Homeಚಳವಳಿರೈತರ 'ಬಾಯ್ಕಾಟ್ ರಿಲೆಯನ್ಸ್' ಅಭಿಯಾನಕ್ಕೆ ಭಾರಿ ಬೆಂಬಲ: #BoycottAdaniAmbani, #BoycottJio ಟ್ರೆಂಡಿಂಗ್

ರೈತರ ‘ಬಾಯ್ಕಾಟ್ ರಿಲೆಯನ್ಸ್’ ಅಭಿಯಾನಕ್ಕೆ ಭಾರಿ ಬೆಂಬಲ: #BoycottAdaniAmbani, #BoycottJio ಟ್ರೆಂಡಿಂಗ್

ಮೋದಿಯವರು ಅಧಿಕಾರಕ್ಕೆ ಬಂದಾಗಿನಿಂದಲೂ, ಅಂಬಾನಿ ಮತ್ತು ಅದಾನಿಗಾಗಿ ಕೆಲಸ ಮಾಡುವ ಬದಲು ಕೇವಲ 50% ಸಮಯವನ್ನು ದೇಶಕ್ಕಾಗಿ ಕೆಲಸ ಮಾಡಲು ವ್ಯಯಿಸಿದ್ದರೆ, ಭಾರತವು ಈಗ ಸೂಪರ್ ಪವರ್ ಆಗಬಹುದಿತ್ತು

- Advertisement -
- Advertisement -

ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಿರೋಧಿಸಿ ಕಳೆದ 15 ದಿನಗಳಿಂದ ನಡೆಯುತ್ತಿರುವ ರೈತರ ಪ್ರತಿಭಟನೆ ಮತ್ತೊಂದು ಹೆಜ್ಜೆ ಮುಂದೆ ಹೋಗಿದೆ. ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು, ನರೇಂದ್ರ ಮೋದಿ ಸರ್ಕಾರ ಉತ್ತೇಜನ ನೀಡುತ್ತಿರುವ ಅಂಬಾನಿಯ ರಿಲೆಯನ್ಸ್ ಉತ್ಪನ್ನಗಳ ವಿರುದ್ಧ ಕರೆ ನೀಡಿದ್ದ ಬಾಯ್ಕಾಟ್ ಅಭಿಯಾನಕ್ಕೆ ದೇಶಾದ್ಯಂತ ಭಾರಿ ಬೆಂಬಲ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ #BoycottAdaniAmbani, #DafaKaroJioNu, #BoycottJio, #BoycottJioMart ಫುಲ್ ಟ್ರೆಂಡ್ ಆಗಿವೆ. “ಜಿಯೋ ಆರಂಭವಾದಾಗ ದೇಶದ ಪ್ರಧಾನಿ ನರೇಂದ್ರ ಮೋದಿ ದೇಶದ 130 ಕೋಟಿ ಜನರಿಗೆ ಅರ್ಪಣೆ ಎಂದು ನಾಚಿಕೆ ಇಲ್ಲದೆ ಮುಖಪುಟ ಜಾಹೀರಾತು ನೀಡಿದರು. ಇದನ್ನು ವಿರೋಧಿಸಿ ಸಾಮೂಹಿಕವಾಗಿ ಬೇರೆ ಕಂಪನಿಗೆ ಪೋರ್ಟ್ ಆಗೋಣ” ಎಂದು ಪ್ರತಿಭಟನಾ ನಿರತ ರೈತರು ಕರೆ ನೀಡಿದ್ದರು.

ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ನಿಷ್ಠುರ ಮತ್ತು ಸೊಕ್ಕಿನ ಪ್ರಸ್ತಾಪ ಎಂದಿದ್ದ ರೈತ ಸಂಘಟನೆಗಳು, ದೇಶಾದ್ಯಂತ ಮೋದಿ ಸರ್ಕಾರದ ನಿಜವಾದ ಮುಖವನ್ನು ಬಹಿರಂಗ ಪಡಿಸುತ್ತೇವೆ ಎಂದಿದ್ದರು. ಇದಕ್ಕಾಗಿ “ಸರ್ಕಾರ್ ಕಿ ಅಸ್ಲಿ ಮಜ್ಬೂರಿ – ಅದಾನಿ, ಅಂಬಾನಿ, ಜಮಾಖೋರಿ ಎಂಬ ಅಭಿಯಾನವನ್ನು ಪ್ರಾರಂಭಿಸಿದ್ದವು.

ದೇಶದ ಹಲವೆಡೆ ರೈತರ ಈ ಅಭಿಯಾನಕ್ಕೆ ಸ್ಪಂದನೆ ಸಿಕ್ಕಿದ್ದು, ಜನ ರಿಲಯನ್ಸ್ ಉತ್ಪನ್ನಗಳ ವಿರುದ್ಧ ಬಾಯ್ಕಾಟ್ ಅಭಿಯಾನ ನಡೆಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಹಲವು ಪೋಸ್ಟರ್‌ಗಳು ಶೇರ್ ಆಗುತ್ತಿವೆ.

