Homeಮುಖಪುಟದೇಶವ್ಯಾಪಿ ಹರಡುತ್ತಿರುವ ರೈತ ಹೋರಾಟ: ಪ್ರತಿಭಟನೆ ಜೀವಂತವಾಗಿಡಲು ವಾರಕ್ಕೊಮ್ಮೆ ‘ಚಕ್ಕಾ ಜಾಮ್’?

ದೇಶವ್ಯಾಪಿ ಹರಡುತ್ತಿರುವ ರೈತ ಹೋರಾಟ: ಪ್ರತಿಭಟನೆ ಜೀವಂತವಾಗಿಡಲು ವಾರಕ್ಕೊಮ್ಮೆ ‘ಚಕ್ಕಾ ಜಾಮ್’?

'ಸರ್ಕಾರ ನಮ್ಮ ನಾಯಕರನ್ನು ಬಂಧಿಸುತ್ತಿದೆ. ನಮ್ಮನ್ನು ದೇಶ ವಿರೋಧಿಗಳು ಎಂದು ಕರೆಯುತ್ತಿದೆ. ಇಂತಹ ಸನ್ನಿವೇಶದಲ್ಲಿ ನಾವು ಅವರೊಂದಿಗೆ ಹೇಗೆ ಮಾತುಕತೆ ನಡೆಸಬಹುದು?’ ಎಂದು ರೈತರು ಪ್ರಶ್ನಿಸುತ್ತಿದ್ದಾರೆ.

- Advertisement -
- Advertisement -

ಶನಿವಾರ ಮೂರು ಗಂಟೆಗಳ ಚಕ್ಕಾ ಜಾಮ್ (ರಸ್ತೆ ಸಂಚಾರ ತಡೆ) ಅನ್ನು ದೇಶಾವ್ಯಾಪಿ ಯಶಸ್ವಿಯಾಗಿ, ಶಾಂತಿಯುತವಾಗಿ ಕೈಗೊಂಡ ರೈತ ಸಂಘಗಳು ತಮ್ಮ ಆಂದೋಲನವನ್ನು ಜೀವಂತವಾಗಿಡಲು ಪ್ರತಿ ವಾರ ಅಂತಹ ಒಂದು ಕಾರ್ಯಕ್ರಮವನ್ನು ಆಯೋಜಿಸುವ ಪ್ರಯತ್ನಗಳನ್ನು ಪ್ರಾರಂಭಿಸುವುದಾಗಿ ಹೇಳಿವೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಮೋದಿ ಸರ್ಕಾರದ ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕೆಂದು ಮತ್ತು ಎಂಎಸ್‌ಪಿ ಖಾತ್ರಿಗಾಗಿ ಕಾಯ್ದೆ ಜಾರಿಗೊಳಿಸಬೇಕೆಂದು ಪ್ರತಿಭಟಿಸುತ್ತಿರುವ ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ, ಸರ್ಕಾರ ಸಂವಾದಕ್ಕೆ ಮುಕ್ತವಾಗಿದ್ದರೂ, ಮಾತುಕತೆಗಳನ್ನು ಅನುಕೂಲಕರ ವಾತಾವರಣದಲ್ಲಿ ಮಾತ್ರ ನಡೆಸಬಹುದು ಎಂದು ಹೇಳಿದೆ.

ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಶನಿವಾರ ಮಧ್ಯಾಹ್ನ 12 ರಿಂದ ಮಧ್ಯಾಹ್ನ 3 ರವರೆಗೆ ದಿಗ್ಬಂಧನ ನಡೆಸಲಾಯಿತು. ಪ್ರತಿಭಟನೆ ಶಾಂತಿಯುತವಾಗಿದ್ದರೂ, ರೈತರಿಗೆ ಬೆಂಬಲವಾಗಿ ಪ್ರತಿಭಟನೆ ನಡೆಸಿದ್ದಕ್ಕಾಗಿ ಸುಮಾರು 50 ಜನರನ್ನು ದೆಹಲಿಯಲ್ಲಿ ಬಂಧಿಸಲಾಗಿದೆ. ಇದೇ ರೀತಿ ದೇಶಾದ್ಯಂತ ಬಂಧನ, ಬಿಡುಗಡೆಗಳು ನಡೆದಿವೆ.

