Homeಚಳವಳಿರೈತರ 'ಬಾಯ್ಕಾಟ್ ರಿಲೆಯನ್ಸ್' ಅಭಿಯಾನಕ್ಕೆ ಭಾರಿ ಬೆಂಬಲ: #BoycottAdaniAmbani, #BoycottJio ಟ್ರೆಂಡಿಂಗ್

ರೈತರ ‘ಬಾಯ್ಕಾಟ್ ರಿಲೆಯನ್ಸ್’ ಅಭಿಯಾನಕ್ಕೆ ಭಾರಿ ಬೆಂಬಲ: #BoycottAdaniAmbani, #BoycottJio ಟ್ರೆಂಡಿಂಗ್

ಮೋದಿಯವರು ಅಧಿಕಾರಕ್ಕೆ ಬಂದಾಗಿನಿಂದಲೂ, ಅಂಬಾನಿ ಮತ್ತು ಅದಾನಿಗಾಗಿ ಕೆಲಸ ಮಾಡುವ ಬದಲು ಕೇವಲ 50% ಸಮಯವನ್ನು ದೇಶಕ್ಕಾಗಿ ಕೆಲಸ ಮಾಡಲು ವ್ಯಯಿಸಿದ್ದರೆ, ಭಾರತವು ಈಗ ಸೂಪರ್ ಪವರ್ ಆಗಬಹುದಿತ್ತು

- Advertisement -
- Advertisement -

ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಿರೋಧಿಸಿ ಕಳೆದ 15 ದಿನಗಳಿಂದ ನಡೆಯುತ್ತಿರುವ ರೈತರ ಪ್ರತಿಭಟನೆ ಮತ್ತೊಂದು ಹೆಜ್ಜೆ ಮುಂದೆ ಹೋಗಿದೆ. ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು, ನರೇಂದ್ರ ಮೋದಿ ಸರ್ಕಾರ ಉತ್ತೇಜನ ನೀಡುತ್ತಿರುವ ಅಂಬಾನಿಯ ರಿಲೆಯನ್ಸ್ ಉತ್ಪನ್ನಗಳ ವಿರುದ್ಧ ಕರೆ ನೀಡಿದ್ದ ಬಾಯ್ಕಾಟ್ ಅಭಿಯಾನಕ್ಕೆ ದೇಶಾದ್ಯಂತ ಭಾರಿ ಬೆಂಬಲ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ #BoycottAdaniAmbani, #DafaKaroJioNu, #BoycottJio, #BoycottJioMart ಫುಲ್ ಟ್ರೆಂಡ್ ಆಗಿವೆ. “ಜಿಯೋ ಆರಂಭವಾದಾಗ ದೇಶದ ಪ್ರಧಾನಿ ನರೇಂದ್ರ ಮೋದಿ ದೇಶದ 130 ಕೋಟಿ ಜನರಿಗೆ ಅರ್ಪಣೆ ಎಂದು ನಾಚಿಕೆ ಇಲ್ಲದೆ ಮುಖಪುಟ ಜಾಹೀರಾತು ನೀಡಿದರು. ಇದನ್ನು ವಿರೋಧಿಸಿ ಸಾಮೂಹಿಕವಾಗಿ ಬೇರೆ ಕಂಪನಿಗೆ ಪೋರ್ಟ್ ಆಗೋಣ” ಎಂದು ಪ್ರತಿಭಟನಾ ನಿರತ ರೈತರು ಕರೆ ನೀಡಿದ್ದರು.

ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ನಿಷ್ಠುರ ಮತ್ತು ಸೊಕ್ಕಿನ ಪ್ರಸ್ತಾಪ ಎಂದಿದ್ದ ರೈತ ಸಂಘಟನೆಗಳು, ದೇಶಾದ್ಯಂತ ಮೋದಿ ಸರ್ಕಾರದ ನಿಜವಾದ ಮುಖವನ್ನು ಬಹಿರಂಗ ಪಡಿಸುತ್ತೇವೆ ಎಂದಿದ್ದರು. ಇದಕ್ಕಾಗಿ “ಸರ್ಕಾರ್ ಕಿ ಅಸ್ಲಿ ಮಜ್ಬೂರಿ – ಅದಾನಿ, ಅಂಬಾನಿ, ಜಮಾಖೋರಿ ಎಂಬ ಅಭಿಯಾನವನ್ನು ಪ್ರಾರಂಭಿಸಿದ್ದವು.

ದೇಶದ ಹಲವೆಡೆ ರೈತರ ಈ ಅಭಿಯಾನಕ್ಕೆ ಸ್ಪಂದನೆ ಸಿಕ್ಕಿದ್ದು, ಜನ ರಿಲಯನ್ಸ್ ಉತ್ಪನ್ನಗಳ ವಿರುದ್ಧ ಬಾಯ್ಕಾಟ್ ಅಭಿಯಾನ ನಡೆಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಹಲವು ಪೋಸ್ಟರ್‌ಗಳು ಶೇರ್ ಆಗುತ್ತಿವೆ.

