Homeಕರ್ನಾಟಕದೇಶದ ಮೊದಲ ‘ಓಮಿಕ್ರಾನ್’ ಪ್ರಕರಣ ಕರ್ನಾಟಕದಲ್ಲಿ ಪತ್ತೆ

ದೇಶದ ಮೊದಲ ‘ಓಮಿಕ್ರಾನ್’ ಪ್ರಕರಣ ಕರ್ನಾಟಕದಲ್ಲಿ ಪತ್ತೆ

- Advertisement -
- Advertisement -

ಭಾರತದಲ್ಲಿ ಓಮಿಕ್ರಾನ್ ರೂಪಾಂತರದ ಎರಡು ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ. ಈ ಎರಡೂ ಪ್ರಕರಣಗಳು ಕರ್ನಾಟಕದಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ಜಾಗತಿಕವಾಗಿ ಓಮಿಕ್ರಾನ್‌ ರೂಪಾಂತರ ವೈರಸ್‌ ಪತ್ತೆಯಾದ 30 ನೇ ದೇಶವಾಗಿದೆ ಭಾರತ.

“ಎರಡೂ ಪ್ರಕರಣಗಳು ಕರ್ನಾಟಕದಲ್ಲಿ ವರದಿಯಾಗಿದ್ದು. 66 ಮತ್ತು 46 ವರ್ಷ ವಯಸ್ಸಿನ ಇಬ್ಬರು ರೋಗಿಗಳಲ್ಲಿ ಇದು ಕಂಡು ಬಂದಿದೆ” ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ರೋಗಿಗಳ ಗೌಪ್ಯತೆಯನ್ನು ರಕ್ಷಿಸಲು ಅವರ ಗುರುತನ್ನು ಸದ್ಯಕ್ಕೆ ಬಹಿರಂಗಪಡಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರಿಗೆ ತಜ್ಞ ವೈದ್ಯರು ಹೇಳುವುದೇನು?

ಮೂಲಗಳ ಪ್ರಕಾರ, ವಿದೇಶಿಯಾಗಿರುವ 66 ವರ್ಷ ವಯಸ್ಸಿನ ರೋಗಿಯು ದಕ್ಷಿಣ ಆಫ್ರಿಕಾದಿಂದ ಇತ್ತೀಚೆಗೆ ಬಂದಿದ್ದರು. 46 ವರ್ಷದ ಮತ್ತೊಬ್ಬ ರೋಗಿ ಭಾರತದವರೇ ಆಗಿದ್ದು, ಬೆಂಗಳೂರಿನಲ್ಲಿ ಆರೋಗ್ಯ ಕಾರ್ಯಕರ್ತರಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಇಬ್ಬರು ವ್ಯಕ್ತಿಗಳೊಂದಿಗೆ ಸಂಪರ್ಕದಲ್ಲಿದ್ದ ಎಲ್ಲಾ ಜನರನ್ನು ಪತ್ತೆಹಚ್ಚಲಾಗಿದೆ ಮತ್ತು ಪರೀಕ್ಷಿಸಲಾಗುತ್ತಿದೆ. ಎರಡೂ ಪ್ರಕರಣಗಳಲ್ಲಿ ರೋಗಿಗಳು ಸೌಮ್ಯವಾಗಿದ್ದು, ಇದುವರೆಗೆ ಯಾವುದೇ ತೀವ್ರವಾದ ರೋಗಲಕ್ಷಣಗಳಿಲ್ಲ ಎಂದು ಹೇಳಲಾಗಿದೆ.

“ಓಮಿಕ್ರಾನ್ ಪತ್ತೆಯಾಗಿರುವುದರಿಂದ ನಾವು ಭಯಪಡಬೇಕಾಗಿಲ್ಲ. ಆದರೆ ಅದರ ಬಗ್ಗೆ ಅರಿವು ಇರಬೇಕಾಗಿದೆ. ಕೊರೊನಾದ ಸೂಕ್ತ ನಡವಳಿಕೆಯನ್ನು ಅನುಸರಿಸಿ ಮತ್ತು ಸಭೆಗಳನ್ನು ಸೇರಬೇಡಿ” ಎಂದು ಅಗರ್ವಾಲ್ ಹೇಳಿದರು.

