Homeಚಳವಳಿರೈತರ 'ಬಾಯ್ಕಾಟ್ ರಿಲೆಯನ್ಸ್' ಅಭಿಯಾನಕ್ಕೆ ಭಾರಿ ಬೆಂಬಲ: #BoycottAdaniAmbani, #BoycottJio ಟ್ರೆಂಡಿಂಗ್

ರೈತರ ‘ಬಾಯ್ಕಾಟ್ ರಿಲೆಯನ್ಸ್’ ಅಭಿಯಾನಕ್ಕೆ ಭಾರಿ ಬೆಂಬಲ: #BoycottAdaniAmbani, #BoycottJio ಟ್ರೆಂಡಿಂಗ್

ಮೋದಿಯವರು ಅಧಿಕಾರಕ್ಕೆ ಬಂದಾಗಿನಿಂದಲೂ, ಅಂಬಾನಿ ಮತ್ತು ಅದಾನಿಗಾಗಿ ಕೆಲಸ ಮಾಡುವ ಬದಲು ಕೇವಲ 50% ಸಮಯವನ್ನು ದೇಶಕ್ಕಾಗಿ ಕೆಲಸ ಮಾಡಲು ವ್ಯಯಿಸಿದ್ದರೆ, ಭಾರತವು ಈಗ ಸೂಪರ್ ಪವರ್ ಆಗಬಹುದಿತ್ತು

- Advertisement -
- Advertisement -

ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಿರೋಧಿಸಿ ಕಳೆದ 15 ದಿನಗಳಿಂದ ನಡೆಯುತ್ತಿರುವ ರೈತರ ಪ್ರತಿಭಟನೆ ಮತ್ತೊಂದು ಹೆಜ್ಜೆ ಮುಂದೆ ಹೋಗಿದೆ. ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು, ನರೇಂದ್ರ ಮೋದಿ ಸರ್ಕಾರ ಉತ್ತೇಜನ ನೀಡುತ್ತಿರುವ ಅಂಬಾನಿಯ ರಿಲೆಯನ್ಸ್ ಉತ್ಪನ್ನಗಳ ವಿರುದ್ಧ ಕರೆ ನೀಡಿದ್ದ ಬಾಯ್ಕಾಟ್ ಅಭಿಯಾನಕ್ಕೆ ದೇಶಾದ್ಯಂತ ಭಾರಿ ಬೆಂಬಲ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ #BoycottAdaniAmbani, #DafaKaroJioNu, #BoycottJio, #BoycottJioMart ಫುಲ್ ಟ್ರೆಂಡ್ ಆಗಿವೆ. “ಜಿಯೋ ಆರಂಭವಾದಾಗ ದೇಶದ ಪ್ರಧಾನಿ ನರೇಂದ್ರ ಮೋದಿ ದೇಶದ 130 ಕೋಟಿ ಜನರಿಗೆ ಅರ್ಪಣೆ ಎಂದು ನಾಚಿಕೆ ಇಲ್ಲದೆ ಮುಖಪುಟ ಜಾಹೀರಾತು ನೀಡಿದರು. ಇದನ್ನು ವಿರೋಧಿಸಿ ಸಾಮೂಹಿಕವಾಗಿ ಬೇರೆ ಕಂಪನಿಗೆ ಪೋರ್ಟ್ ಆಗೋಣ” ಎಂದು ಪ್ರತಿಭಟನಾ ನಿರತ ರೈತರು ಕರೆ ನೀಡಿದ್ದರು.

ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ನಿಷ್ಠುರ ಮತ್ತು ಸೊಕ್ಕಿನ ಪ್ರಸ್ತಾಪ ಎಂದಿದ್ದ ರೈತ ಸಂಘಟನೆಗಳು, ದೇಶಾದ್ಯಂತ ಮೋದಿ ಸರ್ಕಾರದ ನಿಜವಾದ ಮುಖವನ್ನು ಬಹಿರಂಗ ಪಡಿಸುತ್ತೇವೆ ಎಂದಿದ್ದರು. ಇದಕ್ಕಾಗಿ “ಸರ್ಕಾರ್ ಕಿ ಅಸ್ಲಿ ಮಜ್ಬೂರಿ – ಅದಾನಿ, ಅಂಬಾನಿ, ಜಮಾಖೋರಿ ಎಂಬ ಅಭಿಯಾನವನ್ನು ಪ್ರಾರಂಭಿಸಿದ್ದವು.

ದೇಶದ ಹಲವೆಡೆ ರೈತರ ಈ ಅಭಿಯಾನಕ್ಕೆ ಸ್ಪಂದನೆ ಸಿಕ್ಕಿದ್ದು, ಜನ ರಿಲಯನ್ಸ್ ಉತ್ಪನ್ನಗಳ ವಿರುದ್ಧ ಬಾಯ್ಕಾಟ್ ಅಭಿಯಾನ ನಡೆಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಹಲವು ಪೋಸ್ಟರ್‌ಗಳು ಶೇರ್ ಆಗುತ್ತಿವೆ.

