Homeಮುಖಪುಟದೇಶದಲ್ಲಿ ಹೆಚ್ಚಿನ ತೆರಿಗೆ ಕಟ್ಟುವವರು ಬಡವರೆ ಹೊರತು ಶ್ರೀಮಂತರಲ್ಲ: ಇಲ್ಲಿದೆ ಪೂರ್ಣ ವಿವರ

ದೇಶದಲ್ಲಿ ಹೆಚ್ಚಿನ ತೆರಿಗೆ ಕಟ್ಟುವವರು ಬಡವರೆ ಹೊರತು ಶ್ರೀಮಂತರಲ್ಲ: ಇಲ್ಲಿದೆ ಪೂರ್ಣ ವಿವರ

- Advertisement -
- Advertisement -

ನಾನು ಕಟ್ಟುವ ತೆರಿಗೆ ಹಣ ದೇಶದ ಅಭಿವೃದ್ದಿಗಾಗಿಯೇ ಹೊರತು ಉಚಿತ ಹಂಚಿಕೆಗೆ ಅಲ್ಲ ಎಂಬ ಕಥನವೊಂದು ಚರ್ಚೆಗೆ ಕಾರಣವಾಗುತ್ತಿದೆ. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ರೆವ್ಡಿ (ಬಿಟ್ಟಿ) ಸಂಸ್ಕೃತಿ ಎಂದು ಅಣಕ ಮಾಡುತ್ತಿದ್ದರು. ಅದರ ಮುಂದುವರಿದ ಭಾಗವಾಗಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಜಯಗಳಿಸಿ ಅಧಿಕಾರ ಹಿಡಿದಿದ್ದು 5 ಗ್ಯಾರಂಟಿ ಯೋಜನೆಗಳ ಮೂಲಕ ಬಡಜನರ ಸ್ನೇಹಿ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಲು ಮುಂದಾಗಿದೆ. ಇದನ್ನು ವಿರೋಧಿಸುತ್ತಿರುವ ಮೇಲ್ವರ್ಗದ, ಪ್ರಬಲ ಸಮುದಾಯದ ಜನರು ನಾನು ಕಟ್ಟುವ ತೆರಿಗೆಯನ್ನು ಬಿಟ್ಟಿ ಭಾಗ್ಯಗಳಿಗೆ ಬಳಸಬೇಡಿ ಎನ್ನುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ದೇಶದಲ್ಲಿ ಯಾರು ಹೆಚ್ಚು ತೆರಿಗೆ ಕಟ್ಟುತ್ತಿದ್ದಾರೆ? ಯಾರ ಹಣ ಯಾರಿಗೆ ಬಳಕೆಯಾಗುತ್ತಿದೆ ಎಂಬುದನ್ನು ನೋಡೋಣ.

ನಮ್ಮ ಭಾರತ ದೇಶದಲ್ಲಿ ಸದ್ಯಕ್ಕೆ ಎರಡು ರೀತಿಯ ತೆರಿಗೆ ಪದ್ದತಿ ಇದೆ. ಅವುಗಳೆಂದರೆ

  1. ಪ್ರತ್ಯಕ್ಷ ತೆರಿಗೆ – ಆದಾಯ ತೆರಿಗೆ: ಅಂದರೆ ಸಂಬಳ, ಉದ್ಯಮ ಸೇರಿದಂತೆ ಇತರ ಮೂಲಗಳಿಂದ ಗಳಿಸುವ ವಾರ್ಷಿಕ ಆದಾಯದ ಮೇಲೆ ತೆರಿಗೆ ಕಟ್ಟಬೇಕಿರುತ್ತದೆ. ಇದರಲ್ಲಿ ಐದು ಸ್ಲ್ಯಾಬ್‌ಗಳಲ್ಲಿ ತೆರಿಗೆ ಕಟ್ಟಿಸಿಕೊಳ್ಳಲಾಗುತ್ತದೆ. ಇದನ್ನು ಪ್ರಗತಿಪರ ತೆರಿಗೆ ಪದ್ಧತಿ ಎನ್ನುತ್ತಾರೆ. ಏಕೆಂದರೆ ಇದರಲ್ಲಿ ಬಡವರಿಗೆ ಕಡಿಮೆ ತೆರಿಗೆ ಇದ್ದರೆ, ಶ್ರೀಮಂತರಿಗೆ ಹೆಚ್ಚಿನ ತೆರಿಗೆ ವಿಧಿಸಲಾಗುತ್ತದೆ. ತೆರಿಗೆ ಸ್ಲ್ಯಾಬ್‌ಗಳು ಕೆಳಗಿನಂತಿವೆ.

