನು ಗುರಿಯಾಗಿಸಿ ವ್ಯಾಪಕವಾದ ವಾಯುದಾಳಿಗಳನ್ನು ನಡೆಸುತ್ತಿದೆ. ಇದರ ಪರಿಣಾಮವಾಗಿ 960 ಕ್ಕೂ ಹೆಚ್ಚು ಸಾವುಗಳು ಮತ್ತು 2,770 ಕ್ಕೂ ಹೆಚ್ಚು ಗಾಯಗಳಾಗಿವೆ ಎಂದು ಲೆಬನಾನಿನ ಆರೋಗ್ಯ ಸಚಿವಾಲಯ ತಿಳಿಸಿದೆ.

ವಿಡಿಯೊ ನೋಡಿ: ಕೇರಳ ಸಿನಿಮಾ ರಂಗದಲ್ಲಿ ಲೈಂಗಿಕ ದೌರ್ಜನ್ಯದ ಭಯಾನಕ ಕಥೆಗಳನ್ನು ಬಿಚ್ಚಿಟ್ಟ ಹೇಮಾ ಸಮಿತಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...