Homeಮುಖಪುಟದೇಶದಲ್ಲಿ ಹೆಚ್ಚಿನ ತೆರಿಗೆ ಕಟ್ಟುವವರು ಬಡವರೆ ಹೊರತು ಶ್ರೀಮಂತರಲ್ಲ: ಇಲ್ಲಿದೆ ಪೂರ್ಣ ವಿವರ

ದೇಶದಲ್ಲಿ ಹೆಚ್ಚಿನ ತೆರಿಗೆ ಕಟ್ಟುವವರು ಬಡವರೆ ಹೊರತು ಶ್ರೀಮಂತರಲ್ಲ: ಇಲ್ಲಿದೆ ಪೂರ್ಣ ವಿವರ

- Advertisement -
- Advertisement -

ನಾನು ಕಟ್ಟುವ ತೆರಿಗೆ ಹಣ ದೇಶದ ಅಭಿವೃದ್ದಿಗಾಗಿಯೇ ಹೊರತು ಉಚಿತ ಹಂಚಿಕೆಗೆ ಅಲ್ಲ ಎಂಬ ಕಥನವೊಂದು ಚರ್ಚೆಗೆ ಕಾರಣವಾಗುತ್ತಿದೆ. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ರೆವ್ಡಿ (ಬಿಟ್ಟಿ) ಸಂಸ್ಕೃತಿ ಎಂದು ಅಣಕ ಮಾಡುತ್ತಿದ್ದರು. ಅದರ ಮುಂದುವರಿದ ಭಾಗವಾಗಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಜಯಗಳಿಸಿ ಅಧಿಕಾರ ಹಿಡಿದಿದ್ದು 5 ಗ್ಯಾರಂಟಿ ಯೋಜನೆಗಳ ಮೂಲಕ ಬಡಜನರ ಸ್ನೇಹಿ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಲು ಮುಂದಾಗಿದೆ. ಇದನ್ನು ವಿರೋಧಿಸುತ್ತಿರುವ ಮೇಲ್ವರ್ಗದ, ಪ್ರಬಲ ಸಮುದಾಯದ ಜನರು ನಾನು ಕಟ್ಟುವ ತೆರಿಗೆಯನ್ನು ಬಿಟ್ಟಿ ಭಾಗ್ಯಗಳಿಗೆ ಬಳಸಬೇಡಿ ಎನ್ನುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ದೇಶದಲ್ಲಿ ಯಾರು ಹೆಚ್ಚು ತೆರಿಗೆ ಕಟ್ಟುತ್ತಿದ್ದಾರೆ? ಯಾರ ಹಣ ಯಾರಿಗೆ ಬಳಕೆಯಾಗುತ್ತಿದೆ ಎಂಬುದನ್ನು ನೋಡೋಣ.

ನಮ್ಮ ಭಾರತ ದೇಶದಲ್ಲಿ ಸದ್ಯಕ್ಕೆ ಎರಡು ರೀತಿಯ ತೆರಿಗೆ ಪದ್ದತಿ ಇದೆ. ಅವುಗಳೆಂದರೆ

  1. ಪ್ರತ್ಯಕ್ಷ ತೆರಿಗೆ – ಆದಾಯ ತೆರಿಗೆ: ಅಂದರೆ ಸಂಬಳ, ಉದ್ಯಮ ಸೇರಿದಂತೆ ಇತರ ಮೂಲಗಳಿಂದ ಗಳಿಸುವ ವಾರ್ಷಿಕ ಆದಾಯದ ಮೇಲೆ ತೆರಿಗೆ ಕಟ್ಟಬೇಕಿರುತ್ತದೆ. ಇದರಲ್ಲಿ ಐದು ಸ್ಲ್ಯಾಬ್‌ಗಳಲ್ಲಿ ತೆರಿಗೆ ಕಟ್ಟಿಸಿಕೊಳ್ಳಲಾಗುತ್ತದೆ. ಇದನ್ನು ಪ್ರಗತಿಪರ ತೆರಿಗೆ ಪದ್ಧತಿ ಎನ್ನುತ್ತಾರೆ. ಏಕೆಂದರೆ ಇದರಲ್ಲಿ ಬಡವರಿಗೆ ಕಡಿಮೆ ತೆರಿಗೆ ಇದ್ದರೆ, ಶ್ರೀಮಂತರಿಗೆ ಹೆಚ್ಚಿನ ತೆರಿಗೆ ವಿಧಿಸಲಾಗುತ್ತದೆ. ತೆರಿಗೆ ಸ್ಲ್ಯಾಬ್‌ಗಳು ಕೆಳಗಿನಂತಿವೆ.

