Homeಮುಖಪುಟದೇಶವ್ಯಾಪಿ ಹರಡುತ್ತಿರುವ ರೈತ ಹೋರಾಟ: ಪ್ರತಿಭಟನೆ ಜೀವಂತವಾಗಿಡಲು ವಾರಕ್ಕೊಮ್ಮೆ ‘ಚಕ್ಕಾ ಜಾಮ್’?

ದೇಶವ್ಯಾಪಿ ಹರಡುತ್ತಿರುವ ರೈತ ಹೋರಾಟ: ಪ್ರತಿಭಟನೆ ಜೀವಂತವಾಗಿಡಲು ವಾರಕ್ಕೊಮ್ಮೆ ‘ಚಕ್ಕಾ ಜಾಮ್’?

'ಸರ್ಕಾರ ನಮ್ಮ ನಾಯಕರನ್ನು ಬಂಧಿಸುತ್ತಿದೆ. ನಮ್ಮನ್ನು ದೇಶ ವಿರೋಧಿಗಳು ಎಂದು ಕರೆಯುತ್ತಿದೆ. ಇಂತಹ ಸನ್ನಿವೇಶದಲ್ಲಿ ನಾವು ಅವರೊಂದಿಗೆ ಹೇಗೆ ಮಾತುಕತೆ ನಡೆಸಬಹುದು?’ ಎಂದು ರೈತರು ಪ್ರಶ್ನಿಸುತ್ತಿದ್ದಾರೆ.

- Advertisement -
- Advertisement -

ಶನಿವಾರ ಮೂರು ಗಂಟೆಗಳ ಚಕ್ಕಾ ಜಾಮ್ (ರಸ್ತೆ ಸಂಚಾರ ತಡೆ) ಅನ್ನು ದೇಶಾವ್ಯಾಪಿ ಯಶಸ್ವಿಯಾಗಿ, ಶಾಂತಿಯುತವಾಗಿ ಕೈಗೊಂಡ ರೈತ ಸಂಘಗಳು ತಮ್ಮ ಆಂದೋಲನವನ್ನು ಜೀವಂತವಾಗಿಡಲು ಪ್ರತಿ ವಾರ ಅಂತಹ ಒಂದು ಕಾರ್ಯಕ್ರಮವನ್ನು ಆಯೋಜಿಸುವ ಪ್ರಯತ್ನಗಳನ್ನು ಪ್ರಾರಂಭಿಸುವುದಾಗಿ ಹೇಳಿವೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಮೋದಿ ಸರ್ಕಾರದ ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕೆಂದು ಮತ್ತು ಎಂಎಸ್‌ಪಿ ಖಾತ್ರಿಗಾಗಿ ಕಾಯ್ದೆ ಜಾರಿಗೊಳಿಸಬೇಕೆಂದು ಪ್ರತಿಭಟಿಸುತ್ತಿರುವ ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ, ಸರ್ಕಾರ ಸಂವಾದಕ್ಕೆ ಮುಕ್ತವಾಗಿದ್ದರೂ, ಮಾತುಕತೆಗಳನ್ನು ಅನುಕೂಲಕರ ವಾತಾವರಣದಲ್ಲಿ ಮಾತ್ರ ನಡೆಸಬಹುದು ಎಂದು ಹೇಳಿದೆ.

ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಶನಿವಾರ ಮಧ್ಯಾಹ್ನ 12 ರಿಂದ ಮಧ್ಯಾಹ್ನ 3 ರವರೆಗೆ ದಿಗ್ಬಂಧನ ನಡೆಸಲಾಯಿತು. ಪ್ರತಿಭಟನೆ ಶಾಂತಿಯುತವಾಗಿದ್ದರೂ, ರೈತರಿಗೆ ಬೆಂಬಲವಾಗಿ ಪ್ರತಿಭಟನೆ ನಡೆಸಿದ್ದಕ್ಕಾಗಿ ಸುಮಾರು 50 ಜನರನ್ನು ದೆಹಲಿಯಲ್ಲಿ ಬಂಧಿಸಲಾಗಿದೆ. ಇದೇ ರೀತಿ ದೇಶಾದ್ಯಂತ ಬಂಧನ, ಬಿಡುಗಡೆಗಳು ನಡೆದಿವೆ.

