Homeಚಳವಳಿರೈತರ 'ಬಾಯ್ಕಾಟ್ ರಿಲೆಯನ್ಸ್' ಅಭಿಯಾನಕ್ಕೆ ಭಾರಿ ಬೆಂಬಲ: #BoycottAdaniAmbani, #BoycottJio ಟ್ರೆಂಡಿಂಗ್

ರೈತರ ‘ಬಾಯ್ಕಾಟ್ ರಿಲೆಯನ್ಸ್’ ಅಭಿಯಾನಕ್ಕೆ ಭಾರಿ ಬೆಂಬಲ: #BoycottAdaniAmbani, #BoycottJio ಟ್ರೆಂಡಿಂಗ್

ಮೋದಿಯವರು ಅಧಿಕಾರಕ್ಕೆ ಬಂದಾಗಿನಿಂದಲೂ, ಅಂಬಾನಿ ಮತ್ತು ಅದಾನಿಗಾಗಿ ಕೆಲಸ ಮಾಡುವ ಬದಲು ಕೇವಲ 50% ಸಮಯವನ್ನು ದೇಶಕ್ಕಾಗಿ ಕೆಲಸ ಮಾಡಲು ವ್ಯಯಿಸಿದ್ದರೆ, ಭಾರತವು ಈಗ ಸೂಪರ್ ಪವರ್ ಆಗಬಹುದಿತ್ತು

- Advertisement -
- Advertisement -

ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಿರೋಧಿಸಿ ಕಳೆದ 15 ದಿನಗಳಿಂದ ನಡೆಯುತ್ತಿರುವ ರೈತರ ಪ್ರತಿಭಟನೆ ಮತ್ತೊಂದು ಹೆಜ್ಜೆ ಮುಂದೆ ಹೋಗಿದೆ. ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು, ನರೇಂದ್ರ ಮೋದಿ ಸರ್ಕಾರ ಉತ್ತೇಜನ ನೀಡುತ್ತಿರುವ ಅಂಬಾನಿಯ ರಿಲೆಯನ್ಸ್ ಉತ್ಪನ್ನಗಳ ವಿರುದ್ಧ ಕರೆ ನೀಡಿದ್ದ ಬಾಯ್ಕಾಟ್ ಅಭಿಯಾನಕ್ಕೆ ದೇಶಾದ್ಯಂತ ಭಾರಿ ಬೆಂಬಲ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ #BoycottAdaniAmbani, #DafaKaroJioNu, #BoycottJio, #BoycottJioMart ಫುಲ್ ಟ್ರೆಂಡ್ ಆಗಿವೆ. “ಜಿಯೋ ಆರಂಭವಾದಾಗ ದೇಶದ ಪ್ರಧಾನಿ ನರೇಂದ್ರ ಮೋದಿ ದೇಶದ 130 ಕೋಟಿ ಜನರಿಗೆ ಅರ್ಪಣೆ ಎಂದು ನಾಚಿಕೆ ಇಲ್ಲದೆ ಮುಖಪುಟ ಜಾಹೀರಾತು ನೀಡಿದರು. ಇದನ್ನು ವಿರೋಧಿಸಿ ಸಾಮೂಹಿಕವಾಗಿ ಬೇರೆ ಕಂಪನಿಗೆ ಪೋರ್ಟ್ ಆಗೋಣ” ಎಂದು ಪ್ರತಿಭಟನಾ ನಿರತ ರೈತರು ಕರೆ ನೀಡಿದ್ದರು.

ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ನಿಷ್ಠುರ ಮತ್ತು ಸೊಕ್ಕಿನ ಪ್ರಸ್ತಾಪ ಎಂದಿದ್ದ ರೈತ ಸಂಘಟನೆಗಳು, ದೇಶಾದ್ಯಂತ ಮೋದಿ ಸರ್ಕಾರದ ನಿಜವಾದ ಮುಖವನ್ನು ಬಹಿರಂಗ ಪಡಿಸುತ್ತೇವೆ ಎಂದಿದ್ದರು. ಇದಕ್ಕಾಗಿ “ಸರ್ಕಾರ್ ಕಿ ಅಸ್ಲಿ ಮಜ್ಬೂರಿ – ಅದಾನಿ, ಅಂಬಾನಿ, ಜಮಾಖೋರಿ ಎಂಬ ಅಭಿಯಾನವನ್ನು ಪ್ರಾರಂಭಿಸಿದ್ದವು.

ದೇಶದ ಹಲವೆಡೆ ರೈತರ ಈ ಅಭಿಯಾನಕ್ಕೆ ಸ್ಪಂದನೆ ಸಿಕ್ಕಿದ್ದು, ಜನ ರಿಲಯನ್ಸ್ ಉತ್ಪನ್ನಗಳ ವಿರುದ್ಧ ಬಾಯ್ಕಾಟ್ ಅಭಿಯಾನ ನಡೆಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಹಲವು ಪೋಸ್ಟರ್‌ಗಳು ಶೇರ್ ಆಗುತ್ತಿವೆ.

