Homeಮುಖಪುಟದೇಶವ್ಯಾಪಿ ಹರಡುತ್ತಿರುವ ರೈತ ಹೋರಾಟ: ಪ್ರತಿಭಟನೆ ಜೀವಂತವಾಗಿಡಲು ವಾರಕ್ಕೊಮ್ಮೆ ‘ಚಕ್ಕಾ ಜಾಮ್’?

ದೇಶವ್ಯಾಪಿ ಹರಡುತ್ತಿರುವ ರೈತ ಹೋರಾಟ: ಪ್ರತಿಭಟನೆ ಜೀವಂತವಾಗಿಡಲು ವಾರಕ್ಕೊಮ್ಮೆ ‘ಚಕ್ಕಾ ಜಾಮ್’?

'ಸರ್ಕಾರ ನಮ್ಮ ನಾಯಕರನ್ನು ಬಂಧಿಸುತ್ತಿದೆ. ನಮ್ಮನ್ನು ದೇಶ ವಿರೋಧಿಗಳು ಎಂದು ಕರೆಯುತ್ತಿದೆ. ಇಂತಹ ಸನ್ನಿವೇಶದಲ್ಲಿ ನಾವು ಅವರೊಂದಿಗೆ ಹೇಗೆ ಮಾತುಕತೆ ನಡೆಸಬಹುದು?’ ಎಂದು ರೈತರು ಪ್ರಶ್ನಿಸುತ್ತಿದ್ದಾರೆ.

- Advertisement -
- Advertisement -

ಶನಿವಾರ ಮೂರು ಗಂಟೆಗಳ ಚಕ್ಕಾ ಜಾಮ್ (ರಸ್ತೆ ಸಂಚಾರ ತಡೆ) ಅನ್ನು ದೇಶಾವ್ಯಾಪಿ ಯಶಸ್ವಿಯಾಗಿ, ಶಾಂತಿಯುತವಾಗಿ ಕೈಗೊಂಡ ರೈತ ಸಂಘಗಳು ತಮ್ಮ ಆಂದೋಲನವನ್ನು ಜೀವಂತವಾಗಿಡಲು ಪ್ರತಿ ವಾರ ಅಂತಹ ಒಂದು ಕಾರ್ಯಕ್ರಮವನ್ನು ಆಯೋಜಿಸುವ ಪ್ರಯತ್ನಗಳನ್ನು ಪ್ರಾರಂಭಿಸುವುದಾಗಿ ಹೇಳಿವೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಮೋದಿ ಸರ್ಕಾರದ ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕೆಂದು ಮತ್ತು ಎಂಎಸ್‌ಪಿ ಖಾತ್ರಿಗಾಗಿ ಕಾಯ್ದೆ ಜಾರಿಗೊಳಿಸಬೇಕೆಂದು ಪ್ರತಿಭಟಿಸುತ್ತಿರುವ ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ, ಸರ್ಕಾರ ಸಂವಾದಕ್ಕೆ ಮುಕ್ತವಾಗಿದ್ದರೂ, ಮಾತುಕತೆಗಳನ್ನು ಅನುಕೂಲಕರ ವಾತಾವರಣದಲ್ಲಿ ಮಾತ್ರ ನಡೆಸಬಹುದು ಎಂದು ಹೇಳಿದೆ.

ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಶನಿವಾರ ಮಧ್ಯಾಹ್ನ 12 ರಿಂದ ಮಧ್ಯಾಹ್ನ 3 ರವರೆಗೆ ದಿಗ್ಬಂಧನ ನಡೆಸಲಾಯಿತು. ಪ್ರತಿಭಟನೆ ಶಾಂತಿಯುತವಾಗಿದ್ದರೂ, ರೈತರಿಗೆ ಬೆಂಬಲವಾಗಿ ಪ್ರತಿಭಟನೆ ನಡೆಸಿದ್ದಕ್ಕಾಗಿ ಸುಮಾರು 50 ಜನರನ್ನು ದೆಹಲಿಯಲ್ಲಿ ಬಂಧಿಸಲಾಗಿದೆ. ಇದೇ ರೀತಿ ದೇಶಾದ್ಯಂತ ಬಂಧನ, ಬಿಡುಗಡೆಗಳು ನಡೆದಿವೆ.