ಇದನ್ನೂ ಓದಿ: ಕೇಂದ್ರದ ಪ್ರಸ್ತಾಪ ತಿರಸ್ಕರಿಸಿದ ರೈತರು, ಪ್ರತಿಭಟನೆ ಮುಂದುವರೆಸಲು ನಿರ್ಧಾರ

ಟ್ವಿಟರ್‌ ಬಳಕೆದಾರರೊಬ್ಬರು ತಮ್ಮ ಖಾತೆಯಲ್ಲಿ ಮುಖೇಶ್ ಅಂಬಾನಿಯ ಸಂಪತ್ತಿನ ಬಗೆಗಿನ ಸುದ್ದಿಯನ್ನು ಹಂಚಿಕೊಂಡು ಅದಕ್ಕೆ, “ಸರ್, ನಾವು ದೇಶದ ಆರ್ಥಿಕತೆಯ ಬಗ್ಗೆ ಮಾತನಾಡುತ್ತಿದ್ದೇವೆ.
ನಿಮ್ಮ ವೈಯಕ್ತಿಕ ಸಂಪತ್ತಿನ ಬಗ್ಗೆ ಅಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

ಜೊತೆಗೆ, ಬಿಜೆಪಿ ಸರ್ಕಾರ ನಿಮ್ಮ ಪರವಾಗಿ ರಚಿಸಿರುವ, ರಚಿಸುತ್ತಿರುವ ಬಿಲ್‌ಗಳು, ನಿಮ್ಮನ್ನು 2023ಕ್ಕೆ 5 ಟ್ರಿಲಿಯನ್ ಡಾಲರ್‌ಗಳನ್ನು ವ್ಯಕ್ತಿಯಾಗಿ ಮಾಡಬಹುದು’ ಎಂದು ಬಿಜೆಪಿ ಸರ್ಕಾರ ಮತ್ತು ಅಂಬಾನಿ ಬಗ್ಗೆ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಅಂಬಾನಿಯ ಜಿಯೋ ಸಿಮ್ ಬಳಸುವುದಿಲ್ಲ, ರಿಲೆಯನ್ಸ್ ಪೆಟ್ರೋಲ್ ಹಾಕಿಸುವುದಿಲ್ಲ, ಮಾಲ್‌ಗೆ ಹೋಗುವುದಿಲ್ಲ: ರೈತರ ಪ್ರತಿಜ್ಞೆ

ಮತ್ತೊಬ್ಬರು, ರೈತರು ತಮ್ಮ ಜಿಯೋ ಸಿಮ್ ಸುಡುತ್ತಿರುವ ಫೋಟೋ ಜೊತೆಗೆ, ರೈತರು ಮಾಡುತ್ತಿರುವಾಗ ನಮಗೇಕೆ ಸಾಧ್ಯವಿಲ್ಲ ಎಂದು ಪ್ರಶ್ನಿಸಿದ್ದಾರೆ.

“ಮೋದಿಯವರು ಅಧಿಕಾರಕ್ಕೆ ಬಂದಾಗಿನಿಂದಲೂ, ಅಂಬಾನಿ ಮತ್ತು ಅದಾನಿಗಾಗಿ ಕೆಲಸ ಮಾಡುವ ಬದಲು ಕೇವಲ 50% ಸಮಯವನ್ನು ದೇಶಕ್ಕಾಗಿ ಕೆಲಸ ಮಾಡಲು ವ್ಯಯಿಸಿದ್ದರೆ, ಭಾರತವು ಈಗ ಸೂಪರ್ ಪವರ್ ಆಗಬಹುದಿತ್ತು” ಎಂದು ಮಧು ಎಂಬ ಟ್ವಿಟರ್‌ ಬಳಕೆದಾರರು ವ್ಯಂಗ್ಯವಾಡಿದ್ದಾರೆ.

ಧವಿಂದರ್‌ ಮಾವಿ ಎಂಬುವರು, ನಮ್ಮ ಮತ್ತು ಅಂಬಾನಿ ನಡುವಿನ ಮಧ್ಯವರ್ತಿಗಳನ್ನು ಹೊರಗಿಡಬಹುದು ಎಂದಿರುವ ಇವರು ಸ್ಟ್ಯಾಂಡ್ ಆಪ್ ಕಾಮಿಡಿಯನ್ ಕುನಾಲ್ ಕರ್ಮಾ ಅವರನ್ನು ಟ್ಯಾಗ್‌ ಮಾಡಿ ಅವರ ಜನಪ್ರಿಯ ಹೇಳಿಕೆಯಾಗಿರುವ ನಾವು ನೇರವಾಗಿ ಅಂಬಾನಿಗೆ ಏಕೆ ಮತ ಹಾಕಬಾರದು ಎಂಬ ವಾಕ್ಯವನ್ನು ಹೇಳಿದ್ದಾರೆ.