ಇದನ್ನೂ ಓದಿ: ಕೇಂದ್ರದ ಪ್ರಸ್ತಾಪ ತಿರಸ್ಕರಿಸಿದ ರೈತರು, ಪ್ರತಿಭಟನೆ ಮುಂದುವರೆಸಲು ನಿರ್ಧಾರ

ಟ್ವಿಟರ್‌ ಬಳಕೆದಾರರೊಬ್ಬರು ತಮ್ಮ ಖಾತೆಯಲ್ಲಿ ಮುಖೇಶ್ ಅಂಬಾನಿಯ ಸಂಪತ್ತಿನ ಬಗೆಗಿನ ಸುದ್ದಿಯನ್ನು ಹಂಚಿಕೊಂಡು ಅದಕ್ಕೆ, “ಸರ್, ನಾವು ದೇಶದ ಆರ್ಥಿಕತೆಯ ಬಗ್ಗೆ ಮಾತನಾಡುತ್ತಿದ್ದೇವೆ.
ನಿಮ್ಮ ವೈಯಕ್ತಿಕ ಸಂಪತ್ತಿನ ಬಗ್ಗೆ ಅಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

ಜೊತೆಗೆ, ಬಿಜೆಪಿ ಸರ್ಕಾರ ನಿಮ್ಮ ಪರವಾಗಿ ರಚಿಸಿರುವ, ರಚಿಸುತ್ತಿರುವ ಬಿಲ್‌ಗಳು, ನಿಮ್ಮನ್ನು 2023ಕ್ಕೆ 5 ಟ್ರಿಲಿಯನ್ ಡಾಲರ್‌ಗಳನ್ನು ವ್ಯಕ್ತಿಯಾಗಿ ಮಾಡಬಹುದು’ ಎಂದು ಬಿಜೆಪಿ ಸರ್ಕಾರ ಮತ್ತು ಅಂಬಾನಿ ಬಗ್ಗೆ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಅಂಬಾನಿಯ ಜಿಯೋ ಸಿಮ್ ಬಳಸುವುದಿಲ್ಲ, ರಿಲೆಯನ್ಸ್ ಪೆಟ್ರೋಲ್ ಹಾಕಿಸುವುದಿಲ್ಲ, ಮಾಲ್‌ಗೆ ಹೋಗುವುದಿಲ್ಲ: ರೈತರ ಪ್ರತಿಜ್ಞೆ

ಮತ್ತೊಬ್ಬರು, ರೈತರು ತಮ್ಮ ಜಿಯೋ ಸಿಮ್ ಸುಡುತ್ತಿರುವ ಫೋಟೋ ಜೊತೆಗೆ, ರೈತರು ಮಾಡುತ್ತಿರುವಾಗ ನಮಗೇಕೆ ಸಾಧ್ಯವಿಲ್ಲ ಎಂದು ಪ್ರಶ್ನಿಸಿದ್ದಾರೆ.

“ಮೋದಿಯವರು ಅಧಿಕಾರಕ್ಕೆ ಬಂದಾಗಿನಿಂದಲೂ, ಅಂಬಾನಿ ಮತ್ತು ಅದಾನಿಗಾಗಿ ಕೆಲಸ ಮಾಡುವ ಬದಲು ಕೇವಲ 50% ಸಮಯವನ್ನು ದೇಶಕ್ಕಾಗಿ ಕೆಲಸ ಮಾಡಲು ವ್ಯಯಿಸಿದ್ದರೆ, ಭಾರತವು ಈಗ ಸೂಪರ್ ಪವರ್ ಆಗಬಹುದಿತ್ತು” ಎಂದು ಮಧು ಎಂಬ ಟ್ವಿಟರ್‌ ಬಳಕೆದಾರರು ವ್ಯಂಗ್ಯವಾಡಿದ್ದಾರೆ.

ಧವಿಂದರ್‌ ಮಾವಿ ಎಂಬುವರು, ನಮ್ಮ ಮತ್ತು ಅಂಬಾನಿ ನಡುವಿನ ಮಧ್ಯವರ್ತಿಗಳನ್ನು ಹೊರಗಿಡಬಹುದು ಎಂದಿರುವ ಇವರು ಸ್ಟ್ಯಾಂಡ್ ಆಪ್ ಕಾಮಿಡಿಯನ್ ಕುನಾಲ್ ಕರ್ಮಾ ಅವರನ್ನು ಟ್ಯಾಗ್‌ ಮಾಡಿ ಅವರ ಜನಪ್ರಿಯ ಹೇಳಿಕೆಯಾಗಿರುವ ನಾವು ನೇರವಾಗಿ ಅಂಬಾನಿಗೆ ಏಕೆ ಮತ ಹಾಕಬಾರದು ಎಂಬ ವಾಕ್ಯವನ್ನು ಹೇಳಿದ್ದಾರೆ.

