Homeಮುಖಪುಟದೇಶದಲ್ಲಿ ಹೆಚ್ಚಿನ ತೆರಿಗೆ ಕಟ್ಟುವವರು ಬಡವರೆ ಹೊರತು ಶ್ರೀಮಂತರಲ್ಲ: ಇಲ್ಲಿದೆ ಪೂರ್ಣ ವಿವರ

ದೇಶದಲ್ಲಿ ಹೆಚ್ಚಿನ ತೆರಿಗೆ ಕಟ್ಟುವವರು ಬಡವರೆ ಹೊರತು ಶ್ರೀಮಂತರಲ್ಲ: ಇಲ್ಲಿದೆ ಪೂರ್ಣ ವಿವರ

- Advertisement -
- Advertisement -

ನಾನು ಕಟ್ಟುವ ತೆರಿಗೆ ಹಣ ದೇಶದ ಅಭಿವೃದ್ದಿಗಾಗಿಯೇ ಹೊರತು ಉಚಿತ ಹಂಚಿಕೆಗೆ ಅಲ್ಲ ಎಂಬ ಕಥನವೊಂದು ಚರ್ಚೆಗೆ ಕಾರಣವಾಗುತ್ತಿದೆ. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ರೆವ್ಡಿ (ಬಿಟ್ಟಿ) ಸಂಸ್ಕೃತಿ ಎಂದು ಅಣಕ ಮಾಡುತ್ತಿದ್ದರು. ಅದರ ಮುಂದುವರಿದ ಭಾಗವಾಗಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಜಯಗಳಿಸಿ ಅಧಿಕಾರ ಹಿಡಿದಿದ್ದು 5 ಗ್ಯಾರಂಟಿ ಯೋಜನೆಗಳ ಮೂಲಕ ಬಡಜನರ ಸ್ನೇಹಿ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಲು ಮುಂದಾಗಿದೆ. ಇದನ್ನು ವಿರೋಧಿಸುತ್ತಿರುವ ಮೇಲ್ವರ್ಗದ, ಪ್ರಬಲ ಸಮುದಾಯದ ಜನರು ನಾನು ಕಟ್ಟುವ ತೆರಿಗೆಯನ್ನು ಬಿಟ್ಟಿ ಭಾಗ್ಯಗಳಿಗೆ ಬಳಸಬೇಡಿ ಎನ್ನುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ದೇಶದಲ್ಲಿ ಯಾರು ಹೆಚ್ಚು ತೆರಿಗೆ ಕಟ್ಟುತ್ತಿದ್ದಾರೆ? ಯಾರ ಹಣ ಯಾರಿಗೆ ಬಳಕೆಯಾಗುತ್ತಿದೆ ಎಂಬುದನ್ನು ನೋಡೋಣ.

ನಮ್ಮ ಭಾರತ ದೇಶದಲ್ಲಿ ಸದ್ಯಕ್ಕೆ ಎರಡು ರೀತಿಯ ತೆರಿಗೆ ಪದ್ದತಿ ಇದೆ. ಅವುಗಳೆಂದರೆ

  1. ಪ್ರತ್ಯಕ್ಷ ತೆರಿಗೆ – ಆದಾಯ ತೆರಿಗೆ: ಅಂದರೆ ಸಂಬಳ, ಉದ್ಯಮ ಸೇರಿದಂತೆ ಇತರ ಮೂಲಗಳಿಂದ ಗಳಿಸುವ ವಾರ್ಷಿಕ ಆದಾಯದ ಮೇಲೆ ತೆರಿಗೆ ಕಟ್ಟಬೇಕಿರುತ್ತದೆ. ಇದರಲ್ಲಿ ಐದು ಸ್ಲ್ಯಾಬ್‌ಗಳಲ್ಲಿ ತೆರಿಗೆ ಕಟ್ಟಿಸಿಕೊಳ್ಳಲಾಗುತ್ತದೆ. ಇದನ್ನು ಪ್ರಗತಿಪರ ತೆರಿಗೆ ಪದ್ಧತಿ ಎನ್ನುತ್ತಾರೆ. ಏಕೆಂದರೆ ಇದರಲ್ಲಿ ಬಡವರಿಗೆ ಕಡಿಮೆ ತೆರಿಗೆ ಇದ್ದರೆ, ಶ್ರೀಮಂತರಿಗೆ ಹೆಚ್ಚಿನ ತೆರಿಗೆ ವಿಧಿಸಲಾಗುತ್ತದೆ. ತೆರಿಗೆ ಸ್ಲ್ಯಾಬ್‌ಗಳು ಕೆಳಗಿನಂತಿವೆ.