ಬೆಂಗಳೂರಿನಲ್ಲೂ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಬಿಡುಗಡೆ ಮಾಡಲಾಗಿದೆ. ದೇಶದ ವಿವಿಧೆಡೆ ಈ ಶಾಂತಿಯುತ ಪ್ರತಿಭಟನೆಗೆ ಪೊಲೀಸರು ಅಡ್ಡಗಾಲು ಹಾಕಿದ ವರದಿಗಳು ಬಂದಿವೆ.
ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ರೈತ ಸಂಘಟನೆಗಳ ಪ್ರಾತಿನಿಧಿಕ ಸಂಸ್ಥೆಯಾದ ಸಂಯುಕ್ತ್ ಕಿಸಾನ್ ಮೋರ್ಚಾ ಶುಕ್ರವಾರ ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ್ ಹೊರತುಪಡಿಸಿ ಭಾರತದಾದ್ಯಂತ ರಸ್ತೆ ದಿಗ್ಬಂಧನ ನಡೆಸಲಾಗುವುದು ಎಂದು ತಿಳಿಸಿತ್ತು.

ಎರಡೂವರೆ ತಿಂಗಳಿನಿಂದ ಲಕ್ಷಾಂತರ ರೈತರು ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮುಂದುವರೆಸುತ್ತಿದ್ದು, ಪ್ರತಿಭಟನಾ ಸ್ಥಳಗಳಲ್ಲಿ ಇಂಟರ್‌ನೆಟ್ ಸ್ಥಗಿತ, ಅಧಿಕಾರಸ್ಥರ ಕಿರುಕುಳ ಮತ್ತು ಬಜೆಟ್‌ನಲ್ಲಿ ರೈತಾಪಿಗಳ ನಿರ್ಲಕ್ಷ್ಯ ವಿರೋಧಿಸಿ ಶನಿವರ ಚಕ್ಕಾ ಬಂದ್ ನಡೆಸಲಾಗಿತು.

“ಚಕ್ಕಾ ಜಾಮ್ ಭಾರತದಾದ್ಯಂತ ಬಹಳ ಯಶಸ್ವಿಯಾಗಿದೆ. ಪ್ರತಿ ರಾಜ್ಯದಲ್ಲಿ ಕನಿಷ್ಠ 100 ಗ್ರಾಮಗಳು, ಪಟ್ಟಣಗಳು ದಿಗ್ಬಂಧನದಲ್ಲಿ ಪಾಲ್ಗೊಂಡಿವೆ” ಎಂದು ಅಖಿಲ ಭಾರತ ಕಿಸಾನ್ ಸಭೆಯ ಪ್ರಧಾನ ಕಾರ್ಯದರ್ಶಿ ಹನ್ನನ್ ಮೊಲ್ಲಾ ಹೇಳಿದ್ದಾರೆ. “ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮುಂದುವರಿಯುತ್ತದೆಯಾದರೂ, ಪ್ರತಿಭಟನೆಯನ್ನು ಜೀವಂತವಾಗಿಡಲು ಪ್ರತಿ ವಾರವೂ ಅಂತಹ ಒಂದು ಕಾರ್ಯಕ್ರಮವನ್ನು ಆಯೋಜಿಸುವ ಪ್ರಯತ್ನಗಳು ನಡೆಯುತ್ತಿವೆ. ಇಲ್ಲದಿದ್ದರೆ ಪ್ರತಿಭಟನೆ ಮುಗಿದಿದೆ ಎಂದು ಸರ್ಕಾರ ಭಾವಿಸಬಹುದು” ಎಂದು ಅವರು ಹೇಳಿದ್ದಾರೆ.

ಈ ಒಂದು ಮೊಮೆಂಟಮ್ ಅನ್ನು (ಆವೇಗವನ್ನು ) ಮುಂದುವರೆಸಲು, ಸಾಧ್ಯವಾದಷ್ಟು ಹೆಚ್ಚಿನ ರಾಜ್ಯಗಳನ್ನು ಒಳಗೊಳ್ಳಲು ಪ್ರಯತ್ನಿಸಲಾಗುವುದು ಎಂದು ರೈತ ನಾಯಕರು ಹೇಳಿದರು. “ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮುಂದುವರಿಯುತ್ತದೆ, ಆದರೆ ಅದು ಸಾಕಾಗುವುದಿಲ್ಲ. ಇಂದಿನ ಚಕ್ಕಾ ಜಾಮ್‌ನಲ್ಲಿ ರಾಷ್ಟ್ರವ್ಯಾಪಿ ಭಾಗವಹಿಸುವಿಕೆಯನ್ನು ನಾವು ನೋಡಿದಂತೆಯೇ, ಭವಿಷ್ಯದಲ್ಲಿ ನಾವು ಇತರ ರಾಜ್ಯಗಳ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಬೇಕು” ಎಂದು ಜಮ್ಹುರಿ ಕಿಸಾನ್ ಸಭೆಯ ಪ್ರಧಾನ ಕಾರ್ಯದರ್ಶಿ ಕುಲ್ವಂತ್ ಸಿಂಗ್ ಸಂಧು ಹೇಳಿದರು.

