Homeಮುಖಪುಟದೇಶದ ಗೂಢಚಾರಿ ಸಂಸ್ಥೆಯ ಅಧಿಕಾರಿಯೆ ಇಸ್ರೇಲಿ ಗೂಢಚಾರರಾಗಿದ್ದರು: ಇರಾನ್‌ ಮಾಜಿ ಅಧ್ಯಕ್ಷ

ದೇಶದ ಗೂಢಚಾರಿ ಸಂಸ್ಥೆಯ ಅಧಿಕಾರಿಯೆ ಇಸ್ರೇಲಿ ಗೂಢಚಾರರಾಗಿದ್ದರು: ಇರಾನ್‌ ಮಾಜಿ ಅಧ್ಯಕ್ಷ

- Advertisement -
- Advertisement -

ಇರಾನಿನ ಉನ್ನತ ರಹಸ್ಯ ಸೇವಾ ಅಧಿಕಾರಿ ಇಸ್ರೇಲಿ ಗೂಢಚಾರರಾಗಿದ್ದರು ಎಂದು ಇರಾನ್ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಗಂಭೀರ ಆರೋಪ ಮಾಡಿದ್ದಾರೆ. ಇರಾನ್‌ನಲ್ಲಿ ಇಸ್ರೇಲಿ ಬೇಹುಗಾರಿಕೆಯನ್ನು ಎದುರಿಸುವ ರಹಸ್ಯ ಸೇವಾ ಘಟಕದ ಮುಖ್ಯಸ್ಥರೇ ಇಸ್ರೇಲಿ ಗೂಢಚಾರಿ ಎಂದು ಅವರು ಹೇಳಿದ್ದಾರೆ.ಇರಾನ್‌ ಗೂಢಚಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಇಸ್ರೇಲ್ ಇರಾನ್‌ನಲ್ಲಿ ಸಂಕೀರ್ಣ ಕಾರ್ಯಾಚರಣೆಗಳನ್ನು ಆಯೋಜಿಸಿತು. ಅವರು ಸುಲಭವಾಗಿ ಮಾಹಿತಿಯನ್ನು ಪಡೆಯಬಹುದಾಗಿತ್ತು.ಆದರೆ ಇರಾನ್‌ನಲ್ಲಿ ಅವರು ಇನ್ನೂ ಈ ಬಗ್ಗೆ ಮೌನವಾಗಿದ್ದಾರೆ. ಇಸ್ರೇಲ್ ವಿರುದ್ಧ ಕಾರ್ಯಾಚರಿಸುವ ಇರಾನ್‌ನ ಘಟಕದ ಉಸ್ತುವಾರಿ ವಹಿಸಿದ್ದ ವ್ಯಕ್ತಿಯೆ ಇಸ್ರೇಲಿ ಏಜೆಂಟ್” ಎಂದು ಅಹ್ಮದಿನೆಜಾದ್ ಸಿಎನ್‌ಎನ್ ಟರ್ಕ್‌ಗೆ ನೀಡಿದ್ದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇರಾನ್‌ ಗೂಢಚಾರಿ

ಇದನ್ನೂಓದಿ: ‘ಬಾಲಕಿ ಆಘಾತಗೊಂಡಿಲ್ಲ’ ಎಂದು ಅತ್ಯಾಚಾರ ಆರೋಪಿಯನ್ನು ಖುಲಾಸೆಗೊಳಿಸಿದ ಕೋರ್ಟ್

ಇಸ್ರೇಲಿ ಗುಪ್ತಚರ ಚಟುವಟಿಕೆಗಳ ಮೇಲೆ ನಿಗಾ ಇಡುವ ಇರಾನಿನ ಗುಪ್ತಚರ ತಂಡದೊಳಗೆ ಹೆಚ್ಚುವರಿ 20 ಏಜೆಂಟ್‌ಗಳು ಮೊಸ್ಸಾದ್‌ಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಅಹ್ಮದಿನೆಜಾದ್ ಹೇಳಿದ್ದು, ಇದು ಪ್ರತ್ಯೇಕ ಘಟನೆಯಲ್ಲ ಎಂದು ಹೇಳಿದ್ದಾರೆ.

ಇರಾನ್‌ನ ಪರಮಾಣು ಕಾರ್ಯಕ್ರಮದ ಕುರಿತು ಸೂಕ್ಷ್ಮ ಮಾಹಿತಿಯನ್ನು ಇಸ್ರೇಲ್‌ಗೆ ಒದಗಿಸಲು ಈ ಡಬಲ್ ಏಜೆಂಟ್‌ಗಳು ಜವಾಬ್ದಾರರಾಗಿದ್ದರು. ಅವರು 2018 ರಲ್ಲಿ ಇರಾನ್ ಪರಮಾಣು ದಾಖಲೆಗಳ ಕಳ್ಳತನದಲ್ಲಿ ಭಾಗಿಯಾಗಿದ್ದಾರೆ ಮತ್ತು ಹಲವಾರು ಇರಾನ್ ಪರಮಾಣು ವಿಜ್ಞಾನಿಗಳನ್ನು ಕೊಂದಿದ್ದಾರೆ ಎಂದು ಅಹ್ಮದಿನೆಜಾದ್ ಆರೋಪಿಸಿದ್ದಾರೆ.