ಒಕ್ಕೂಟ ಸರ್ಕಾರದ ಕೊರೊನಾ ಕಾರ್ಯಪಡೆಯ ಮುಖ್ಯಸ್ಥ ಡಾ. ವಿ.ಕೆ. ಪಾಲ್, “ತಕ್ಷಣಕ್ಕೆ ಯಾವುದೇ ರೀತಿಯ ತೀವ್ರ ನಿರ್ಬಂಧಗಳನ್ನು ಕೈಗೊಂಡಿಲ್ಲ. ಪರಿಸ್ಥಿತಿಯು ನಿಯಂತ್ರಣದಲ್ಲಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತರಿಗೆ ಸಾಲ ನೀಡಲು SBI ಜೊತೆ ಕೈಜೋಡಿಸಿದ ಅದಾನಿ ಕ್ಯಾಪಿಟಲ್

ಈ ಬಗ್ಗೆ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಗೌರವ್ ಗುಪ್ತಾ ಅವರು ಕೂಡಾ ಸ್ಪಷ್ಟ ಪಡಿಸಿದ್ದಾರೆ. “ಬಿಬಿಎಂಪಿ ವ್ಯಾಪ್ತಿಯಲ್ಲಿ ಇಬ್ಬರು ಕೋವಿಡ್ ಪಾಸಿಟಿವ್ ವ್ಯಕ್ತಿಗಳಲ್ಲಿ ಓಮೈಕ್ರಾನ್ ವೈರಾಣು ಪತ್ತೆಯಾಗಿದ್ದು, ಪಾಲಿಕೆ ವತಿಯಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾರೊಬ್ಬರೂ ಭಯಪಡುವ ಅಗತ್ಯವಿಲ್ಲ. ಎಲ್ಲರೂ ಕೋವಿಡ್ ನಿಯಮಗಳನ್ನು(CAB) ಅನ್ನು ಪಾಲಿಸಲು ಕೋರುತ್ತೇನೆ” ಎಂದು ತಿಳಿಸಿದ್ದಾರೆ.

ಓಮಿಕ್ರಾನ್ ವೇಗವಾಗಿ ಹರಡುತ್ತದೆ ಎಂಬುವುದನ್ನು ತಜ್ಞರು ಸ್ಪಷ್ಟಪಡಿಸಿದ್ದರಾದರೂ, ಅದರಿಂದಾಗಿ ತೀವ್ರ ಆರೋಗ್ಯದ ಸಮಸ್ಯೆ ಆಗುತ್ತದೆ ಎಂಬ ಬಗ್ಗೆ ಯಾವುದೆ ಪುರಾವೆ ಇಲ್ಲ ಎಂದು ಹೇಳಿದ್ದಾರೆ.

ಓಮಿಕ್ರಾನ್‌ ರೂಪಾಂತರ ವೈರಸ್‌ ಅನ್ನು ದಕ್ಷಿಣ ಆಫ್ರಿಕಾದಲ್ಲಿ ಮೊದಲು ಪತ್ತೆಹಚ್ಚಲಾಯಿತು. ಇದು ಪತ್ತೆಯಾಗುತ್ತಿದ್ದಂತೆ ಹಲವಾರು ರಾಷ್ಟ್ರಗಳು ನಿರ್ಬಂಧಗಳನ್ನು ಪುನಃ ಹೇರುತ್ತಿವೆ. 2020 ರ ಅಕ್ಟೋಬರ್‌ನಲ್ಲಿ ಭಾರತದಲ್ಲಿ ಮೊದಲು ಕಂಡುಹಿಡಿಯಲಾದ ಡೆಲ್ಟಾ ರೂಪಾಂತರ ವೈರಸ್‌ ನಂತರ ಈ ವೈರಸ್‌ ಹೊಸತಾಗಿ ಪತ್ತೆಯಾಗಿದೆ.

ಭಾರತವು ಡಿಸೆಂಬರ್ 15 ರಂದು ನಿಗದಿತ ವಾಣಿಜ್ಯ ಅಂತರರಾಷ್ಟ್ರೀಯ ವಿಮಾನಯಾನಗಳನ್ನು ಮರುಪ್ರಾರಂಭಿಸಲು ಸಿದ್ಧವಾಗಿತ್ತು. ಆದರೆ ಬುಧವಾರ ಆ ಯೋಜನೆಯನ್ನು ರದ್ದುಗೊಳಿಸಿ, ಮರುಪ್ರಾರಂಭದ ದಿನಾಂಕವನ್ನು ಸರಿಯಾದ ಸಮಯದಲ್ಲಿ ಘೋಷಿಸಲಾಗುವುದು ಎಂದು ಹೇಳಿದೆ.

ಇದನ್ನೂ ಓದಿ:ವಿಶ್ವದೆಲ್ಲೆಡೆ ಕೊರೊನಾ ಹೊಸ ರೂಪಾಂತರ ‘ಓಮಿಕ್ರಾನ್’ ಆತಂಕ: ತಜ್ಞರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...