Homeಚಳವಳಿರೈತರ 'ಬಾಯ್ಕಾಟ್ ರಿಲೆಯನ್ಸ್' ಅಭಿಯಾನಕ್ಕೆ ಭಾರಿ ಬೆಂಬಲ: #BoycottAdaniAmbani, #BoycottJio ಟ್ರೆಂಡಿಂಗ್

ರೈತರ ‘ಬಾಯ್ಕಾಟ್ ರಿಲೆಯನ್ಸ್’ ಅಭಿಯಾನಕ್ಕೆ ಭಾರಿ ಬೆಂಬಲ: #BoycottAdaniAmbani, #BoycottJio ಟ್ರೆಂಡಿಂಗ್

ಮೋದಿಯವರು ಅಧಿಕಾರಕ್ಕೆ ಬಂದಾಗಿನಿಂದಲೂ, ಅಂಬಾನಿ ಮತ್ತು ಅದಾನಿಗಾಗಿ ಕೆಲಸ ಮಾಡುವ ಬದಲು ಕೇವಲ 50% ಸಮಯವನ್ನು ದೇಶಕ್ಕಾಗಿ ಕೆಲಸ ಮಾಡಲು ವ್ಯಯಿಸಿದ್ದರೆ, ಭಾರತವು ಈಗ ಸೂಪರ್ ಪವರ್ ಆಗಬಹುದಿತ್ತು

- Advertisement -
- Advertisement -

ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಿರೋಧಿಸಿ ಕಳೆದ 15 ದಿನಗಳಿಂದ ನಡೆಯುತ್ತಿರುವ ರೈತರ ಪ್ರತಿಭಟನೆ ಮತ್ತೊಂದು ಹೆಜ್ಜೆ ಮುಂದೆ ಹೋಗಿದೆ. ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು, ನರೇಂದ್ರ ಮೋದಿ ಸರ್ಕಾರ ಉತ್ತೇಜನ ನೀಡುತ್ತಿರುವ ಅಂಬಾನಿಯ ರಿಲೆಯನ್ಸ್ ಉತ್ಪನ್ನಗಳ ವಿರುದ್ಧ ಕರೆ ನೀಡಿದ್ದ ಬಾಯ್ಕಾಟ್ ಅಭಿಯಾನಕ್ಕೆ ದೇಶಾದ್ಯಂತ ಭಾರಿ ಬೆಂಬಲ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ #BoycottAdaniAmbani, #DafaKaroJioNu, #BoycottJio, #BoycottJioMart ಫುಲ್ ಟ್ರೆಂಡ್ ಆಗಿವೆ. “ಜಿಯೋ ಆರಂಭವಾದಾಗ ದೇಶದ ಪ್ರಧಾನಿ ನರೇಂದ್ರ ಮೋದಿ ದೇಶದ 130 ಕೋಟಿ ಜನರಿಗೆ ಅರ್ಪಣೆ ಎಂದು ನಾಚಿಕೆ ಇಲ್ಲದೆ ಮುಖಪುಟ ಜಾಹೀರಾತು ನೀಡಿದರು. ಇದನ್ನು ವಿರೋಧಿಸಿ ಸಾಮೂಹಿಕವಾಗಿ ಬೇರೆ ಕಂಪನಿಗೆ ಪೋರ್ಟ್ ಆಗೋಣ” ಎಂದು ಪ್ರತಿಭಟನಾ ನಿರತ ರೈತರು ಕರೆ ನೀಡಿದ್ದರು.

ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ನಿಷ್ಠುರ ಮತ್ತು ಸೊಕ್ಕಿನ ಪ್ರಸ್ತಾಪ ಎಂದಿದ್ದ ರೈತ ಸಂಘಟನೆಗಳು, ದೇಶಾದ್ಯಂತ ಮೋದಿ ಸರ್ಕಾರದ ನಿಜವಾದ ಮುಖವನ್ನು ಬಹಿರಂಗ ಪಡಿಸುತ್ತೇವೆ ಎಂದಿದ್ದರು. ಇದಕ್ಕಾಗಿ “ಸರ್ಕಾರ್ ಕಿ ಅಸ್ಲಿ ಮಜ್ಬೂರಿ – ಅದಾನಿ, ಅಂಬಾನಿ, ಜಮಾಖೋರಿ ಎಂಬ ಅಭಿಯಾನವನ್ನು ಪ್ರಾರಂಭಿಸಿದ್ದವು.

ದೇಶದ ಹಲವೆಡೆ ರೈತರ ಈ ಅಭಿಯಾನಕ್ಕೆ ಸ್ಪಂದನೆ ಸಿಕ್ಕಿದ್ದು, ಜನ ರಿಲಯನ್ಸ್ ಉತ್ಪನ್ನಗಳ ವಿರುದ್ಧ ಬಾಯ್ಕಾಟ್ ಅಭಿಯಾನ ನಡೆಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಹಲವು ಪೋಸ್ಟರ್‌ಗಳು ಶೇರ್ ಆಗುತ್ತಿವೆ.