3 ಲಕ್ಷ ರೂವರೆಗೆ ಆದಾಯ – ತೆರಿಗೆ ಇಲ್ಲ

3 ಲಕ್ಷ ರೂ ಯಿಂದ 6 ಲಕ್ಷ ರೂ ವರೆಗೆ – ಶೇ 5ರಷ್ಟು ತೆರಿಗೆ

6 ರಿಂದ 9 ಲಕ್ಷ ರೂವರೆಗೆ – ಶೇ 10 ರಷ್ಟು ತೆರಿಗೆ

9 ರಿಂದ 12 ಲಕ್ಷ ರೂ ವರೆಗೆ– ಶೇ 15ರಷ್ಟು ತೆರಿಗೆ

12 ರಿಂದ 15 ಲಕ್ಷ ರೂವರೆಗೆ – ಶೇ 20ರಷ್ಟು ತೆರಿಗೆ

15 ಲಕ್ಷಕ್ಕಿಂತ ಮೇಲ್ಪಟ್ಟ ಆದಾಯಕ್ಕೆ ಶೇ 30ರಷ್ಟು ತೆರಿಗೆ ಹೇರಲಾಗಿದೆ.

ಇದರೊಟ್ಟಿಗೆ 50 ಕೋಟಿ ರೂಗಳಿಗೂ ಹೆಚ್ಚಿನ ವಾರ್ಷಿಕ ವ್ಯವಹಾರ ನಡೆಸುವ ಕಂಪನಿಗಳು ಕಾರ್ಪೋರೇಟ್ ಟ್ಯಾಕ್ಸ್ ಕಟ್ಟಬೇಕು. ಈ ಮೊದಲು ಅತಿ ಹೆಚ್ಚು ಸಂಪತ್ತು ಹೊಂದಿರುವವರಿಗೆ ಸರ್ಕಾರ ತೆರಿಗೆ ವಿಧಿಸುತ್ತಿತ್ತು. ಆದರೆ ಸಂಪತ್ತಿನ ಮೇಲಿನ ತೆರಿಗೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ತೆಗೆದುಹಾಕಿದ್ದಾರೆ.

2. ಪರೋಕ್ಷ ತೆರಿಗೆ – ಪ್ರತಿಯೊಬ್ಬರೂ ಪಾವತಿಸುವ ತೆರಿಗೆ: ಯಾವುದೇ ವಸ್ತುಗಳನ್ನು ಕೊಳ್ಳುವ ಮೂಲಕ ಪ್ರತಿಯೊಬ್ಬರೂ ತೆರಿಗೆ ಕಟ್ಟುತ್ತಾರೆ. ದುಡಿಯಲು ಸಾಧ್ಯವಾಗದವರು ಸಹ ಕಟ್ಟುವ ತೆರಿಗೆ ಇದಾಗಿದೆ. ಇದನ್ನು ಪ್ರತಿಗಾಮಿ ತೆರಿಗೆ ವ್ಯವಸ್ಥೆ ಎನ್ನಲಾಗುತ್ತದೆ. ಏಕೆಂದರೆ ದಿನಕ್ಕೆ 100 ರೂ ಸಂಪಾದಿಸುವವರು ಮತ್ತು ದಿನಕ್ಕೆ 100 ಕೋಟಿ ರೂ ಸಂಪಾದಿಸುವವರಿಬ್ಬರೂ ಒಂದೇ ತೆರಿಗೆ ಪಾವತಿಸಬೇಕಿರುತ್ತದೆ. ಅಂದರೆ ಇದು ಎಲ್ಲರಿಗೂ ಸಮಾನ ತೆರಿಗೆಯಾಗಿದೆ.

2021-22ರ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆಯಾಗಿ ಭಾರತೀಯರು ಪಾವತಿಸಿದ 6.73 ಲಕ್ಷ ಕೋಟಿ ರೂಗಳಿಗೆ ಹೋಲಿಸಿದರೆ, ಪರೋಕ್ಷ ತೆರಿಗೆಯಿಂದ 20.73 ಲಕ್ಷ ಕೋಟಿ ರೂ ಸಂಗ್ರಹಿಸಲಾಗಿದೆ. ಅಂದರೆ ಈ ದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಬಡವರು ಮತ್ತು ಮಧ್ಯಮ ವರ್ಗದವರು ಕಟ್ಟುವ ಪರೋಕ್ಷ ತೆರಿಗೆಯ ಪಾಲು ಬೃಹತ್ ಪ್ರಮಾಣದಲ್ಲಿದೆ.

