Homeಮುಖಪುಟ77ನೇ ಸ್ವಾತಂತ್ರ್ಯ ದಿನಾಚರಣೆ: ಕೆಂಪು ಕೋಟೆಯಲ್ಲಿ ರಾಷ್ಟ್ರವನ್ನುದ್ದೇಶಿಸಿ ಮೋದಿ ಭಾಷಣ

77ನೇ ಸ್ವಾತಂತ್ರ್ಯ ದಿನಾಚರಣೆ: ಕೆಂಪು ಕೋಟೆಯಲ್ಲಿ ರಾಷ್ಟ್ರವನ್ನುದ್ದೇಶಿಸಿ ಮೋದಿ ಭಾಷಣ

- Advertisement -
- Advertisement -

ಹೊಸದಿಲ್ಲಿ: 77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ ನಂತರ ರಾಷ್ಟ್ರವನ್ನು ಉದ್ದೇಶಿಸಿ ಭಾಷಣವನ್ನು ಮಾಡಿದ್ದಾರೆ.

ದೆಹಲಿಯ ಕೆಂಪುಕೋಟೆಯಲ್ಲಿ 7.30 ಕ್ಕೆ ಧ್ವಜಾರೋಹಣವನ್ನು ಮಾಡಿದ ಪ್ರಧಾನಿ ಮೋದಿ,ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ.140 ಕೋಟಿ ಭಾರತೀಯ ನಾಗರಿಕರನ್ನು “ಪರಿವರ್ಜನ್” (ಕುಟುಂಬದ ಸದಸ್ಯರು) ಎಂದು ಮೋದಿ ಕರೆದಿದ್ದಾರೆ. ಸಂಪುಟ ಸಚಿವರು, ರಾಜಕೀಯ ಮುಖಂಡರು, ಎಲ್ಲಾ ಮೂರು ಸೇನಾ ಮುಖ್ಯಸ್ಥರು ಮತ್ತು ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕಳೆದ ಕೆಲವು ವಾರಗಳಲ್ಲಿ ಮಣಿಪುರ ಹಿಂಸಾಚಾರದ ಬಗ್ಗೆ ಮಾತನಾಡುವಂತೆ ಪ್ರಧಾನಿ ಮೋದಿಗೆ ಒತ್ತಾಯಿಸಲಾಗಿತ್ತು.ಇಂದು ಮೋದಿ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಮಣಿಪುರದ ಬಗ್ಗೆ ಉಲ್ಲೇಖಿಸಿದ್ದಾರೆ.

ಮಣಿಪುರ ಕಳೆದ ಕೆಲವಾರಗಳಲ್ಲಿ ಹಿಂಸಾಚಾರಕ್ಕೆ ಸಾಕ್ಷಿಯಾಗಿತ್ತು. ಹಲವಾರು ಜನರು ಪ್ರಾಣ ಕಳೆದುಕೊಂಡರು, ಮತ್ತು ನಮ್ಮ ತಾಯಿ ಮತ್ತು ಸಹೋದರಿಯರಿಗೆ ಅವಮಾನವಾಯಿತು. ನಿಧಾನವಾಗಿ ಈ ಪ್ರದೇಶದಲ್ಲಿ ಶಾಂತಿ ಸ್ಥಾಪನೆಯಾಗುತ್ತಿದೆ.ಭಾರತವು ಮಣಿಪುರದೊಂದಿಗೆ ನಿಂತಿದೆ ಎಂದು ಅವರು ಹೇಳಿದರು. ಶಾಂತಿ ಕಾಪಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಒಟ್ಟಾಗಿ ಕೆಲಸ ಮಾಡುತ್ತಿವೆ.

ಮಣಿಪುರದ ಜನರು ಶಾಂತಿ ಸ್ಥಾಪಿಸಬೇಕು.   ಕಳೆದ ಕೆಲವು ದಿನಗಳಿಂದ ಶಾಂತಿ ಸ್ಥಾಪನೆಯಾಗುತ್ತಿದೆ   ಮಣಿಪುರದಲ್ಲಿ ಶಾಂತಿಯ ಮೂಲಕ ಪರಿಹಾರದ ಮಾರ್ಗವನ್ನು ಕಂಡುಕೊಳ್ಳಲಾಗುವುದು ಎಂದು ಅವರು ಹೇಳಿದರು.

ಇದಲ್ಲದೆ ಪ್ರಾದೇಶಿಕ ಆಕಾಂಕ್ಷೆಗಳನ್ನು ಗೌರವಿಸುವ ಮತ್ತು ಒಟ್ಟಾರೆ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳುವ ಅಗತ್ಯತೆಯ ಬಗ್ಗೆ ಮಾತನಾಡುವಾಗ ಪ್ರಧಾನಿ ಮೋದಿ ನಂತರ ತಮ್ಮ ಭಾಷಣದಲ್ಲಿ ಮಣಿಪುರವನ್ನು ಪ್ರಸ್ತಾಪಿಸಿದರು.