ಇದನ್ನೂ ಓದಿ: ಕೇಂದ್ರದ ಪ್ರಸ್ತಾಪ ತಿರಸ್ಕರಿಸಿದ ರೈತರು, ಪ್ರತಿಭಟನೆ ಮುಂದುವರೆಸಲು ನಿರ್ಧಾರ

ಟ್ವಿಟರ್‌ ಬಳಕೆದಾರರೊಬ್ಬರು ತಮ್ಮ ಖಾತೆಯಲ್ಲಿ ಮುಖೇಶ್ ಅಂಬಾನಿಯ ಸಂಪತ್ತಿನ ಬಗೆಗಿನ ಸುದ್ದಿಯನ್ನು ಹಂಚಿಕೊಂಡು ಅದಕ್ಕೆ, “ಸರ್, ನಾವು ದೇಶದ ಆರ್ಥಿಕತೆಯ ಬಗ್ಗೆ ಮಾತನಾಡುತ್ತಿದ್ದೇವೆ.
ನಿಮ್ಮ ವೈಯಕ್ತಿಕ ಸಂಪತ್ತಿನ ಬಗ್ಗೆ ಅಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

ಜೊತೆಗೆ, ಬಿಜೆಪಿ ಸರ್ಕಾರ ನಿಮ್ಮ ಪರವಾಗಿ ರಚಿಸಿರುವ, ರಚಿಸುತ್ತಿರುವ ಬಿಲ್‌ಗಳು, ನಿಮ್ಮನ್ನು 2023ಕ್ಕೆ 5 ಟ್ರಿಲಿಯನ್ ಡಾಲರ್‌ಗಳನ್ನು ವ್ಯಕ್ತಿಯಾಗಿ ಮಾಡಬಹುದು’ ಎಂದು ಬಿಜೆಪಿ ಸರ್ಕಾರ ಮತ್ತು ಅಂಬಾನಿ ಬಗ್ಗೆ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಅಂಬಾನಿಯ ಜಿಯೋ ಸಿಮ್ ಬಳಸುವುದಿಲ್ಲ, ರಿಲೆಯನ್ಸ್ ಪೆಟ್ರೋಲ್ ಹಾಕಿಸುವುದಿಲ್ಲ, ಮಾಲ್‌ಗೆ ಹೋಗುವುದಿಲ್ಲ: ರೈತರ ಪ್ರತಿಜ್ಞೆ

ಮತ್ತೊಬ್ಬರು, ರೈತರು ತಮ್ಮ ಜಿಯೋ ಸಿಮ್ ಸುಡುತ್ತಿರುವ ಫೋಟೋ ಜೊತೆಗೆ, ರೈತರು ಮಾಡುತ್ತಿರುವಾಗ ನಮಗೇಕೆ ಸಾಧ್ಯವಿಲ್ಲ ಎಂದು ಪ್ರಶ್ನಿಸಿದ್ದಾರೆ.

“ಮೋದಿಯವರು ಅಧಿಕಾರಕ್ಕೆ ಬಂದಾಗಿನಿಂದಲೂ, ಅಂಬಾನಿ ಮತ್ತು ಅದಾನಿಗಾಗಿ ಕೆಲಸ ಮಾಡುವ ಬದಲು ಕೇವಲ 50% ಸಮಯವನ್ನು ದೇಶಕ್ಕಾಗಿ ಕೆಲಸ ಮಾಡಲು ವ್ಯಯಿಸಿದ್ದರೆ, ಭಾರತವು ಈಗ ಸೂಪರ್ ಪವರ್ ಆಗಬಹುದಿತ್ತು” ಎಂದು ಮಧು ಎಂಬ ಟ್ವಿಟರ್‌ ಬಳಕೆದಾರರು ವ್ಯಂಗ್ಯವಾಡಿದ್ದಾರೆ.

ಧವಿಂದರ್‌ ಮಾವಿ ಎಂಬುವರು, ನಮ್ಮ ಮತ್ತು ಅಂಬಾನಿ ನಡುವಿನ ಮಧ್ಯವರ್ತಿಗಳನ್ನು ಹೊರಗಿಡಬಹುದು ಎಂದಿರುವ ಇವರು ಸ್ಟ್ಯಾಂಡ್ ಆಪ್ ಕಾಮಿಡಿಯನ್ ಕುನಾಲ್ ಕರ್ಮಾ ಅವರನ್ನು ಟ್ಯಾಗ್‌ ಮಾಡಿ ಅವರ ಜನಪ್ರಿಯ ಹೇಳಿಕೆಯಾಗಿರುವ ನಾವು ನೇರವಾಗಿ ಅಂಬಾನಿಗೆ ಏಕೆ ಮತ ಹಾಕಬಾರದು ಎಂಬ ವಾಕ್ಯವನ್ನು ಹೇಳಿದ್ದಾರೆ.

