Homeಮುಖಪುಟ77ನೇ ಸ್ವಾತಂತ್ರ್ಯ ದಿನಾಚರಣೆ: ಕೆಂಪು ಕೋಟೆಯಲ್ಲಿ ರಾಷ್ಟ್ರವನ್ನುದ್ದೇಶಿಸಿ ಮೋದಿ ಭಾಷಣ

77ನೇ ಸ್ವಾತಂತ್ರ್ಯ ದಿನಾಚರಣೆ: ಕೆಂಪು ಕೋಟೆಯಲ್ಲಿ ರಾಷ್ಟ್ರವನ್ನುದ್ದೇಶಿಸಿ ಮೋದಿ ಭಾಷಣ

- Advertisement -
- Advertisement -

ಹೊಸದಿಲ್ಲಿ: 77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ ನಂತರ ರಾಷ್ಟ್ರವನ್ನು ಉದ್ದೇಶಿಸಿ ಭಾಷಣವನ್ನು ಮಾಡಿದ್ದಾರೆ.

ದೆಹಲಿಯ ಕೆಂಪುಕೋಟೆಯಲ್ಲಿ 7.30 ಕ್ಕೆ ಧ್ವಜಾರೋಹಣವನ್ನು ಮಾಡಿದ ಪ್ರಧಾನಿ ಮೋದಿ,ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ.140 ಕೋಟಿ ಭಾರತೀಯ ನಾಗರಿಕರನ್ನು “ಪರಿವರ್ಜನ್” (ಕುಟುಂಬದ ಸದಸ್ಯರು) ಎಂದು ಮೋದಿ ಕರೆದಿದ್ದಾರೆ. ಸಂಪುಟ ಸಚಿವರು, ರಾಜಕೀಯ ಮುಖಂಡರು, ಎಲ್ಲಾ ಮೂರು ಸೇನಾ ಮುಖ್ಯಸ್ಥರು ಮತ್ತು ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕಳೆದ ಕೆಲವು ವಾರಗಳಲ್ಲಿ ಮಣಿಪುರ ಹಿಂಸಾಚಾರದ ಬಗ್ಗೆ ಮಾತನಾಡುವಂತೆ ಪ್ರಧಾನಿ ಮೋದಿಗೆ ಒತ್ತಾಯಿಸಲಾಗಿತ್ತು.ಇಂದು ಮೋದಿ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಮಣಿಪುರದ ಬಗ್ಗೆ ಉಲ್ಲೇಖಿಸಿದ್ದಾರೆ.

ಮಣಿಪುರ ಕಳೆದ ಕೆಲವಾರಗಳಲ್ಲಿ ಹಿಂಸಾಚಾರಕ್ಕೆ ಸಾಕ್ಷಿಯಾಗಿತ್ತು. ಹಲವಾರು ಜನರು ಪ್ರಾಣ ಕಳೆದುಕೊಂಡರು, ಮತ್ತು ನಮ್ಮ ತಾಯಿ ಮತ್ತು ಸಹೋದರಿಯರಿಗೆ ಅವಮಾನವಾಯಿತು. ನಿಧಾನವಾಗಿ ಈ ಪ್ರದೇಶದಲ್ಲಿ ಶಾಂತಿ ಸ್ಥಾಪನೆಯಾಗುತ್ತಿದೆ.ಭಾರತವು ಮಣಿಪುರದೊಂದಿಗೆ ನಿಂತಿದೆ ಎಂದು ಅವರು ಹೇಳಿದರು. ಶಾಂತಿ ಕಾಪಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಒಟ್ಟಾಗಿ ಕೆಲಸ ಮಾಡುತ್ತಿವೆ.

ಮಣಿಪುರದ ಜನರು ಶಾಂತಿ ಸ್ಥಾಪಿಸಬೇಕು.   ಕಳೆದ ಕೆಲವು ದಿನಗಳಿಂದ ಶಾಂತಿ ಸ್ಥಾಪನೆಯಾಗುತ್ತಿದೆ   ಮಣಿಪುರದಲ್ಲಿ ಶಾಂತಿಯ ಮೂಲಕ ಪರಿಹಾರದ ಮಾರ್ಗವನ್ನು ಕಂಡುಕೊಳ್ಳಲಾಗುವುದು ಎಂದು ಅವರು ಹೇಳಿದರು.

ಇದಲ್ಲದೆ ಪ್ರಾದೇಶಿಕ ಆಕಾಂಕ್ಷೆಗಳನ್ನು ಗೌರವಿಸುವ ಮತ್ತು ಒಟ್ಟಾರೆ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳುವ ಅಗತ್ಯತೆಯ ಬಗ್ಗೆ ಮಾತನಾಡುವಾಗ ಪ್ರಧಾನಿ ಮೋದಿ ನಂತರ ತಮ್ಮ ಭಾಷಣದಲ್ಲಿ ಮಣಿಪುರವನ್ನು ಪ್ರಸ್ತಾಪಿಸಿದರು.