ಭಾರತ 1000 ವರ್ಷಗಳ ಗುಲಾಮಗಿರಿಯಿಂದ ಹೊರಬಂದಿದೆ. ಇದು ಅಮೃತಕಾಲದ ಮೊದಲ ವರ್ಷ, ಎಲ್ಲರ ಕಲ್ಯಾಣ ಮತ್ತು ಎಲ್ಲರ ಸಂತೋಷಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಪ್ರಪಂಚದಾದ್ಯಂತ ಭಾರತದ ವಿಚಾರದಲ್ಲಿ ಹೊಸ ಭರವಸೆ ಹುಟ್ಟಿಕೊಂಡಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಇಂದು ನಮ್ಮಲ್ಲಿ ಜನಸಂಖ್ಯೆ ಇದೆ.ನಮ್ಮಲ್ಲಿ ಪ್ರಜಾಪ್ರಭುತ್ವವಿದೆ. ನಮ್ಮಲ್ಲಿ ವೈವಿಧ್ಯತೆ ಇದೆ ಎಂದು ಹೇಳಿದ್ದಾರೆ.

ನನ್ನ ದೇಶದ ಜನರ ಮೇಲಿನ ಹಣದುಬ್ಬರದ ಹೊರೆಯನ್ನು ಕಡಿಮೆ ಮಾಡಲು ನಾನು ಈ ದಿಕ್ಕಿನಲ್ಲಿ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ನನ್ನ ಪ್ರಯತ್ನ ಮುಂದುವರಿಯುತ್ತದೆ. ಗ್ರಾಮದಿಂದ ಗ್ರಾಮಕ್ಕೆ ಕಾಂಕ್ರೀಟ್ ರಸ್ತೆಗಳನ್ನು ನಿರ್ಮಿಸಲಾಗುತ್ತಿದೆ, ಸರ್ಕಾರ ಯಾವ ಯೋಜನೆಗಳಿಗೆ ಅಡಿಗಲ್ಲು ಹಾಕುತ್ತದೋ ಅದು ನಮ್ಮ ಅವಧಿಯಲ್ಲಿಯೇ ಪೂರ್ಣಗೊಳ್ಳುತ್ತದೆ.

ದೇಶವು ಜಿ-20 ಶೃಂಗಸಭೆಯನ್ನು ಆಯೋಜಿಸುವ ಅವಕಾಶವನ್ನು ಪಡೆದುಕೊಂಡಿದೆ. ಕಳೆದ ಒಂದು ವರ್ಷದಿಂದ, ಜಿ 20ಯಂತಹ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ, ಇದು ದೇಶದ ಸಾಮರ್ಥ್ಯದ ಬಗ್ಗೆ ಜಗತ್ತಿಗೆ ಅರಿವು ಮೂಡಿಸಿದೆ.ನಮ್ಮ ಗಡಿಗಳು ಹಿಂದೆಂದಿಗಿಂತಲೂ ಹೆಚ್ಚು ಸುರಕ್ಷಿತವಾಗಿವೆ. ಸೇನೆಯ ಆಧುನೀಕರಣ. ನಮ್ಮ ಸೇನೆಯು ಯುದ್ಧಕ್ಕೆ ಸಿದ್ಧವಾಗಿರಬೇಕು. ಅದಕ್ಕಾಗಿಯೇ ನಮ್ಮ ಸೇನೆಯಲ್ಲಿ ವೆಚ್ಚದ ಸುಧಾರಣೆಯ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಮುಂಬರುವ 5 ವರ್ಷಗಳಲ್ಲಿ ದೇಶವು ಮೊದಲ ಮೂರು ಜಾಗತಿಕ ಆರ್ಥಿಕತೆಗಳಲ್ಲಿ ಸ್ಥಾನ ಪಡೆಯುವುದು ಗ್ಯಾರಂಟಿ.ನನ್ನ 5 ವರ್ಷಗಳಲ್ಲಿ 13.5 ಕೋಟಿ ಬಡ ಸಹೋದರ ಸಹೋದರಿಯರು ಬಡತನದ ಸರಪಳಿಗಳನ್ನು ಮುರಿದು ನವ ಮಧ್ಯಮ ವರ್ಗದ ರೂಪದಲ್ಲಿ ಹೊರಬಂದಿದ್ದಾರೆ, ಜೀವನದಲ್ಲಿ ಇದಕ್ಕಿಂತ ದೊಡ್ಡ ತೃಪ್ತಿ ಇನ್ನೊಂದಿಲ್ಲ ಎಂದು ಮೋದಿ ಭಾಷಣದಲ್ಲಿ ಉಲ್ಲೇಖಿಸಿದ್ದರು.

ಇದನ್ನು ಓದಿ: ಭಾರತ ಮಾತೆ ಪ್ರತಿಯೊಬ್ಬ ಭಾರತೀಯನ ಧ್ವನಿ; ರಾಹುಲ್ ಗಾಂಧಿ ಸ್ವಾತಂತ್ರ್ಯ ದಿನದ ಸಂದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...