ಇದನ್ನೂ ಓದಿ: ಮದುವೆಯಲ್ಲಿ ಗಿಫ್ಟ್ ಬದಲು ಹೋರಾಟ ನಿರತ ರೈತರಿಗಾಗಿ ದೇಣಿಗೆ ಸಂಗ್ರಹಿಸಿದ ಕುಟುಂಬ!

2014 ರ ಮುಂಚೆ ಅದಾನಿ ಅಂಬಾನಿಯವರ ಸಂಪತ್ತು ಮತ್ತು 2014ರ ನಂತರ ಅದಾನಿ ಅಂಬಾನಿಯವರ ಸಂಪತ್ತು ಹೆಚ್ಚಾದ ಬಗ್ಗೆ ಪೋಟೊ ಶೇರ್‌ ಮಾಡಿರುವ ಹರ್ಜಬ್‌ಸಿಂಗ್ ಎನ್ನುವವರು ’ಇದು ಲೂಟಿಕೋರರಿಗೆ ಪಾಠ ಕಲಿಸುವ ಸಮಯ’ ಎಂದಿದ್ದಾರೆ.

ಇದರ ಜೊತೆ ಜೊತೆಗೆ Airtel Vodafone ಎಂಬುದು ಟ್ರೆಂಡ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಮೀಮ್‌ಗಳನ್ನು ಹರಿಯಬಿಡಲಾಗುತ್ತಿದೆ.

ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿಯಂತಹ ಕಾರ್ಪೊರೇಟ್ ಕಂಪನಿಗಳ ಪರವಾಗಿವೆ ಎಂದು ಆರೋಪಿಸಿರುವ ರೈತರು ಅವರ ಎಲ್ಲಾ ರಿಲೆಯನ್ಸ್ ಉತ್ಪನ್ನಗಳನ್ನು ಬಹಿಷ್ಕರಿಸಲು ಮುಂದಾಗಿದ್ದಾರೆ.

ಇಂದು ಬೆಂಗಳೂರಿನ ರೈಲು ನಿಲ್ದಾಣದ ಬಳಿ ಯುವ ರೈತರು ಜಿಯೋ ಸಿಮ್ ಅನ್ನು ಬೇರೆ ಕಂಪನಿಗೆ ಪೋರ್ಟ್ ಮಾಡುವ ಮೂಲಕ, ರಿಲೆಯನ್ಸ್ ಉತ್ಪನ್ನಗಳನ್ನು ಬಳಸದಿರುವುದಾಗಿ ಪ್ರತಿಜ್ಞೆ ಮಾಡಿದರು.

ಯುವ ಮುಖಂಡ ಸರೋವರ್ ಬೆಂಕೀಕರೆ ಮಾತನಾಡಿ “ಅಂಬಾನಿ ಅದಾನಿ ತರದ ಕಾರ್ಪೊರೇಟ್ ಖದೀಮರು ನಮ್ಮ ಕೃಷಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದಾರೆ. ಅವರಿಗಾಗಿಯೇ ಈ ರೈತ ವಿರೋಧಿ ಕಾನೂನುಗಳು ಜಾರಿಯಾಗಿವೆ. ಹಾಗಾಗಿ ಸಾಮೂಹಿಕವಾಗಿ ತಮ್ಮ ಜಿಯೋ ಸಿಮ್‌ ನಂಬರ್‌ಗಳನ್ನು ಬೇರೆ ಕಂಪನಿಗೆ ಪೋರ್ಟ್ ಆಗಬೇಕೆಂದು ದೆಹಲಿ ರೈತರ ಕರೆ ನೀಡಿದ್ದಾರೆ. ನಾವು ಈಗ ಪೋರ್ಟ್ ಆಗಿದ್ದೇವೆ. ಹಾಗಾಗಿ ಜಿಯೋ ಕಂಪನಿಯ ಕಡೆಯಿಂದ ಯಾಕೆ ಪೋರ್ಟ್ ಆದಿರಿ ಎಂದು ಫೋನ್ ಮಾಡುತ್ತಾರೆ. ಆಗ ನಿಮ್ಮ ಅಂಬಾನಿ ದೇಶಕ್ಕೆ ಅನ್ನ ನೀಡುವ ರೈತರನ್ನು ಮುಳುಗಿಸುತ್ತಿದ್ದಾರೆ. ಹಾಗಾಗಿ ನಾವು ನಿಮ್ಮನ್ನು ಮುಳುಗಿಸಲು ಹೊರಟಿದ್ದೇವೆ ಎಂದು ಹೇಳಿ ಎಂದಿದ್ದಾರೆ.


ಇದನ್ನೂ ಓದಿ: ಯಾವುದೇ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಕೇಂದ್ರ ಘೋಷಿಸಬಹುದು: ಸುಪ್ರೀಂ‌ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...