ಇರಾನ್‌ನ ಗೂಢಚಾರರೊಬ್ಬರು ಹಿಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಅವರ ಸ್ಥಳದ ಬಗ್ಗೆ ಇಸ್ರೇಲ್‌ಗೆ ಸುಳಿವು ನೀಡಿದ್ದಾರೆ ಎಂಬ ವರದಿಗಳ ಹಿನ್ನಲೆ ಇರಾನ್‌ನ ಮಾಜಿ ಅಧ್ಯಕ್ಷರ ಹೇಳಿಕೆಗೆ ಮಹತ್ವ ಬಂದಿದೆ. ಇಸ್ರೇಲ್‌ ಬೈರುತ್‌ನ ಹೆಜ್ಬುಲ್ಲಾ ಪ್ರಧಾನ ಕಚೇರಿಯ ಮೇಲೆ ವೈಮಾನಿಕ ದಾಳಿ ಮಾಡಿ ಸಂಘಟನೆಯ ಪ್ರಮುಖ ನಾಯಕರನ್ನು ಕೊಂದು ಹಾಕಿತ್ತು.

ಇದನ್ನೂ ಓದಿ: ಬೆಂಗಳೂರಿನಲ್ಲಿ ವಾಸಿಸುತ್ತಿದ್ದ ಪಾಕ್ ಮೂಲದ ನಾಲ್ವರ ಬಂಧನ; ‘ಶರ್ಮಾ’ ಹೆಸರಿನಲ್ಲಿ ಆಧಾರ್ ಪಡೆದಿದ್ದ ಶಂಕಿತ ಆರೋಪಿಗಳು

ಅಹ್ಮದಿನೆಜಾದ್ ಅವರು ಪ್ರಸ್ತುತ ಇರಾನ್ ಸರ್ಕಾರದ ತೀವ್ರ ಟೀಕಾಕಾರರಾಗಿದ್ದಾರೆ. ಈ ಹಿಂದೆ ಇರಾನಿನ ಮಾಜಿ ಗುಪ್ತಚರ ಸಚಿವ ಅಲಿ ಯೂನೆಸಿ ಅವರು ಕೂಡಾ ಇಂತದ್ದೆ ಹೇಳಿಕೆಗಳನ್ನು ನೀಡಿದ್ದರು. ಇಸ್ರೇಲಿ ಗೂಢಚಾರರು ಇರಾನ್‌ ಸರ್ಕಾರದ ಉನ್ನತ ಶ್ರೇಣಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದರು.

“ಕಳೆದ 10 ವರ್ಷಗಳಲ್ಲಿ ದೇಶದ ಎಲ್ಲಾ ಉನ್ನತ ಅಧಿಕಾರಿಗಳು ತಮ್ಮ ಜೀವಕ್ಕೆ ಭಯಪಡುವ ಮಟ್ಟಕ್ಕೆ ಮೊಸಾದ್ ಅನೇಕ ಸರ್ಕಾರಿ ಇಲಾಖೆಗಳಿಗೆ ನುಸುಳಿದೆ” ಎಂದು ಯೂನೇಸಿ 2021 ರಲ್ಲಿ ಸಂದರ್ಶನವೊಂದರಲ್ಲಿ ಹೇಳಿದ್ದರು.

ಇಸ್ರೇಲ್ ಸೆಪ್ಟೆಂಬರ್ 23 ರಿಂದ ಲೆಬನಾನ್‌ನಲ್ಲಿ ಹೆಜ್ಬೊಲ್ಲಾ ಸಂಘಟನೆಗಳನ್ನು ಗುರಿಯಾಗಿಸಿ ವ್ಯಾಪಕವಾದ ವಾಯುದಾಳಿಗಳನ್ನು ನಡೆಸುತ್ತಿದೆ. ಇದರ ಪರಿಣಾಮವಾಗಿ 960 ಕ್ಕೂ ಹೆಚ್ಚು ಸಾವುಗಳು ಮತ್ತು 2,770 ಕ್ಕೂ ಹೆಚ್ಚು ಗಾಯಗಳಾಗಿವೆ ಎಂದು ಲೆಬನಾನಿನ ಆರೋಗ್ಯ ಸಚಿವಾಲಯ ತಿಳಿಸಿದೆ.

ವಿಡಿಯೊ ನೋಡಿ: ಕೇರಳ ಸಿನಿಮಾ ರಂಗದಲ್ಲಿ ಲೈಂಗಿಕ ದೌರ್ಜನ್ಯದ ಭಯಾನಕ ಕಥೆಗಳನ್ನು ಬಿಚ್ಚಿಟ್ಟ ಹೇಮಾ ಸಮಿತಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...