Homeಮುಖಪುಟದೇಶದಲ್ಲಿ ಹೆಚ್ಚಿನ ತೆರಿಗೆ ಕಟ್ಟುವವರು ಬಡವರೆ ಹೊರತು ಶ್ರೀಮಂತರಲ್ಲ: ಇಲ್ಲಿದೆ ಪೂರ್ಣ ವಿವರ

ದೇಶದಲ್ಲಿ ಹೆಚ್ಚಿನ ತೆರಿಗೆ ಕಟ್ಟುವವರು ಬಡವರೆ ಹೊರತು ಶ್ರೀಮಂತರಲ್ಲ: ಇಲ್ಲಿದೆ ಪೂರ್ಣ ವಿವರ

- Advertisement -
- Advertisement -

ನಾನು ಕಟ್ಟುವ ತೆರಿಗೆ ಹಣ ದೇಶದ ಅಭಿವೃದ್ದಿಗಾಗಿಯೇ ಹೊರತು ಉಚಿತ ಹಂಚಿಕೆಗೆ ಅಲ್ಲ ಎಂಬ ಕಥನವೊಂದು ಚರ್ಚೆಗೆ ಕಾರಣವಾಗುತ್ತಿದೆ. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ರೆವ್ಡಿ (ಬಿಟ್ಟಿ) ಸಂಸ್ಕೃತಿ ಎಂದು ಅಣಕ ಮಾಡುತ್ತಿದ್ದರು. ಅದರ ಮುಂದುವರಿದ ಭಾಗವಾಗಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಜಯಗಳಿಸಿ ಅಧಿಕಾರ ಹಿಡಿದಿದ್ದು 5 ಗ್ಯಾರಂಟಿ ಯೋಜನೆಗಳ ಮೂಲಕ ಬಡಜನರ ಸ್ನೇಹಿ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಲು ಮುಂದಾಗಿದೆ. ಇದನ್ನು ವಿರೋಧಿಸುತ್ತಿರುವ ಮೇಲ್ವರ್ಗದ, ಪ್ರಬಲ ಸಮುದಾಯದ ಜನರು ನಾನು ಕಟ್ಟುವ ತೆರಿಗೆಯನ್ನು ಬಿಟ್ಟಿ ಭಾಗ್ಯಗಳಿಗೆ ಬಳಸಬೇಡಿ ಎನ್ನುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ದೇಶದಲ್ಲಿ ಯಾರು ಹೆಚ್ಚು ತೆರಿಗೆ ಕಟ್ಟುತ್ತಿದ್ದಾರೆ? ಯಾರ ಹಣ ಯಾರಿಗೆ ಬಳಕೆಯಾಗುತ್ತಿದೆ ಎಂಬುದನ್ನು ನೋಡೋಣ.

ನಮ್ಮ ಭಾರತ ದೇಶದಲ್ಲಿ ಸದ್ಯಕ್ಕೆ ಎರಡು ರೀತಿಯ ತೆರಿಗೆ ಪದ್ದತಿ ಇದೆ. ಅವುಗಳೆಂದರೆ

  1. ಪ್ರತ್ಯಕ್ಷ ತೆರಿಗೆ – ಆದಾಯ ತೆರಿಗೆ: ಅಂದರೆ ಸಂಬಳ, ಉದ್ಯಮ ಸೇರಿದಂತೆ ಇತರ ಮೂಲಗಳಿಂದ ಗಳಿಸುವ ವಾರ್ಷಿಕ ಆದಾಯದ ಮೇಲೆ ತೆರಿಗೆ ಕಟ್ಟಬೇಕಿರುತ್ತದೆ. ಇದರಲ್ಲಿ ಐದು ಸ್ಲ್ಯಾಬ್‌ಗಳಲ್ಲಿ ತೆರಿಗೆ ಕಟ್ಟಿಸಿಕೊಳ್ಳಲಾಗುತ್ತದೆ. ಇದನ್ನು ಪ್ರಗತಿಪರ ತೆರಿಗೆ ಪದ್ಧತಿ ಎನ್ನುತ್ತಾರೆ. ಏಕೆಂದರೆ ಇದರಲ್ಲಿ ಬಡವರಿಗೆ ಕಡಿಮೆ ತೆರಿಗೆ ಇದ್ದರೆ, ಶ್ರೀಮಂತರಿಗೆ ಹೆಚ್ಚಿನ ತೆರಿಗೆ ವಿಧಿಸಲಾಗುತ್ತದೆ. ತೆರಿಗೆ ಸ್ಲ್ಯಾಬ್‌ಗಳು ಕೆಳಗಿನಂತಿವೆ.

