Homeಮುಖಪುಟದೇಶದ ಗೂಢಚಾರಿ ಸಂಸ್ಥೆಯ ಅಧಿಕಾರಿಯೆ ಇಸ್ರೇಲಿ ಗೂಢಚಾರರಾಗಿದ್ದರು: ಇರಾನ್‌ ಮಾಜಿ ಅಧ್ಯಕ್ಷ

ದೇಶದ ಗೂಢಚಾರಿ ಸಂಸ್ಥೆಯ ಅಧಿಕಾರಿಯೆ ಇಸ್ರೇಲಿ ಗೂಢಚಾರರಾಗಿದ್ದರು: ಇರಾನ್‌ ಮಾಜಿ ಅಧ್ಯಕ್ಷ

- Advertisement -
- Advertisement -

ಇರಾನಿನ ಉನ್ನತ ರಹಸ್ಯ ಸೇವಾ ಅಧಿಕಾರಿ ಇಸ್ರೇಲಿ ಗೂಢಚಾರರಾಗಿದ್ದರು ಎಂದು ಇರಾನ್ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಗಂಭೀರ ಆರೋಪ ಮಾಡಿದ್ದಾರೆ. ಇರಾನ್‌ನಲ್ಲಿ ಇಸ್ರೇಲಿ ಬೇಹುಗಾರಿಕೆಯನ್ನು ಎದುರಿಸುವ ರಹಸ್ಯ ಸೇವಾ ಘಟಕದ ಮುಖ್ಯಸ್ಥರೇ ಇಸ್ರೇಲಿ ಗೂಢಚಾರಿ ಎಂದು ಅವರು ಹೇಳಿದ್ದಾರೆ.ಇರಾನ್‌ ಗೂಢಚಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಇಸ್ರೇಲ್ ಇರಾನ್‌ನಲ್ಲಿ ಸಂಕೀರ್ಣ ಕಾರ್ಯಾಚರಣೆಗಳನ್ನು ಆಯೋಜಿಸಿತು. ಅವರು ಸುಲಭವಾಗಿ ಮಾಹಿತಿಯನ್ನು ಪಡೆಯಬಹುದಾಗಿತ್ತು.ಆದರೆ ಇರಾನ್‌ನಲ್ಲಿ ಅವರು ಇನ್ನೂ ಈ ಬಗ್ಗೆ ಮೌನವಾಗಿದ್ದಾರೆ. ಇಸ್ರೇಲ್ ವಿರುದ್ಧ ಕಾರ್ಯಾಚರಿಸುವ ಇರಾನ್‌ನ ಘಟಕದ ಉಸ್ತುವಾರಿ ವಹಿಸಿದ್ದ ವ್ಯಕ್ತಿಯೆ ಇಸ್ರೇಲಿ ಏಜೆಂಟ್” ಎಂದು ಅಹ್ಮದಿನೆಜಾದ್ ಸಿಎನ್‌ಎನ್ ಟರ್ಕ್‌ಗೆ ನೀಡಿದ್ದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇರಾನ್‌ ಗೂಢಚಾರಿ

ಇದನ್ನೂಓದಿ: ‘ಬಾಲಕಿ ಆಘಾತಗೊಂಡಿಲ್ಲ’ ಎಂದು ಅತ್ಯಾಚಾರ ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

ಇಸ್ರೇಲಿ ಗುಪ್ತಚರ ಚಟುವಟಿಕೆಗಳ ಮೇಲೆ ನಿಗಾ ಇಡುವ ಇರಾನಿನ ಗುಪ್ತಚರ ತಂಡದೊಳಗೆ ಹೆಚ್ಚುವರಿ 20 ಏಜೆಂಟ್‌ಗಳು ಮೊಸ್ಸಾದ್‌ಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಅಹ್ಮದಿನೆಜಾದ್ ಹೇಳಿದ್ದು, ಇದು ಪ್ರತ್ಯೇಕ ಘಟನೆಯಲ್ಲ ಎಂದು ಹೇಳಿದ್ದಾರೆ.

ಇರಾನ್‌ನ ಪರಮಾಣು ಕಾರ್ಯಕ್ರಮದ ಕುರಿತು ಸೂಕ್ಷ್ಮ ಮಾಹಿತಿಯನ್ನು ಇಸ್ರೇಲ್‌ಗೆ ಒದಗಿಸಲು ಈ ಡಬಲ್ ಏಜೆಂಟ್‌ಗಳು ಜವಾಬ್ದಾರರಾಗಿದ್ದರು. ಅವರು 2018 ರಲ್ಲಿ ಇರಾನ್ ಪರಮಾಣು ದಾಖಲೆಗಳ ಕಳ್ಳತನದಲ್ಲಿ ಭಾಗಿಯಾಗಿದ್ದಾರೆ ಮತ್ತು ಹಲವಾರು ಇರಾನ್ ಪರಮಾಣು ವಿಜ್ಞಾನಿಗಳನ್ನು ಕೊಂದಿದ್ದಾರೆ ಎಂದು ಅಹ್ಮದಿನೆಜಾದ್ ಆರೋಪಿಸಿದ್ದಾರೆ.

