Homeಮುಖಪುಟದೇಶವ್ಯಾಪಿ ಹರಡುತ್ತಿರುವ ರೈತ ಹೋರಾಟ: ಪ್ರತಿಭಟನೆ ಜೀವಂತವಾಗಿಡಲು ವಾರಕ್ಕೊಮ್ಮೆ ‘ಚಕ್ಕಾ ಜಾಮ್’?

ದೇಶವ್ಯಾಪಿ ಹರಡುತ್ತಿರುವ ರೈತ ಹೋರಾಟ: ಪ್ರತಿಭಟನೆ ಜೀವಂತವಾಗಿಡಲು ವಾರಕ್ಕೊಮ್ಮೆ ‘ಚಕ್ಕಾ ಜಾಮ್’?

'ಸರ್ಕಾರ ನಮ್ಮ ನಾಯಕರನ್ನು ಬಂಧಿಸುತ್ತಿದೆ. ನಮ್ಮನ್ನು ದೇಶ ವಿರೋಧಿಗಳು ಎಂದು ಕರೆಯುತ್ತಿದೆ. ಇಂತಹ ಸನ್ನಿವೇಶದಲ್ಲಿ ನಾವು ಅವರೊಂದಿಗೆ ಹೇಗೆ ಮಾತುಕತೆ ನಡೆಸಬಹುದು?’ ಎಂದು ರೈತರು ಪ್ರಶ್ನಿಸುತ್ತಿದ್ದಾರೆ.

- Advertisement -
- Advertisement -

ಶನಿವಾರ ಮೂರು ಗಂಟೆಗಳ ಚಕ್ಕಾ ಜಾಮ್ (ರಸ್ತೆ ಸಂಚಾರ ತಡೆ) ಅನ್ನು ದೇಶಾವ್ಯಾಪಿ ಯಶಸ್ವಿಯಾಗಿ, ಶಾಂತಿಯುತವಾಗಿ ಕೈಗೊಂಡ ರೈತ ಸಂಘಗಳು ತಮ್ಮ ಆಂದೋಲನವನ್ನು ಜೀವಂತವಾಗಿಡಲು ಪ್ರತಿ ವಾರ ಅಂತಹ ಒಂದು ಕಾರ್ಯಕ್ರಮವನ್ನು ಆಯೋಜಿಸುವ ಪ್ರಯತ್ನಗಳನ್ನು ಪ್ರಾರಂಭಿಸುವುದಾಗಿ ಹೇಳಿವೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಮೋದಿ ಸರ್ಕಾರದ ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕೆಂದು ಮತ್ತು ಎಂಎಸ್‌ಪಿ ಖಾತ್ರಿಗಾಗಿ ಕಾಯ್ದೆ ಜಾರಿಗೊಳಿಸಬೇಕೆಂದು ಪ್ರತಿಭಟಿಸುತ್ತಿರುವ ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ, ಸರ್ಕಾರ ಸಂವಾದಕ್ಕೆ ಮುಕ್ತವಾಗಿದ್ದರೂ, ಮಾತುಕತೆಗಳನ್ನು ಅನುಕೂಲಕರ ವಾತಾವರಣದಲ್ಲಿ ಮಾತ್ರ ನಡೆಸಬಹುದು ಎಂದು ಹೇಳಿದೆ.

ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಶನಿವಾರ ಮಧ್ಯಾಹ್ನ 12 ರಿಂದ ಮಧ್ಯಾಹ್ನ 3 ರವರೆಗೆ ದಿಗ್ಬಂಧನ ನಡೆಸಲಾಯಿತು. ಪ್ರತಿಭಟನೆ ಶಾಂತಿಯುತವಾಗಿದ್ದರೂ, ರೈತರಿಗೆ ಬೆಂಬಲವಾಗಿ ಪ್ರತಿಭಟನೆ ನಡೆಸಿದ್ದಕ್ಕಾಗಿ ಸುಮಾರು 50 ಜನರನ್ನು ದೆಹಲಿಯಲ್ಲಿ ಬಂಧಿಸಲಾಗಿದೆ. ಇದೇ ರೀತಿ ದೇಶಾದ್ಯಂತ ಬಂಧನ, ಬಿಡುಗಡೆಗಳು ನಡೆದಿವೆ.