3 ಲಕ್ಷ ರೂವರೆಗೆ ಆದಾಯ – ತೆರಿಗೆ ಇಲ್ಲ

3 ಲಕ್ಷ ರೂ ಯಿಂದ 6 ಲಕ್ಷ ರೂ ವರೆಗೆ – ಶೇ 5ರಷ್ಟು ತೆರಿಗೆ

6 ರಿಂದ 9 ಲಕ್ಷ ರೂವರೆಗೆ – ಶೇ 10 ರಷ್ಟು ತೆರಿಗೆ

9 ರಿಂದ 12 ಲಕ್ಷ ರೂ ವರೆಗೆ– ಶೇ 15ರಷ್ಟು ತೆರಿಗೆ

12 ರಿಂದ 15 ಲಕ್ಷ ರೂವರೆಗೆ – ಶೇ 20ರಷ್ಟು ತೆರಿಗೆ

15 ಲಕ್ಷಕ್ಕಿಂತ ಮೇಲ್ಪಟ್ಟ ಆದಾಯಕ್ಕೆ ಶೇ 30ರಷ್ಟು ತೆರಿಗೆ ಹೇರಲಾಗಿದೆ.

ಇದರೊಟ್ಟಿಗೆ 50 ಕೋಟಿ ರೂಗಳಿಗೂ ಹೆಚ್ಚಿನ ವಾರ್ಷಿಕ ವ್ಯವಹಾರ ನಡೆಸುವ ಕಂಪನಿಗಳು ಕಾರ್ಪೋರೇಟ್ ಟ್ಯಾಕ್ಸ್ ಕಟ್ಟಬೇಕು. ಈ ಮೊದಲು ಅತಿ ಹೆಚ್ಚು ಸಂಪತ್ತು ಹೊಂದಿರುವವರಿಗೆ ಸರ್ಕಾರ ತೆರಿಗೆ ವಿಧಿಸುತ್ತಿತ್ತು. ಆದರೆ ಸಂಪತ್ತಿನ ಮೇಲಿನ ತೆರಿಗೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ತೆಗೆದುಹಾಕಿದ್ದಾರೆ.

2. ಪರೋಕ್ಷ ತೆರಿಗೆ – ಪ್ರತಿಯೊಬ್ಬರೂ ಪಾವತಿಸುವ ತೆರಿಗೆ: ಯಾವುದೇ ವಸ್ತುಗಳನ್ನು ಕೊಳ್ಳುವ ಮೂಲಕ ಪ್ರತಿಯೊಬ್ಬರೂ ತೆರಿಗೆ ಕಟ್ಟುತ್ತಾರೆ. ದುಡಿಯಲು ಸಾಧ್ಯವಾಗದವರು ಸಹ ಕಟ್ಟುವ ತೆರಿಗೆ ಇದಾಗಿದೆ. ಇದನ್ನು ಪ್ರತಿಗಾಮಿ ತೆರಿಗೆ ವ್ಯವಸ್ಥೆ ಎನ್ನಲಾಗುತ್ತದೆ. ಏಕೆಂದರೆ ದಿನಕ್ಕೆ 100 ರೂ ಸಂಪಾದಿಸುವವರು ಮತ್ತು ದಿನಕ್ಕೆ 100 ಕೋಟಿ ರೂ ಸಂಪಾದಿಸುವವರಿಬ್ಬರೂ ಒಂದೇ ತೆರಿಗೆ ಪಾವತಿಸಬೇಕಿರುತ್ತದೆ. ಅಂದರೆ ಇದು ಎಲ್ಲರಿಗೂ ಸಮಾನ ತೆರಿಗೆಯಾಗಿದೆ.

2021-22ರ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆಯಾಗಿ ಭಾರತೀಯರು ಪಾವತಿಸಿದ 6.73 ಲಕ್ಷ ಕೋಟಿ ರೂಗಳಿಗೆ ಹೋಲಿಸಿದರೆ, ಪರೋಕ್ಷ ತೆರಿಗೆಯಿಂದ 20.73 ಲಕ್ಷ ಕೋಟಿ ರೂ ಸಂಗ್ರಹಿಸಲಾಗಿದೆ. ಅಂದರೆ ಈ ದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಬಡವರು ಮತ್ತು ಮಧ್ಯಮ ವರ್ಗದವರು ಕಟ್ಟುವ ಪರೋಕ್ಷ ತೆರಿಗೆಯ ಪಾಲು ಬೃಹತ್ ಪ್ರಮಾಣದಲ್ಲಿದೆ.