ದೆಹಲಿ ಮತ್ತು ಉತ್ತರ ಪ್ರದೇಶವನ್ನು ಸಂಪರ್ಕಿಸುವ ಗಾಜಿಪುರ ಗಡಿಯಲ್ಲಿ ಪ್ರತಿಭಟನೆಯನ್ನು ಸಂಘಟಿಸುತ್ತಿರುವ ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್, ಚಕ್ಕಾ ಜಾಮ್ ಕೊನೆಯಲ್ಲಿ ಸರ್ಕಾರಕ್ಕೆ ಒಂದು ಗಡುವನ್ನು ರವಾನಿಸಿದ್ದಾರೆ. “ನಾವು ಕಾನೂನುಗಳನ್ನು ರದ್ದುಗೊಳಿಸಲು ಅಕ್ಟೋಬರ್ 2 ರವರೆಗೆ ಸರ್ಕಾರಕ್ಕೆ ಸಮಯ ನೀಡಿದ್ದೇವೆ. ಇದರ ನಂತರ, ನಾವು ಹೆಚ್ಚಿನ ಯೋಜನೆಯನ್ನು ಮಾಡುತ್ತೇವೆ” ಎಂದು ಅವರು ಎಎನ್‌ಐಗೆ ತಿಳಿಸಿದ್ದಾರೆ.

ಇತರ ರೈತ ಮುಖಂಡರು ದಿ ಪ್ರಿಂಟ್‌ಗೆ ಅಂತಹ ಯಾವುದೇ ದಿನಾಂಕವನ್ನು ನಿಗದಿಪಡಿಸಿಲ್ಲ ಎಂದು ಹೇಳಿದ್ದಾರೆ. “ಅವರು (ಟಿಕಾಯತ್) ದಿನಾಂಕವನ್ನು ಪ್ರಸ್ತಾಪಿಸಿರಬಹುದು, ಆದರೆ ಇನ್ನೂ ಅಂತಹ ಬದ್ಧತೆಯ ಕಾರ್ಯಕ್ರಮ ರೂಪಿಸಿಲ್ಲ” ಎಂದಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ (ರಾಜೇವಾಲ್) ಪ್ರಧಾನ ಕಾರ್ಯದರ್ಶಿ ಓಂಕರ್ ಸಿಂಗ್, “ಅಕ್ಟೋಬರ್ 2 ರೊಳಗೆ ಸರ್ಕಾರ ಕಾನೂನುಗಳನ್ನು ರದ್ದುಗೊಳಿಸಿದರೆ ನಾವು ಮನೆಗೆ ಹಿಂದಿರುಗುತ್ತೇವೆ. ಕಾನೂನುಗಳನ್ನು ರದ್ದುಗೊಳಿಸದಿದ್ದರೆ ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ. ಅಂತಹ ಯಾವುದೇ ದಿನಾಂಕವನ್ನು ಡೆಡ್‌ಲೈನ್ ಎಂದು ಈವರೆಗೂ ನಿಗದಿಪಡಿಸಲಾಗಿಲ್ಲ ” ಎಂದಿದ್ದಾರೆ.

ಅನುಕೂಲಕರ ವಾತಾವರಣವಿದ್ದರಷ್ಠೇ ಮಾತುಕತೆ

ಪ್ರತಿಭಟನಾ ನಿರತ ರೈತರು ಮತ್ತು ಮೋದಿ ಸರ್ಕಾರದ ನಡುವೆ ಈಗಾಗಲೇ 11 ಸುತ್ತಿನ ಚರ್ಚೆ ನಡೆದಿದ್ದರೂ, ಯಾವುದೇ ಪರಿಹಾರವನ್ನು ತಲುಪಿಲ್ಲ. ಮೂರು ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸುವಂತೆ ರೈತರು ಒತ್ತಾಯಿಸಿದ್ದಾರೆ, ಆದರೆ ಸರ್ಕಾರವು ಕಾನೂನುಗಳನ್ನು 18 ತಿಂಗಳು ತಡೆ ಹಿಡಿಯುವುದರ ಬಗ್ಗೆ ಮತ್ತು ತಿದ್ದುಪಡಿಗಳನ್ನು ಮಾಡುವ ಬಗ್ಗೆ ಮಾತ್ರ ಭರವಸೆ ನೀಡಿದೆ.