ಬೆಂಗಳೂರಿನಲ್ಲೂ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಬಿಡುಗಡೆ ಮಾಡಲಾಗಿದೆ. ದೇಶದ ವಿವಿಧೆಡೆ ಈ ಶಾಂತಿಯುತ ಪ್ರತಿಭಟನೆಗೆ ಪೊಲೀಸರು ಅಡ್ಡಗಾಲು ಹಾಕಿದ ವರದಿಗಳು ಬಂದಿವೆ.
ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ರೈತ ಸಂಘಟನೆಗಳ ಪ್ರಾತಿನಿಧಿಕ ಸಂಸ್ಥೆಯಾದ ಸಂಯುಕ್ತ್ ಕಿಸಾನ್ ಮೋರ್ಚಾ ಶುಕ್ರವಾರ ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ್ ಹೊರತುಪಡಿಸಿ ಭಾರತದಾದ್ಯಂತ ರಸ್ತೆ ದಿಗ್ಬಂಧನ ನಡೆಸಲಾಗುವುದು ಎಂದು ತಿಳಿಸಿತ್ತು.

ಎರಡೂವರೆ ತಿಂಗಳಿನಿಂದ ಲಕ್ಷಾಂತರ ರೈತರು ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮುಂದುವರೆಸುತ್ತಿದ್ದು, ಪ್ರತಿಭಟನಾ ಸ್ಥಳಗಳಲ್ಲಿ ಇಂಟರ್‌ನೆಟ್ ಸ್ಥಗಿತ, ಅಧಿಕಾರಸ್ಥರ ಕಿರುಕುಳ ಮತ್ತು ಬಜೆಟ್‌ನಲ್ಲಿ ರೈತಾಪಿಗಳ ನಿರ್ಲಕ್ಷ್ಯ ವಿರೋಧಿಸಿ ಶನಿವರ ಚಕ್ಕಾ ಬಂದ್ ನಡೆಸಲಾಗಿತು.

“ಚಕ್ಕಾ ಜಾಮ್ ಭಾರತದಾದ್ಯಂತ ಬಹಳ ಯಶಸ್ವಿಯಾಗಿದೆ. ಪ್ರತಿ ರಾಜ್ಯದಲ್ಲಿ ಕನಿಷ್ಠ 100 ಗ್ರಾಮಗಳು, ಪಟ್ಟಣಗಳು ದಿಗ್ಬಂಧನದಲ್ಲಿ ಪಾಲ್ಗೊಂಡಿವೆ” ಎಂದು ಅಖಿಲ ಭಾರತ ಕಿಸಾನ್ ಸಭೆಯ ಪ್ರಧಾನ ಕಾರ್ಯದರ್ಶಿ ಹನ್ನನ್ ಮೊಲ್ಲಾ ಹೇಳಿದ್ದಾರೆ. “ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮುಂದುವರಿಯುತ್ತದೆಯಾದರೂ, ಪ್ರತಿಭಟನೆಯನ್ನು ಜೀವಂತವಾಗಿಡಲು ಪ್ರತಿ ವಾರವೂ ಅಂತಹ ಒಂದು ಕಾರ್ಯಕ್ರಮವನ್ನು ಆಯೋಜಿಸುವ ಪ್ರಯತ್ನಗಳು ನಡೆಯುತ್ತಿವೆ. ಇಲ್ಲದಿದ್ದರೆ ಪ್ರತಿಭಟನೆ ಮುಗಿದಿದೆ ಎಂದು ಸರ್ಕಾರ ಭಾವಿಸಬಹುದು” ಎಂದು ಅವರು ಹೇಳಿದ್ದಾರೆ.

ಈ ಒಂದು ಮೊಮೆಂಟಮ್ ಅನ್ನು (ಆವೇಗವನ್ನು ) ಮುಂದುವರೆಸಲು, ಸಾಧ್ಯವಾದಷ್ಟು ಹೆಚ್ಚಿನ ರಾಜ್ಯಗಳನ್ನು ಒಳಗೊಳ್ಳಲು ಪ್ರಯತ್ನಿಸಲಾಗುವುದು ಎಂದು ರೈತ ನಾಯಕರು ಹೇಳಿದರು. “ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮುಂದುವರಿಯುತ್ತದೆ, ಆದರೆ ಅದು ಸಾಕಾಗುವುದಿಲ್ಲ. ಇಂದಿನ ಚಕ್ಕಾ ಜಾಮ್‌ನಲ್ಲಿ ರಾಷ್ಟ್ರವ್ಯಾಪಿ ಭಾಗವಹಿಸುವಿಕೆಯನ್ನು ನಾವು ನೋಡಿದಂತೆಯೇ, ಭವಿಷ್ಯದಲ್ಲಿ ನಾವು ಇತರ ರಾಜ್ಯಗಳ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಬೇಕು” ಎಂದು ಜಮ್ಹುರಿ ಕಿಸಾನ್ ಸಭೆಯ ಪ್ರಧಾನ ಕಾರ್ಯದರ್ಶಿ ಕುಲ್ವಂತ್ ಸಿಂಗ್ ಸಂಧು ಹೇಳಿದರು.

