Homeಮುಖಪುಟದೇಶವ್ಯಾಪಿ ಹರಡುತ್ತಿರುವ ರೈತ ಹೋರಾಟ: ಪ್ರತಿಭಟನೆ ಜೀವಂತವಾಗಿಡಲು ವಾರಕ್ಕೊಮ್ಮೆ ‘ಚಕ್ಕಾ ಜಾಮ್’?

ದೇಶವ್ಯಾಪಿ ಹರಡುತ್ತಿರುವ ರೈತ ಹೋರಾಟ: ಪ್ರತಿಭಟನೆ ಜೀವಂತವಾಗಿಡಲು ವಾರಕ್ಕೊಮ್ಮೆ ‘ಚಕ್ಕಾ ಜಾಮ್’?

'ಸರ್ಕಾರ ನಮ್ಮ ನಾಯಕರನ್ನು ಬಂಧಿಸುತ್ತಿದೆ. ನಮ್ಮನ್ನು ದೇಶ ವಿರೋಧಿಗಳು ಎಂದು ಕರೆಯುತ್ತಿದೆ. ಇಂತಹ ಸನ್ನಿವೇಶದಲ್ಲಿ ನಾವು ಅವರೊಂದಿಗೆ ಹೇಗೆ ಮಾತುಕತೆ ನಡೆಸಬಹುದು?’ ಎಂದು ರೈತರು ಪ್ರಶ್ನಿಸುತ್ತಿದ್ದಾರೆ.

- Advertisement -
- Advertisement -

ಶನಿವಾರ ಮೂರು ಗಂಟೆಗಳ ಚಕ್ಕಾ ಜಾಮ್ (ರಸ್ತೆ ಸಂಚಾರ ತಡೆ) ಅನ್ನು ದೇಶಾವ್ಯಾಪಿ ಯಶಸ್ವಿಯಾಗಿ, ಶಾಂತಿಯುತವಾಗಿ ಕೈಗೊಂಡ ರೈತ ಸಂಘಗಳು ತಮ್ಮ ಆಂದೋಲನವನ್ನು ಜೀವಂತವಾಗಿಡಲು ಪ್ರತಿ ವಾರ ಅಂತಹ ಒಂದು ಕಾರ್ಯಕ್ರಮವನ್ನು ಆಯೋಜಿಸುವ ಪ್ರಯತ್ನಗಳನ್ನು ಪ್ರಾರಂಭಿಸುವುದಾಗಿ ಹೇಳಿವೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಮೋದಿ ಸರ್ಕಾರದ ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕೆಂದು ಮತ್ತು ಎಂಎಸ್‌ಪಿ ಖಾತ್ರಿಗಾಗಿ ಕಾಯ್ದೆ ಜಾರಿಗೊಳಿಸಬೇಕೆಂದು ಪ್ರತಿಭಟಿಸುತ್ತಿರುವ ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ, ಸರ್ಕಾರ ಸಂವಾದಕ್ಕೆ ಮುಕ್ತವಾಗಿದ್ದರೂ, ಮಾತುಕತೆಗಳನ್ನು ಅನುಕೂಲಕರ ವಾತಾವರಣದಲ್ಲಿ ಮಾತ್ರ ನಡೆಸಬಹುದು ಎಂದು ಹೇಳಿದೆ.

ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಶನಿವಾರ ಮಧ್ಯಾಹ್ನ 12 ರಿಂದ ಮಧ್ಯಾಹ್ನ 3 ರವರೆಗೆ ದಿಗ್ಬಂಧನ ನಡೆಸಲಾಯಿತು. ಪ್ರತಿಭಟನೆ ಶಾಂತಿಯುತವಾಗಿದ್ದರೂ, ರೈತರಿಗೆ ಬೆಂಬಲವಾಗಿ ಪ್ರತಿಭಟನೆ ನಡೆಸಿದ್ದಕ್ಕಾಗಿ ಸುಮಾರು 50 ಜನರನ್ನು ದೆಹಲಿಯಲ್ಲಿ ಬಂಧಿಸಲಾಗಿದೆ. ಇದೇ ರೀತಿ ದೇಶಾದ್ಯಂತ ಬಂಧನ, ಬಿಡುಗಡೆಗಳು ನಡೆದಿವೆ.