3 ಲಕ್ಷ ರೂವರೆಗೆ ಆದಾಯ – ತೆರಿಗೆ ಇಲ್ಲ

3 ಲಕ್ಷ ರೂ ಯಿಂದ 6 ಲಕ್ಷ ರೂ ವರೆಗೆ – ಶೇ 5ರಷ್ಟು ತೆರಿಗೆ

6 ರಿಂದ 9 ಲಕ್ಷ ರೂವರೆಗೆ – ಶೇ 10 ರಷ್ಟು ತೆರಿಗೆ

9 ರಿಂದ 12 ಲಕ್ಷ ರೂ ವರೆಗೆ– ಶೇ 15ರಷ್ಟು ತೆರಿಗೆ

12 ರಿಂದ 15 ಲಕ್ಷ ರೂವರೆಗೆ – ಶೇ 20ರಷ್ಟು ತೆರಿಗೆ

15 ಲಕ್ಷಕ್ಕಿಂತ ಮೇಲ್ಪಟ್ಟ ಆದಾಯಕ್ಕೆ ಶೇ 30ರಷ್ಟು ತೆರಿಗೆ ಹೇರಲಾಗಿದೆ.

ಇದರೊಟ್ಟಿಗೆ 50 ಕೋಟಿ ರೂಗಳಿಗೂ ಹೆಚ್ಚಿನ ವಾರ್ಷಿಕ ವ್ಯವಹಾರ ನಡೆಸುವ ಕಂಪನಿಗಳು ಕಾರ್ಪೋರೇಟ್ ಟ್ಯಾಕ್ಸ್ ಕಟ್ಟಬೇಕು. ಈ ಮೊದಲು ಅತಿ ಹೆಚ್ಚು ಸಂಪತ್ತು ಹೊಂದಿರುವವರಿಗೆ ಸರ್ಕಾರ ತೆರಿಗೆ ವಿಧಿಸುತ್ತಿತ್ತು. ಆದರೆ ಸಂಪತ್ತಿನ ಮೇಲಿನ ತೆರಿಗೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ತೆಗೆದುಹಾಕಿದ್ದಾರೆ.

2. ಪರೋಕ್ಷ ತೆರಿಗೆ – ಪ್ರತಿಯೊಬ್ಬರೂ ಪಾವತಿಸುವ ತೆರಿಗೆ: ಯಾವುದೇ ವಸ್ತುಗಳನ್ನು ಕೊಳ್ಳುವ ಮೂಲಕ ಪ್ರತಿಯೊಬ್ಬರೂ ತೆರಿಗೆ ಕಟ್ಟುತ್ತಾರೆ. ದುಡಿಯಲು ಸಾಧ್ಯವಾಗದವರು ಸಹ ಕಟ್ಟುವ ತೆರಿಗೆ ಇದಾಗಿದೆ. ಇದನ್ನು ಪ್ರತಿಗಾಮಿ ತೆರಿಗೆ ವ್ಯವಸ್ಥೆ ಎನ್ನಲಾಗುತ್ತದೆ. ಏಕೆಂದರೆ ದಿನಕ್ಕೆ 100 ರೂ ಸಂಪಾದಿಸುವವರು ಮತ್ತು ದಿನಕ್ಕೆ 100 ಕೋಟಿ ರೂ ಸಂಪಾದಿಸುವವರಿಬ್ಬರೂ ಒಂದೇ ತೆರಿಗೆ ಪಾವತಿಸಬೇಕಿರುತ್ತದೆ. ಅಂದರೆ ಇದು ಎಲ್ಲರಿಗೂ ಸಮಾನ ತೆರಿಗೆಯಾಗಿದೆ.

2021-22ರ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆಯಾಗಿ ಭಾರತೀಯರು ಪಾವತಿಸಿದ 6.73 ಲಕ್ಷ ಕೋಟಿ ರೂಗಳಿಗೆ ಹೋಲಿಸಿದರೆ, ಪರೋಕ್ಷ ತೆರಿಗೆಯಿಂದ 20.73 ಲಕ್ಷ ಕೋಟಿ ರೂ ಸಂಗ್ರಹಿಸಲಾಗಿದೆ. ಅಂದರೆ ಈ ದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಬಡವರು ಮತ್ತು ಮಧ್ಯಮ ವರ್ಗದವರು ಕಟ್ಟುವ ಪರೋಕ್ಷ ತೆರಿಗೆಯ ಪಾಲು ಬೃಹತ್ ಪ್ರಮಾಣದಲ್ಲಿದೆ.