ದೆಹಲಿ ಮತ್ತು ಉತ್ತರ ಪ್ರದೇಶವನ್ನು ಸಂಪರ್ಕಿಸುವ ಗಾಜಿಪುರ ಗಡಿಯಲ್ಲಿ ಪ್ರತಿಭಟನೆಯನ್ನು ಸಂಘಟಿಸುತ್ತಿರುವ ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್, ಚಕ್ಕಾ ಜಾಮ್ ಕೊನೆಯಲ್ಲಿ ಸರ್ಕಾರಕ್ಕೆ ಒಂದು ಗಡುವನ್ನು ರವಾನಿಸಿದ್ದಾರೆ. “ನಾವು ಕಾನೂನುಗಳನ್ನು ರದ್ದುಗೊಳಿಸಲು ಅಕ್ಟೋಬರ್ 2 ರವರೆಗೆ ಸರ್ಕಾರಕ್ಕೆ ಸಮಯ ನೀಡಿದ್ದೇವೆ. ಇದರ ನಂತರ, ನಾವು ಹೆಚ್ಚಿನ ಯೋಜನೆಯನ್ನು ಮಾಡುತ್ತೇವೆ” ಎಂದು ಅವರು ಎಎನ್‌ಐಗೆ ತಿಳಿಸಿದ್ದಾರೆ.

ಇತರ ರೈತ ಮುಖಂಡರು ದಿ ಪ್ರಿಂಟ್‌ಗೆ ಅಂತಹ ಯಾವುದೇ ದಿನಾಂಕವನ್ನು ನಿಗದಿಪಡಿಸಿಲ್ಲ ಎಂದು ಹೇಳಿದ್ದಾರೆ. “ಅವರು (ಟಿಕಾಯತ್) ದಿನಾಂಕವನ್ನು ಪ್ರಸ್ತಾಪಿಸಿರಬಹುದು, ಆದರೆ ಇನ್ನೂ ಅಂತಹ ಬದ್ಧತೆಯ ಕಾರ್ಯಕ್ರಮ ರೂಪಿಸಿಲ್ಲ” ಎಂದಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ (ರಾಜೇವಾಲ್) ಪ್ರಧಾನ ಕಾರ್ಯದರ್ಶಿ ಓಂಕರ್ ಸಿಂಗ್, “ಅಕ್ಟೋಬರ್ 2 ರೊಳಗೆ ಸರ್ಕಾರ ಕಾನೂನುಗಳನ್ನು ರದ್ದುಗೊಳಿಸಿದರೆ ನಾವು ಮನೆಗೆ ಹಿಂದಿರುಗುತ್ತೇವೆ. ಕಾನೂನುಗಳನ್ನು ರದ್ದುಗೊಳಿಸದಿದ್ದರೆ ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ. ಅಂತಹ ಯಾವುದೇ ದಿನಾಂಕವನ್ನು ಡೆಡ್‌ಲೈನ್ ಎಂದು ಈವರೆಗೂ ನಿಗದಿಪಡಿಸಲಾಗಿಲ್ಲ ” ಎಂದಿದ್ದಾರೆ.

ಅನುಕೂಲಕರ ವಾತಾವರಣವಿದ್ದರಷ್ಠೇ ಮಾತುಕತೆ

ಪ್ರತಿಭಟನಾ ನಿರತ ರೈತರು ಮತ್ತು ಮೋದಿ ಸರ್ಕಾರದ ನಡುವೆ ಈಗಾಗಲೇ 11 ಸುತ್ತಿನ ಚರ್ಚೆ ನಡೆದಿದ್ದರೂ, ಯಾವುದೇ ಪರಿಹಾರವನ್ನು ತಲುಪಿಲ್ಲ. ಮೂರು ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸುವಂತೆ ರೈತರು ಒತ್ತಾಯಿಸಿದ್ದಾರೆ, ಆದರೆ ಸರ್ಕಾರವು ಕಾನೂನುಗಳನ್ನು 18 ತಿಂಗಳು ತಡೆ ಹಿಡಿಯುವುದರ ಬಗ್ಗೆ ಮತ್ತು ತಿದ್ದುಪಡಿಗಳನ್ನು ಮಾಡುವ ಬಗ್ಗೆ ಮಾತ್ರ ಭರವಸೆ ನೀಡಿದೆ.