ಇದನ್ನೂ ಓದಿ: ಮದುವೆಯಲ್ಲಿ ಗಿಫ್ಟ್ ಬದಲು ಹೋರಾಟ ನಿರತ ರೈತರಿಗಾಗಿ ದೇಣಿಗೆ ಸಂಗ್ರಹಿಸಿದ ಕುಟುಂಬ!

2014 ರ ಮುಂಚೆ ಅದಾನಿ ಅಂಬಾನಿಯವರ ಸಂಪತ್ತು ಮತ್ತು 2014ರ ನಂತರ ಅದಾನಿ ಅಂಬಾನಿಯವರ ಸಂಪತ್ತು ಹೆಚ್ಚಾದ ಬಗ್ಗೆ ಪೋಟೊ ಶೇರ್‌ ಮಾಡಿರುವ ಹರ್ಜಬ್‌ಸಿಂಗ್ ಎನ್ನುವವರು ’ಇದು ಲೂಟಿಕೋರರಿಗೆ ಪಾಠ ಕಲಿಸುವ ಸಮಯ’ ಎಂದಿದ್ದಾರೆ.

ಇದರ ಜೊತೆ ಜೊತೆಗೆ Airtel Vodafone ಎಂಬುದು ಟ್ರೆಂಡ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಮೀಮ್‌ಗಳನ್ನು ಹರಿಯಬಿಡಲಾಗುತ್ತಿದೆ.

ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿಯಂತಹ ಕಾರ್ಪೊರೇಟ್ ಕಂಪನಿಗಳ ಪರವಾಗಿವೆ ಎಂದು ಆರೋಪಿಸಿರುವ ರೈತರು ಅವರ ಎಲ್ಲಾ ರಿಲೆಯನ್ಸ್ ಉತ್ಪನ್ನಗಳನ್ನು ಬಹಿಷ್ಕರಿಸಲು ಮುಂದಾಗಿದ್ದಾರೆ.

ಇಂದು ಬೆಂಗಳೂರಿನ ರೈಲು ನಿಲ್ದಾಣದ ಬಳಿ ಯುವ ರೈತರು ಜಿಯೋ ಸಿಮ್ ಅನ್ನು ಬೇರೆ ಕಂಪನಿಗೆ ಪೋರ್ಟ್ ಮಾಡುವ ಮೂಲಕ, ರಿಲೆಯನ್ಸ್ ಉತ್ಪನ್ನಗಳನ್ನು ಬಳಸದಿರುವುದಾಗಿ ಪ್ರತಿಜ್ಞೆ ಮಾಡಿದರು.

ಯುವ ಮುಖಂಡ ಸರೋವರ್ ಬೆಂಕೀಕರೆ ಮಾತನಾಡಿ “ಅಂಬಾನಿ ಅದಾನಿ ತರದ ಕಾರ್ಪೊರೇಟ್ ಖದೀಮರು ನಮ್ಮ ಕೃಷಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದಾರೆ. ಅವರಿಗಾಗಿಯೇ ಈ ರೈತ ವಿರೋಧಿ ಕಾನೂನುಗಳು ಜಾರಿಯಾಗಿವೆ. ಹಾಗಾಗಿ ಸಾಮೂಹಿಕವಾಗಿ ತಮ್ಮ ಜಿಯೋ ಸಿಮ್‌ ನಂಬರ್‌ಗಳನ್ನು ಬೇರೆ ಕಂಪನಿಗೆ ಪೋರ್ಟ್ ಆಗಬೇಕೆಂದು ದೆಹಲಿ ರೈತರ ಕರೆ ನೀಡಿದ್ದಾರೆ. ನಾವು ಈಗ ಪೋರ್ಟ್ ಆಗಿದ್ದೇವೆ. ಹಾಗಾಗಿ ಜಿಯೋ ಕಂಪನಿಯ ಕಡೆಯಿಂದ ಯಾಕೆ ಪೋರ್ಟ್ ಆದಿರಿ ಎಂದು ಫೋನ್ ಮಾಡುತ್ತಾರೆ. ಆಗ ನಿಮ್ಮ ಅಂಬಾನಿ ದೇಶಕ್ಕೆ ಅನ್ನ ನೀಡುವ ರೈತರನ್ನು ಮುಳುಗಿಸುತ್ತಿದ್ದಾರೆ. ಹಾಗಾಗಿ ನಾವು ನಿಮ್ಮನ್ನು ಮುಳುಗಿಸಲು ಹೊರಟಿದ್ದೇವೆ ಎಂದು ಹೇಳಿ ಎಂದಿದ್ದಾರೆ.


ಇದನ್ನೂ ಓದಿ: ಯಾವುದೇ ಭೂಮಿಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಕೇಂದ್ರ ಘೋಷಿಸಬಹುದು: ಸುಪ್ರೀಂ‌ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...