ಭಾರತ 1000 ವರ್ಷಗಳ ಗುಲಾಮಗಿರಿಯಿಂದ ಹೊರಬಂದಿದೆ. ಇದು ಅಮೃತಕಾಲದ ಮೊದಲ ವರ್ಷ, ಎಲ್ಲರ ಕಲ್ಯಾಣ ಮತ್ತು ಎಲ್ಲರ ಸಂತೋಷಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಪ್ರಪಂಚದಾದ್ಯಂತ ಭಾರತದ ವಿಚಾರದಲ್ಲಿ ಹೊಸ ಭರವಸೆ ಹುಟ್ಟಿಕೊಂಡಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಇಂದು ನಮ್ಮಲ್ಲಿ ಜನಸಂಖ್ಯೆ ಇದೆ.ನಮ್ಮಲ್ಲಿ ಪ್ರಜಾಪ್ರಭುತ್ವವಿದೆ. ನಮ್ಮಲ್ಲಿ ವೈವಿಧ್ಯತೆ ಇದೆ ಎಂದು ಹೇಳಿದ್ದಾರೆ.

ನನ್ನ ದೇಶದ ಜನರ ಮೇಲಿನ ಹಣದುಬ್ಬರದ ಹೊರೆಯನ್ನು ಕಡಿಮೆ ಮಾಡಲು ನಾನು ಈ ದಿಕ್ಕಿನಲ್ಲಿ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ನನ್ನ ಪ್ರಯತ್ನ ಮುಂದುವರಿಯುತ್ತದೆ. ಗ್ರಾಮದಿಂದ ಗ್ರಾಮಕ್ಕೆ ಕಾಂಕ್ರೀಟ್ ರಸ್ತೆಗಳನ್ನು ನಿರ್ಮಿಸಲಾಗುತ್ತಿದೆ, ಸರ್ಕಾರ ಯಾವ ಯೋಜನೆಗಳಿಗೆ ಅಡಿಗಲ್ಲು ಹಾಕುತ್ತದೋ ಅದು ನಮ್ಮ ಅವಧಿಯಲ್ಲಿಯೇ ಪೂರ್ಣಗೊಳ್ಳುತ್ತದೆ.

ದೇಶವು ಜಿ-20 ಶೃಂಗಸಭೆಯನ್ನು ಆಯೋಜಿಸುವ ಅವಕಾಶವನ್ನು ಪಡೆದುಕೊಂಡಿದೆ. ಕಳೆದ ಒಂದು ವರ್ಷದಿಂದ, ಜಿ 20ಯಂತಹ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ, ಇದು ದೇಶದ ಸಾಮರ್ಥ್ಯದ ಬಗ್ಗೆ ಜಗತ್ತಿಗೆ ಅರಿವು ಮೂಡಿಸಿದೆ.ನಮ್ಮ ಗಡಿಗಳು ಹಿಂದೆಂದಿಗಿಂತಲೂ ಹೆಚ್ಚು ಸುರಕ್ಷಿತವಾಗಿವೆ. ಸೇನೆಯ ಆಧುನೀಕರಣ. ನಮ್ಮ ಸೇನೆಯು ಯುದ್ಧಕ್ಕೆ ಸಿದ್ಧವಾಗಿರಬೇಕು. ಅದಕ್ಕಾಗಿಯೇ ನಮ್ಮ ಸೇನೆಯಲ್ಲಿ ವೆಚ್ಚದ ಸುಧಾರಣೆಯ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಮುಂಬರುವ 5 ವರ್ಷಗಳಲ್ಲಿ ದೇಶವು ಮೊದಲ ಮೂರು ಜಾಗತಿಕ ಆರ್ಥಿಕತೆಗಳಲ್ಲಿ ಸ್ಥಾನ ಪಡೆಯುವುದು ಗ್ಯಾರಂಟಿ.ನನ್ನ 5 ವರ್ಷಗಳಲ್ಲಿ 13.5 ಕೋಟಿ ಬಡ ಸಹೋದರ ಸಹೋದರಿಯರು ಬಡತನದ ಸರಪಳಿಗಳನ್ನು ಮುರಿದು ನವ ಮಧ್ಯಮ ವರ್ಗದ ರೂಪದಲ್ಲಿ ಹೊರಬಂದಿದ್ದಾರೆ, ಜೀವನದಲ್ಲಿ ಇದಕ್ಕಿಂತ ದೊಡ್ಡ ತೃಪ್ತಿ ಇನ್ನೊಂದಿಲ್ಲ ಎಂದು ಮೋದಿ ಭಾಷಣದಲ್ಲಿ ಉಲ್ಲೇಖಿಸಿದ್ದರು.

ಇದನ್ನು ಓದಿ: ಭಾರತ ಮಾತೆ ಪ್ರತಿಯೊಬ್ಬ ಭಾರತೀಯನ ಧ್ವನಿ; ರಾಹುಲ್ ಗಾಂಧಿ ಸ್ವಾತಂತ್ರ್ಯ ದಿನದ ಸಂದೇಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...