ಇರಾನ್‌ನ ಗೂಢಚಾರರೊಬ್ಬರು ಹಿಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಅವರ ಸ್ಥಳದ ಬಗ್ಗೆ ಇಸ್ರೇಲ್‌ಗೆ ಸುಳಿವು ನೀಡಿದ್ದಾರೆ ಎಂಬ ವರದಿಗಳ ಹಿನ್ನಲೆ ಇರಾನ್‌ನ ಮಾಜಿ ಅಧ್ಯಕ್ಷರ ಹೇಳಿಕೆಗೆ ಮಹತ್ವ ಬಂದಿದೆ. ಇಸ್ರೇಲ್‌ ಬೈರುತ್‌ನ ಹೆಜ್ಬುಲ್ಲಾ ಪ್ರಧಾನ ಕಚೇರಿಯ ಮೇಲೆ ವೈಮಾನಿಕ ದಾಳಿ ಮಾಡಿ ಸಂಘಟನೆಯ ಪ್ರಮುಖ ನಾಯಕರನ್ನು ಕೊಂದು ಹಾಕಿತ್ತು.

ಇದನ್ನೂ ಓದಿ: ಬೆಂಗಳೂರಿನಲ್ಲಿ ವಾಸಿಸುತ್ತಿದ್ದ ಪಾಕ್ ಮೂಲದ ನಾಲ್ವರ ಬಂಧನ; ‘ಶರ್ಮಾ’ ಹೆಸರಿನಲ್ಲಿ ಆಧಾರ್ ಪಡೆದಿದ್ದ ಶಂಕಿತ ಆರೋಪಿಗಳು

ಅಹ್ಮದಿನೆಜಾದ್ ಅವರು ಪ್ರಸ್ತುತ ಇರಾನ್ ಸರ್ಕಾರದ ತೀವ್ರ ಟೀಕಾಕಾರರಾಗಿದ್ದಾರೆ. ಈ ಹಿಂದೆ ಇರಾನಿನ ಮಾಜಿ ಗುಪ್ತಚರ ಸಚಿವ ಅಲಿ ಯೂನೆಸಿ ಅವರು ಕೂಡಾ ಇಂತದ್ದೆ ಹೇಳಿಕೆಗಳನ್ನು ನೀಡಿದ್ದರು. ಇಸ್ರೇಲಿ ಗೂಢಚಾರರು ಇರಾನ್‌ ಸರ್ಕಾರದ ಉನ್ನತ ಶ್ರೇಣಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದರು.

“ಕಳೆದ 10 ವರ್ಷಗಳಲ್ಲಿ ದೇಶದ ಎಲ್ಲಾ ಉನ್ನತ ಅಧಿಕಾರಿಗಳು ತಮ್ಮ ಜೀವಕ್ಕೆ ಭಯಪಡುವ ಮಟ್ಟಕ್ಕೆ ಮೊಸಾದ್ ಅನೇಕ ಸರ್ಕಾರಿ ಇಲಾಖೆಗಳಿಗೆ ನುಸುಳಿದೆ” ಎಂದು ಯೂನೇಸಿ 2021 ರಲ್ಲಿ ಸಂದರ್ಶನವೊಂದರಲ್ಲಿ ಹೇಳಿದ್ದರು.

ಇಸ್ರೇಲ್ ಸೆಪ್ಟೆಂಬರ್ 23 ರಿಂದ ಲೆಬನಾನ್‌ನಲ್ಲಿ ಹೆಜ್ಬೊಲ್ಲಾ ಸಂಘಟನೆಗಳನ್ನು ಗುರಿಯಾಗಿಸಿ ವ್ಯಾಪಕವಾದ ವಾಯುದಾಳಿಗಳನ್ನು ನಡೆಸುತ್ತಿದೆ. ಇದರ ಪರಿಣಾಮವಾಗಿ 960 ಕ್ಕೂ ಹೆಚ್ಚು ಸಾವುಗಳು ಮತ್ತು 2,770 ಕ್ಕೂ ಹೆಚ್ಚು ಗಾಯಗಳಾಗಿವೆ ಎಂದು ಲೆಬನಾನಿನ ಆರೋಗ್ಯ ಸಚಿವಾಲಯ ತಿಳಿಸಿದೆ.

ವಿಡಿಯೊ ನೋಡಿ: ಕೇರಳ ಸಿನಿಮಾ ರಂಗದಲ್ಲಿ ಲೈಂಗಿಕ ದೌರ್ಜನ್ಯದ ಭಯಾನಕ ಕಥೆಗಳನ್ನು ಬಿಚ್ಚಿಟ್ಟ ಹೇಮಾ ಸಮಿತಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...