ಬೆಂಗಳೂರಿನಲ್ಲೂ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಬಿಡುಗಡೆ ಮಾಡಲಾಗಿದೆ. ದೇಶದ ವಿವಿಧೆಡೆ ಈ ಶಾಂತಿಯುತ ಪ್ರತಿಭಟನೆಗೆ ಪೊಲೀಸರು ಅಡ್ಡಗಾಲು ಹಾಕಿದ ವರದಿಗಳು ಬಂದಿವೆ.
ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ರೈತ ಸಂಘಟನೆಗಳ ಪ್ರಾತಿನಿಧಿಕ ಸಂಸ್ಥೆಯಾದ ಸಂಯುಕ್ತ್ ಕಿಸಾನ್ ಮೋರ್ಚಾ ಶುಕ್ರವಾರ ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ್ ಹೊರತುಪಡಿಸಿ ಭಾರತದಾದ್ಯಂತ ರಸ್ತೆ ದಿಗ್ಬಂಧನ ನಡೆಸಲಾಗುವುದು ಎಂದು ತಿಳಿಸಿತ್ತು.

ಎರಡೂವರೆ ತಿಂಗಳಿನಿಂದ ಲಕ್ಷಾಂತರ ರೈತರು ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮುಂದುವರೆಸುತ್ತಿದ್ದು, ಪ್ರತಿಭಟನಾ ಸ್ಥಳಗಳಲ್ಲಿ ಇಂಟರ್‌ನೆಟ್ ಸ್ಥಗಿತ, ಅಧಿಕಾರಸ್ಥರ ಕಿರುಕುಳ ಮತ್ತು ಬಜೆಟ್‌ನಲ್ಲಿ ರೈತಾಪಿಗಳ ನಿರ್ಲಕ್ಷ್ಯ ವಿರೋಧಿಸಿ ಶನಿವರ ಚಕ್ಕಾ ಬಂದ್ ನಡೆಸಲಾಗಿತು.

“ಚಕ್ಕಾ ಜಾಮ್ ಭಾರತದಾದ್ಯಂತ ಬಹಳ ಯಶಸ್ವಿಯಾಗಿದೆ. ಪ್ರತಿ ರಾಜ್ಯದಲ್ಲಿ ಕನಿಷ್ಠ 100 ಗ್ರಾಮಗಳು, ಪಟ್ಟಣಗಳು ದಿಗ್ಬಂಧನದಲ್ಲಿ ಪಾಲ್ಗೊಂಡಿವೆ” ಎಂದು ಅಖಿಲ ಭಾರತ ಕಿಸಾನ್ ಸಭೆಯ ಪ್ರಧಾನ ಕಾರ್ಯದರ್ಶಿ ಹನ್ನನ್ ಮೊಲ್ಲಾ ಹೇಳಿದ್ದಾರೆ. “ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮುಂದುವರಿಯುತ್ತದೆಯಾದರೂ, ಪ್ರತಿಭಟನೆಯನ್ನು ಜೀವಂತವಾಗಿಡಲು ಪ್ರತಿ ವಾರವೂ ಅಂತಹ ಒಂದು ಕಾರ್ಯಕ್ರಮವನ್ನು ಆಯೋಜಿಸುವ ಪ್ರಯತ್ನಗಳು ನಡೆಯುತ್ತಿವೆ. ಇಲ್ಲದಿದ್ದರೆ ಪ್ರತಿಭಟನೆ ಮುಗಿದಿದೆ ಎಂದು ಸರ್ಕಾರ ಭಾವಿಸಬಹುದು” ಎಂದು ಅವರು ಹೇಳಿದ್ದಾರೆ.

ಈ ಒಂದು ಮೊಮೆಂಟಮ್ ಅನ್ನು (ಆವೇಗವನ್ನು ) ಮುಂದುವರೆಸಲು, ಸಾಧ್ಯವಾದಷ್ಟು ಹೆಚ್ಚಿನ ರಾಜ್ಯಗಳನ್ನು ಒಳಗೊಳ್ಳಲು ಪ್ರಯತ್ನಿಸಲಾಗುವುದು ಎಂದು ರೈತ ನಾಯಕರು ಹೇಳಿದರು. “ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮುಂದುವರಿಯುತ್ತದೆ, ಆದರೆ ಅದು ಸಾಕಾಗುವುದಿಲ್ಲ. ಇಂದಿನ ಚಕ್ಕಾ ಜಾಮ್‌ನಲ್ಲಿ ರಾಷ್ಟ್ರವ್ಯಾಪಿ ಭಾಗವಹಿಸುವಿಕೆಯನ್ನು ನಾವು ನೋಡಿದಂತೆಯೇ, ಭವಿಷ್ಯದಲ್ಲಿ ನಾವು ಇತರ ರಾಜ್ಯಗಳ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಬೇಕು” ಎಂದು ಜಮ್ಹುರಿ ಕಿಸಾನ್ ಸಭೆಯ ಪ್ರಧಾನ ಕಾರ್ಯದರ್ಶಿ ಕುಲ್ವಂತ್ ಸಿಂಗ್ ಸಂಧು ಹೇಳಿದರು.