3 ಲಕ್ಷ ರೂವರೆಗೆ ಆದಾಯ – ತೆರಿಗೆ ಇಲ್ಲ

3 ಲಕ್ಷ ರೂ ಯಿಂದ 6 ಲಕ್ಷ ರೂ ವರೆಗೆ – ಶೇ 5ರಷ್ಟು ತೆರಿಗೆ

6 ರಿಂದ 9 ಲಕ್ಷ ರೂವರೆಗೆ – ಶೇ 10 ರಷ್ಟು ತೆರಿಗೆ

9 ರಿಂದ 12 ಲಕ್ಷ ರೂ ವರೆಗೆ– ಶೇ 15ರಷ್ಟು ತೆರಿಗೆ

12 ರಿಂದ 15 ಲಕ್ಷ ರೂವರೆಗೆ – ಶೇ 20ರಷ್ಟು ತೆರಿಗೆ

15 ಲಕ್ಷಕ್ಕಿಂತ ಮೇಲ್ಪಟ್ಟ ಆದಾಯಕ್ಕೆ ಶೇ 30ರಷ್ಟು ತೆರಿಗೆ ಹೇರಲಾಗಿದೆ.

ಇದರೊಟ್ಟಿಗೆ 50 ಕೋಟಿ ರೂಗಳಿಗೂ ಹೆಚ್ಚಿನ ವಾರ್ಷಿಕ ವ್ಯವಹಾರ ನಡೆಸುವ ಕಂಪನಿಗಳು ಕಾರ್ಪೋರೇಟ್ ಟ್ಯಾಕ್ಸ್ ಕಟ್ಟಬೇಕು. ಈ ಮೊದಲು ಅತಿ ಹೆಚ್ಚು ಸಂಪತ್ತು ಹೊಂದಿರುವವರಿಗೆ ಸರ್ಕಾರ ತೆರಿಗೆ ವಿಧಿಸುತ್ತಿತ್ತು. ಆದರೆ ಸಂಪತ್ತಿನ ಮೇಲಿನ ತೆರಿಗೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ತೆಗೆದುಹಾಕಿದ್ದಾರೆ.

2. ಪರೋಕ್ಷ ತೆರಿಗೆ – ಪ್ರತಿಯೊಬ್ಬರೂ ಪಾವತಿಸುವ ತೆರಿಗೆ: ಯಾವುದೇ ವಸ್ತುಗಳನ್ನು ಕೊಳ್ಳುವ ಮೂಲಕ ಪ್ರತಿಯೊಬ್ಬರೂ ತೆರಿಗೆ ಕಟ್ಟುತ್ತಾರೆ. ದುಡಿಯಲು ಸಾಧ್ಯವಾಗದವರು ಸಹ ಕಟ್ಟುವ ತೆರಿಗೆ ಇದಾಗಿದೆ. ಇದನ್ನು ಪ್ರತಿಗಾಮಿ ತೆರಿಗೆ ವ್ಯವಸ್ಥೆ ಎನ್ನಲಾಗುತ್ತದೆ. ಏಕೆಂದರೆ ದಿನಕ್ಕೆ 100 ರೂ ಸಂಪಾದಿಸುವವರು ಮತ್ತು ದಿನಕ್ಕೆ 100 ಕೋಟಿ ರೂ ಸಂಪಾದಿಸುವವರಿಬ್ಬರೂ ಒಂದೇ ತೆರಿಗೆ ಪಾವತಿಸಬೇಕಿರುತ್ತದೆ. ಅಂದರೆ ಇದು ಎಲ್ಲರಿಗೂ ಸಮಾನ ತೆರಿಗೆಯಾಗಿದೆ.

2021-22ರ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆಯಾಗಿ ಭಾರತೀಯರು ಪಾವತಿಸಿದ 6.73 ಲಕ್ಷ ಕೋಟಿ ರೂಗಳಿಗೆ ಹೋಲಿಸಿದರೆ, ಪರೋಕ್ಷ ತೆರಿಗೆಯಿಂದ 20.73 ಲಕ್ಷ ಕೋಟಿ ರೂ ಸಂಗ್ರಹಿಸಲಾಗಿದೆ. ಅಂದರೆ ಈ ದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಬಡವರು ಮತ್ತು ಮಧ್ಯಮ ವರ್ಗದವರು ಕಟ್ಟುವ ಪರೋಕ್ಷ ತೆರಿಗೆಯ ಪಾಲು ಬೃಹತ್ ಪ್ರಮಾಣದಲ್ಲಿದೆ.