ಇದನ್ನೂ ಓದಿ: ಕೇಂದ್ರದ ಪ್ರಸ್ತಾಪ ತಿರಸ್ಕರಿಸಿದ ರೈತರು, ಪ್ರತಿಭಟನೆ ಮುಂದುವರೆಸಲು ನಿರ್ಧಾರ

ಟ್ವಿಟರ್‌ ಬಳಕೆದಾರರೊಬ್ಬರು ತಮ್ಮ ಖಾತೆಯಲ್ಲಿ ಮುಖೇಶ್ ಅಂಬಾನಿಯ ಸಂಪತ್ತಿನ ಬಗೆಗಿನ ಸುದ್ದಿಯನ್ನು ಹಂಚಿಕೊಂಡು ಅದಕ್ಕೆ, “ಸರ್, ನಾವು ದೇಶದ ಆರ್ಥಿಕತೆಯ ಬಗ್ಗೆ ಮಾತನಾಡುತ್ತಿದ್ದೇವೆ.
ನಿಮ್ಮ ವೈಯಕ್ತಿಕ ಸಂಪತ್ತಿನ ಬಗ್ಗೆ ಅಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

ಜೊತೆಗೆ, ಬಿಜೆಪಿ ಸರ್ಕಾರ ನಿಮ್ಮ ಪರವಾಗಿ ರಚಿಸಿರುವ, ರಚಿಸುತ್ತಿರುವ ಬಿಲ್‌ಗಳು, ನಿಮ್ಮನ್ನು 2023ಕ್ಕೆ 5 ಟ್ರಿಲಿಯನ್ ಡಾಲರ್‌ಗಳನ್ನು ವ್ಯಕ್ತಿಯಾಗಿ ಮಾಡಬಹುದು’ ಎಂದು ಬಿಜೆಪಿ ಸರ್ಕಾರ ಮತ್ತು ಅಂಬಾನಿ ಬಗ್ಗೆ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಅಂಬಾನಿಯ ಜಿಯೋ ಸಿಮ್ ಬಳಸುವುದಿಲ್ಲ, ರಿಲೆಯನ್ಸ್ ಪೆಟ್ರೋಲ್ ಹಾಕಿಸುವುದಿಲ್ಲ, ಮಾಲ್‌ಗೆ ಹೋಗುವುದಿಲ್ಲ: ರೈತರ ಪ್ರತಿಜ್ಞೆ

ಮತ್ತೊಬ್ಬರು, ರೈತರು ತಮ್ಮ ಜಿಯೋ ಸಿಮ್ ಸುಡುತ್ತಿರುವ ಫೋಟೋ ಜೊತೆಗೆ, ರೈತರು ಮಾಡುತ್ತಿರುವಾಗ ನಮಗೇಕೆ ಸಾಧ್ಯವಿಲ್ಲ ಎಂದು ಪ್ರಶ್ನಿಸಿದ್ದಾರೆ.

“ಮೋದಿಯವರು ಅಧಿಕಾರಕ್ಕೆ ಬಂದಾಗಿನಿಂದಲೂ, ಅಂಬಾನಿ ಮತ್ತು ಅದಾನಿಗಾಗಿ ಕೆಲಸ ಮಾಡುವ ಬದಲು ಕೇವಲ 50% ಸಮಯವನ್ನು ದೇಶಕ್ಕಾಗಿ ಕೆಲಸ ಮಾಡಲು ವ್ಯಯಿಸಿದ್ದರೆ, ಭಾರತವು ಈಗ ಸೂಪರ್ ಪವರ್ ಆಗಬಹುದಿತ್ತು” ಎಂದು ಮಧು ಎಂಬ ಟ್ವಿಟರ್‌ ಬಳಕೆದಾರರು ವ್ಯಂಗ್ಯವಾಡಿದ್ದಾರೆ.

ಧವಿಂದರ್‌ ಮಾವಿ ಎಂಬುವರು, ನಮ್ಮ ಮತ್ತು ಅಂಬಾನಿ ನಡುವಿನ ಮಧ್ಯವರ್ತಿಗಳನ್ನು ಹೊರಗಿಡಬಹುದು ಎಂದಿರುವ ಇವರು ಸ್ಟ್ಯಾಂಡ್ ಆಪ್ ಕಾಮಿಡಿಯನ್ ಕುನಾಲ್ ಕರ್ಮಾ ಅವರನ್ನು ಟ್ಯಾಗ್‌ ಮಾಡಿ ಅವರ ಜನಪ್ರಿಯ ಹೇಳಿಕೆಯಾಗಿರುವ ನಾವು ನೇರವಾಗಿ ಅಂಬಾನಿಗೆ ಏಕೆ ಮತ ಹಾಕಬಾರದು ಎಂಬ ವಾಕ್ಯವನ್ನು ಹೇಳಿದ್ದಾರೆ.