ಬೆಂಗಳೂರಿನಲ್ಲೂ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಬಿಡುಗಡೆ ಮಾಡಲಾಗಿದೆ. ದೇಶದ ವಿವಿಧೆಡೆ ಈ ಶಾಂತಿಯುತ ಪ್ರತಿಭಟನೆಗೆ ಪೊಲೀಸರು ಅಡ್ಡಗಾಲು ಹಾಕಿದ ವರದಿಗಳು ಬಂದಿವೆ.
ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ರೈತ ಸಂಘಟನೆಗಳ ಪ್ರಾತಿನಿಧಿಕ ಸಂಸ್ಥೆಯಾದ ಸಂಯುಕ್ತ್ ಕಿಸಾನ್ ಮೋರ್ಚಾ ಶುಕ್ರವಾರ ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ್ ಹೊರತುಪಡಿಸಿ ಭಾರತದಾದ್ಯಂತ ರಸ್ತೆ ದಿಗ್ಬಂಧನ ನಡೆಸಲಾಗುವುದು ಎಂದು ತಿಳಿಸಿತ್ತು.

ಎರಡೂವರೆ ತಿಂಗಳಿನಿಂದ ಲಕ್ಷಾಂತರ ರೈತರು ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮುಂದುವರೆಸುತ್ತಿದ್ದು, ಪ್ರತಿಭಟನಾ ಸ್ಥಳಗಳಲ್ಲಿ ಇಂಟರ್‌ನೆಟ್ ಸ್ಥಗಿತ, ಅಧಿಕಾರಸ್ಥರ ಕಿರುಕುಳ ಮತ್ತು ಬಜೆಟ್‌ನಲ್ಲಿ ರೈತಾಪಿಗಳ ನಿರ್ಲಕ್ಷ್ಯ ವಿರೋಧಿಸಿ ಶನಿವರ ಚಕ್ಕಾ ಬಂದ್ ನಡೆಸಲಾಗಿತು.

“ಚಕ್ಕಾ ಜಾಮ್ ಭಾರತದಾದ್ಯಂತ ಬಹಳ ಯಶಸ್ವಿಯಾಗಿದೆ. ಪ್ರತಿ ರಾಜ್ಯದಲ್ಲಿ ಕನಿಷ್ಠ 100 ಗ್ರಾಮಗಳು, ಪಟ್ಟಣಗಳು ದಿಗ್ಬಂಧನದಲ್ಲಿ ಪಾಲ್ಗೊಂಡಿವೆ” ಎಂದು ಅಖಿಲ ಭಾರತ ಕಿಸಾನ್ ಸಭೆಯ ಪ್ರಧಾನ ಕಾರ್ಯದರ್ಶಿ ಹನ್ನನ್ ಮೊಲ್ಲಾ ಹೇಳಿದ್ದಾರೆ. “ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮುಂದುವರಿಯುತ್ತದೆಯಾದರೂ, ಪ್ರತಿಭಟನೆಯನ್ನು ಜೀವಂತವಾಗಿಡಲು ಪ್ರತಿ ವಾರವೂ ಅಂತಹ ಒಂದು ಕಾರ್ಯಕ್ರಮವನ್ನು ಆಯೋಜಿಸುವ ಪ್ರಯತ್ನಗಳು ನಡೆಯುತ್ತಿವೆ. ಇಲ್ಲದಿದ್ದರೆ ಪ್ರತಿಭಟನೆ ಮುಗಿದಿದೆ ಎಂದು ಸರ್ಕಾರ ಭಾವಿಸಬಹುದು” ಎಂದು ಅವರು ಹೇಳಿದ್ದಾರೆ.

ಈ ಒಂದು ಮೊಮೆಂಟಮ್ ಅನ್ನು (ಆವೇಗವನ್ನು ) ಮುಂದುವರೆಸಲು, ಸಾಧ್ಯವಾದಷ್ಟು ಹೆಚ್ಚಿನ ರಾಜ್ಯಗಳನ್ನು ಒಳಗೊಳ್ಳಲು ಪ್ರಯತ್ನಿಸಲಾಗುವುದು ಎಂದು ರೈತ ನಾಯಕರು ಹೇಳಿದರು. “ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮುಂದುವರಿಯುತ್ತದೆ, ಆದರೆ ಅದು ಸಾಕಾಗುವುದಿಲ್ಲ. ಇಂದಿನ ಚಕ್ಕಾ ಜಾಮ್‌ನಲ್ಲಿ ರಾಷ್ಟ್ರವ್ಯಾಪಿ ಭಾಗವಹಿಸುವಿಕೆಯನ್ನು ನಾವು ನೋಡಿದಂತೆಯೇ, ಭವಿಷ್ಯದಲ್ಲಿ ನಾವು ಇತರ ರಾಜ್ಯಗಳ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಬೇಕು” ಎಂದು ಜಮ್ಹುರಿ ಕಿಸಾನ್ ಸಭೆಯ ಪ್ರಧಾನ ಕಾರ್ಯದರ್ಶಿ ಕುಲ್ವಂತ್ ಸಿಂಗ್ ಸಂಧು ಹೇಳಿದರು.