ಇದನ್ನೂ ಓದಿ: ಕೇಂದ್ರದ ಪ್ರಸ್ತಾಪ ತಿರಸ್ಕರಿಸಿದ ರೈತರು, ಪ್ರತಿಭಟನೆ ಮುಂದುವರೆಸಲು ನಿರ್ಧಾರ

ಟ್ವಿಟರ್‌ ಬಳಕೆದಾರರೊಬ್ಬರು ತಮ್ಮ ಖಾತೆಯಲ್ಲಿ ಮುಖೇಶ್ ಅಂಬಾನಿಯ ಸಂಪತ್ತಿನ ಬಗೆಗಿನ ಸುದ್ದಿಯನ್ನು ಹಂಚಿಕೊಂಡು ಅದಕ್ಕೆ, “ಸರ್, ನಾವು ದೇಶದ ಆರ್ಥಿಕತೆಯ ಬಗ್ಗೆ ಮಾತನಾಡುತ್ತಿದ್ದೇವೆ.
ನಿಮ್ಮ ವೈಯಕ್ತಿಕ ಸಂಪತ್ತಿನ ಬಗ್ಗೆ ಅಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

ಜೊತೆಗೆ, ಬಿಜೆಪಿ ಸರ್ಕಾರ ನಿಮ್ಮ ಪರವಾಗಿ ರಚಿಸಿರುವ, ರಚಿಸುತ್ತಿರುವ ಬಿಲ್‌ಗಳು, ನಿಮ್ಮನ್ನು 2023ಕ್ಕೆ 5 ಟ್ರಿಲಿಯನ್ ಡಾಲರ್‌ಗಳನ್ನು ವ್ಯಕ್ತಿಯಾಗಿ ಮಾಡಬಹುದು’ ಎಂದು ಬಿಜೆಪಿ ಸರ್ಕಾರ ಮತ್ತು ಅಂಬಾನಿ ಬಗ್ಗೆ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಅಂಬಾನಿಯ ಜಿಯೋ ಸಿಮ್ ಬಳಸುವುದಿಲ್ಲ, ರಿಲೆಯನ್ಸ್ ಪೆಟ್ರೋಲ್ ಹಾಕಿಸುವುದಿಲ್ಲ, ಮಾಲ್‌ಗೆ ಹೋಗುವುದಿಲ್ಲ: ರೈತರ ಪ್ರತಿಜ್ಞೆ

ಮತ್ತೊಬ್ಬರು, ರೈತರು ತಮ್ಮ ಜಿಯೋ ಸಿಮ್ ಸುಡುತ್ತಿರುವ ಫೋಟೋ ಜೊತೆಗೆ, ರೈತರು ಮಾಡುತ್ತಿರುವಾಗ ನಮಗೇಕೆ ಸಾಧ್ಯವಿಲ್ಲ ಎಂದು ಪ್ರಶ್ನಿಸಿದ್ದಾರೆ.

“ಮೋದಿಯವರು ಅಧಿಕಾರಕ್ಕೆ ಬಂದಾಗಿನಿಂದಲೂ, ಅಂಬಾನಿ ಮತ್ತು ಅದಾನಿಗಾಗಿ ಕೆಲಸ ಮಾಡುವ ಬದಲು ಕೇವಲ 50% ಸಮಯವನ್ನು ದೇಶಕ್ಕಾಗಿ ಕೆಲಸ ಮಾಡಲು ವ್ಯಯಿಸಿದ್ದರೆ, ಭಾರತವು ಈಗ ಸೂಪರ್ ಪವರ್ ಆಗಬಹುದಿತ್ತು” ಎಂದು ಮಧು ಎಂಬ ಟ್ವಿಟರ್‌ ಬಳಕೆದಾರರು ವ್ಯಂಗ್ಯವಾಡಿದ್ದಾರೆ.

ಧವಿಂದರ್‌ ಮಾವಿ ಎಂಬುವರು, ನಮ್ಮ ಮತ್ತು ಅಂಬಾನಿ ನಡುವಿನ ಮಧ್ಯವರ್ತಿಗಳನ್ನು ಹೊರಗಿಡಬಹುದು ಎಂದಿರುವ ಇವರು ಸ್ಟ್ಯಾಂಡ್ ಆಪ್ ಕಾಮಿಡಿಯನ್ ಕುನಾಲ್ ಕರ್ಮಾ ಅವರನ್ನು ಟ್ಯಾಗ್‌ ಮಾಡಿ ಅವರ ಜನಪ್ರಿಯ ಹೇಳಿಕೆಯಾಗಿರುವ ನಾವು ನೇರವಾಗಿ ಅಂಬಾನಿಗೆ ಏಕೆ ಮತ ಹಾಕಬಾರದು ಎಂಬ ವಾಕ್ಯವನ್ನು ಹೇಳಿದ್ದಾರೆ.