ದೆಹಲಿ ಮತ್ತು ಉತ್ತರ ಪ್ರದೇಶವನ್ನು ಸಂಪರ್ಕಿಸುವ ಗಾಜಿಪುರ ಗಡಿಯಲ್ಲಿ ಪ್ರತಿಭಟನೆಯನ್ನು ಸಂಘಟಿಸುತ್ತಿರುವ ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್, ಚಕ್ಕಾ ಜಾಮ್ ಕೊನೆಯಲ್ಲಿ ಸರ್ಕಾರಕ್ಕೆ ಒಂದು ಗಡುವನ್ನು ರವಾನಿಸಿದ್ದಾರೆ. “ನಾವು ಕಾನೂನುಗಳನ್ನು ರದ್ದುಗೊಳಿಸಲು ಅಕ್ಟೋಬರ್ 2 ರವರೆಗೆ ಸರ್ಕಾರಕ್ಕೆ ಸಮಯ ನೀಡಿದ್ದೇವೆ. ಇದರ ನಂತರ, ನಾವು ಹೆಚ್ಚಿನ ಯೋಜನೆಯನ್ನು ಮಾಡುತ್ತೇವೆ” ಎಂದು ಅವರು ಎಎನ್‌ಐಗೆ ತಿಳಿಸಿದ್ದಾರೆ.

ಇತರ ರೈತ ಮುಖಂಡರು ದಿ ಪ್ರಿಂಟ್‌ಗೆ ಅಂತಹ ಯಾವುದೇ ದಿನಾಂಕವನ್ನು ನಿಗದಿಪಡಿಸಿಲ್ಲ ಎಂದು ಹೇಳಿದ್ದಾರೆ. “ಅವರು (ಟಿಕಾಯತ್) ದಿನಾಂಕವನ್ನು ಪ್ರಸ್ತಾಪಿಸಿರಬಹುದು, ಆದರೆ ಇನ್ನೂ ಅಂತಹ ಬದ್ಧತೆಯ ಕಾರ್ಯಕ್ರಮ ರೂಪಿಸಿಲ್ಲ” ಎಂದಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ (ರಾಜೇವಾಲ್) ಪ್ರಧಾನ ಕಾರ್ಯದರ್ಶಿ ಓಂಕರ್ ಸಿಂಗ್, “ಅಕ್ಟೋಬರ್ 2 ರೊಳಗೆ ಸರ್ಕಾರ ಕಾನೂನುಗಳನ್ನು ರದ್ದುಗೊಳಿಸಿದರೆ ನಾವು ಮನೆಗೆ ಹಿಂದಿರುಗುತ್ತೇವೆ. ಕಾನೂನುಗಳನ್ನು ರದ್ದುಗೊಳಿಸದಿದ್ದರೆ ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ. ಅಂತಹ ಯಾವುದೇ ದಿನಾಂಕವನ್ನು ಡೆಡ್‌ಲೈನ್ ಎಂದು ಈವರೆಗೂ ನಿಗದಿಪಡಿಸಲಾಗಿಲ್ಲ ” ಎಂದಿದ್ದಾರೆ.

ಅನುಕೂಲಕರ ವಾತಾವರಣವಿದ್ದರಷ್ಠೇ ಮಾತುಕತೆ

ಪ್ರತಿಭಟನಾ ನಿರತ ರೈತರು ಮತ್ತು ಮೋದಿ ಸರ್ಕಾರದ ನಡುವೆ ಈಗಾಗಲೇ 11 ಸುತ್ತಿನ ಚರ್ಚೆ ನಡೆದಿದ್ದರೂ, ಯಾವುದೇ ಪರಿಹಾರವನ್ನು ತಲುಪಿಲ್ಲ. ಮೂರು ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸುವಂತೆ ರೈತರು ಒತ್ತಾಯಿಸಿದ್ದಾರೆ, ಆದರೆ ಸರ್ಕಾರವು ಕಾನೂನುಗಳನ್ನು 18 ತಿಂಗಳು ತಡೆ ಹಿಡಿಯುವುದರ ಬಗ್ಗೆ ಮತ್ತು ತಿದ್ದುಪಡಿಗಳನ್ನು ಮಾಡುವ ಬಗ್ಗೆ ಮಾತ್ರ ಭರವಸೆ ನೀಡಿದೆ.