ಬೆಂಗಳೂರಿನಲ್ಲೂ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಬಿಡುಗಡೆ ಮಾಡಲಾಗಿದೆ. ದೇಶದ ವಿವಿಧೆಡೆ ಈ ಶಾಂತಿಯುತ ಪ್ರತಿಭಟನೆಗೆ ಪೊಲೀಸರು ಅಡ್ಡಗಾಲು ಹಾಕಿದ ವರದಿಗಳು ಬಂದಿವೆ.
ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ರೈತ ಸಂಘಟನೆಗಳ ಪ್ರಾತಿನಿಧಿಕ ಸಂಸ್ಥೆಯಾದ ಸಂಯುಕ್ತ್ ಕಿಸಾನ್ ಮೋರ್ಚಾ ಶುಕ್ರವಾರ ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ್ ಹೊರತುಪಡಿಸಿ ಭಾರತದಾದ್ಯಂತ ರಸ್ತೆ ದಿಗ್ಬಂಧನ ನಡೆಸಲಾಗುವುದು ಎಂದು ತಿಳಿಸಿತ್ತು.

ಎರಡೂವರೆ ತಿಂಗಳಿನಿಂದ ಲಕ್ಷಾಂತರ ರೈತರು ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮುಂದುವರೆಸುತ್ತಿದ್ದು, ಪ್ರತಿಭಟನಾ ಸ್ಥಳಗಳಲ್ಲಿ ಇಂಟರ್‌ನೆಟ್ ಸ್ಥಗಿತ, ಅಧಿಕಾರಸ್ಥರ ಕಿರುಕುಳ ಮತ್ತು ಬಜೆಟ್‌ನಲ್ಲಿ ರೈತಾಪಿಗಳ ನಿರ್ಲಕ್ಷ್ಯ ವಿರೋಧಿಸಿ ಶನಿವರ ಚಕ್ಕಾ ಬಂದ್ ನಡೆಸಲಾಗಿತು.

“ಚಕ್ಕಾ ಜಾಮ್ ಭಾರತದಾದ್ಯಂತ ಬಹಳ ಯಶಸ್ವಿಯಾಗಿದೆ. ಪ್ರತಿ ರಾಜ್ಯದಲ್ಲಿ ಕನಿಷ್ಠ 100 ಗ್ರಾಮಗಳು, ಪಟ್ಟಣಗಳು ದಿಗ್ಬಂಧನದಲ್ಲಿ ಪಾಲ್ಗೊಂಡಿವೆ” ಎಂದು ಅಖಿಲ ಭಾರತ ಕಿಸಾನ್ ಸಭೆಯ ಪ್ರಧಾನ ಕಾರ್ಯದರ್ಶಿ ಹನ್ನನ್ ಮೊಲ್ಲಾ ಹೇಳಿದ್ದಾರೆ. “ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮುಂದುವರಿಯುತ್ತದೆಯಾದರೂ, ಪ್ರತಿಭಟನೆಯನ್ನು ಜೀವಂತವಾಗಿಡಲು ಪ್ರತಿ ವಾರವೂ ಅಂತಹ ಒಂದು ಕಾರ್ಯಕ್ರಮವನ್ನು ಆಯೋಜಿಸುವ ಪ್ರಯತ್ನಗಳು ನಡೆಯುತ್ತಿವೆ. ಇಲ್ಲದಿದ್ದರೆ ಪ್ರತಿಭಟನೆ ಮುಗಿದಿದೆ ಎಂದು ಸರ್ಕಾರ ಭಾವಿಸಬಹುದು” ಎಂದು ಅವರು ಹೇಳಿದ್ದಾರೆ.

ಈ ಒಂದು ಮೊಮೆಂಟಮ್ ಅನ್ನು (ಆವೇಗವನ್ನು ) ಮುಂದುವರೆಸಲು, ಸಾಧ್ಯವಾದಷ್ಟು ಹೆಚ್ಚಿನ ರಾಜ್ಯಗಳನ್ನು ಒಳಗೊಳ್ಳಲು ಪ್ರಯತ್ನಿಸಲಾಗುವುದು ಎಂದು ರೈತ ನಾಯಕರು ಹೇಳಿದರು. “ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮುಂದುವರಿಯುತ್ತದೆ, ಆದರೆ ಅದು ಸಾಕಾಗುವುದಿಲ್ಲ. ಇಂದಿನ ಚಕ್ಕಾ ಜಾಮ್‌ನಲ್ಲಿ ರಾಷ್ಟ್ರವ್ಯಾಪಿ ಭಾಗವಹಿಸುವಿಕೆಯನ್ನು ನಾವು ನೋಡಿದಂತೆಯೇ, ಭವಿಷ್ಯದಲ್ಲಿ ನಾವು ಇತರ ರಾಜ್ಯಗಳ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಬೇಕು” ಎಂದು ಜಮ್ಹುರಿ ಕಿಸಾನ್ ಸಭೆಯ ಪ್ರಧಾನ ಕಾರ್ಯದರ್ಶಿ ಕುಲ್ವಂತ್ ಸಿಂಗ್ ಸಂಧು ಹೇಳಿದರು.