ಇದನ್ನೂ ಓದಿ: ಮದುವೆಯಲ್ಲಿ ಗಿಫ್ಟ್ ಬದಲು ಹೋರಾಟ ನಿರತ ರೈತರಿಗಾಗಿ ದೇಣಿಗೆ ಸಂಗ್ರಹಿಸಿದ ಕುಟುಂಬ!

2014 ರ ಮುಂಚೆ ಅದಾನಿ ಅಂಬಾನಿಯವರ ಸಂಪತ್ತು ಮತ್ತು 2014ರ ನಂತರ ಅದಾನಿ ಅಂಬಾನಿಯವರ ಸಂಪತ್ತು ಹೆಚ್ಚಾದ ಬಗ್ಗೆ ಪೋಟೊ ಶೇರ್‌ ಮಾಡಿರುವ ಹರ್ಜಬ್‌ಸಿಂಗ್ ಎನ್ನುವವರು ’ಇದು ಲೂಟಿಕೋರರಿಗೆ ಪಾಠ ಕಲಿಸುವ ಸಮಯ’ ಎಂದಿದ್ದಾರೆ.

ಇದರ ಜೊತೆ ಜೊತೆಗೆ Airtel Vodafone ಎಂಬುದು ಟ್ರೆಂಡ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಮೀಮ್‌ಗಳನ್ನು ಹರಿಯಬಿಡಲಾಗುತ್ತಿದೆ.

ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿಯಂತಹ ಕಾರ್ಪೊರೇಟ್ ಕಂಪನಿಗಳ ಪರವಾಗಿವೆ ಎಂದು ಆರೋಪಿಸಿರುವ ರೈತರು ಅವರ ಎಲ್ಲಾ ರಿಲೆಯನ್ಸ್ ಉತ್ಪನ್ನಗಳನ್ನು ಬಹಿಷ್ಕರಿಸಲು ಮುಂದಾಗಿದ್ದಾರೆ.

ಇಂದು ಬೆಂಗಳೂರಿನ ರೈಲು ನಿಲ್ದಾಣದ ಬಳಿ ಯುವ ರೈತರು ಜಿಯೋ ಸಿಮ್ ಅನ್ನು ಬೇರೆ ಕಂಪನಿಗೆ ಪೋರ್ಟ್ ಮಾಡುವ ಮೂಲಕ, ರಿಲೆಯನ್ಸ್ ಉತ್ಪನ್ನಗಳನ್ನು ಬಳಸದಿರುವುದಾಗಿ ಪ್ರತಿಜ್ಞೆ ಮಾಡಿದರು.

ಯುವ ಮುಖಂಡ ಸರೋವರ್ ಬೆಂಕೀಕರೆ ಮಾತನಾಡಿ “ಅಂಬಾನಿ ಅದಾನಿ ತರದ ಕಾರ್ಪೊರೇಟ್ ಖದೀಮರು ನಮ್ಮ ಕೃಷಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದಾರೆ. ಅವರಿಗಾಗಿಯೇ ಈ ರೈತ ವಿರೋಧಿ ಕಾನೂನುಗಳು ಜಾರಿಯಾಗಿವೆ. ಹಾಗಾಗಿ ಸಾಮೂಹಿಕವಾಗಿ ತಮ್ಮ ಜಿಯೋ ಸಿಮ್‌ ನಂಬರ್‌ಗಳನ್ನು ಬೇರೆ ಕಂಪನಿಗೆ ಪೋರ್ಟ್ ಆಗಬೇಕೆಂದು ದೆಹಲಿ ರೈತರ ಕರೆ ನೀಡಿದ್ದಾರೆ. ನಾವು ಈಗ ಪೋರ್ಟ್ ಆಗಿದ್ದೇವೆ. ಹಾಗಾಗಿ ಜಿಯೋ ಕಂಪನಿಯ ಕಡೆಯಿಂದ ಯಾಕೆ ಪೋರ್ಟ್ ಆದಿರಿ ಎಂದು ಫೋನ್ ಮಾಡುತ್ತಾರೆ. ಆಗ ನಿಮ್ಮ ಅಂಬಾನಿ ದೇಶಕ್ಕೆ ಅನ್ನ ನೀಡುವ ರೈತರನ್ನು ಮುಳುಗಿಸುತ್ತಿದ್ದಾರೆ. ಹಾಗಾಗಿ ನಾವು ನಿಮ್ಮನ್ನು ಮುಳುಗಿಸಲು ಹೊರಟಿದ್ದೇವೆ ಎಂದು ಹೇಳಿ ಎಂದಿದ್ದಾರೆ.


ಇದನ್ನೂ ಓದಿ: ಯಾವುದೇ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಕೇಂದ್ರ ಘೋಷಿಸಬಹುದು: ಸುಪ್ರೀಂ‌ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...