ರೈತ ಮುಖಂಡರು ತಾವು ಮಾತುಕತೆಗೆ ಮುಕ್ತವಾಗಿದ್ದರೂ, ಸರ್ಕಾರ ಮೊದಲ ಹೆಜ್ಜೆ ಇಟ್ಟರೆ ಮಾತ್ರ ಮಾತುಕತೆ ನಡೆಯುತ್ತದೆ ಎಂದು ಹೇಳಿದ್ದಾರೆ. “ಸರ್ಕಾರವು ಸಂಸತ್ತಿನಲ್ಲಿ ಮಾತುಕತೆಗೆ ಸಿದ್ಧವಾಗಿದೆ ಎಂದು ಹೇಳುತ್ತಿದೆ, ಕೇವಲ ಒಂದು ದೂರವಾಣಿ ಕರೆ ಮಾತ್ರ ಎಂದು ಪ್ರಧಾನಿ ಹೇಳುತ್ತಿದ್ದಾರೆ. ಆದರೆ ಆ ಫೋನ್ ಕರೆ ಬರಲಿ, ನೋಡೋಣ” ಎಂದು ಸಂಧು ಹೇಳಿದರು. “ಮಾತುಕತೆಗಾಗಿ ಸರ್ಕಾರವನ್ನು ಸಂಪರ್ಕಿಸಲು ನಾವು ಸಾಧ್ಯವಿಲ್ಲ; ಅದು ಅವರಿಂದ ಬರಬೇಕು’ ಎಂಬುದು ಬಹುತೇಕ ರೈತರ ಅಭಿಪ್ರಾಯವಾಗಿದೆ.

ಸರ್ಕಾರವು ಅನುಕೂಲಕರ ವಾತಾವರಣವನ್ನು ಸೃಷ್ಟಿಸಿದರೆ ಮಾತ್ರ ಮಾತುಕತೆ ನಡೆಸಬಹುದು ಎಂದು ರೈತರು ಹೇಳಿದರು. “ಅವರು ನಮ್ಮ ನಾಯಕರನ್ನು ಬಂಧಿಸುತ್ತಿದ್ದಾರೆ, ನಮ್ಮನ್ನು ದೇಶ ವಿರೋಧಿಗಳು ಎಂದು ಕರೆಯುತ್ತಾರೆ. ಅಂತಹ ಸನ್ನಿವೇಶದಲ್ಲಿ ನಾವು ಅವರೊಂದಿಗೆ ಹೇಗೆ ಮಾತುಕತೆ ನಡೆಸಬಹುದು?’ ಎಂದು ಮೊಲ್ಲಾ ಕೇಳಿದರು. “ಆದರೆ ನಾವು ಯಾವಾಗಲೂ ಈ ಸಮಸ್ಯೆಯನ್ನು ಸರ್ಕಾರ ಮತ್ತು ರೈತರ ನಡುವೆ ಇಟ್ಟುಕೊಂಡಿದ್ದೇವೆ ಮತ್ತು ಸಂವಾದದ ಮೂಲಕ ಮಾತ್ರ ಇದನ್ನು ಪರಿಹರಿಸಬಹುದು’ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
ಏನಿದ್ದರೂ, ಪ್ರಾತಿನಿಧಿಕ ಸಂಸ್ಥೆ ಸಂಯುಕ್ತ್ ಕಿಸಾನ್ ಮೋರ್ಚಾ ಯಾವ ನಿರ್ಣಯ ತೆಗೆದುಕೊಳ್ಳಲಿದೆ ಎಂಬುದು ಮಹತ್ವದ್ದಾಗಿದೆ.


ಇದನ್ನೂ ಓದಿ: ಎಚ್ಚರಿಕೆಯ ಪೋಸ್ಟರ್‌‌‌: ’ಬಿಜೆಪಿಗರೆ ಗ್ರಾಮಕ್ಕೆ ಪ್ರವೇಶಿಸಿದರೆ ನಿಮ್ಮ ಜೀವಕ್ಕೆ ನೀವೆ ಜವಾಬ್ದಾರಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...