ರೈತ ಮುಖಂಡರು ತಾವು ಮಾತುಕತೆಗೆ ಮುಕ್ತವಾಗಿದ್ದರೂ, ಸರ್ಕಾರ ಮೊದಲ ಹೆಜ್ಜೆ ಇಟ್ಟರೆ ಮಾತ್ರ ಮಾತುಕತೆ ನಡೆಯುತ್ತದೆ ಎಂದು ಹೇಳಿದ್ದಾರೆ. “ಸರ್ಕಾರವು ಸಂಸತ್ತಿನಲ್ಲಿ ಮಾತುಕತೆಗೆ ಸಿದ್ಧವಾಗಿದೆ ಎಂದು ಹೇಳುತ್ತಿದೆ, ಕೇವಲ ಒಂದು ದೂರವಾಣಿ ಕರೆ ಮಾತ್ರ ಎಂದು ಪ್ರಧಾನಿ ಹೇಳುತ್ತಿದ್ದಾರೆ. ಆದರೆ ಆ ಫೋನ್ ಕರೆ ಬರಲಿ, ನೋಡೋಣ” ಎಂದು ಸಂಧು ಹೇಳಿದರು. “ಮಾತುಕತೆಗಾಗಿ ಸರ್ಕಾರವನ್ನು ಸಂಪರ್ಕಿಸಲು ನಾವು ಸಾಧ್ಯವಿಲ್ಲ; ಅದು ಅವರಿಂದ ಬರಬೇಕು’ ಎಂಬುದು ಬಹುತೇಕ ರೈತರ ಅಭಿಪ್ರಾಯವಾಗಿದೆ.

ಸರ್ಕಾರವು ಅನುಕೂಲಕರ ವಾತಾವರಣವನ್ನು ಸೃಷ್ಟಿಸಿದರೆ ಮಾತ್ರ ಮಾತುಕತೆ ನಡೆಸಬಹುದು ಎಂದು ರೈತರು ಹೇಳಿದರು. “ಅವರು ನಮ್ಮ ನಾಯಕರನ್ನು ಬಂಧಿಸುತ್ತಿದ್ದಾರೆ, ನಮ್ಮನ್ನು ದೇಶ ವಿರೋಧಿಗಳು ಎಂದು ಕರೆಯುತ್ತಾರೆ. ಅಂತಹ ಸನ್ನಿವೇಶದಲ್ಲಿ ನಾವು ಅವರೊಂದಿಗೆ ಹೇಗೆ ಮಾತುಕತೆ ನಡೆಸಬಹುದು?’ ಎಂದು ಮೊಲ್ಲಾ ಕೇಳಿದರು. “ಆದರೆ ನಾವು ಯಾವಾಗಲೂ ಈ ಸಮಸ್ಯೆಯನ್ನು ಸರ್ಕಾರ ಮತ್ತು ರೈತರ ನಡುವೆ ಇಟ್ಟುಕೊಂಡಿದ್ದೇವೆ ಮತ್ತು ಸಂವಾದದ ಮೂಲಕ ಮಾತ್ರ ಇದನ್ನು ಪರಿಹರಿಸಬಹುದು’ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
ಏನಿದ್ದರೂ, ಪ್ರಾತಿನಿಧಿಕ ಸಂಸ್ಥೆ ಸಂಯುಕ್ತ್ ಕಿಸಾನ್ ಮೋರ್ಚಾ ಯಾವ ನಿರ್ಣಯ ತೆಗೆದುಕೊಳ್ಳಲಿದೆ ಎಂಬುದು ಮಹತ್ವದ್ದಾಗಿದೆ.


ಇದನ್ನೂ ಓದಿ: ಎಚ್ಚರಿಕೆಯ ಪೋಸ್ಟರ್‌‌‌: ’ಬಿಜೆಪಿಗರೆ ಗ್ರಾಮಕ್ಕೆ ಪ್ರವೇಶಿಸಿದರೆ ನಿಮ್ಮ ಜೀವಕ್ಕೆ ನೀವೆ ಜವಾಬ್ದಾರಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....