ದೆಹಲಿ ಮತ್ತು ಉತ್ತರ ಪ್ರದೇಶವನ್ನು ಸಂಪರ್ಕಿಸುವ ಗಾಜಿಪುರ ಗಡಿಯಲ್ಲಿ ಪ್ರತಿಭಟನೆಯನ್ನು ಸಂಘಟಿಸುತ್ತಿರುವ ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್, ಚಕ್ಕಾ ಜಾಮ್ ಕೊನೆಯಲ್ಲಿ ಸರ್ಕಾರಕ್ಕೆ ಒಂದು ಗಡುವನ್ನು ರವಾನಿಸಿದ್ದಾರೆ. “ನಾವು ಕಾನೂನುಗಳನ್ನು ರದ್ದುಗೊಳಿಸಲು ಅಕ್ಟೋಬರ್ 2 ರವರೆಗೆ ಸರ್ಕಾರಕ್ಕೆ ಸಮಯ ನೀಡಿದ್ದೇವೆ. ಇದರ ನಂತರ, ನಾವು ಹೆಚ್ಚಿನ ಯೋಜನೆಯನ್ನು ಮಾಡುತ್ತೇವೆ” ಎಂದು ಅವರು ಎಎನ್‌ಐಗೆ ತಿಳಿಸಿದ್ದಾರೆ.

ಇತರ ರೈತ ಮುಖಂಡರು ದಿ ಪ್ರಿಂಟ್‌ಗೆ ಅಂತಹ ಯಾವುದೇ ದಿನಾಂಕವನ್ನು ನಿಗದಿಪಡಿಸಿಲ್ಲ ಎಂದು ಹೇಳಿದ್ದಾರೆ. “ಅವರು (ಟಿಕಾಯತ್) ದಿನಾಂಕವನ್ನು ಪ್ರಸ್ತಾಪಿಸಿರಬಹುದು, ಆದರೆ ಇನ್ನೂ ಅಂತಹ ಬದ್ಧತೆಯ ಕಾರ್ಯಕ್ರಮ ರೂಪಿಸಿಲ್ಲ” ಎಂದಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ (ರಾಜೇವಾಲ್) ಪ್ರಧಾನ ಕಾರ್ಯದರ್ಶಿ ಓಂಕರ್ ಸಿಂಗ್, “ಅಕ್ಟೋಬರ್ 2 ರೊಳಗೆ ಸರ್ಕಾರ ಕಾನೂನುಗಳನ್ನು ರದ್ದುಗೊಳಿಸಿದರೆ ನಾವು ಮನೆಗೆ ಹಿಂದಿರುಗುತ್ತೇವೆ. ಕಾನೂನುಗಳನ್ನು ರದ್ದುಗೊಳಿಸದಿದ್ದರೆ ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ. ಅಂತಹ ಯಾವುದೇ ದಿನಾಂಕವನ್ನು ಡೆಡ್‌ಲೈನ್ ಎಂದು ಈವರೆಗೂ ನಿಗದಿಪಡಿಸಲಾಗಿಲ್ಲ ” ಎಂದಿದ್ದಾರೆ.

ಅನುಕೂಲಕರ ವಾತಾವರಣವಿದ್ದರಷ್ಠೇ ಮಾತುಕತೆ

ಪ್ರತಿಭಟನಾ ನಿರತ ರೈತರು ಮತ್ತು ಮೋದಿ ಸರ್ಕಾರದ ನಡುವೆ ಈಗಾಗಲೇ 11 ಸುತ್ತಿನ ಚರ್ಚೆ ನಡೆದಿದ್ದರೂ, ಯಾವುದೇ ಪರಿಹಾರವನ್ನು ತಲುಪಿಲ್ಲ. ಮೂರು ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸುವಂತೆ ರೈತರು ಒತ್ತಾಯಿಸಿದ್ದಾರೆ, ಆದರೆ ಸರ್ಕಾರವು ಕಾನೂನುಗಳನ್ನು 18 ತಿಂಗಳು ತಡೆ ಹಿಡಿಯುವುದರ ಬಗ್ಗೆ ಮತ್ತು ತಿದ್ದುಪಡಿಗಳನ್ನು ಮಾಡುವ ಬಗ್ಗೆ ಮಾತ್ರ ಭರವಸೆ ನೀಡಿದೆ.