ರೈತ ಮುಖಂಡರು ತಾವು ಮಾತುಕತೆಗೆ ಮುಕ್ತವಾಗಿದ್ದರೂ, ಸರ್ಕಾರ ಮೊದಲ ಹೆಜ್ಜೆ ಇಟ್ಟರೆ ಮಾತ್ರ ಮಾತುಕತೆ ನಡೆಯುತ್ತದೆ ಎಂದು ಹೇಳಿದ್ದಾರೆ. “ಸರ್ಕಾರವು ಸಂಸತ್ತಿನಲ್ಲಿ ಮಾತುಕತೆಗೆ ಸಿದ್ಧವಾಗಿದೆ ಎಂದು ಹೇಳುತ್ತಿದೆ, ಕೇವಲ ಒಂದು ದೂರವಾಣಿ ಕರೆ ಮಾತ್ರ ಎಂದು ಪ್ರಧಾನಿ ಹೇಳುತ್ತಿದ್ದಾರೆ. ಆದರೆ ಆ ಫೋನ್ ಕರೆ ಬರಲಿ, ನೋಡೋಣ” ಎಂದು ಸಂಧು ಹೇಳಿದರು. “ಮಾತುಕತೆಗಾಗಿ ಸರ್ಕಾರವನ್ನು ಸಂಪರ್ಕಿಸಲು ನಾವು ಸಾಧ್ಯವಿಲ್ಲ; ಅದು ಅವರಿಂದ ಬರಬೇಕು’ ಎಂಬುದು ಬಹುತೇಕ ರೈತರ ಅಭಿಪ್ರಾಯವಾಗಿದೆ.

ಸರ್ಕಾರವು ಅನುಕೂಲಕರ ವಾತಾವರಣವನ್ನು ಸೃಷ್ಟಿಸಿದರೆ ಮಾತ್ರ ಮಾತುಕತೆ ನಡೆಸಬಹುದು ಎಂದು ರೈತರು ಹೇಳಿದರು. “ಅವರು ನಮ್ಮ ನಾಯಕರನ್ನು ಬಂಧಿಸುತ್ತಿದ್ದಾರೆ, ನಮ್ಮನ್ನು ದೇಶ ವಿರೋಧಿಗಳು ಎಂದು ಕರೆಯುತ್ತಾರೆ. ಅಂತಹ ಸನ್ನಿವೇಶದಲ್ಲಿ ನಾವು ಅವರೊಂದಿಗೆ ಹೇಗೆ ಮಾತುಕತೆ ನಡೆಸಬಹುದು?’ ಎಂದು ಮೊಲ್ಲಾ ಕೇಳಿದರು. “ಆದರೆ ನಾವು ಯಾವಾಗಲೂ ಈ ಸಮಸ್ಯೆಯನ್ನು ಸರ್ಕಾರ ಮತ್ತು ರೈತರ ನಡುವೆ ಇಟ್ಟುಕೊಂಡಿದ್ದೇವೆ ಮತ್ತು ಸಂವಾದದ ಮೂಲಕ ಮಾತ್ರ ಇದನ್ನು ಪರಿಹರಿಸಬಹುದು’ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
ಏನಿದ್ದರೂ, ಪ್ರಾತಿನಿಧಿಕ ಸಂಸ್ಥೆ ಸಂಯುಕ್ತ್ ಕಿಸಾನ್ ಮೋರ್ಚಾ ಯಾವ ನಿರ್ಣಯ ತೆಗೆದುಕೊಳ್ಳಲಿದೆ ಎಂಬುದು ಮಹತ್ವದ್ದಾಗಿದೆ.


ಇದನ್ನೂ ಓದಿ: ಎಚ್ಚರಿಕೆಯ ಪೋಸ್ಟರ್‌‌‌: ’ಬಿಜೆಪಿಗರೆ ಗ್ರಾಮಕ್ಕೆ ಪ್ರವೇಶಿಸಿದರೆ ನಿಮ್ಮ ಜೀವಕ್ಕೆ ನೀವೆ ಜವಾಬ್ದಾರಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...