ದೆಹಲಿ ಮತ್ತು ಉತ್ತರ ಪ್ರದೇಶವನ್ನು ಸಂಪರ್ಕಿಸುವ ಗಾಜಿಪುರ ಗಡಿಯಲ್ಲಿ ಪ್ರತಿಭಟನೆಯನ್ನು ಸಂಘಟಿಸುತ್ತಿರುವ ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್, ಚಕ್ಕಾ ಜಾಮ್ ಕೊನೆಯಲ್ಲಿ ಸರ್ಕಾರಕ್ಕೆ ಒಂದು ಗಡುವನ್ನು ರವಾನಿಸಿದ್ದಾರೆ. “ನಾವು ಕಾನೂನುಗಳನ್ನು ರದ್ದುಗೊಳಿಸಲು ಅಕ್ಟೋಬರ್ 2 ರವರೆಗೆ ಸರ್ಕಾರಕ್ಕೆ ಸಮಯ ನೀಡಿದ್ದೇವೆ. ಇದರ ನಂತರ, ನಾವು ಹೆಚ್ಚಿನ ಯೋಜನೆಯನ್ನು ಮಾಡುತ್ತೇವೆ” ಎಂದು ಅವರು ಎಎನ್‌ಐಗೆ ತಿಳಿಸಿದ್ದಾರೆ.

ಇತರ ರೈತ ಮುಖಂಡರು ದಿ ಪ್ರಿಂಟ್‌ಗೆ ಅಂತಹ ಯಾವುದೇ ದಿನಾಂಕವನ್ನು ನಿಗದಿಪಡಿಸಿಲ್ಲ ಎಂದು ಹೇಳಿದ್ದಾರೆ. “ಅವರು (ಟಿಕಾಯತ್) ದಿನಾಂಕವನ್ನು ಪ್ರಸ್ತಾಪಿಸಿರಬಹುದು, ಆದರೆ ಇನ್ನೂ ಅಂತಹ ಬದ್ಧತೆಯ ಕಾರ್ಯಕ್ರಮ ರೂಪಿಸಿಲ್ಲ” ಎಂದಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ (ರಾಜೇವಾಲ್) ಪ್ರಧಾನ ಕಾರ್ಯದರ್ಶಿ ಓಂಕರ್ ಸಿಂಗ್, “ಅಕ್ಟೋಬರ್ 2 ರೊಳಗೆ ಸರ್ಕಾರ ಕಾನೂನುಗಳನ್ನು ರದ್ದುಗೊಳಿಸಿದರೆ ನಾವು ಮನೆಗೆ ಹಿಂದಿರುಗುತ್ತೇವೆ. ಕಾನೂನುಗಳನ್ನು ರದ್ದುಗೊಳಿಸದಿದ್ದರೆ ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ. ಅಂತಹ ಯಾವುದೇ ದಿನಾಂಕವನ್ನು ಡೆಡ್‌ಲೈನ್ ಎಂದು ಈವರೆಗೂ ನಿಗದಿಪಡಿಸಲಾಗಿಲ್ಲ ” ಎಂದಿದ್ದಾರೆ.

ಅನುಕೂಲಕರ ವಾತಾವರಣವಿದ್ದರಷ್ಠೇ ಮಾತುಕತೆ

ಪ್ರತಿಭಟನಾ ನಿರತ ರೈತರು ಮತ್ತು ಮೋದಿ ಸರ್ಕಾರದ ನಡುವೆ ಈಗಾಗಲೇ 11 ಸುತ್ತಿನ ಚರ್ಚೆ ನಡೆದಿದ್ದರೂ, ಯಾವುದೇ ಪರಿಹಾರವನ್ನು ತಲುಪಿಲ್ಲ. ಮೂರು ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸುವಂತೆ ರೈತರು ಒತ್ತಾಯಿಸಿದ್ದಾರೆ, ಆದರೆ ಸರ್ಕಾರವು ಕಾನೂನುಗಳನ್ನು 18 ತಿಂಗಳು ತಡೆ ಹಿಡಿಯುವುದರ ಬಗ್ಗೆ ಮತ್ತು ತಿದ್ದುಪಡಿಗಳನ್ನು ಮಾಡುವ ಬಗ್ಗೆ ಮಾತ್ರ ಭರವಸೆ ನೀಡಿದೆ.