ರೈತ ಮುಖಂಡರು ತಾವು ಮಾತುಕತೆಗೆ ಮುಕ್ತವಾಗಿದ್ದರೂ, ಸರ್ಕಾರ ಮೊದಲ ಹೆಜ್ಜೆ ಇಟ್ಟರೆ ಮಾತ್ರ ಮಾತುಕತೆ ನಡೆಯುತ್ತದೆ ಎಂದು ಹೇಳಿದ್ದಾರೆ. “ಸರ್ಕಾರವು ಸಂಸತ್ತಿನಲ್ಲಿ ಮಾತುಕತೆಗೆ ಸಿದ್ಧವಾಗಿದೆ ಎಂದು ಹೇಳುತ್ತಿದೆ, ಕೇವಲ ಒಂದು ದೂರವಾಣಿ ಕರೆ ಮಾತ್ರ ಎಂದು ಪ್ರಧಾನಿ ಹೇಳುತ್ತಿದ್ದಾರೆ. ಆದರೆ ಆ ಫೋನ್ ಕರೆ ಬರಲಿ, ನೋಡೋಣ” ಎಂದು ಸಂಧು ಹೇಳಿದರು. “ಮಾತುಕತೆಗಾಗಿ ಸರ್ಕಾರವನ್ನು ಸಂಪರ್ಕಿಸಲು ನಾವು ಸಾಧ್ಯವಿಲ್ಲ; ಅದು ಅವರಿಂದ ಬರಬೇಕು’ ಎಂಬುದು ಬಹುತೇಕ ರೈತರ ಅಭಿಪ್ರಾಯವಾಗಿದೆ.

ಸರ್ಕಾರವು ಅನುಕೂಲಕರ ವಾತಾವರಣವನ್ನು ಸೃಷ್ಟಿಸಿದರೆ ಮಾತ್ರ ಮಾತುಕತೆ ನಡೆಸಬಹುದು ಎಂದು ರೈತರು ಹೇಳಿದರು. “ಅವರು ನಮ್ಮ ನಾಯಕರನ್ನು ಬಂಧಿಸುತ್ತಿದ್ದಾರೆ, ನಮ್ಮನ್ನು ದೇಶ ವಿರೋಧಿಗಳು ಎಂದು ಕರೆಯುತ್ತಾರೆ. ಅಂತಹ ಸನ್ನಿವೇಶದಲ್ಲಿ ನಾವು ಅವರೊಂದಿಗೆ ಹೇಗೆ ಮಾತುಕತೆ ನಡೆಸಬಹುದು?’ ಎಂದು ಮೊಲ್ಲಾ ಕೇಳಿದರು. “ಆದರೆ ನಾವು ಯಾವಾಗಲೂ ಈ ಸಮಸ್ಯೆಯನ್ನು ಸರ್ಕಾರ ಮತ್ತು ರೈತರ ನಡುವೆ ಇಟ್ಟುಕೊಂಡಿದ್ದೇವೆ ಮತ್ತು ಸಂವಾದದ ಮೂಲಕ ಮಾತ್ರ ಇದನ್ನು ಪರಿಹರಿಸಬಹುದು’ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
ಏನಿದ್ದರೂ, ಪ್ರಾತಿನಿಧಿಕ ಸಂಸ್ಥೆ ಸಂಯುಕ್ತ್ ಕಿಸಾನ್ ಮೋರ್ಚಾ ಯಾವ ನಿರ್ಣಯ ತೆಗೆದುಕೊಳ್ಳಲಿದೆ ಎಂಬುದು ಮಹತ್ವದ್ದಾಗಿದೆ.


ಇದನ್ನೂ ಓದಿ: ಎಚ್ಚರಿಕೆಯ ಪೋಸ್ಟರ್‌‌‌: ’ಬಿಜೆಪಿಗರೆ ಗ್ರಾಮಕ್ಕೆ ಪ್ರವೇಶಿಸಿದರೆ ನಿಮ್ಮ ಜೀವಕ್ಕೆ ನೀವೆ ಜವಾಬ್ದಾರಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....