ಅದರಲ್ಲಿಯೂ ಅತ್ಯಂತ ಪ್ರತಿಗಾಮಿ ತೆರಿಗೆ ವ್ಯವಸ್ಥೆಯಾದ ಜಿಎಸ್‌ಟಿ ಜಾರಿಯಾದ ನಂತರ ಈ ದೇಶದ ಶೇ.50 ರಷ್ಟು ಬಡವರು ಶೇ.64.3% ರಷ್ಟು ಜಿಎಸ್‌ಟಿ ಕಟ್ಟುತ್ತಿದ್ದಾರೆ ಎಂದು ಆಕ್ಸ್‌ಫಾಮ್ ವರದಿ ಹೇಳಿದೆ. ಏಕೆಂದರೆ ಅಂದು ದುಡಿದು ಅಂದು ತಿನ್ನುವ ಜನರು ಪ್ರತಿಯೊಂದು ವಸ್ತುಗಳನ್ನು ಕೊಳ್ಳಬೇಕಿದ್ದು ಸದ್ಯ 18% ವರೆಗೂ ಜಿಎಸ್‌ಟಿ ತೆರಿಗೆ ಇರುವುದರಿಂದ ಬಡವರೆ ಈ ದೇಶದ ಅತಿ ದೊಡ್ಡ ತೆರಿಗೆದಾರರಾಗಿದ್ದಾರೆ. ಮಧ್ಯಮ ವರ್ಗದ ಶೇ.40 ರಷ್ಟು ಜನ 33% ರಷ್ಟು ಜಿಎಸ್‌ಟಿ ಪಾವತಿಸಿದರೆ, ಮೇಲ್ವರ್ಗದ 10% ಜನರು ಕೇವಲ 3% ಜಿಎಸ್‌ಟಿ ಪಾವತಿಸುತ್ತಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಭಾರತದ ಕೇಂದ್ರ ಸರ್ಕಾರ ಮತ್ತು ಎಲ್ಲಾ ರಾಜ್ಯಗಳ ತೆರಿಗೆ ಆದಾಯದಲ್ಲಿ ಶೇ.67 ರಷ್ಟು ಭಾಗ ಪರೋಕ್ಷ ಭಾಗದಿಂದ ಬರುತ್ತದೆ.  ಕಾರ್ಪೋರೇಟ್ ಮತ್ತು ನೇರ ಆದಾಯ ತೆರಿಗೆ 33% ಬರುತ್ತದೆ. ಅದರಲ್ಲಿಯೂ ಈ 33% ತೆರಿಗೆಯನ್ನು ಕೇವಲ ಶ್ರೀಮಂತ ಉದ್ಯಮಿಗಳು ಮಾತ್ರ ಕಟ್ಟುವುದಿಲ್ಲ. ಬದಲಿಗೆ ಸಂಬಳ ಪಡೆಯುವ ಮಧ್ಯಮ ವರ್ಗದ ಜನರು ಸಹ ಆದಾಯ ತೆರಿಗೆಯ ಮೂಲಕ ಪ್ರತ್ಯಕ್ಷ ತೆರಿಗೆ ಕಟ್ಟುತ್ತಾರೆ. ಒಟ್ಟಾರೆಯಾಗಿ ಹೇಳುವುದಾದರೆ ಈ ದೇಶದಲ್ಲಿ ಹೆಚ್ಚಿನ ತೆರಿಗೆ ಕಟ್ಟುವವರು ಬಡವರೆ ಹೊರತು ಶ್ರೀಮಂತರಲ್ಲ. ಹಾಗಾಗಿ ನನ್ನ ತೆರಿಗೆ ಹಣ ಪೋಲು ಮಾಡಬೇಡಿ ಎಂದು ಹೇಳುವುದಕ್ಕೆ ಯಾವುದೇ ಅರ್ಥವಿರುವುದಿಲ್ಲ.

ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಸರ್ಕಾರದಿಂದ ಮೊದಲ ಸಿಹಿ ಸುದ್ದಿ: ಶೇ. 4ರಷ್ಟು ತುಟ್ಟಿಭತ್ಯೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...