ಇದನ್ನೂ ಓದಿ: ಮದುವೆಯಲ್ಲಿ ಗಿಫ್ಟ್ ಬದಲು ಹೋರಾಟ ನಿರತ ರೈತರಿಗಾಗಿ ದೇಣಿಗೆ ಸಂಗ್ರಹಿಸಿದ ಕುಟುಂಬ!

2014 ರ ಮುಂಚೆ ಅದಾನಿ ಅಂಬಾನಿಯವರ ಸಂಪತ್ತು ಮತ್ತು 2014ರ ನಂತರ ಅದಾನಿ ಅಂಬಾನಿಯವರ ಸಂಪತ್ತು ಹೆಚ್ಚಾದ ಬಗ್ಗೆ ಪೋಟೊ ಶೇರ್‌ ಮಾಡಿರುವ ಹರ್ಜಬ್‌ಸಿಂಗ್ ಎನ್ನುವವರು ’ಇದು ಲೂಟಿಕೋರರಿಗೆ ಪಾಠ ಕಲಿಸುವ ಸಮಯ’ ಎಂದಿದ್ದಾರೆ.

ಇದರ ಜೊತೆ ಜೊತೆಗೆ Airtel Vodafone ಎಂಬುದು ಟ್ರೆಂಡ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಮೀಮ್‌ಗಳನ್ನು ಹರಿಯಬಿಡಲಾಗುತ್ತಿದೆ.

ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿಯಂತಹ ಕಾರ್ಪೊರೇಟ್ ಕಂಪನಿಗಳ ಪರವಾಗಿವೆ ಎಂದು ಆರೋಪಿಸಿರುವ ರೈತರು ಅವರ ಎಲ್ಲಾ ರಿಲೆಯನ್ಸ್ ಉತ್ಪನ್ನಗಳನ್ನು ಬಹಿಷ್ಕರಿಸಲು ಮುಂದಾಗಿದ್ದಾರೆ.

ಇಂದು ಬೆಂಗಳೂರಿನ ರೈಲು ನಿಲ್ದಾಣದ ಬಳಿ ಯುವ ರೈತರು ಜಿಯೋ ಸಿಮ್ ಅನ್ನು ಬೇರೆ ಕಂಪನಿಗೆ ಪೋರ್ಟ್ ಮಾಡುವ ಮೂಲಕ, ರಿಲೆಯನ್ಸ್ ಉತ್ಪನ್ನಗಳನ್ನು ಬಳಸದಿರುವುದಾಗಿ ಪ್ರತಿಜ್ಞೆ ಮಾಡಿದರು.

ಯುವ ಮುಖಂಡ ಸರೋವರ್ ಬೆಂಕೀಕರೆ ಮಾತನಾಡಿ “ಅಂಬಾನಿ ಅದಾನಿ ತರದ ಕಾರ್ಪೊರೇಟ್ ಖದೀಮರು ನಮ್ಮ ಕೃಷಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದಾರೆ. ಅವರಿಗಾಗಿಯೇ ಈ ರೈತ ವಿರೋಧಿ ಕಾನೂನುಗಳು ಜಾರಿಯಾಗಿವೆ. ಹಾಗಾಗಿ ಸಾಮೂಹಿಕವಾಗಿ ತಮ್ಮ ಜಿಯೋ ಸಿಮ್‌ ನಂಬರ್‌ಗಳನ್ನು ಬೇರೆ ಕಂಪನಿಗೆ ಪೋರ್ಟ್ ಆಗಬೇಕೆಂದು ದೆಹಲಿ ರೈತರ ಕರೆ ನೀಡಿದ್ದಾರೆ. ನಾವು ಈಗ ಪೋರ್ಟ್ ಆಗಿದ್ದೇವೆ. ಹಾಗಾಗಿ ಜಿಯೋ ಕಂಪನಿಯ ಕಡೆಯಿಂದ ಯಾಕೆ ಪೋರ್ಟ್ ಆದಿರಿ ಎಂದು ಫೋನ್ ಮಾಡುತ್ತಾರೆ. ಆಗ ನಿಮ್ಮ ಅಂಬಾನಿ ದೇಶಕ್ಕೆ ಅನ್ನ ನೀಡುವ ರೈತರನ್ನು ಮುಳುಗಿಸುತ್ತಿದ್ದಾರೆ. ಹಾಗಾಗಿ ನಾವು ನಿಮ್ಮನ್ನು ಮುಳುಗಿಸಲು ಹೊರಟಿದ್ದೇವೆ ಎಂದು ಹೇಳಿ ಎಂದಿದ್ದಾರೆ.


ಇದನ್ನೂ ಓದಿ: ಯಾವುದೇ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಕೇಂದ್ರ ಘೋಷಿಸಬಹುದು: ಸುಪ್ರೀಂ‌ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...