ಇದನ್ನೂ ಓದಿ: ಮದುವೆಯಲ್ಲಿ ಗಿಫ್ಟ್ ಬದಲು ಹೋರಾಟ ನಿರತ ರೈತರಿಗಾಗಿ ದೇಣಿಗೆ ಸಂಗ್ರಹಿಸಿದ ಕುಟುಂಬ!

2014 ರ ಮುಂಚೆ ಅದಾನಿ ಅಂಬಾನಿಯವರ ಸಂಪತ್ತು ಮತ್ತು 2014ರ ನಂತರ ಅದಾನಿ ಅಂಬಾನಿಯವರ ಸಂಪತ್ತು ಹೆಚ್ಚಾದ ಬಗ್ಗೆ ಪೋಟೊ ಶೇರ್‌ ಮಾಡಿರುವ ಹರ್ಜಬ್‌ಸಿಂಗ್ ಎನ್ನುವವರು ’ಇದು ಲೂಟಿಕೋರರಿಗೆ ಪಾಠ ಕಲಿಸುವ ಸಮಯ’ ಎಂದಿದ್ದಾರೆ.

ಇದರ ಜೊತೆ ಜೊತೆಗೆ Airtel Vodafone ಎಂಬುದು ಟ್ರೆಂಡ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಮೀಮ್‌ಗಳನ್ನು ಹರಿಯಬಿಡಲಾಗುತ್ತಿದೆ.

ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿಯಂತಹ ಕಾರ್ಪೊರೇಟ್ ಕಂಪನಿಗಳ ಪರವಾಗಿವೆ ಎಂದು ಆರೋಪಿಸಿರುವ ರೈತರು ಅವರ ಎಲ್ಲಾ ರಿಲೆಯನ್ಸ್ ಉತ್ಪನ್ನಗಳನ್ನು ಬಹಿಷ್ಕರಿಸಲು ಮುಂದಾಗಿದ್ದಾರೆ.

ಇಂದು ಬೆಂಗಳೂರಿನ ರೈಲು ನಿಲ್ದಾಣದ ಬಳಿ ಯುವ ರೈತರು ಜಿಯೋ ಸಿಮ್ ಅನ್ನು ಬೇರೆ ಕಂಪನಿಗೆ ಪೋರ್ಟ್ ಮಾಡುವ ಮೂಲಕ, ರಿಲೆಯನ್ಸ್ ಉತ್ಪನ್ನಗಳನ್ನು ಬಳಸದಿರುವುದಾಗಿ ಪ್ರತಿಜ್ಞೆ ಮಾಡಿದರು.

ಯುವ ಮುಖಂಡ ಸರೋವರ್ ಬೆಂಕೀಕರೆ ಮಾತನಾಡಿ “ಅಂಬಾನಿ ಅದಾನಿ ತರದ ಕಾರ್ಪೊರೇಟ್ ಖದೀಮರು ನಮ್ಮ ಕೃಷಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದಾರೆ. ಅವರಿಗಾಗಿಯೇ ಈ ರೈತ ವಿರೋಧಿ ಕಾನೂನುಗಳು ಜಾರಿಯಾಗಿವೆ. ಹಾಗಾಗಿ ಸಾಮೂಹಿಕವಾಗಿ ತಮ್ಮ ಜಿಯೋ ಸಿಮ್‌ ನಂಬರ್‌ಗಳನ್ನು ಬೇರೆ ಕಂಪನಿಗೆ ಪೋರ್ಟ್ ಆಗಬೇಕೆಂದು ದೆಹಲಿ ರೈತರ ಕರೆ ನೀಡಿದ್ದಾರೆ. ನಾವು ಈಗ ಪೋರ್ಟ್ ಆಗಿದ್ದೇವೆ. ಹಾಗಾಗಿ ಜಿಯೋ ಕಂಪನಿಯ ಕಡೆಯಿಂದ ಯಾಕೆ ಪೋರ್ಟ್ ಆದಿರಿ ಎಂದು ಫೋನ್ ಮಾಡುತ್ತಾರೆ. ಆಗ ನಿಮ್ಮ ಅಂಬಾನಿ ದೇಶಕ್ಕೆ ಅನ್ನ ನೀಡುವ ರೈತರನ್ನು ಮುಳುಗಿಸುತ್ತಿದ್ದಾರೆ. ಹಾಗಾಗಿ ನಾವು ನಿಮ್ಮನ್ನು ಮುಳುಗಿಸಲು ಹೊರಟಿದ್ದೇವೆ ಎಂದು ಹೇಳಿ ಎಂದಿದ್ದಾರೆ.


ಇದನ್ನೂ ಓದಿ: ಯಾವುದೇ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಕೇಂದ್ರ ಘೋಷಿಸಬಹುದು: ಸುಪ್ರೀಂ‌ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...