ಅದರಲ್ಲಿಯೂ ಅತ್ಯಂತ ಪ್ರತಿಗಾಮಿ ತೆರಿಗೆ ವ್ಯವಸ್ಥೆಯಾದ ಜಿಎಸ್‌ಟಿ ಜಾರಿಯಾದ ನಂತರ ಈ ದೇಶದ ಶೇ.50 ರಷ್ಟು ಬಡವರು ಶೇ.64.3% ರಷ್ಟು ಜಿಎಸ್‌ಟಿ ಕಟ್ಟುತ್ತಿದ್ದಾರೆ ಎಂದು ಆಕ್ಸ್‌ಫಾಮ್ ವರದಿ ಹೇಳಿದೆ. ಏಕೆಂದರೆ ಅಂದು ದುಡಿದು ಅಂದು ತಿನ್ನುವ ಜನರು ಪ್ರತಿಯೊಂದು ವಸ್ತುಗಳನ್ನು ಕೊಳ್ಳಬೇಕಿದ್ದು ಸದ್ಯ 18% ವರೆಗೂ ಜಿಎಸ್‌ಟಿ ತೆರಿಗೆ ಇರುವುದರಿಂದ ಬಡವರೆ ಈ ದೇಶದ ಅತಿ ದೊಡ್ಡ ತೆರಿಗೆದಾರರಾಗಿದ್ದಾರೆ. ಮಧ್ಯಮ ವರ್ಗದ ಶೇ.40 ರಷ್ಟು ಜನ 33% ರಷ್ಟು ಜಿಎಸ್‌ಟಿ ಪಾವತಿಸಿದರೆ, ಮೇಲ್ವರ್ಗದ 10% ಜನರು ಕೇವಲ 3% ಜಿಎಸ್‌ಟಿ ಪಾವತಿಸುತ್ತಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಭಾರತದ ಕೇಂದ್ರ ಸರ್ಕಾರ ಮತ್ತು ಎಲ್ಲಾ ರಾಜ್ಯಗಳ ತೆರಿಗೆ ಆದಾಯದಲ್ಲಿ ಶೇ.67 ರಷ್ಟು ಭಾಗ ಪರೋಕ್ಷ ಭಾಗದಿಂದ ಬರುತ್ತದೆ.  ಕಾರ್ಪೋರೇಟ್ ಮತ್ತು ನೇರ ಆದಾಯ ತೆರಿಗೆ 33% ಬರುತ್ತದೆ. ಅದರಲ್ಲಿಯೂ ಈ 33% ತೆರಿಗೆಯನ್ನು ಕೇವಲ ಶ್ರೀಮಂತ ಉದ್ಯಮಿಗಳು ಮಾತ್ರ ಕಟ್ಟುವುದಿಲ್ಲ. ಬದಲಿಗೆ ಸಂಬಳ ಪಡೆಯುವ ಮಧ್ಯಮ ವರ್ಗದ ಜನರು ಸಹ ಆದಾಯ ತೆರಿಗೆಯ ಮೂಲಕ ಪ್ರತ್ಯಕ್ಷ ತೆರಿಗೆ ಕಟ್ಟುತ್ತಾರೆ. ಒಟ್ಟಾರೆಯಾಗಿ ಹೇಳುವುದಾದರೆ ಈ ದೇಶದಲ್ಲಿ ಹೆಚ್ಚಿನ ತೆರಿಗೆ ಕಟ್ಟುವವರು ಬಡವರೆ ಹೊರತು ಶ್ರೀಮಂತರಲ್ಲ. ಹಾಗಾಗಿ ನನ್ನ ತೆರಿಗೆ ಹಣ ಪೋಲು ಮಾಡಬೇಡಿ ಎಂದು ಹೇಳುವುದಕ್ಕೆ ಯಾವುದೇ ಅರ್ಥವಿರುವುದಿಲ್ಲ.

ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಸರ್ಕಾರದಿಂದ ಮೊದಲ ಸಿಹಿ ಸುದ್ದಿ: ಶೇ. 4ರಷ್ಟು ತುಟ್ಟಿಭತ್ಯೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...