ಅದರಲ್ಲಿಯೂ ಅತ್ಯಂತ ಪ್ರತಿಗಾಮಿ ತೆರಿಗೆ ವ್ಯವಸ್ಥೆಯಾದ ಜಿಎಸ್‌ಟಿ ಜಾರಿಯಾದ ನಂತರ ಈ ದೇಶದ ಶೇ.50 ರಷ್ಟು ಬಡವರು ಶೇ.64.3% ರಷ್ಟು ಜಿಎಸ್‌ಟಿ ಕಟ್ಟುತ್ತಿದ್ದಾರೆ ಎಂದು ಆಕ್ಸ್‌ಫಾಮ್ ವರದಿ ಹೇಳಿದೆ. ಏಕೆಂದರೆ ಅಂದು ದುಡಿದು ಅಂದು ತಿನ್ನುವ ಜನರು ಪ್ರತಿಯೊಂದು ವಸ್ತುಗಳನ್ನು ಕೊಳ್ಳಬೇಕಿದ್ದು ಸದ್ಯ 18% ವರೆಗೂ ಜಿಎಸ್‌ಟಿ ತೆರಿಗೆ ಇರುವುದರಿಂದ ಬಡವರೆ ಈ ದೇಶದ ಅತಿ ದೊಡ್ಡ ತೆರಿಗೆದಾರರಾಗಿದ್ದಾರೆ. ಮಧ್ಯಮ ವರ್ಗದ ಶೇ.40 ರಷ್ಟು ಜನ 33% ರಷ್ಟು ಜಿಎಸ್‌ಟಿ ಪಾವತಿಸಿದರೆ, ಮೇಲ್ವರ್ಗದ 10% ಜನರು ಕೇವಲ 3% ಜಿಎಸ್‌ಟಿ ಪಾವತಿಸುತ್ತಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಭಾರತದ ಕೇಂದ್ರ ಸರ್ಕಾರ ಮತ್ತು ಎಲ್ಲಾ ರಾಜ್ಯಗಳ ತೆರಿಗೆ ಆದಾಯದಲ್ಲಿ ಶೇ.67 ರಷ್ಟು ಭಾಗ ಪರೋಕ್ಷ ಭಾಗದಿಂದ ಬರುತ್ತದೆ.  ಕಾರ್ಪೋರೇಟ್ ಮತ್ತು ನೇರ ಆದಾಯ ತೆರಿಗೆ 33% ಬರುತ್ತದೆ. ಅದರಲ್ಲಿಯೂ ಈ 33% ತೆರಿಗೆಯನ್ನು ಕೇವಲ ಶ್ರೀಮಂತ ಉದ್ಯಮಿಗಳು ಮಾತ್ರ ಕಟ್ಟುವುದಿಲ್ಲ. ಬದಲಿಗೆ ಸಂಬಳ ಪಡೆಯುವ ಮಧ್ಯಮ ವರ್ಗದ ಜನರು ಸಹ ಆದಾಯ ತೆರಿಗೆಯ ಮೂಲಕ ಪ್ರತ್ಯಕ್ಷ ತೆರಿಗೆ ಕಟ್ಟುತ್ತಾರೆ. ಒಟ್ಟಾರೆಯಾಗಿ ಹೇಳುವುದಾದರೆ ಈ ದೇಶದಲ್ಲಿ ಹೆಚ್ಚಿನ ತೆರಿಗೆ ಕಟ್ಟುವವರು ಬಡವರೆ ಹೊರತು ಶ್ರೀಮಂತರಲ್ಲ. ಹಾಗಾಗಿ ನನ್ನ ತೆರಿಗೆ ಹಣ ಪೋಲು ಮಾಡಬೇಡಿ ಎಂದು ಹೇಳುವುದಕ್ಕೆ ಯಾವುದೇ ಅರ್ಥವಿರುವುದಿಲ್ಲ.

ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಸರ್ಕಾರದಿಂದ ಮೊದಲ ಸಿಹಿ ಸುದ್ದಿ: ಶೇ. 4ರಷ್ಟು ತುಟ್ಟಿಭತ್ಯೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...