ಅದರಲ್ಲಿಯೂ ಅತ್ಯಂತ ಪ್ರತಿಗಾಮಿ ತೆರಿಗೆ ವ್ಯವಸ್ಥೆಯಾದ ಜಿಎಸ್‌ಟಿ ಜಾರಿಯಾದ ನಂತರ ಈ ದೇಶದ ಶೇ.50 ರಷ್ಟು ಬಡವರು ಶೇ.64.3% ರಷ್ಟು ಜಿಎಸ್‌ಟಿ ಕಟ್ಟುತ್ತಿದ್ದಾರೆ ಎಂದು ಆಕ್ಸ್‌ಫಾಮ್ ವರದಿ ಹೇಳಿದೆ. ಏಕೆಂದರೆ ಅಂದು ದುಡಿದು ಅಂದು ತಿನ್ನುವ ಜನರು ಪ್ರತಿಯೊಂದು ವಸ್ತುಗಳನ್ನು ಕೊಳ್ಳಬೇಕಿದ್ದು ಸದ್ಯ 18% ವರೆಗೂ ಜಿಎಸ್‌ಟಿ ತೆರಿಗೆ ಇರುವುದರಿಂದ ಬಡವರೆ ಈ ದೇಶದ ಅತಿ ದೊಡ್ಡ ತೆರಿಗೆದಾರರಾಗಿದ್ದಾರೆ. ಮಧ್ಯಮ ವರ್ಗದ ಶೇ.40 ರಷ್ಟು ಜನ 33% ರಷ್ಟು ಜಿಎಸ್‌ಟಿ ಪಾವತಿಸಿದರೆ, ಮೇಲ್ವರ್ಗದ 10% ಜನರು ಕೇವಲ 3% ಜಿಎಸ್‌ಟಿ ಪಾವತಿಸುತ್ತಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಭಾರತದ ಕೇಂದ್ರ ಸರ್ಕಾರ ಮತ್ತು ಎಲ್ಲಾ ರಾಜ್ಯಗಳ ತೆರಿಗೆ ಆದಾಯದಲ್ಲಿ ಶೇ.67 ರಷ್ಟು ಭಾಗ ಪರೋಕ್ಷ ಭಾಗದಿಂದ ಬರುತ್ತದೆ.  ಕಾರ್ಪೋರೇಟ್ ಮತ್ತು ನೇರ ಆದಾಯ ತೆರಿಗೆ 33% ಬರುತ್ತದೆ. ಅದರಲ್ಲಿಯೂ ಈ 33% ತೆರಿಗೆಯನ್ನು ಕೇವಲ ಶ್ರೀಮಂತ ಉದ್ಯಮಿಗಳು ಮಾತ್ರ ಕಟ್ಟುವುದಿಲ್ಲ. ಬದಲಿಗೆ ಸಂಬಳ ಪಡೆಯುವ ಮಧ್ಯಮ ವರ್ಗದ ಜನರು ಸಹ ಆದಾಯ ತೆರಿಗೆಯ ಮೂಲಕ ಪ್ರತ್ಯಕ್ಷ ತೆರಿಗೆ ಕಟ್ಟುತ್ತಾರೆ. ಒಟ್ಟಾರೆಯಾಗಿ ಹೇಳುವುದಾದರೆ ಈ ದೇಶದಲ್ಲಿ ಹೆಚ್ಚಿನ ತೆರಿಗೆ ಕಟ್ಟುವವರು ಬಡವರೆ ಹೊರತು ಶ್ರೀಮಂತರಲ್ಲ. ಹಾಗಾಗಿ ನನ್ನ ತೆರಿಗೆ ಹಣ ಪೋಲು ಮಾಡಬೇಡಿ ಎಂದು ಹೇಳುವುದಕ್ಕೆ ಯಾವುದೇ ಅರ್ಥವಿರುವುದಿಲ್ಲ.

ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಸರ್ಕಾರದಿಂದ ಮೊದಲ ಸಿಹಿ ಸುದ್ದಿ: ಶೇ. 4ರಷ್ಟು ತುಟ್ಟಿಭತ್ಯೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...