ರೈತ ಮುಖಂಡರು ತಾವು ಮಾತುಕತೆಗೆ ಮುಕ್ತವಾಗಿದ್ದರೂ, ಸರ್ಕಾರ ಮೊದಲ ಹೆಜ್ಜೆ ಇಟ್ಟರೆ ಮಾತ್ರ ಮಾತುಕತೆ ನಡೆಯುತ್ತದೆ ಎಂದು ಹೇಳಿದ್ದಾರೆ. “ಸರ್ಕಾರವು ಸಂಸತ್ತಿನಲ್ಲಿ ಮಾತುಕತೆಗೆ ಸಿದ್ಧವಾಗಿದೆ ಎಂದು ಹೇಳುತ್ತಿದೆ, ಕೇವಲ ಒಂದು ದೂರವಾಣಿ ಕರೆ ಮಾತ್ರ ಎಂದು ಪ್ರಧಾನಿ ಹೇಳುತ್ತಿದ್ದಾರೆ. ಆದರೆ ಆ ಫೋನ್ ಕರೆ ಬರಲಿ, ನೋಡೋಣ” ಎಂದು ಸಂಧು ಹೇಳಿದರು. “ಮಾತುಕತೆಗಾಗಿ ಸರ್ಕಾರವನ್ನು ಸಂಪರ್ಕಿಸಲು ನಾವು ಸಾಧ್ಯವಿಲ್ಲ; ಅದು ಅವರಿಂದ ಬರಬೇಕು’ ಎಂಬುದು ಬಹುತೇಕ ರೈತರ ಅಭಿಪ್ರಾಯವಾಗಿದೆ.

ಸರ್ಕಾರವು ಅನುಕೂಲಕರ ವಾತಾವರಣವನ್ನು ಸೃಷ್ಟಿಸಿದರೆ ಮಾತ್ರ ಮಾತುಕತೆ ನಡೆಸಬಹುದು ಎಂದು ರೈತರು ಹೇಳಿದರು. “ಅವರು ನಮ್ಮ ನಾಯಕರನ್ನು ಬಂಧಿಸುತ್ತಿದ್ದಾರೆ, ನಮ್ಮನ್ನು ದೇಶ ವಿರೋಧಿಗಳು ಎಂದು ಕರೆಯುತ್ತಾರೆ. ಅಂತಹ ಸನ್ನಿವೇಶದಲ್ಲಿ ನಾವು ಅವರೊಂದಿಗೆ ಹೇಗೆ ಮಾತುಕತೆ ನಡೆಸಬಹುದು?’ ಎಂದು ಮೊಲ್ಲಾ ಕೇಳಿದರು. “ಆದರೆ ನಾವು ಯಾವಾಗಲೂ ಈ ಸಮಸ್ಯೆಯನ್ನು ಸರ್ಕಾರ ಮತ್ತು ರೈತರ ನಡುವೆ ಇಟ್ಟುಕೊಂಡಿದ್ದೇವೆ ಮತ್ತು ಸಂವಾದದ ಮೂಲಕ ಮಾತ್ರ ಇದನ್ನು ಪರಿಹರಿಸಬಹುದು’ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
ಏನಿದ್ದರೂ, ಪ್ರಾತಿನಿಧಿಕ ಸಂಸ್ಥೆ ಸಂಯುಕ್ತ್ ಕಿಸಾನ್ ಮೋರ್ಚಾ ಯಾವ ನಿರ್ಣಯ ತೆಗೆದುಕೊಳ್ಳಲಿದೆ ಎಂಬುದು ಮಹತ್ವದ್ದಾಗಿದೆ.


ಇದನ್ನೂ ಓದಿ: ಎಚ್ಚರಿಕೆಯ ಪೋಸ್ಟರ್‌‌‌: ’ಬಿಜೆಪಿಗರೆ ಗ್ರಾಮಕ್ಕೆ ಪ್ರವೇಶಿಸಿದರೆ ನಿಮ್ಮ ಜೀವಕ್ಕೆ ನೀವೆ ಜವಾಬ್ದಾರಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...